Homeರಾಜಕೀಯಮಿತ್ರೋ... ಮಿತ್ರೋ... ಮಿತ್ರೋ...

ಮಿತ್ರೋ… ಮಿತ್ರೋ… ಮಿತ್ರೋ…

- Advertisement -
- Advertisement -

ಮಿತ್ರೊ…. ಟೆಡ್ಡಿ ಫೋನ್ ಮಾಡಿದ್ರು.. ಸಡುನ್ ಆಗಿ ಎಂಜಿಲು ಮುಖಕ್ಕೆ ಬಿತ್ತು.. `ಥೂ ಬೋ$%&@#, 2008ರಲ್ಲಿ ನೀವಿಲ್ದೆ 110 ಸೀಟ್ ಗೆದಿದ್ದೆ, ಮೋದಿ ಅಲೆ, ದೇಶಭಕ್ತಿ, ಶಾ ಅಂತ 104ಕ್ಕೆ ತಂದು ನಡುನೀರ್ನಲ್ ನಿಲ್ಸಿ ಕೈಕೊಟ್ರಲ್ಲೋ..’ ಫುಲ್ ಸಂಸ್ಕೃತ.. ಇನ್ನು ಏನೋ ಹೇಳೋಕೆ ಹೋದ್ರು, ಕೋಪ ಮಾಡಿಕೊಂಡೊವ್ರೆ ಅಂಥ ಫೋನ್ ಕಟ್ ಮಾಡಿಬಿಟ್ಟೆ..
* * * *
ಮಿತ್ರೊ…. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ಯಾರೆಲ್ಗೆ 104 ಡಾಲರ್ ಇದ್ದಾಗ uಠಿಚಿ ಸರ್ಕಾರ ಬರಿ 4.5% ಕೇಂದ್ರೀಯ ತೆರಿಗೆ ಹಾಕಿ ಭಾರತ ಅಭಿವೃದ್ಧಿ ಆಗದಂತೆ ಮಾಡಿತ್ತು.. ನಾವು ಅಧಿಕಾರಕ್ಕೆ ಬಂದಾಗಿನಿಂದ ಅದೇ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಬ್ಯಾರೆಲ್ಗೆ 35 ಡಾಲರ್ ಇಂದ ಹಿಡಿದು 60 ಡಾಲರ್ ಆಗಿದೆ.. ನಾವು 4.5% ಇದ್ದ ಕೇಂದ್ರೀಯ ತೆರಿಗೆಯನ್ನು 19.5% ಹೆಚ್ಚಿಸಿ ದೇಶದ ಅಭಿವೃದ್ದಿಯ್ಯನ್ನು ಭಯಂಕರ ಹೆಚ್ಚಿಸಿದ್ದೇವೆ..!
* * * *
ಮಿತ್ರೊ…. ವೇದಾಂತ ಕಂಪನಿಯ ಅನಿಲ್ ಫೋನ್ ಮಾಡಿದ್ದ.. ಮಚ್ಚ, ಕಂಪನಿಗೆ ಬೀಗ ಹಾಕ್ಬಿಟ್ರು, ಏನಾರ ಮಾಡು ಅಂತ.. ನಾನು ಕೂಡ ಮೊನ್ನೆಯಿಂದ ಕ್ಯಾಲ್ಕುಲೇಟರ್ ಇಡ್ಕೊಂಡ್ ಲೆಕ್ಕ ಹಾಕ್ತಿದ್ದೆ. ಇವನು, ಕಾಂಗಿಗಳು ಮತ್ತು ನಮ್ಮ ಕೃಪೆಯಿಂದ, ಭಾರತೀಯ ಬ್ಯಾಂಕುಗಳಿಂದ ಪಡೆದಿರುವ ಒಟ್ಟೂ ಸಾಲ 2 ಲಕ್ಷ ಕೋಟಿಯಂತೆ. ಒಂದು ಅಂದಾಜಿನ ಮೇಲೆ ಇವನ ಕಂಪನಿಯಲ್ಲಿ ಒಟ್ಟು ಕೆಲಸಗಾರರು 60000.. ಅಂದರೆ ಪ್ರತಿ 3 ಕೋಟಿ 33 ಲಕ್ಷಕ್ಕೆ ಒಂದು ಉದ್ಯೋಗ ಶೃಸ್ಟಿ ಮಾಡುತ್ತಿದ್ದಾನಂತೆ! ಅಂದರೆ ಇವನ ಕಂಪನಿಯಲ್ಲಿ ಕೆಲಸ ಮಾಡುತ್ತಿರುವವರೆಲ್ಲರೂ ಕೋಟ್ಯಧಿಪತಿಗಳೇ? ಇಲ್ಲ, ಇವನ ಕಂಪನಿಯಲ್ಲಿ 90% ಮೇಲೂ ಕಾರ್ಮಿಕರು, ತಿಂಗಳಿಗೆ 20,000ಕ್ಕಿಂತಲೂ ಕಡಿಮೆ ಸಂಬಳ ಪಡೆಯುತ್ತಿದ್ದಾರೆ.. ಕಾಂಗಿ ಮತ್ತು ನಮಗೆ ಇವನು ಲೆಕ್ಕದಲ್ಲಿ ಕೊಟ್ಟಿರುವ ದೇಣಿಗೆ ಬರಿ 29 ಕೋಟಿ.. ಇನ್ನ ಮಿಕ್ಕ ಅಷ್ಟೊಂದು ಕಾಸಿನಲ್ಲಿ ಏನ್ ಮಾಡ್ತಾ ಇದ್ದಿಯೊ ಅಂತ ಡೌಟ್ನಲ್ಲಿ ಕೇಳ್ದೆ .. ಅವನು “ದೇಶದ್ರೋಹಿ, ಸೈನಿಕರು ಗಡಿಯಲ್ಲಿ ದೇಶಕ್ಕೋಸ್ಕರ ಸಾಯಿತಾ ಇದ್ರೆ ನಿಂಗೆ ಲೆಕ್ಕದ್ ಚಿಂತೆ” ಅಂತ ಫೋನ್ ಕಟ್ ಮಾಡ್ಬಿಡೋದ!!!
* * * *
ಮಿತ್ರೊ…. , ನನ್ನ ಗುರು ಸಾವರ್ಕರ್ ಅವರ ಬಗ್ಗೆ ನಾನು ಚಿಕ್ಕಂದಿನಿಂದಲೇ ಓದಲು ಶುರು ಮಾಡಿದ ಪುಸ್ತಕ “ಲೈಫ್ ಒಫ್ ಬ್ಯಾರಿಸ್ಟರ್ ಸಾವರ್ಕರ್”. ಇದು ಅವರು ಬ್ರಿಟಿಷರಿಂದ ಭಿಕ್ಷೆ ಬೇಡಿ, ನಾನು ಇನ್ನೆಂದಿಗೂ ಬ್ರಿಟಿಷರ ವಿರುದ್ಧ ಹೋರಾಡುವುದಿಲ್ಲ, ಇನ್ನು ಮುಂದೆ ನಾನು ನಿಮ್ಮ ಗುಲಾಮ ಎಂದು ಒಂದರ ಮೇಲೆ ಒಂದರಂತೆ ಹನ್ನೊಂದು ಪತ್ರಗಳನ್ನು ಬೆರೆದು 1924ರಲ್ಲಿ ಷರತ್ತಿನ ಮೇಲೆ ಬಿಡುಗಡೆಯಾಗಿ ಎರೆಡನೆ ವರ್ಷದಲ್ಲಿ(1926) ಅನಾಮಧೇಯ ಚಿತ್ರಗುಪ್ತ ಎಂಬುವವರು ಪ್ರಕಟಿಸಿದ ಪುಸ್ತಕ.. ಈ ಪುಸ್ತಕ ಎಷ್ಟು ರೋಚಕವಾಗಿತ್ತೆಂದರೆ, ಸಾವರ್ಕರ್ ಹುಟ್ಟಿನಿಂದಲೇ ಅತಿ ಬುದ್ದಿವಂತ, ಆಜನ್ಮ ಹೋರಾಟಗಾರ, ಅನ್ಯಾಯಗಳ ವಿರುದ್ಧ ಸಿಡಿದೇಳುವ ವೀರ, ಶೂರ, ಯಾವುದೇ ತಂತ್ರಕ್ಕೆ, ಮಣಿಯದೆ ಪ್ರತಿತಂತ್ರ ಹೆಣೆಯುವ ಶಕ್ತಿ ಮತ್ತು ಯುಕ್ತಿಯುಳ್ಳ ವೀರ ಎಂದು ಪುಸ್ತಕದ ಪ್ರತಿಯೊಂದು ಹಂತದಲ್ಲೂ ಬರೆಯಲಾಗಿತ್ತು.. ಯಾವುದೇ ಫಿಕ್ಷನ್ ಪುಸ್ತಕ ಓದುತ್ತಿದ್ದರೆ ಆ ಪಾತ್ರಗಳ ಒಳಗೆ ನಾವು ಹೇಗೆ ನುಸುಳಿ ಮಾರುಹೋಗುತ್ತೇವೋ ಅದೇ ರೀತಿ ಸಾವರ್ಕರರೇ ನಾನು ಎಂಬಂತೆ ಕಲ್ಪಿಸಿಕೊಳ್ಳಲು ಆರಂಭಿಸಿದೆ (ಒಂದು ರೀತಿಯ ನಾಗವಲ್ಲಿ ಟೈಪ್ಸ್). ನನ್ನ ಮೂವತ್ತೊಂದನೆ ವರ್ಷದಲ್ಲಿ, ಅದೆ 1987ರಲ್ಲಿ ತಿಳಿಯಿತು ಆ ಚಿತ್ರಗುಪ್ತ ಬೇರ್ಯಾರು ಅಲ್ಲ, ಖುದ್ದು ಸರ್ವರ್ಕರ್, ಚಿತ್ರಗುಪ್ತ ಎಂಬ ಹೆಸರಿನಲ್ಲಿ ಬರೆದ ಪುಸ್ತಕ ಎಂದು.. ಅಷ್ಟೊತ್ತಿಗಾಗಲೇ ಕಾಲ ಮಿಂಚಿತ್ತು.. ನಾನು ಸಾವರ್ಕರ್ ಆಗಿಹೋಗಿದ್ದೆ.. ನಿಜಜೀವನದಲ್ಲಿ ಭಗತ್ ಸಿಂಗ್, ರಾಜ್ಗುರು, ಸುಖ್ದೇವ್ ಥರ ವೀರರಾಗದಿದ್ದರೂ ಮುಖವಾಡಗಳಲ್ಲಿ ಹೀರೊ ಅಗೋ ಖುಷಿನೆ ಬೇರೆ.. ಈಗಲೂ ಅದನ್ನೇ mಚಿiಟಿಣಚಿiಟಿ ಮಾಡ್ಕೊಂಡ್ ಹೋಗ್ತಾ ಇದ್ದೀನಿ..
* * * *
ಮಿತ್ರೊ….
ನಾನು ಕೆಲಸ ಮಾಡುವವನು ಅಲ್ಲವೇ ಅಲ್ಲ, ನಾನು ಕಲರ್‍ಪುಲ್ ಮಾತಿನ ಗಿರಾಕಿ. ನಾಲ್ಕು ವರ್ಷಗಳಿಂದ ದೇಶದ ಆರ್ಥಿಕತೆಯನ್ನು ಹಳ್ಳ ಹಿಡಿಸಿದೆ. ನನ್ನ ತುಘಲಕ್ ತೀರ್ಮಾನವಾದ ಅಮಾನ್ಯೀಕರಣದಿಂದ ಲಕ್ಷಾಂತರ ಜನರು ಉದ್ಯೋಗ ಕಳೆದುಕೊಂಡರು. ಇನ್ನೂ ದೇಶದ ಆಡಳಿತ ನಡೆಸಲು ಬಾರದೆ ವಿದೇಶಿ ಪ್ರವಾಸ ಮಾಡಿಕೊಂಡು ಅಲ್ಲಿಯೂ ಭಾಷಣ ಮಾಡಿಕೊಂಡು ದಿನ ನೂಕಿದೆ. ಇನ್ನೂ ಹೀಂಗೆ ಹೇಳುತ್ತ ಹೋದರೆ ನೂರಾರು ಸಾಧನೆಗಳನ್ನು ಹೇಳಬಹುದು. ನೀವುಗಳು ನನ್ನ ಮಾತಿನಿಂದಲೇ ಹೊಟ್ಟೆ ತುಂಬಿಸಿಕೊಂಡು ದೇಶಕ್ಕಾಗಿ ಮಾಡುತ್ತಿರುವ ತ್ಯಾಗ ನೆನಸಿಕೊಂಡರೆ ಇನ್ನೂ ಅರ್ಧ ಕೆಜಿ ಅಣಬೆ ತಿನ್ನುವ ಅನ್ನಿಸುತ್ತೆ. 2019 ಕ್ಕೂ ನನ್ನ ಮಾತನ್ನೆ ರಾಷ್ಟ್ರ ನಿರ್ಮಾಣ ಎಂದು ತಿಳಿದುಕೊಂಡು ಮತ್ತೊಮ್ಮೆ ಪ್ರಧಾನಿ ಮಾಡುತ್ತಿರಿ ಅನ್ನುವ ಗ್ಯಾರಂಟಿ ನನಗೆ ಇದೆ.
* * * *
ಮಿತ್ರೊ…. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಿದ್ರೆ ನಿಮ್ಗೆ ಇಷ್ಟ್ ಮಜಾ ಇರ್ತೀತ್ತ? ನಂಗೊತ್ತು ನೀವ್ ಯಾಕ್ ಬಿಜೆಪಿಗೆ ವೋಟ್ ಹಾಕುದ್ರಿ ಅಂತ.. ಗೋವಾ, ಕೇರಳ, ರೆಸಾರ್ಟ್ ರಾಜಕೀಯ, 100 ಕೋಟಿ, ಅವ್ನು ಅಲ್ಲಿಂದ ಇಲ್ಲಿಗೆ, ಇಲ್ಲಿರೋವ್ನು ಅಲ್ಲಿಗೆ.. ಇವ್ನು ಅವ್ನ ಭ್ರಷ್ಟ ಅನ್ನೋದು, ಅವ್ನು ಇವ್ನ ಭ್ರಷ್ಟ ಅನ್ನೋದು.. ಎಲ್ಲ ಮಿಸ್ ಮಾಡ್ಕೊಂಡಿದ್ರಿ ಅಂತ ಗೊತ್ತು..
* * * *
ಮಿತ್ರೊ…. ನಾನು ತೈವಾನ್ ಇಂದ ತರ್ಸಿರೋ ಇಂಪೋರ್ಟೆಡ್ ಅಣಬೆ ತಿನ್ನೋದು.. ಯಾರೋ ಕಿಡಿಗೇಡಿಗಳು ನಾನು ಭಾಷಣ ಪ್ರಾರಂಭ ಮಾಡೋಕು ಮುಂಚೆ ಕೊಡೈ ಕನಲ್ ಅಣೆಬೆ ಸೇರ್ಸಿ ಕೊಡ್ತಿದ್ದಾರೆ ಅನ್ಸುತ್ತೆ.. ಅದಕ್ಕೆ ನಾನೇನು ಮಾತಾಡ್ತಾ ಇದ್ದೀನಿ ಅಂಥ ನಂಗೆ ಗೋತೈತಿಲ್ಲ.. ಹಂಗೆ ನಮ್ಮ ಈಶ್ವರಪ್ಪ ಹೇಳ್ದಂಗೆ ಒಂದ್ ಫ್ಲೋ ನಲ್ಲಿ ಬಾಯಿಗೆ ಬಂದದ್ದು ಸುಳ್ಳೋ ಪೊಳ್ಳೋ ಜೋರಾಗಿ ಹೇಳ್ಬಿಡ್ತೀನಿ.. ಆ ಕಿಡಿಗೇಡಿಗಳನ್ನು ಹಿಡಿಯಲು ನನ್ನ ಗೆಲ್ಲಿಸಿ…
* * * *
ಮಿತ್ರೊ…. ನಾನೀಗ ನೇಪಾಳದ ಮುಕ್ತಿನಾಥ ದೇವಸ್ಥಾನದಲ್ಲಿದ್ದೀನಿ.. ಇಲ್ಲಿ ಧಾರ್ಮಿಕ ಡಿಪ್ಲೊಮಾಸಿ ಮುಗಿಸಿ ಮೌಂಟ್ ಎವರೆಸ್ಟ್ ಹತ್ತಲು ಯೋಚಿಸ್ತಿದ್ದೀನಿ.. ಕಾಂಗ್ರೆಸ್ನವರು, ಮೌಂಟ್ ಎವರೆಸ್ಟ್ ಈವರೆಗೂ ಹತ್ತದೆ ಅದನ್ನು ಅವಮಾನ ಮಾಡಿದ್ದಾರೆ..

– ಭರತ್ ಹೆಬ್ಬಾಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...