Homeರಾಜಕೀಯಮಿತ್ರೋ... ಮಿತ್ರೋ... ಮಿತ್ರೋ...

ಮಿತ್ರೋ… ಮಿತ್ರೋ… ಮಿತ್ರೋ…

- Advertisement -
- Advertisement -

ಮಿತ್ರೊ…. ಟೆಡ್ಡಿ ಫೋನ್ ಮಾಡಿದ್ರು.. ಸಡುನ್ ಆಗಿ ಎಂಜಿಲು ಮುಖಕ್ಕೆ ಬಿತ್ತು.. `ಥೂ ಬೋ$%&@#, 2008ರಲ್ಲಿ ನೀವಿಲ್ದೆ 110 ಸೀಟ್ ಗೆದಿದ್ದೆ, ಮೋದಿ ಅಲೆ, ದೇಶಭಕ್ತಿ, ಶಾ ಅಂತ 104ಕ್ಕೆ ತಂದು ನಡುನೀರ್ನಲ್ ನಿಲ್ಸಿ ಕೈಕೊಟ್ರಲ್ಲೋ..’ ಫುಲ್ ಸಂಸ್ಕೃತ.. ಇನ್ನು ಏನೋ ಹೇಳೋಕೆ ಹೋದ್ರು, ಕೋಪ ಮಾಡಿಕೊಂಡೊವ್ರೆ ಅಂಥ ಫೋನ್ ಕಟ್ ಮಾಡಿಬಿಟ್ಟೆ..
* * * *
ಮಿತ್ರೊ…. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ಯಾರೆಲ್ಗೆ 104 ಡಾಲರ್ ಇದ್ದಾಗ uಠಿಚಿ ಸರ್ಕಾರ ಬರಿ 4.5% ಕೇಂದ್ರೀಯ ತೆರಿಗೆ ಹಾಕಿ ಭಾರತ ಅಭಿವೃದ್ಧಿ ಆಗದಂತೆ ಮಾಡಿತ್ತು.. ನಾವು ಅಧಿಕಾರಕ್ಕೆ ಬಂದಾಗಿನಿಂದ ಅದೇ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಬ್ಯಾರೆಲ್ಗೆ 35 ಡಾಲರ್ ಇಂದ ಹಿಡಿದು 60 ಡಾಲರ್ ಆಗಿದೆ.. ನಾವು 4.5% ಇದ್ದ ಕೇಂದ್ರೀಯ ತೆರಿಗೆಯನ್ನು 19.5% ಹೆಚ್ಚಿಸಿ ದೇಶದ ಅಭಿವೃದ್ದಿಯ್ಯನ್ನು ಭಯಂಕರ ಹೆಚ್ಚಿಸಿದ್ದೇವೆ..!
* * * *
ಮಿತ್ರೊ…. ವೇದಾಂತ ಕಂಪನಿಯ ಅನಿಲ್ ಫೋನ್ ಮಾಡಿದ್ದ.. ಮಚ್ಚ, ಕಂಪನಿಗೆ ಬೀಗ ಹಾಕ್ಬಿಟ್ರು, ಏನಾರ ಮಾಡು ಅಂತ.. ನಾನು ಕೂಡ ಮೊನ್ನೆಯಿಂದ ಕ್ಯಾಲ್ಕುಲೇಟರ್ ಇಡ್ಕೊಂಡ್ ಲೆಕ್ಕ ಹಾಕ್ತಿದ್ದೆ. ಇವನು, ಕಾಂಗಿಗಳು ಮತ್ತು ನಮ್ಮ ಕೃಪೆಯಿಂದ, ಭಾರತೀಯ ಬ್ಯಾಂಕುಗಳಿಂದ ಪಡೆದಿರುವ ಒಟ್ಟೂ ಸಾಲ 2 ಲಕ್ಷ ಕೋಟಿಯಂತೆ. ಒಂದು ಅಂದಾಜಿನ ಮೇಲೆ ಇವನ ಕಂಪನಿಯಲ್ಲಿ ಒಟ್ಟು ಕೆಲಸಗಾರರು 60000.. ಅಂದರೆ ಪ್ರತಿ 3 ಕೋಟಿ 33 ಲಕ್ಷಕ್ಕೆ ಒಂದು ಉದ್ಯೋಗ ಶೃಸ್ಟಿ ಮಾಡುತ್ತಿದ್ದಾನಂತೆ! ಅಂದರೆ ಇವನ ಕಂಪನಿಯಲ್ಲಿ ಕೆಲಸ ಮಾಡುತ್ತಿರುವವರೆಲ್ಲರೂ ಕೋಟ್ಯಧಿಪತಿಗಳೇ? ಇಲ್ಲ, ಇವನ ಕಂಪನಿಯಲ್ಲಿ 90% ಮೇಲೂ ಕಾರ್ಮಿಕರು, ತಿಂಗಳಿಗೆ 20,000ಕ್ಕಿಂತಲೂ ಕಡಿಮೆ ಸಂಬಳ ಪಡೆಯುತ್ತಿದ್ದಾರೆ.. ಕಾಂಗಿ ಮತ್ತು ನಮಗೆ ಇವನು ಲೆಕ್ಕದಲ್ಲಿ ಕೊಟ್ಟಿರುವ ದೇಣಿಗೆ ಬರಿ 29 ಕೋಟಿ.. ಇನ್ನ ಮಿಕ್ಕ ಅಷ್ಟೊಂದು ಕಾಸಿನಲ್ಲಿ ಏನ್ ಮಾಡ್ತಾ ಇದ್ದಿಯೊ ಅಂತ ಡೌಟ್ನಲ್ಲಿ ಕೇಳ್ದೆ .. ಅವನು “ದೇಶದ್ರೋಹಿ, ಸೈನಿಕರು ಗಡಿಯಲ್ಲಿ ದೇಶಕ್ಕೋಸ್ಕರ ಸಾಯಿತಾ ಇದ್ರೆ ನಿಂಗೆ ಲೆಕ್ಕದ್ ಚಿಂತೆ” ಅಂತ ಫೋನ್ ಕಟ್ ಮಾಡ್ಬಿಡೋದ!!!
* * * *
ಮಿತ್ರೊ…. , ನನ್ನ ಗುರು ಸಾವರ್ಕರ್ ಅವರ ಬಗ್ಗೆ ನಾನು ಚಿಕ್ಕಂದಿನಿಂದಲೇ ಓದಲು ಶುರು ಮಾಡಿದ ಪುಸ್ತಕ “ಲೈಫ್ ಒಫ್ ಬ್ಯಾರಿಸ್ಟರ್ ಸಾವರ್ಕರ್”. ಇದು ಅವರು ಬ್ರಿಟಿಷರಿಂದ ಭಿಕ್ಷೆ ಬೇಡಿ, ನಾನು ಇನ್ನೆಂದಿಗೂ ಬ್ರಿಟಿಷರ ವಿರುದ್ಧ ಹೋರಾಡುವುದಿಲ್ಲ, ಇನ್ನು ಮುಂದೆ ನಾನು ನಿಮ್ಮ ಗುಲಾಮ ಎಂದು ಒಂದರ ಮೇಲೆ ಒಂದರಂತೆ ಹನ್ನೊಂದು ಪತ್ರಗಳನ್ನು ಬೆರೆದು 1924ರಲ್ಲಿ ಷರತ್ತಿನ ಮೇಲೆ ಬಿಡುಗಡೆಯಾಗಿ ಎರೆಡನೆ ವರ್ಷದಲ್ಲಿ(1926) ಅನಾಮಧೇಯ ಚಿತ್ರಗುಪ್ತ ಎಂಬುವವರು ಪ್ರಕಟಿಸಿದ ಪುಸ್ತಕ.. ಈ ಪುಸ್ತಕ ಎಷ್ಟು ರೋಚಕವಾಗಿತ್ತೆಂದರೆ, ಸಾವರ್ಕರ್ ಹುಟ್ಟಿನಿಂದಲೇ ಅತಿ ಬುದ್ದಿವಂತ, ಆಜನ್ಮ ಹೋರಾಟಗಾರ, ಅನ್ಯಾಯಗಳ ವಿರುದ್ಧ ಸಿಡಿದೇಳುವ ವೀರ, ಶೂರ, ಯಾವುದೇ ತಂತ್ರಕ್ಕೆ, ಮಣಿಯದೆ ಪ್ರತಿತಂತ್ರ ಹೆಣೆಯುವ ಶಕ್ತಿ ಮತ್ತು ಯುಕ್ತಿಯುಳ್ಳ ವೀರ ಎಂದು ಪುಸ್ತಕದ ಪ್ರತಿಯೊಂದು ಹಂತದಲ್ಲೂ ಬರೆಯಲಾಗಿತ್ತು.. ಯಾವುದೇ ಫಿಕ್ಷನ್ ಪುಸ್ತಕ ಓದುತ್ತಿದ್ದರೆ ಆ ಪಾತ್ರಗಳ ಒಳಗೆ ನಾವು ಹೇಗೆ ನುಸುಳಿ ಮಾರುಹೋಗುತ್ತೇವೋ ಅದೇ ರೀತಿ ಸಾವರ್ಕರರೇ ನಾನು ಎಂಬಂತೆ ಕಲ್ಪಿಸಿಕೊಳ್ಳಲು ಆರಂಭಿಸಿದೆ (ಒಂದು ರೀತಿಯ ನಾಗವಲ್ಲಿ ಟೈಪ್ಸ್). ನನ್ನ ಮೂವತ್ತೊಂದನೆ ವರ್ಷದಲ್ಲಿ, ಅದೆ 1987ರಲ್ಲಿ ತಿಳಿಯಿತು ಆ ಚಿತ್ರಗುಪ್ತ ಬೇರ್ಯಾರು ಅಲ್ಲ, ಖುದ್ದು ಸರ್ವರ್ಕರ್, ಚಿತ್ರಗುಪ್ತ ಎಂಬ ಹೆಸರಿನಲ್ಲಿ ಬರೆದ ಪುಸ್ತಕ ಎಂದು.. ಅಷ್ಟೊತ್ತಿಗಾಗಲೇ ಕಾಲ ಮಿಂಚಿತ್ತು.. ನಾನು ಸಾವರ್ಕರ್ ಆಗಿಹೋಗಿದ್ದೆ.. ನಿಜಜೀವನದಲ್ಲಿ ಭಗತ್ ಸಿಂಗ್, ರಾಜ್ಗುರು, ಸುಖ್ದೇವ್ ಥರ ವೀರರಾಗದಿದ್ದರೂ ಮುಖವಾಡಗಳಲ್ಲಿ ಹೀರೊ ಅಗೋ ಖುಷಿನೆ ಬೇರೆ.. ಈಗಲೂ ಅದನ್ನೇ mಚಿiಟಿಣಚಿiಟಿ ಮಾಡ್ಕೊಂಡ್ ಹೋಗ್ತಾ ಇದ್ದೀನಿ..
* * * *
ಮಿತ್ರೊ….
ನಾನು ಕೆಲಸ ಮಾಡುವವನು ಅಲ್ಲವೇ ಅಲ್ಲ, ನಾನು ಕಲರ್‍ಪುಲ್ ಮಾತಿನ ಗಿರಾಕಿ. ನಾಲ್ಕು ವರ್ಷಗಳಿಂದ ದೇಶದ ಆರ್ಥಿಕತೆಯನ್ನು ಹಳ್ಳ ಹಿಡಿಸಿದೆ. ನನ್ನ ತುಘಲಕ್ ತೀರ್ಮಾನವಾದ ಅಮಾನ್ಯೀಕರಣದಿಂದ ಲಕ್ಷಾಂತರ ಜನರು ಉದ್ಯೋಗ ಕಳೆದುಕೊಂಡರು. ಇನ್ನೂ ದೇಶದ ಆಡಳಿತ ನಡೆಸಲು ಬಾರದೆ ವಿದೇಶಿ ಪ್ರವಾಸ ಮಾಡಿಕೊಂಡು ಅಲ್ಲಿಯೂ ಭಾಷಣ ಮಾಡಿಕೊಂಡು ದಿನ ನೂಕಿದೆ. ಇನ್ನೂ ಹೀಂಗೆ ಹೇಳುತ್ತ ಹೋದರೆ ನೂರಾರು ಸಾಧನೆಗಳನ್ನು ಹೇಳಬಹುದು. ನೀವುಗಳು ನನ್ನ ಮಾತಿನಿಂದಲೇ ಹೊಟ್ಟೆ ತುಂಬಿಸಿಕೊಂಡು ದೇಶಕ್ಕಾಗಿ ಮಾಡುತ್ತಿರುವ ತ್ಯಾಗ ನೆನಸಿಕೊಂಡರೆ ಇನ್ನೂ ಅರ್ಧ ಕೆಜಿ ಅಣಬೆ ತಿನ್ನುವ ಅನ್ನಿಸುತ್ತೆ. 2019 ಕ್ಕೂ ನನ್ನ ಮಾತನ್ನೆ ರಾಷ್ಟ್ರ ನಿರ್ಮಾಣ ಎಂದು ತಿಳಿದುಕೊಂಡು ಮತ್ತೊಮ್ಮೆ ಪ್ರಧಾನಿ ಮಾಡುತ್ತಿರಿ ಅನ್ನುವ ಗ್ಯಾರಂಟಿ ನನಗೆ ಇದೆ.
* * * *
ಮಿತ್ರೊ…. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಿದ್ರೆ ನಿಮ್ಗೆ ಇಷ್ಟ್ ಮಜಾ ಇರ್ತೀತ್ತ? ನಂಗೊತ್ತು ನೀವ್ ಯಾಕ್ ಬಿಜೆಪಿಗೆ ವೋಟ್ ಹಾಕುದ್ರಿ ಅಂತ.. ಗೋವಾ, ಕೇರಳ, ರೆಸಾರ್ಟ್ ರಾಜಕೀಯ, 100 ಕೋಟಿ, ಅವ್ನು ಅಲ್ಲಿಂದ ಇಲ್ಲಿಗೆ, ಇಲ್ಲಿರೋವ್ನು ಅಲ್ಲಿಗೆ.. ಇವ್ನು ಅವ್ನ ಭ್ರಷ್ಟ ಅನ್ನೋದು, ಅವ್ನು ಇವ್ನ ಭ್ರಷ್ಟ ಅನ್ನೋದು.. ಎಲ್ಲ ಮಿಸ್ ಮಾಡ್ಕೊಂಡಿದ್ರಿ ಅಂತ ಗೊತ್ತು..
* * * *
ಮಿತ್ರೊ…. ನಾನು ತೈವಾನ್ ಇಂದ ತರ್ಸಿರೋ ಇಂಪೋರ್ಟೆಡ್ ಅಣಬೆ ತಿನ್ನೋದು.. ಯಾರೋ ಕಿಡಿಗೇಡಿಗಳು ನಾನು ಭಾಷಣ ಪ್ರಾರಂಭ ಮಾಡೋಕು ಮುಂಚೆ ಕೊಡೈ ಕನಲ್ ಅಣೆಬೆ ಸೇರ್ಸಿ ಕೊಡ್ತಿದ್ದಾರೆ ಅನ್ಸುತ್ತೆ.. ಅದಕ್ಕೆ ನಾನೇನು ಮಾತಾಡ್ತಾ ಇದ್ದೀನಿ ಅಂಥ ನಂಗೆ ಗೋತೈತಿಲ್ಲ.. ಹಂಗೆ ನಮ್ಮ ಈಶ್ವರಪ್ಪ ಹೇಳ್ದಂಗೆ ಒಂದ್ ಫ್ಲೋ ನಲ್ಲಿ ಬಾಯಿಗೆ ಬಂದದ್ದು ಸುಳ್ಳೋ ಪೊಳ್ಳೋ ಜೋರಾಗಿ ಹೇಳ್ಬಿಡ್ತೀನಿ.. ಆ ಕಿಡಿಗೇಡಿಗಳನ್ನು ಹಿಡಿಯಲು ನನ್ನ ಗೆಲ್ಲಿಸಿ…
* * * *
ಮಿತ್ರೊ…. ನಾನೀಗ ನೇಪಾಳದ ಮುಕ್ತಿನಾಥ ದೇವಸ್ಥಾನದಲ್ಲಿದ್ದೀನಿ.. ಇಲ್ಲಿ ಧಾರ್ಮಿಕ ಡಿಪ್ಲೊಮಾಸಿ ಮುಗಿಸಿ ಮೌಂಟ್ ಎವರೆಸ್ಟ್ ಹತ್ತಲು ಯೋಚಿಸ್ತಿದ್ದೀನಿ.. ಕಾಂಗ್ರೆಸ್ನವರು, ಮೌಂಟ್ ಎವರೆಸ್ಟ್ ಈವರೆಗೂ ಹತ್ತದೆ ಅದನ್ನು ಅವಮಾನ ಮಾಡಿದ್ದಾರೆ..

– ಭರತ್ ಹೆಬ್ಬಾಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...