Homeಮುಖಪುಟಇಸ್ರೇಲ್‌ ಜೊತೆ ಯುದ್ಧ ಒಪ್ಪಂದಕ್ಕೆ ಮುಂದಾದ ಹಮಾಸ್‌

ಇಸ್ರೇಲ್‌ ಜೊತೆ ಯುದ್ಧ ಒಪ್ಪಂದಕ್ಕೆ ಮುಂದಾದ ಹಮಾಸ್‌

- Advertisement -
- Advertisement -

ಇಸ್ರೇಲ್‌ ಮತ್ತು ಪ್ಯಾಲೆಸ್ತೀನ್‌ ನಡುವೆ 45 ದಿನಗಳಿಂದ ಯುದ್ಧ ನಡೆಯುತ್ತಿದ್ದು, ಹಮಾಸ್ ಅಧಿಕಾರಿಗಳು ಇಸ್ರೇಲ್‌ನೊಂದಿಗೆ ಯುದ್ಧ ಒಪ್ಪಂದಕ್ಕೆ ಸಮೀಪಿಸುತ್ತಿರುವುದಾಗಿ ಹಮಾಸ್‌ ನಾಯಕ ಇಸ್ಮಾಯಿಲ್ ಹನಿಯೆಹ್ ಹೇಳಿದ್ದಾರೆ.

ಯುದ್ಧದ ಬಗ್ಗೆ ಕತಾರ್‌ನ ಮಧ್ಯವರ್ತಿಗಳ ಮೂಲಕ ಮಾತುಕತೆ ನಡೆಯುತ್ತಿದೆ. ಅವರಿಗೆ ನಮ್ಮ ಪ್ರತಿಕ್ರಿಯೆಯನ್ನು ನೀಡಿರುವುದಾಗಿ ಹನಿಯೆಹ್ ಮಂಗಳವಾರ ಬೆಳಿಗ್ಗೆ ರಾಯಿಟರ್ಸ್ ಸುದ್ದಿ ಸಂಸ್ಥೆಗೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹನಿಯೆಹ್ ಹೆಚ್ಚಿನ ವಿವರಗಳನ್ನು ನೀಡಲಿಲ್ಲ. ಆದರೆ ಕದನ ವಿರಾಮ ಎಷ್ಟು ಕಾಲ ಇರಲಿದೆ. ಗಾಝಾಕ್ಕೆ ಪರಿಹಾರ ರವಾನೆ ಬಗ್ಗೆ ಸಿದ್ದತೆ ಮತ್ತು ಒತ್ತೆಯಾಳುಗಳ ವಿನಿಮಯ ಮಾಡಿಕೊಳ್ಳುವ ಬಗ್ಗೆ ಮಾತುಕತೆಗಳು ನಡೆಯುತ್ತಿದೆ. ಎರಡೂ ಕಡೆಯವರು ಮಹಿಳೆಯರು ಮತ್ತು ಮಕ್ಕಳನ್ನು ಮುಕ್ತಗೊಳಿಸಿದ್ದಾರೆ. ಈ ಕುರಿತು ಮಾತುಕತೆಗಳಿಗೆ ಮಧ್ಯಸ್ಥಿಕೆ ವಹಿಸುವ ಕತಾರ್ ವಿವರಗಳನ್ನು ಘೋಷಿಸುತ್ತದೆ ಎಂದು ಎಝಾತ್ ಎಲ್-ರೇಶಿಕ್ ಹೇಳಿದ್ದಾರೆ.

ಒಪ್ಪಂದವು ಕದನ ವಿರಾಮ, ಗಾಝಾದ ಎಲ್ಲಾ ಪ್ರದೇಶಗಳಿಗೆ ಪರಿಹಾರ ಸಾಮಾಗ್ರಿಗಳ ಪೂರೈಸಲು ಟ್ರಕ್‌ಗಳ ವ್ಯವಸ್ಥೆ ಮತ್ತು ಗಾಯಗೊಂಡವರನ್ನು ಚಿಕಿತ್ಸೆಗಾಗಿ ಬೇರೆ ದೇಶಗಳಿಗೆ ಕಳುಹಿಸುವ ಒಪ್ಪಂದವನ್ನು ಒಳಗೊಂಡಿರುತ್ತದೆ. ಎರಡೂ ದೇಶಗಳ ನಡುವೆ ವಾರಗಳಿಂದ ಮಾತುಕತೆ ನಡೆಯುತ್ತಿದೆ, ಇಸ್ರೇಲ್‌ ಕಡೆಯವರು ಒಪ್ಪಂದದ ಒಮ್ಮತಕ್ಕೆ ಬರುತ್ತಿಲ್ಲ ಎಂದು ಎಲ್-ರೆಶಿಕ್ ಹೇಳಿದ್ದಾರೆ.

ಇಸ್ರೇಲ್‌ನ ಸುದ್ದಿ ವೆಬ್‌ಸೈಟ್‌ವೊಂದು ವರದಿಯನ್ನು ಮಾಡಿದ್ದು, ಹಮಾಸ್‌ನ ಹಿರಿಯ ಅಧಿಕಾರಿ ಯಾಹ್ಯಾ ಸಿನ್ವಾರ್ ಒಪ್ಪಂದದ ಸಮಯದಲ್ಲಿ ಗಾಝಾದಲ್ಲಿ ಇಸ್ರೇಲ್‌ ವಿಮಾನಗಳ ಚಟುವಟಿಕೆಯನ್ನು ನಿಷೇಧಿಸುವ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಅಕ್ಟೋಬರ್‌ನಲ್ಲಿ ಇಸ್ರೇಲ್‌ ಪ್ಯಾಲೆಸ್ತೀನ್‌ ಮೇಲೆ ಯುದ್ಧ ಘೋಷಿಸಿದ ಬಳಿಕ ಈವರೆಗೆ ಪ್ಯಾಲೆಸ್ತೀನ್‌ನಲ್ಲಿ ಮೃತರ ಸಂಖ್ಯೆ 15,000ಕ್ಕೂ ಅಧಿಕ ಇದೆ ಎಂದು ಯುರೋ-ಮೆಡ್ ಮಾನವ ಹಕ್ಕುಗಳ ಸಂಸ್ಥೆ ಹೇಳಿದೆ. ಮೃತರಲ್ಲಿ 6,403 ಮಕ್ಕಳು ಮೃತಪಟ್ಟಿದ್ದಾರೆ. ಮೃತರಲ್ಲಿ 3,561 ಮಂದಿ ಮಹಿಳೆಯರು ಸೇರಿದ್ದಾರೆ. ಯುದ್ಧದಲ್ಲಿ 30,000ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಹಮಾಸ್‌ನೊಂದಿಗಿನ ಒತ್ತೆಯಾಳುಗಳ ಒಪ್ಪಂದದ ಕುರಿತು ಕತಾರ್ ಇಸ್ರೇಲ್‌ಗೆ ಎರಡು ಸಲಹೆಗಳನ್ನು ಕೂಡ ನಿನ್ನೆ ನೀಡಿತ್ತು. ಮೊದಲನೆಯದಾಗಿ 3 ದಿನಗಳ ಕದನ ವಿರಾಮ ಮತ್ತು ಗಾಝಾ ಪಟ್ಟಿಗೆ ನಿರ್ದಿಷ್ಟ ಪ್ರಮಾಣದ ಇಂಧನದ ಪೂರೈಕೆಗೆ ಬದಲಾಗಿ 53 ಮಕ್ಕಳು ಮತ್ತು ಮಹಿಳೆಯರನ್ನು ಹಮಾಸ್‌ನಿಂದ ಬಿಡುಗಡೆ ಮಾಡುವುದಾಗಿದೆ.

ಪ್ಯಾಲೆಸ್ತೀನ್ ಮಹಿಳೆಯರು ಮತ್ತು ಮಕ್ಕಳು ಮತ್ತು ಕೆಲವು ಭದ್ರತಾ ಖೈದಿಗಳ ಬಿಡುಗಡೆ, 5 ದಿನಗಳ ಕದನ ವಿರಾಮ ಮತ್ತು ಹೆಚ್ಚಿನ ಪ್ರಮಾಣದ ಇಂಧನದ ಪೂರೈಕೆಗೆ ಬದಲಾಗಿ ಹಮಾಸ್ 87 ಒತ್ತೆಯಾಳುಗಳನ್ನು ಬಿಡುಗಡೆ ಮಾಡುವ ಬಗ್ಗೆ ಎರಡನೆಯ ಸಲಹೆಯನ್ನು ನೀಡಲಾಗಿದೆ ಎಂದು ಪ್ಯಾಲೆಸ್ತೀನ್‌ ಮೂಲಗಳನ್ನು ಉಲ್ಲೇಖಿಸಿದ ವರದಿಗಳು ತಿಳಿಸಿದೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಶನಿವಾರ ರಾತ್ರಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗಾಝಾ ಪಟ್ಟಿಯಲ್ಲಿ ಇಟ್ಟುಕೊಂಡಿರುವ ಇಸ್ರೇಲ್‌ನ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವ ಬಗ್ಗೆ ಇನ್ನೂ ಯಾವುದೇ ಒಪ್ಪಂದಕ್ಕೆ ಬಂದಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ದ್ವೇಷ ಭಾಷಣ ಪ್ರಕರಣಗಳಿಗೆ ಸಂಬಂಧಿಸಿ ಸುಪ್ರೀಂ ನಿರ್ದೇಶನವನ್ನು ಪಾಲಿಸಲಾಗಿದೆ: ಕೇಂದ್ರ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...