Homeರಾಜಕೀಯಮಿತ್ರೋ... ಮಿತ್ರೋ... ಮಿತ್ರೋ...

ಮಿತ್ರೋ… ಮಿತ್ರೋ… ಮಿತ್ರೋ…

- Advertisement -
- Advertisement -

ಮಿತ್ರೊ…. ಟೆಡ್ಡಿ ಫೋನ್ ಮಾಡಿದ್ರು.. ಸಡುನ್ ಆಗಿ ಎಂಜಿಲು ಮುಖಕ್ಕೆ ಬಿತ್ತು.. `ಥೂ ಬೋ$%&@#, 2008ರಲ್ಲಿ ನೀವಿಲ್ದೆ 110 ಸೀಟ್ ಗೆದಿದ್ದೆ, ಮೋದಿ ಅಲೆ, ದೇಶಭಕ್ತಿ, ಶಾ ಅಂತ 104ಕ್ಕೆ ತಂದು ನಡುನೀರ್ನಲ್ ನಿಲ್ಸಿ ಕೈಕೊಟ್ರಲ್ಲೋ..’ ಫುಲ್ ಸಂಸ್ಕೃತ.. ಇನ್ನು ಏನೋ ಹೇಳೋಕೆ ಹೋದ್ರು, ಕೋಪ ಮಾಡಿಕೊಂಡೊವ್ರೆ ಅಂಥ ಫೋನ್ ಕಟ್ ಮಾಡಿಬಿಟ್ಟೆ..
* * * *
ಮಿತ್ರೊ…. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ಯಾರೆಲ್ಗೆ 104 ಡಾಲರ್ ಇದ್ದಾಗ uಠಿಚಿ ಸರ್ಕಾರ ಬರಿ 4.5% ಕೇಂದ್ರೀಯ ತೆರಿಗೆ ಹಾಕಿ ಭಾರತ ಅಭಿವೃದ್ಧಿ ಆಗದಂತೆ ಮಾಡಿತ್ತು.. ನಾವು ಅಧಿಕಾರಕ್ಕೆ ಬಂದಾಗಿನಿಂದ ಅದೇ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಬ್ಯಾರೆಲ್ಗೆ 35 ಡಾಲರ್ ಇಂದ ಹಿಡಿದು 60 ಡಾಲರ್ ಆಗಿದೆ.. ನಾವು 4.5% ಇದ್ದ ಕೇಂದ್ರೀಯ ತೆರಿಗೆಯನ್ನು 19.5% ಹೆಚ್ಚಿಸಿ ದೇಶದ ಅಭಿವೃದ್ದಿಯ್ಯನ್ನು ಭಯಂಕರ ಹೆಚ್ಚಿಸಿದ್ದೇವೆ..!
* * * *
ಮಿತ್ರೊ…. ವೇದಾಂತ ಕಂಪನಿಯ ಅನಿಲ್ ಫೋನ್ ಮಾಡಿದ್ದ.. ಮಚ್ಚ, ಕಂಪನಿಗೆ ಬೀಗ ಹಾಕ್ಬಿಟ್ರು, ಏನಾರ ಮಾಡು ಅಂತ.. ನಾನು ಕೂಡ ಮೊನ್ನೆಯಿಂದ ಕ್ಯಾಲ್ಕುಲೇಟರ್ ಇಡ್ಕೊಂಡ್ ಲೆಕ್ಕ ಹಾಕ್ತಿದ್ದೆ. ಇವನು, ಕಾಂಗಿಗಳು ಮತ್ತು ನಮ್ಮ ಕೃಪೆಯಿಂದ, ಭಾರತೀಯ ಬ್ಯಾಂಕುಗಳಿಂದ ಪಡೆದಿರುವ ಒಟ್ಟೂ ಸಾಲ 2 ಲಕ್ಷ ಕೋಟಿಯಂತೆ. ಒಂದು ಅಂದಾಜಿನ ಮೇಲೆ ಇವನ ಕಂಪನಿಯಲ್ಲಿ ಒಟ್ಟು ಕೆಲಸಗಾರರು 60000.. ಅಂದರೆ ಪ್ರತಿ 3 ಕೋಟಿ 33 ಲಕ್ಷಕ್ಕೆ ಒಂದು ಉದ್ಯೋಗ ಶೃಸ್ಟಿ ಮಾಡುತ್ತಿದ್ದಾನಂತೆ! ಅಂದರೆ ಇವನ ಕಂಪನಿಯಲ್ಲಿ ಕೆಲಸ ಮಾಡುತ್ತಿರುವವರೆಲ್ಲರೂ ಕೋಟ್ಯಧಿಪತಿಗಳೇ? ಇಲ್ಲ, ಇವನ ಕಂಪನಿಯಲ್ಲಿ 90% ಮೇಲೂ ಕಾರ್ಮಿಕರು, ತಿಂಗಳಿಗೆ 20,000ಕ್ಕಿಂತಲೂ ಕಡಿಮೆ ಸಂಬಳ ಪಡೆಯುತ್ತಿದ್ದಾರೆ.. ಕಾಂಗಿ ಮತ್ತು ನಮಗೆ ಇವನು ಲೆಕ್ಕದಲ್ಲಿ ಕೊಟ್ಟಿರುವ ದೇಣಿಗೆ ಬರಿ 29 ಕೋಟಿ.. ಇನ್ನ ಮಿಕ್ಕ ಅಷ್ಟೊಂದು ಕಾಸಿನಲ್ಲಿ ಏನ್ ಮಾಡ್ತಾ ಇದ್ದಿಯೊ ಅಂತ ಡೌಟ್ನಲ್ಲಿ ಕೇಳ್ದೆ .. ಅವನು “ದೇಶದ್ರೋಹಿ, ಸೈನಿಕರು ಗಡಿಯಲ್ಲಿ ದೇಶಕ್ಕೋಸ್ಕರ ಸಾಯಿತಾ ಇದ್ರೆ ನಿಂಗೆ ಲೆಕ್ಕದ್ ಚಿಂತೆ” ಅಂತ ಫೋನ್ ಕಟ್ ಮಾಡ್ಬಿಡೋದ!!!
* * * *
ಮಿತ್ರೊ…. , ನನ್ನ ಗುರು ಸಾವರ್ಕರ್ ಅವರ ಬಗ್ಗೆ ನಾನು ಚಿಕ್ಕಂದಿನಿಂದಲೇ ಓದಲು ಶುರು ಮಾಡಿದ ಪುಸ್ತಕ “ಲೈಫ್ ಒಫ್ ಬ್ಯಾರಿಸ್ಟರ್ ಸಾವರ್ಕರ್”. ಇದು ಅವರು ಬ್ರಿಟಿಷರಿಂದ ಭಿಕ್ಷೆ ಬೇಡಿ, ನಾನು ಇನ್ನೆಂದಿಗೂ ಬ್ರಿಟಿಷರ ವಿರುದ್ಧ ಹೋರಾಡುವುದಿಲ್ಲ, ಇನ್ನು ಮುಂದೆ ನಾನು ನಿಮ್ಮ ಗುಲಾಮ ಎಂದು ಒಂದರ ಮೇಲೆ ಒಂದರಂತೆ ಹನ್ನೊಂದು ಪತ್ರಗಳನ್ನು ಬೆರೆದು 1924ರಲ್ಲಿ ಷರತ್ತಿನ ಮೇಲೆ ಬಿಡುಗಡೆಯಾಗಿ ಎರೆಡನೆ ವರ್ಷದಲ್ಲಿ(1926) ಅನಾಮಧೇಯ ಚಿತ್ರಗುಪ್ತ ಎಂಬುವವರು ಪ್ರಕಟಿಸಿದ ಪುಸ್ತಕ.. ಈ ಪುಸ್ತಕ ಎಷ್ಟು ರೋಚಕವಾಗಿತ್ತೆಂದರೆ, ಸಾವರ್ಕರ್ ಹುಟ್ಟಿನಿಂದಲೇ ಅತಿ ಬುದ್ದಿವಂತ, ಆಜನ್ಮ ಹೋರಾಟಗಾರ, ಅನ್ಯಾಯಗಳ ವಿರುದ್ಧ ಸಿಡಿದೇಳುವ ವೀರ, ಶೂರ, ಯಾವುದೇ ತಂತ್ರಕ್ಕೆ, ಮಣಿಯದೆ ಪ್ರತಿತಂತ್ರ ಹೆಣೆಯುವ ಶಕ್ತಿ ಮತ್ತು ಯುಕ್ತಿಯುಳ್ಳ ವೀರ ಎಂದು ಪುಸ್ತಕದ ಪ್ರತಿಯೊಂದು ಹಂತದಲ್ಲೂ ಬರೆಯಲಾಗಿತ್ತು.. ಯಾವುದೇ ಫಿಕ್ಷನ್ ಪುಸ್ತಕ ಓದುತ್ತಿದ್ದರೆ ಆ ಪಾತ್ರಗಳ ಒಳಗೆ ನಾವು ಹೇಗೆ ನುಸುಳಿ ಮಾರುಹೋಗುತ್ತೇವೋ ಅದೇ ರೀತಿ ಸಾವರ್ಕರರೇ ನಾನು ಎಂಬಂತೆ ಕಲ್ಪಿಸಿಕೊಳ್ಳಲು ಆರಂಭಿಸಿದೆ (ಒಂದು ರೀತಿಯ ನಾಗವಲ್ಲಿ ಟೈಪ್ಸ್). ನನ್ನ ಮೂವತ್ತೊಂದನೆ ವರ್ಷದಲ್ಲಿ, ಅದೆ 1987ರಲ್ಲಿ ತಿಳಿಯಿತು ಆ ಚಿತ್ರಗುಪ್ತ ಬೇರ್ಯಾರು ಅಲ್ಲ, ಖುದ್ದು ಸರ್ವರ್ಕರ್, ಚಿತ್ರಗುಪ್ತ ಎಂಬ ಹೆಸರಿನಲ್ಲಿ ಬರೆದ ಪುಸ್ತಕ ಎಂದು.. ಅಷ್ಟೊತ್ತಿಗಾಗಲೇ ಕಾಲ ಮಿಂಚಿತ್ತು.. ನಾನು ಸಾವರ್ಕರ್ ಆಗಿಹೋಗಿದ್ದೆ.. ನಿಜಜೀವನದಲ್ಲಿ ಭಗತ್ ಸಿಂಗ್, ರಾಜ್ಗುರು, ಸುಖ್ದೇವ್ ಥರ ವೀರರಾಗದಿದ್ದರೂ ಮುಖವಾಡಗಳಲ್ಲಿ ಹೀರೊ ಅಗೋ ಖುಷಿನೆ ಬೇರೆ.. ಈಗಲೂ ಅದನ್ನೇ mಚಿiಟಿಣಚಿiಟಿ ಮಾಡ್ಕೊಂಡ್ ಹೋಗ್ತಾ ಇದ್ದೀನಿ..
* * * *
ಮಿತ್ರೊ….
ನಾನು ಕೆಲಸ ಮಾಡುವವನು ಅಲ್ಲವೇ ಅಲ್ಲ, ನಾನು ಕಲರ್‍ಪುಲ್ ಮಾತಿನ ಗಿರಾಕಿ. ನಾಲ್ಕು ವರ್ಷಗಳಿಂದ ದೇಶದ ಆರ್ಥಿಕತೆಯನ್ನು ಹಳ್ಳ ಹಿಡಿಸಿದೆ. ನನ್ನ ತುಘಲಕ್ ತೀರ್ಮಾನವಾದ ಅಮಾನ್ಯೀಕರಣದಿಂದ ಲಕ್ಷಾಂತರ ಜನರು ಉದ್ಯೋಗ ಕಳೆದುಕೊಂಡರು. ಇನ್ನೂ ದೇಶದ ಆಡಳಿತ ನಡೆಸಲು ಬಾರದೆ ವಿದೇಶಿ ಪ್ರವಾಸ ಮಾಡಿಕೊಂಡು ಅಲ್ಲಿಯೂ ಭಾಷಣ ಮಾಡಿಕೊಂಡು ದಿನ ನೂಕಿದೆ. ಇನ್ನೂ ಹೀಂಗೆ ಹೇಳುತ್ತ ಹೋದರೆ ನೂರಾರು ಸಾಧನೆಗಳನ್ನು ಹೇಳಬಹುದು. ನೀವುಗಳು ನನ್ನ ಮಾತಿನಿಂದಲೇ ಹೊಟ್ಟೆ ತುಂಬಿಸಿಕೊಂಡು ದೇಶಕ್ಕಾಗಿ ಮಾಡುತ್ತಿರುವ ತ್ಯಾಗ ನೆನಸಿಕೊಂಡರೆ ಇನ್ನೂ ಅರ್ಧ ಕೆಜಿ ಅಣಬೆ ತಿನ್ನುವ ಅನ್ನಿಸುತ್ತೆ. 2019 ಕ್ಕೂ ನನ್ನ ಮಾತನ್ನೆ ರಾಷ್ಟ್ರ ನಿರ್ಮಾಣ ಎಂದು ತಿಳಿದುಕೊಂಡು ಮತ್ತೊಮ್ಮೆ ಪ್ರಧಾನಿ ಮಾಡುತ್ತಿರಿ ಅನ್ನುವ ಗ್ಯಾರಂಟಿ ನನಗೆ ಇದೆ.
* * * *
ಮಿತ್ರೊ…. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಿದ್ರೆ ನಿಮ್ಗೆ ಇಷ್ಟ್ ಮಜಾ ಇರ್ತೀತ್ತ? ನಂಗೊತ್ತು ನೀವ್ ಯಾಕ್ ಬಿಜೆಪಿಗೆ ವೋಟ್ ಹಾಕುದ್ರಿ ಅಂತ.. ಗೋವಾ, ಕೇರಳ, ರೆಸಾರ್ಟ್ ರಾಜಕೀಯ, 100 ಕೋಟಿ, ಅವ್ನು ಅಲ್ಲಿಂದ ಇಲ್ಲಿಗೆ, ಇಲ್ಲಿರೋವ್ನು ಅಲ್ಲಿಗೆ.. ಇವ್ನು ಅವ್ನ ಭ್ರಷ್ಟ ಅನ್ನೋದು, ಅವ್ನು ಇವ್ನ ಭ್ರಷ್ಟ ಅನ್ನೋದು.. ಎಲ್ಲ ಮಿಸ್ ಮಾಡ್ಕೊಂಡಿದ್ರಿ ಅಂತ ಗೊತ್ತು..
* * * *
ಮಿತ್ರೊ…. ನಾನು ತೈವಾನ್ ಇಂದ ತರ್ಸಿರೋ ಇಂಪೋರ್ಟೆಡ್ ಅಣಬೆ ತಿನ್ನೋದು.. ಯಾರೋ ಕಿಡಿಗೇಡಿಗಳು ನಾನು ಭಾಷಣ ಪ್ರಾರಂಭ ಮಾಡೋಕು ಮುಂಚೆ ಕೊಡೈ ಕನಲ್ ಅಣೆಬೆ ಸೇರ್ಸಿ ಕೊಡ್ತಿದ್ದಾರೆ ಅನ್ಸುತ್ತೆ.. ಅದಕ್ಕೆ ನಾನೇನು ಮಾತಾಡ್ತಾ ಇದ್ದೀನಿ ಅಂಥ ನಂಗೆ ಗೋತೈತಿಲ್ಲ.. ಹಂಗೆ ನಮ್ಮ ಈಶ್ವರಪ್ಪ ಹೇಳ್ದಂಗೆ ಒಂದ್ ಫ್ಲೋ ನಲ್ಲಿ ಬಾಯಿಗೆ ಬಂದದ್ದು ಸುಳ್ಳೋ ಪೊಳ್ಳೋ ಜೋರಾಗಿ ಹೇಳ್ಬಿಡ್ತೀನಿ.. ಆ ಕಿಡಿಗೇಡಿಗಳನ್ನು ಹಿಡಿಯಲು ನನ್ನ ಗೆಲ್ಲಿಸಿ…
* * * *
ಮಿತ್ರೊ…. ನಾನೀಗ ನೇಪಾಳದ ಮುಕ್ತಿನಾಥ ದೇವಸ್ಥಾನದಲ್ಲಿದ್ದೀನಿ.. ಇಲ್ಲಿ ಧಾರ್ಮಿಕ ಡಿಪ್ಲೊಮಾಸಿ ಮುಗಿಸಿ ಮೌಂಟ್ ಎವರೆಸ್ಟ್ ಹತ್ತಲು ಯೋಚಿಸ್ತಿದ್ದೀನಿ.. ಕಾಂಗ್ರೆಸ್ನವರು, ಮೌಂಟ್ ಎವರೆಸ್ಟ್ ಈವರೆಗೂ ಹತ್ತದೆ ಅದನ್ನು ಅವಮಾನ ಮಾಡಿದ್ದಾರೆ..

– ಭರತ್ ಹೆಬ್ಬಾಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...