HomeUncategorizedಸಾಣೆಹಳ್ಳಿ ಶ್ರೀ ಗುರಿಯಾಗಿಸಿ ಬಸವ ತತ್ವದ ಮೇಲೆ ದಾಳಿ: ಪ್ರಜ್ಞಾವಂತರ ವೇದಿಕೆ

ಸಾಣೆಹಳ್ಳಿ ಶ್ರೀ ಗುರಿಯಾಗಿಸಿ ಬಸವ ತತ್ವದ ಮೇಲೆ ದಾಳಿ: ಪ್ರಜ್ಞಾವಂತರ ವೇದಿಕೆ

- Advertisement -
- Advertisement -

ಸಾಣೆಹಳ್ಳಿ ಶ್ರೀ ಸೇರಿದಂತೆ ರಾಜ್ಯದ ಧಾರ್ಮಿಕ ಗುರುಗಳು, ಚಿಂತಕರು, ಸಾಹಿತಿಗಳು ಮತ್ತು ಹೋರಾಟಗಾರರ ಮೇಲೆ ನಡೆಯುತ್ತಿರುವ ಸೈದ್ಧಾಂತಿಕ ದಾಳಿಯು ಬಸವತತ್ವದ ಮೇಲಾದ ದಾಳಿಯ ಮುಂದುವರಿಕೆ ಎಂದು ಕರ್ನಾಟಕ ಪ್ರಜ್ಞಾವಂತರ ವೇದಿಕೆ ಹೇಳಿತು.

ಗಣೇಶನ ಕುರಿತ ಹೇಳಿಕೆ ಮುಂದಿಟ್ಟುಕೊಂಡು ಸಾಣೆಹಳ್ಳಿ ಶ್ರೀ ಮೇಲೆ ನಡೆಯುತ್ತಿರುವ ಸೈದ್ಧಾಂತಿಕ ದಾಳಿಯನ್ನು ಖಂಡಿಸಿ ಬೆಂಗಳೂರಿನ ಗಾಂಧಿ ಭವನದಲ್ಲಿ ಇಂದು (ನ.22) ಪ್ರಗತಿಪರರು ಮತ್ತು ಹೋರಾಟಗಾರರಿಂದ ಕರ್ನಾಟಕ ಪ್ರಜ್ಞಾವಂತರ ಅನುಭವ ಮಂಟಪ ಎಂಬ ಹೆಸರಿನಲ್ಲಿ ಖಂಡನಾ ಸಭೆ ನಡೆಯಿತು. ಸಾಣೆಹಳ್ಳಿ ಶ್ರೀ, ಬಸವ ಪ್ರಕಾಶ ಸ್ವಾಮೀಜಿ ಬೆಳಗಾವಿ, ಶಿವಯೋಗಿ ಸ್ವಾಮೀಜಿ ಬೆಂಗಳೂರು ಸೇರಿದಂತೆ ಪ್ರಮುಖರು ಹಾಜರಿದ್ದರು.

ಅನುಭವ ಮಂಟಪ ಸಭೆ ಬಳಿಕ ಪ್ರಜ್ಞಾವಂತರ ವೇದಿಕೆಯ ಪ್ರಮುಖರು ಸುದ್ದಿಗೋಷ್ಠಿ ನಡೆಸಿ ಸಭೆಯಲ್ಲಿ ಕೈಗೊಂಡ ನಿರ್ಣಯಗಳು ಮತ್ತು ಬಸವತ್ವವನ್ನು ಪಸರಿಸಲು ಮುಂದಿನ ದಿನಗಳಲ್ಲಿ ಕಾರ್ಯಕ್ರಮಗಳನ್ನು ರೂಪಿಸುವ ಬಗ್ಗೆ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಗತಿಪರ ಚಿಂತಕ ಡಾ. ಸಿದ್ದನಗೌಡ ಪಾಟೀಲ, ವೈದಿಕ ಚಿಂತನೆಯ ಪ್ರತಿಪಾದಕರು ನಾಡಿನ ಪ್ರಗತಿಪರರು, ಬಸವತ್ವ ಪ್ರತಿಪಾದಕರ ಮೇಲೆ ಬಹಳ ವ್ಯವಸ್ಥಿತವಾಗಿ ದಾಳಿ ನಡೆಸುತ್ತಿದ್ದಾರೆ. ಇದೇ ವೈದಿಕ, ಸನಾತನ ಚಿಂತನೆ ಗೌರಿ, ಕಲಬುರಗಿಯನ್ನು ಹತ್ಯೆ ಮಾಡಿದೆ. ಹಾಗಂತ, ನಾವು ಸರ್ಕಾರದ ಕಡೆಯಿಂದ ಯಾವುದೇ ರಕ್ಷಣೆ ಕೇಳುತ್ತಿಲ್ಲ. ನಮ್ಮ ಉದ್ದೇಶ ಬಸವಾದಿ ಶರಣರ ಚಿಂತನೆಯ ಕ್ರಾಂತಿ ಎಂದರು.

ದೇಶದಲ್ಲಿ ಮತ ಧಾರ್ಮಿಕ ರಾಜಕಾರಣ ನಡೆಯುತ್ತಿದೆ. ಗೋಲ್ವಾಲ್ಕರ್‌ ‘ಒಂದು’ ಎಂಬ ಕಲ್ಪನೆ ತಂದರು. ಪ್ರಸ್ತುತ ಮೋದಿ ಸರ್ಕಾರ ಕೂಡ ಒಂದು ದೇಶ- ಒಂದು ಚುನಾವಣೆ, ಒಂದು ಕಾರ್ಡ್ ಇತ್ಯಾದಿಗಳ ಮೂಲಕ ಬಹುತ್ವದ ಮೇಲೆ ದಾಳಿ ಮಾಡುತ್ತಿದೆ. ದೇವಾಲಯವನ್ನು ಖಾಸಗೀಕರಿಸಿ ಅನ್ನವನ್ನು ಸಾಮಾಜಿಕವಾಗಿ ಮಾಡಿದ ಕಾಲವಿತ್ತು. ಆದರೆ, ಕಾರ್ಪೋರೇಟ್ ಜಗತ್ತು ಅನ್ನವನ್ನು ಖಾಸಗೀಕರಿಸಿ ದೇವಾಲಯವನ್ನು ಸಾಮಾಜಿಕ ಮಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರೊ. ಎಸ್‌.ಜಿ ಸಿದ್ದರಾಮಯ್ಯ ಮಾತನಾಡಿ, ಅನುಭವ ಮಂಟಪ ಕನ್ನಡ ನೆಲದಲ್ಲಿ ಹುಟ್ಟಿದ ಸಂಘಟನಾ ಶಕ್ತಿಯ ಅಡಿಪಾಯ. ಕನ್ನಡದ ಧರ್ಮ ಶರಣ ಧರ್ಮ. ಶರಣ ಚಿಂತನೆ ಅಪಾಯದಲ್ಲಿದೆ. ಈ ನೆಲದ ಬೆವರಿನ ಬೆಲೆಯ ಶೂದ್ರ ವರ್ಗದ ಮೇಲೆ ಆಶೂದ್ರ ವರ್ಗ ದಾಳಿ ಮಾಡುತ್ತಿದೆ. ದೇಶದ ಸಾಂಸ್ಕೃತಿಕ ಲೋಕ ಪಾರತಂತ್ರ್ಯದ ಒಳಗೆ ನರಳುತ್ತಿದೆ ಎಂದರು.

ಬಸವತತ್ವದ ಮೇಲೆ ಮುಂದುವರಿದ ದಾಳಿಯನ್ನು ವಿರೋಧಿಸಿ ಅನುಭವ ಮಂಟಪ ಸಭೆ ನಡೆಸಲಾಗಿದೆ. ಅನುಭವ ಮಂಟಪ ಯಾವತ್ತೂ ಸ್ಥಾವರವಲ್ಲ ಜಂಗಮ ಎಂದು ಹೇಳಿದರು.

ಸಂಸ್ಕತಿ ಚಿಂತಕ ಡಾ. ಜಯಪ್ರಕಾಶ್ ಬಂಜಗೆರೆ ಮಾತನಾಡಿ, ಚಾತುರ್ವರ್ಣ ವ್ಯವಸ್ಥೆ ಜಾತಿ ವ್ಯವಸ್ಥೆಯನ್ನು ಪ್ರತಿಪಾದಿಸಿ ಮಹಿಳೆಯರು ಮತ್ತು ವೈಚಾರಿಕ ಚಿಂತನೆಯನ್ನು ವಿರೋಧಿಸುತ್ತಿದೆ. ಬಸವ ಪ್ರಜ್ಞೆಯ ಧಮನದ ವಿರುದ್ಧ ಕಾರ್ಯಕ್ರಮ ರೂಪಿಸಲು ನಾವು ನಿರ್ಣಯಿಸಿದ್ದೇವೆ. ಅದಕ್ಕಾಗಿ ಸಮಿತಿ ರಚನೆ ಮಾಡಲಿದ್ದೇವೆ. ಆ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ನೀಡುತ್ತೇವೆ ಎಂದು ತಿಳಿಸಿದರು.

ದಲಿತ ಹೋರಾಟಗಾರ ಮಾವಳ್ಳಿ ಶಂಕರ್ ಮಾತನಾಡಿ ಸಾಣೆಹಳ್ಳಿ ಶ್ರೀ ಮೇಲಿನ ಸೈದ್ದಾಂತಿಕ ದಾಳಿಯನ್ನು ತೀವ್ರವಾಗಿ ಖಂಡಿಸಿದರು. ವಿದ್ಯಾವಂತರು ವೈಚಾರಿಕ ಚಿಂತನೆಯನ್ನು ವಿರೋಧಿಗಳಾಗುತ್ತಿದ್ದಾರೆ. ಪಠ್ಯ ಪುಸ್ತಕಗಳಲ್ಲಿ ಸುಳ್ಳು, ಮೌಢ್ಯವನ್ನು ತುಂಬಲಾಗ್ತಿದೆ. ಚರಿತ್ರೆಗಳನ್ನು ತಿರುಚುವ ಪ್ರಯತ್ನ ನಡೆಯುತ್ತಿದೆ. ಬಾಯಲ್ಲಿ ಮಾತ್ರ ಬಸವಣ್ಣನ ಜಪ ಮಾಡಿ ಅದಕ್ಕೆ ತದ್ವಿರುದ್ದವಾಗಿ ನಡೆಯುತ್ತಿದ್ದೇವೆ ಎಂದು ಕಳವಳ ವ್ಯಕ್ತಪಡಿಸಿದರು.

ಮಾನವ ಬಂದುತ್ವ ವೇದಿಕೆಯ ಲೀಲಾ ಮಾತನಾಡಿ, ಸಾಣೆಹಳ್ಳಿ ಶ್ರೀ ಕೇವಲ ಸಾಂಕೇತಿಕ. ಕೋಮುವಾದಿ, ಸನಾತನವಾದಿಗಳು ಮುಖ್ಯವಾಗಿ ಹೆಣ್ಣು ಮಕ್ಕಳನ್ನು ಗುರಿಯಾಗಿಸಿ ದಾಳಿ ಮಾಡುತ್ತಿದ್ದಾರೆ. ಹೆಣ್ಣು ಮಕ್ಕಳ ಹೆರಿಗೆ, ಮುಟ್ಟು, ಬಟ್ಟೆ ಇತ್ಯಾದಿಗಳನ್ನು ಮುಂದಿಟ್ಟುಕೊಂಡು ಗುರಿಯಾಗಿಸುತ್ತಿದ್ದಾರೆ ಎಂದರು.

ಸಿರಿಗೆರೆ ಮೂಲ ಮಠ, ಸಾಣೆಹಳ್ಳಿ ಅದರ ಶಾಖಾ ಮಠ, ಸಿರಿಗೆರೆ ಸ್ವಾಮೀಜಿ ಮತ್ತು ಸಾಣೆಹಳ್ಳಿ ಸ್ವಾಮೀಜಿ ಗಣೇಶನ ಕುರಿತು ತದ್ವಿರುದ್ದ ಹೇಳಿಕೆ ನೀಡಿದ್ದಾರಲ್ಲ ಎಂದು ಪತ್ರಕರ್ತರು ಕೇಳಿದಕ್ಕೆ, ಆ ಕುರಿತು ಸಿರಿಗೆರೆ ಸ್ವಾಮೀಜಿಯನ್ನೇ ಕೇಳಿ. ಸಾಣೆಹಳ್ಳಿ ಶ್ರೀಗಳ ಮೇಲಿನ ದಾಳಿ ಸಂಬಂಧ ನಾವು ಯಾವುದೇ ಕಾನೂನು ಹೋರಾಟ ಮಾಡುವುದಿಲ್ಲ. ಬಸವತ್ವದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತೇವೆ ಎಂದು ಸುದ್ದಿಗೋಷ್ಠಿಯಲ್ಲಿದ್ದವರು ತಿಳಿಸಿದರು.

ಇದನ್ನೂ ಓದಿ : ಬೆಂಗಳೂರು: ಯತೀಂಖಾನಾ ವಿರುದ್ಧ ಎಫ್‌ಐಆರ್‌ಗೆ NCPCR ಸೂಚನೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...