Homeಮುಖಪುಟಕದನ ವಿರಾಮ: ಒತ್ತೆಯಾಳುಗಳ ಕುಟುಂಬಸ್ಥರಿಗೆ ನಿರಾಶೆ ಉಂಟು ಮಾಡಿದ ಇಸ್ರೇಲ್‌ ಹೇಳಿಕೆ

ಕದನ ವಿರಾಮ: ಒತ್ತೆಯಾಳುಗಳ ಕುಟುಂಬಸ್ಥರಿಗೆ ನಿರಾಶೆ ಉಂಟು ಮಾಡಿದ ಇಸ್ರೇಲ್‌ ಹೇಳಿಕೆ

- Advertisement -
- Advertisement -

ಇಸ್ರೇಲ್ ಮತ್ತು ಹಮಾಸ್ ನಡುವೆ ತಾತ್ಕಾಲಿಕ ಕದನ ವಿರಾಮ ಒಪ್ಪಂದ ನಡೆದಿದ್ದರೂ ಶುಕ್ರವಾರದ ಮೊದಲು ಪ್ಯಾಲೆಸ್ತೀನ್‌ನ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವುದಿಲ್ಲ ಎಂದು ಇಸ್ರೇಲ್‌ನ ರಾಷ್ಟ್ರೀಯ ಭದ್ರತಾ ಸಲಹೆಗಾರರು ಹೇಳಿದ್ದಾರೆ. ಈ ಹೇಳಿಕೆಯಿಂದ ಗುರುವಾರ ಒತ್ತೆಯಾಳುಗಳು ಬಿಡುಗಡೆಯಾಗಲಿದ್ದಾರೆ ಎಂಬ ನಿರೀಕ್ಷಯಿಂದಿದ್ದ ಸಂಬಂಧಿಕರಲ್ಲಿ ನಿರಾಶೆ ಉಂಟು ಮಾಡಿದೆ.

ಇಸ್ರೇಲ್ ಮತ್ತು ಹಮಾಸ್ ನಡುವೆ ಕನಿಷ್ಠ 4 ದಿನಗಳ ಕಾಲ ಕದನ ವಿರಾಮಕ್ಕೆ ಒಪ್ಪಿಗೆಯಾಗಿವೆ. ಮಾನವೀಯ ನೆರವು ಮತ್ತು ಇಸ್ರೇಲ್‌ನಲ್ಲಿ ಜೈಲಿನಲ್ಲಿರುವ ಕನಿಷ್ಠ 150 ಪ್ಯಾಲೆಸ್ತೀನಿಯಾದವರಿಗೆ ಬದಲಾಗಿ ಹಮಾಸ್‌ ಹಿಡಿದಿರುವ ಕನಿಷ್ಠ 50 ಒತ್ತೆಯಾಳುಗಳನ್ನು ಬಂಧನ ಮುಕ್ತಗೊಳಿಸುವುದಾಗಿ ಒಪ್ಪಂದವಾಗಿತ್ತು.

ಅ.7ರಂದು ಸೆರೆಯಾಗಿರಿಸಿದ ಒತ್ತೆಯಾಳುಗಳನ್ನು ಹಮಾಸ್‌ ಬಿಡುಗಡೆ ಮಾಡುವ ಸಮಯದ ಬಗ್ಗೆ ಇನ್ನೂ ಅಧಿಕೃತವಾಗಿ ಘೋಷಿಸಲ್ಪಟ್ಟಿಲ್ಲ. ಗುರುವಾರ ಮಧ್ಯವರ್ತಿಗಳು ಬಿಡುಗಡೆಗೆ ಸಮಯವನ್ನು ಕೋರಿದ್ದಾರೆ ಎಂದು ಈಜಿಪ್ಟ್ ಭದ್ರತಾ ಮೂಲ ತಿಳಿಸಿದೆ.

ನಮ್ಮ ಒತ್ತೆಯಾಳುಗಳ ಬಿಡುಗಡೆಯ ಕುರಿತಾದ ಮಾತುಕತೆಗಳು ಮುಂದುವರಿಯುತ್ತಿವೆ ಎಂದು ಇಸ್ರೇಲ್‌ನ ರಾಷ್ಟ್ರೀಯ ಭದ್ರತಾ ಸಲಹೆಗಾರ ತ್ಜಾಚಿ ಹನೆಗ್ಬಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಬಿಡುಗಡೆಯು ದ್ವಿಪಕ್ಷಗಳ ನಡುವಿನ ಮೂಲ ಒಪ್ಪಂದದ ಮೂಲಕ ನಡೆಯುತ್ತದೆ ಮತ್ತು ಶುಕ್ರವಾರದ ಮೊದಲು ಇದು ನಡೆಯುವುದಿಲ್ಲ ಎಂದು ಹೇಳಿದ್ದಾರೆ.

ಹಮಾಸ್ ಮತ್ತು ಮಧ್ಯವರ್ತಿ ಕತಾರ್ ಒಪ್ಪಂದಕ್ಕೆ ಸಹಿ ಹಾಕದ ಕಾರಣ 24 ಗಂಟೆಗಳ ವಿಳಂಬವಾಗಿದೆ ಎಂದು ಇಸ್ರೇಲ್‌ ಅಧಿಕಾರಿಯೋರ್ವರು ಹೇಳಿರುವ ಬಗ್ಗೆ ಇಸ್ರೇಲ್‌ನ ಮಾದ್ಯಮವೊಂದು ವರದಿ ಮಾಡಿದೆ.

ಮಾದ್ಯಮವನ್ನು ಹೊರತುಪಡಿಸಿ ನಾಳೆ ಒತ್ತೆಯಾಳುಗಳ ಬಿಡುಗಡೆ ನಡೆಯುತ್ತದೆ ಎಂದು ಯಾರೂ ಹೇಳಿಲ್ಲ.  ಶುಕ್ರವಾರದ ಮೊದಲು ಯಾವುದೇ ಬಿಡುಗಡೆಗೆ ತೀರ್ಮಾನಿಸಲಾಗಿಲ್ಲ ಎಂದು ಇಸ್ರೇಲ್‌ ಪ್ರಧಾನ ಮಂತ್ರಿಯ ಕಚೇರಿಯ ಮಾಹಿತಿ ಉಲ್ಲೇಖಿಸಿ ಇಸ್ರೇಲ್‌ ಮಾದ್ಯಮಗಳು ವರದಿ ಮಾಡಿದೆ.

ಅ.7ರಂದು ಇಸ್ರೇಲ್‌ ಮೇಲೆ ಹಮಾಸ್‌ ರಾಕೆಟ್‌ ದಾಳಿ ನಡೆಸಿದ ಬಳಿಕ 1,200 ಮಂದಿ ಇಸ್ರೇಲ್‌ ಪ್ರಜೆಗಳು ಮೃತಪಟ್ಟಿದ್ದರು. 240 ಮಂದಿ ಒತ್ತೆಯಾಳುಗಳು ಇನ್ನೂ ಹಮಾಸ್‌ ಸೆರೆಯಲಿದ್ದಾರೆ. ಈ ಮೊದಲು ಹಮಾಸ್‌  ಐವರು ಒತ್ತೆಯಾಳುಗಳನ್ನು ಬಿಡುಗಡೆ ಮಾಡಿತ್ತು.

ಇಸ್ರೇಲ್‌ ಪ್ಯಾಲೆಸ್ತೀನ್‌ ಮೇಲೆ ದಾಳಿ ಆರಂಭಿಸಿದ ಬಳಿಕ ಪ್ಯಾಲೆಸ್ತೀನ್‌ನಲ್ಲಿ ಸುಮಾರು 14,000ಕ್ಕೂ ಅಧಿಕ  ನಾಗರಿಕರ ಹತ್ಯೆಯಾಗಿದ್ದು, ಅದರಲ್ಲಿ 40% ಮಕ್ಕಳು ಸೇರಿದ್ದಾರೆ ಎಂದು ಹಮಾಸ್‌ ವಕ್ತಾರರು ಮಾಹಿತಿ ನೀಡಿದ್ದಾರೆ.

ಬುಧವಾರ ತಡರಾತ್ರಿ ಪತ್ರಿಕಾಗೋಷ್ಠಿಯಲ್ಲಿ ಒಪ್ಪಂದದ ಅನುಷ್ಠಾನದಲ್ಲಿ ಸಂಭಾವ್ಯ ವಿಳಂಬದ ಬಗ್ಗೆ ನೆತನ್ಯಾಹು ಯಾವುದೇ ಪ್ರಸ್ತಾಪವನ್ನು ಮಾಡಲಿಲ್ಲ. ರೆಡ್ ಕ್ರಾಸ್‌ ಗಾಝಾದಲ್ಲಿ ಉಳಿದಿರುವ  ಒತ್ತೆಯಾಳುಗಳನ್ನು ಭೇಟಿ ಮಾಡಲಿದೆ. ಒತ್ತೆಯಾಳುಗಳು ಜೀವಂತವಾಗಿದ್ದಾರೆಯೇ ಎಂದು ನಾವು ತಿಳಿದುಕೊಳ್ಳಬೇಕು ಎಂದು ಗಿಲಾಡ್ ಕೊರ್ನ್ಗೋಲ್ಡ್ ಹೇಳಿದ್ದಾರೆ. ಅವರ 3 ವರ್ಷದ ಮೊಮ್ಮಗಳು ಸೇರಿದಂತೆ ಅವರ ಕುಟುಂಬದ 7 ಸದಸ್ಯರನ್ನು ಹಮಾಸ್‌ ಒತ್ತೆಯಾಳಾಗಿಟ್ಟುಕೊಂಡಿದೆ.

ಯುದ್ಧ ಒಪ್ಪಂದದ ಬಗ್ಗೆ ಪ್ರತಿಕ್ರಿಯಿಸಿದ ಅಮೆರಿಕ, ಎಲ್ಲರೂ ವಾಪಾಸ್ಸು ಬರಬೇಕೆಂದು ನಾವು ಆಶಿಸುತ್ತೇವೆ. ತುಂಬಾ ಕಠಿಣ ನಿರ್ಧಾರ. ಆದರೆ ಮಕ್ಕಳು ಮತ್ತು ಮಹಿಳೆಯರ ಬಿಡುಗಡೆಯಾಗಬೇಕು. ಅವರು ಅತ್ಯಂತ ದುರ್ಬಲರಾಗಿದ್ದಾರೆ. ಇದಾದರೆ ಹೆಚ್ಚಿನ ಸಂಖ್ಯೆಯಲ್ಲಿ ಮಾನವೀಯ ನೆರವನ್ನು ಗಾಝಾಗೆ ತಲುಪಿಸಲಾಗುವುದು ಎಂದು ಅಮೆರಿಕ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...