Homeಮುಖಪುಟದ್ವೇಷ ಭಾಷಣ ಪ್ರಕರಣಗಳಿಗೆ ಸಂಬಂಧಿಸಿ ಸುಪ್ರೀಂ ನಿರ್ದೇಶನವನ್ನು ಪಾಲಿಸಲಾಗಿದೆ: ಕೇಂದ್ರ ಸರಕಾರ

ದ್ವೇಷ ಭಾಷಣ ಪ್ರಕರಣಗಳಿಗೆ ಸಂಬಂಧಿಸಿ ಸುಪ್ರೀಂ ನಿರ್ದೇಶನವನ್ನು ಪಾಲಿಸಲಾಗಿದೆ: ಕೇಂದ್ರ ಸರಕಾರ

- Advertisement -
- Advertisement -

ಸುಪ್ರೀಂಕೋರ್ಟ್ ನೀಡಿದ 2018ರ ಮಾರ್ಗಸೂಚಿಯಂತೆ ದ್ವೇಷ ಭಾಷಣ ಪ್ರಕರಣವನ್ನು ನಿಭಾಯಿಸುವ  ಸಂಬಂಧ 28 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೊಡೆಲ್‌ ಅಧಿಕಾರಗಳನ್ನು ನೇಮಿಸಲಾಗಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ.

ತೆಹಸೀನ್ ಪೂನಾವಾಲಾ ಪ್ರಕರಣದ ಅರ್ಜಿ ವಿಚಾರಣೆ ವೇಳೆ, ಗುಂಪು ಹಿಂಸಾಚಾರ ಮತ್ತು ಥಳಿತವನ್ನು ತಡೆಯಲು ನ್ಯಾಯಾಲಯವು ಹೊರಡಿಸಿದ ಮಾರ್ಗಸೂಚಿಗಳಿಗೆ ಅನುಗುಣವಾಗಿ 28 ರಾಜ್ಯಗಳು ನೋಡಲ್ ಅಧಿಕಾರಿಗಳನ್ನು ನೇಮಿಸಿವೆ ಎಂದು ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್‌ಗೆ ತಿಳಿಸಿದೆ.

ದ್ವೇಷದ ಭಾಷಣವನ್ನು ತಡೆಯಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಗೆ ಸಂಬಂಧಿಸಿ ಕೇಂದ್ರವು ಸಲ್ಲಿಸಿದ ಸ್ಥಿತಿ ವರದಿಯಲ್ಲಿ ಈ ವಿಚಾರ ಉಲ್ಲೇಖಿಸಲಾಗಿದೆ ಎಂದು ಲೈವ್‌ಲಾ ವರದಿ ಮಾಡಿದೆ.

ಆ.25ರಂದು ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ, ನೋಡಲ್ ಅಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯಗಳಿಂದ ಮಾಹಿತಿಯನ್ನು ಕ್ರೋಢೀಕರಿಸಿ ಮತ್ತು 3 ವಾರಗಳಲ್ಲಿ ಸ್ಥಿತಿಗತಿ ವರದಿಯನ್ನು ಸಲ್ಲಿಸುವಂತೆ ಸುಪ್ರೀಂಕೋರ್ಟ್ ಗೃಹ ಸಚಿವಾಲಯವನ್ನು ಕೇಳಿತ್ತು. ಯಾವುದೇ ರಾಜ್ಯ ಸರ್ಕಾರವು ಹೇಳಿದ ವಿವರಗಳನ್ನು ಒದಗಿಸದಿದ್ದರೆ, ಅದರ ಬಗ್ಗೆ ಉನ್ನತ ನ್ಯಾಯಾಲಯಕ್ಕೆ ತಿಳಿಸಬೇಕು ಎಂದು ಹೇಳಿತ್ತು.

2018ರಲ್ಲಿ ಸಂಸತ್ತಿಗೆ ಹಿಂಸಾಚಾರದ ವಿರುದ್ಧ ವಿಶೇಷ ಕಾನೂನನ್ನು ರಚಿಸುವಂತೆ ಶಿಫಾರಸು ಸುಪ್ರಿಂಕೋರ್ಟ್ ಮಾಡಿತ್ತು. ಕಾನೂನಿನ ಭಯ ಸುಸಂಸ್ಕೃತ ಸಮಾಜದ ಅಡಿಪಾಯವಾಗಿದೆ ಎಂದು ಹೇಳಿತ್ತು. ದೇಶಾದ್ಯಂತ  ಗುಂಪು ಹತ್ಯೆಯನ್ನು ತಡೆಯಲು ನ್ಯಾಯಾಲಯವು ನಿರ್ದೇಶನಗಳನ್ನು ನೀಡಿದೆ ಮತ್ತು ನೋಡಲ್ ಅಧಿಕಾರಿಗಳನ್ನು ನೇಮಿಸಲು ಆದೇಶವನ್ನು ನೀಡಿದೆ.

ಗುಂಪು ಹತ್ಯೆ ಮತ್ತು ಹಿಂಸಾಚಾರವನ್ನು ತಡೆಯಲು ನೀಡಿದ ನಿರ್ದೇಶನಗಳನ್ನು ಅನುಷ್ಠಾನಗೊಳಿಸಿಲ್ಲ ಎಂದು ಕೇಂದ್ರ ಸರಕಾರ ಮತ್ತು 10 ರಾಜ್ಯ ಸರ್ಕಾರಗಳನ್ನು ಸುಪ್ರೀಂಕೋರ್ಟ್ 2019ರಲ್ಲಿ ತರಾಟೆಗೆ ತೆಗೆದುಕೊಂಡಿತ್ತು.

ಈ ಬಗ್ಗೆ ಜಿಲ್ಲಾ ಪೊಲೀಸ್ ಮುಖ್ಯಸ್ಥರ ನೇತೃತ್ವದಲ್ಲಿ ಸಮಿತಿ ರಚಿಸುವಂತೆ ಸೂಚಿಸಿದೆ. ಈ ಸಮಿತಿಯು ದ್ವೇಷ ಭಾಷಣದ ದೂರುಗಳ ವಿಷಯ ಮತ್ತು ನಿಖರತೆ ಎರಡನ್ನೂ ಮೌಲ್ಯಮಾಪನ ಮಾಡಲಿದೆ. ಸಮಿತಿ ತನಿಖಾಧಿಕಾರಿಗೆ ನಿರ್ದಿಷ್ಠ ನಿರ್ದೇಶನಗಳನ್ನು ನೀಡಲಿದೆ ಎಂದು ಹೇಳಿದ್ದಾರೆ.

ಸಮಿತಿಯು ಒಂದು ಪ್ರಕರಣದ ಬಗ್ಗೆ ತಿಳಿಸಿದ ನಂತರ ನಿಗದಿತ ಅವಧಿಯೊಳಗೆ ಸಭೆ ಸೇರಬೇಕಾಗುತ್ತದೆ. ನಿಯಮಿತವಾಗಿ ಪ್ರಕರಣದಲ್ಲಿನ  ಪ್ರಗತಿಯನ್ನು ಪರಿಶೀಲಿಸಬೇಕು ಎಂದು ಲೈವ್ ಲಾ ವರದಿ ಹೇಳಿದೆ.

ಇದನ್ನು ಓದಿ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ನೇಮಕಾತಿ ಪ್ರಶ್ನಿಸಿದ ಅರ್ಜಿ ವಜಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...