Homeಮುಖಪುಟಕಿರುಕುಳ ನೀಡುವ ಉದ್ದೇಶದಿಂದ ನನ್ನ ವರ್ಗಾವಣೆ ಮಾಡಲಾಗಿತ್ತು: ಜಸ್ಟಿಸ್‌ ದಿವಾಕರ್

ಕಿರುಕುಳ ನೀಡುವ ಉದ್ದೇಶದಿಂದ ನನ್ನ ವರ್ಗಾವಣೆ ಮಾಡಲಾಗಿತ್ತು: ಜಸ್ಟಿಸ್‌ ದಿವಾಕರ್

- Advertisement -
- Advertisement -

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಕೊಲಿಜಿಯಂ ಛತ್ತೀಸ್‌ಗಢ ಹೈಕೋರ್ಟ್‌ನಿಂದ ಅಲಹಾಬಾದ್ ಹೈಕೋರ್ಟ್‌ಗೆ ನನ್ನ ವರ್ಗಾವಣೆಯನ್ನು ಕಿರುಕುಳ ನೀಡುವ ಉದ್ದೇಶದಿಂದ ಮಾಡಿತ್ತು ಎಂದು ಅಲಹಾಬಾದ್ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಪ್ರಿತಿಂಕರ್ ದಿವಾಕರ್ ಹೇಳಿದ್ದಾರೆ.

2009ರ ಮಾ.31ರಂದು ನನ್ನನ್ನು ಛತ್ತೀಸಗಢ ಹೈಕೋರ್ಟಿನ ನ್ಯಾಯಾಧೀಶರಾಗಿ ನೇಮಕಗೊಳಿಸಲಾಗಿದೆ. ನಾನು ಛತ್ತೀಸ್‌ಗಢ ಹೈಕೋರ್ಟ್‌ನಲ್ಲಿ ಅ.2018ರವರೆಗೆ ನ್ಯಾಯಾಧೀಶನಾಗಿ ತೃಪ್ತಿಯಿಂದ ಕೆಲಸ ನಿರ್ವಹಿಸಿದ್ದೇನೆ. ಆಗಿನ ಭಾರತದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ಅಲಹಾಬಾದ್ ಹೈಕೋರ್ಟ್‌ಗೆ ನನ್ನನ್ನು ದಿಡೀರ್‌ ವರ್ಗಾವಣೆ ಮಾಡಿದರು. ನನಗೆ ಈವರೆಗೆ ಯಾಕೆ ವರ್ಗಾವಣೆ ಮಾಡಿದ್ದಾರೆ ಎಂದು ಗೊತ್ತಿಲ್ಲ, ನಾನು 2018ರ ಅ.3ರಂದು ಅಧಿಕಾರವನ್ನು ವಹಿಸಿಕೊಂಡೆ ಎಂದು ಜಸ್ಟಿಸ್ ಪ್ರಿತಿಂಕರ್ ದಿವಾಕರ್ ತಮ್ಮ ವಿದಾಯ ಭಾಷಣದಲ್ಲಿ ಹೇಳಿದ್ದಾರೆ.

ನನಗೆ ಕಿರುಕುಳ ನೀಡುವ ದುರುದ್ದೇಶದಿಂದ ನನ್ನ ವರ್ಗಾವಣೆ ಆದೇಶವನ್ನು ಹೊರಡಿಸಲಾಗಿದೆ ಎಂದು ತೋರುತ್ತಿದೆ. ಆದರೆ ಅದೃಷ್ಟವಶಾತ್ ನನ್ನ ಸಹವರ್ತಿ ನ್ಯಾಯಾಧೀಶರು ಮತ್ತು ವಕೀಲರು ನನಗೆ ಅಪಾರ ಬೆಂಬಲ ಮತ್ತು ಸಹಕಾರ ನೀಡಿದ್ದರಿಂದ ವರ್ಗಾವಣೆಯು ನನಗೆ ವರವಾಗಿ ಪರಿಣಮಿಸಿತು ಎಂದು ಅವರು ಹೇಳಿದ್ದಾರೆ.

ಈ ಮೊದಲು ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪ್ರಸ್ತುತ ಕೊಲಿಜಿಯಂ ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ನ್ಯಾಯಮೂರ್ತಿ ದಿವಾಕರ್ ಅವರ ಹೆಸರನ್ನು ಶಿಫಾರಸು ಮಾಡಿತ್ತು. ನನಗೆ ಆಗಿರುವ ಅನ್ಯಾಯವನ್ನು ಸರಿಪಡಿಸಿದ ಪ್ರಸ್ತುತ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ ಎಂದು ಹೇಳಿದ್ದಾರೆ.

ತಮ್ಮ ವೃತ್ತಿಜೀವನದ ಬಗ್ಗೆ ಮಾತನಾಡಿದ ನ್ಯಾಯಮೂರ್ತಿ ದಿವಾಕರ್, ನ.1 2000ದಂದು ಛತ್ತೀಸ್‌ಗಢದ ಹೈಕೋರ್ಟ್ ಅಸ್ತಿತ್ವಕ್ಕೆ ಬಂದಿತ್ತು. ಹೀಗಾಗಿ ನಾನು ಬಿಲಾಸ್‌ಪುರಕ್ಕೆ ಸ್ಥಳಾಂತರಗೊಂಡೆ. 2009ರಲ್ಲಿ ಕೊಲಿಜಿಯಂ ನನಗೆ ನ್ಯಾಯಾಧೀಶರ ಸ್ಥಾನವನ್ನು ನೀಡಿದಾಗ, ನಾನು ಅಂತಹ ಪ್ರಸ್ತಾಪವನ್ನು ಸ್ವೀಕರಿಸಲು ಆರಂಭದಲ್ಲಿ ಹಿಂಜರಿದಿದ್ದೆ. ಆದರೆ ಅಂತಿಮವಾಗಿ ನನ್ನ ಕುಟುಂಬ ಮತ್ತು ಹಿತೈಷಿಗಳೊಂದಿಗೆ  ಚರ್ಚೆಯ ನಂತರ ನಾನು ನ್ಯಾಯಾಧೀಶರಾಗಲು ನನ್ನ ಒಪ್ಪಿಗೆಯನ್ನು ನೀಡಿದ್ದೇನೆ. ವಿಶಿಷ್ಟವಾದ ಕಾರ್ಯಶೈಲಿ ಮತ್ತು ಸಂಪ್ರದಾಯಗಳನ್ನು ಹೊಂದಿರುವ ಈ ಮಹಾನ್ ನ್ಯಾಯಾಲಯದಲ್ಲಿ ಕೆಲಸ ಮಾಡುವ ಅವಕಾಶ ಸಿಕ್ಕಿರುವುದು ಯಾವಾಗಲೂ ಹೆಮ್ಮೆಯ ವಿಷಯವಾಗಿದೆ ಎಂದು ನ್ಯಾಯಮೂರ್ತಿ ದಿವಾಕರ್ ಹೇಳಿದರು.

ಭಾರೀ ಕೆಲಸದ ಹೊರೆಯನ್ನು ಸಮತೋಲನಗೊಳಿಸುವುದು ಅಲಹಾಬಾದ್ ಹೈಕೋರ್ಟ್‌ನಲ್ಲಿ ಒಂದು ಸವಾಲಾಗಿದೆ. ಇದಲ್ಲದೆ ಈ ನ್ಯಾಯಾಲಯವು ಅದರ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ  ಟೀಕೆಗೆ ಒಳಗಾಗಿತ್ತು. ಆದರೆ ಟೀಕೆ ಮಾಡುವವರು ಒಂದು ನಿರ್ದಿಷ್ಟ ತೀರ್ಮಾನಕ್ಕೆ ಬರುವ ಮೊದಲು ಅಲ್ಲಿನ ಚಾಲ್ತಿಯಲ್ಲಿರುವ ತೊಂದರೆಗಳು ಮತ್ತು ನ್ಯೂನತೆಗಳ ತಿಳುವಳಿಕೆಯನ್ನು ಹೊಂದಿರಬೇಕು ಎಂದು ಹೇಳಿದ್ದಾರೆ.

ಇದನ್ನು ಓದಿ: ಪ್ರತಿ ಪ್ರೊಡಕ್ಟ್‌ಗೆ 1 ಕೋಟಿ ದಂಡ ಹಾಕುತ್ತೇವೆ: ಬಾಬಾ ರಾಮ್‌ ದೇವ್‌ಗೆ ಕೋರ್ಟ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...