Homeಮುಖಪುಟಕದನ ವಿರಾಮ: ಒತ್ತೆಯಾಳುಗಳ ಕುಟುಂಬಸ್ಥರಿಗೆ ನಿರಾಶೆ ಉಂಟು ಮಾಡಿದ ಇಸ್ರೇಲ್‌ ಹೇಳಿಕೆ

ಕದನ ವಿರಾಮ: ಒತ್ತೆಯಾಳುಗಳ ಕುಟುಂಬಸ್ಥರಿಗೆ ನಿರಾಶೆ ಉಂಟು ಮಾಡಿದ ಇಸ್ರೇಲ್‌ ಹೇಳಿಕೆ

- Advertisement -
- Advertisement -

ಇಸ್ರೇಲ್ ಮತ್ತು ಹಮಾಸ್ ನಡುವೆ ತಾತ್ಕಾಲಿಕ ಕದನ ವಿರಾಮ ಒಪ್ಪಂದ ನಡೆದಿದ್ದರೂ ಶುಕ್ರವಾರದ ಮೊದಲು ಪ್ಯಾಲೆಸ್ತೀನ್‌ನ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವುದಿಲ್ಲ ಎಂದು ಇಸ್ರೇಲ್‌ನ ರಾಷ್ಟ್ರೀಯ ಭದ್ರತಾ ಸಲಹೆಗಾರರು ಹೇಳಿದ್ದಾರೆ. ಈ ಹೇಳಿಕೆಯಿಂದ ಗುರುವಾರ ಒತ್ತೆಯಾಳುಗಳು ಬಿಡುಗಡೆಯಾಗಲಿದ್ದಾರೆ ಎಂಬ ನಿರೀಕ್ಷಯಿಂದಿದ್ದ ಸಂಬಂಧಿಕರಲ್ಲಿ ನಿರಾಶೆ ಉಂಟು ಮಾಡಿದೆ.

ಇಸ್ರೇಲ್ ಮತ್ತು ಹಮಾಸ್ ನಡುವೆ ಕನಿಷ್ಠ 4 ದಿನಗಳ ಕಾಲ ಕದನ ವಿರಾಮಕ್ಕೆ ಒಪ್ಪಿಗೆಯಾಗಿವೆ. ಮಾನವೀಯ ನೆರವು ಮತ್ತು ಇಸ್ರೇಲ್‌ನಲ್ಲಿ ಜೈಲಿನಲ್ಲಿರುವ ಕನಿಷ್ಠ 150 ಪ್ಯಾಲೆಸ್ತೀನಿಯಾದವರಿಗೆ ಬದಲಾಗಿ ಹಮಾಸ್‌ ಹಿಡಿದಿರುವ ಕನಿಷ್ಠ 50 ಒತ್ತೆಯಾಳುಗಳನ್ನು ಬಂಧನ ಮುಕ್ತಗೊಳಿಸುವುದಾಗಿ ಒಪ್ಪಂದವಾಗಿತ್ತು.

ಅ.7ರಂದು ಸೆರೆಯಾಗಿರಿಸಿದ ಒತ್ತೆಯಾಳುಗಳನ್ನು ಹಮಾಸ್‌ ಬಿಡುಗಡೆ ಮಾಡುವ ಸಮಯದ ಬಗ್ಗೆ ಇನ್ನೂ ಅಧಿಕೃತವಾಗಿ ಘೋಷಿಸಲ್ಪಟ್ಟಿಲ್ಲ. ಗುರುವಾರ ಮಧ್ಯವರ್ತಿಗಳು ಬಿಡುಗಡೆಗೆ ಸಮಯವನ್ನು ಕೋರಿದ್ದಾರೆ ಎಂದು ಈಜಿಪ್ಟ್ ಭದ್ರತಾ ಮೂಲ ತಿಳಿಸಿದೆ.

ನಮ್ಮ ಒತ್ತೆಯಾಳುಗಳ ಬಿಡುಗಡೆಯ ಕುರಿತಾದ ಮಾತುಕತೆಗಳು ಮುಂದುವರಿಯುತ್ತಿವೆ ಎಂದು ಇಸ್ರೇಲ್‌ನ ರಾಷ್ಟ್ರೀಯ ಭದ್ರತಾ ಸಲಹೆಗಾರ ತ್ಜಾಚಿ ಹನೆಗ್ಬಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಬಿಡುಗಡೆಯು ದ್ವಿಪಕ್ಷಗಳ ನಡುವಿನ ಮೂಲ ಒಪ್ಪಂದದ ಮೂಲಕ ನಡೆಯುತ್ತದೆ ಮತ್ತು ಶುಕ್ರವಾರದ ಮೊದಲು ಇದು ನಡೆಯುವುದಿಲ್ಲ ಎಂದು ಹೇಳಿದ್ದಾರೆ.

ಹಮಾಸ್ ಮತ್ತು ಮಧ್ಯವರ್ತಿ ಕತಾರ್ ಒಪ್ಪಂದಕ್ಕೆ ಸಹಿ ಹಾಕದ ಕಾರಣ 24 ಗಂಟೆಗಳ ವಿಳಂಬವಾಗಿದೆ ಎಂದು ಇಸ್ರೇಲ್‌ ಅಧಿಕಾರಿಯೋರ್ವರು ಹೇಳಿರುವ ಬಗ್ಗೆ ಇಸ್ರೇಲ್‌ನ ಮಾದ್ಯಮವೊಂದು ವರದಿ ಮಾಡಿದೆ.

ಮಾದ್ಯಮವನ್ನು ಹೊರತುಪಡಿಸಿ ನಾಳೆ ಒತ್ತೆಯಾಳುಗಳ ಬಿಡುಗಡೆ ನಡೆಯುತ್ತದೆ ಎಂದು ಯಾರೂ ಹೇಳಿಲ್ಲ.  ಶುಕ್ರವಾರದ ಮೊದಲು ಯಾವುದೇ ಬಿಡುಗಡೆಗೆ ತೀರ್ಮಾನಿಸಲಾಗಿಲ್ಲ ಎಂದು ಇಸ್ರೇಲ್‌ ಪ್ರಧಾನ ಮಂತ್ರಿಯ ಕಚೇರಿಯ ಮಾಹಿತಿ ಉಲ್ಲೇಖಿಸಿ ಇಸ್ರೇಲ್‌ ಮಾದ್ಯಮಗಳು ವರದಿ ಮಾಡಿದೆ.

ಅ.7ರಂದು ಇಸ್ರೇಲ್‌ ಮೇಲೆ ಹಮಾಸ್‌ ರಾಕೆಟ್‌ ದಾಳಿ ನಡೆಸಿದ ಬಳಿಕ 1,200 ಮಂದಿ ಇಸ್ರೇಲ್‌ ಪ್ರಜೆಗಳು ಮೃತಪಟ್ಟಿದ್ದರು. 240 ಮಂದಿ ಒತ್ತೆಯಾಳುಗಳು ಇನ್ನೂ ಹಮಾಸ್‌ ಸೆರೆಯಲಿದ್ದಾರೆ. ಈ ಮೊದಲು ಹಮಾಸ್‌  ಐವರು ಒತ್ತೆಯಾಳುಗಳನ್ನು ಬಿಡುಗಡೆ ಮಾಡಿತ್ತು.

ಇಸ್ರೇಲ್‌ ಪ್ಯಾಲೆಸ್ತೀನ್‌ ಮೇಲೆ ದಾಳಿ ಆರಂಭಿಸಿದ ಬಳಿಕ ಪ್ಯಾಲೆಸ್ತೀನ್‌ನಲ್ಲಿ ಸುಮಾರು 14,000ಕ್ಕೂ ಅಧಿಕ  ನಾಗರಿಕರ ಹತ್ಯೆಯಾಗಿದ್ದು, ಅದರಲ್ಲಿ 40% ಮಕ್ಕಳು ಸೇರಿದ್ದಾರೆ ಎಂದು ಹಮಾಸ್‌ ವಕ್ತಾರರು ಮಾಹಿತಿ ನೀಡಿದ್ದಾರೆ.

ಬುಧವಾರ ತಡರಾತ್ರಿ ಪತ್ರಿಕಾಗೋಷ್ಠಿಯಲ್ಲಿ ಒಪ್ಪಂದದ ಅನುಷ್ಠಾನದಲ್ಲಿ ಸಂಭಾವ್ಯ ವಿಳಂಬದ ಬಗ್ಗೆ ನೆತನ್ಯಾಹು ಯಾವುದೇ ಪ್ರಸ್ತಾಪವನ್ನು ಮಾಡಲಿಲ್ಲ. ರೆಡ್ ಕ್ರಾಸ್‌ ಗಾಝಾದಲ್ಲಿ ಉಳಿದಿರುವ  ಒತ್ತೆಯಾಳುಗಳನ್ನು ಭೇಟಿ ಮಾಡಲಿದೆ. ಒತ್ತೆಯಾಳುಗಳು ಜೀವಂತವಾಗಿದ್ದಾರೆಯೇ ಎಂದು ನಾವು ತಿಳಿದುಕೊಳ್ಳಬೇಕು ಎಂದು ಗಿಲಾಡ್ ಕೊರ್ನ್ಗೋಲ್ಡ್ ಹೇಳಿದ್ದಾರೆ. ಅವರ 3 ವರ್ಷದ ಮೊಮ್ಮಗಳು ಸೇರಿದಂತೆ ಅವರ ಕುಟುಂಬದ 7 ಸದಸ್ಯರನ್ನು ಹಮಾಸ್‌ ಒತ್ತೆಯಾಳಾಗಿಟ್ಟುಕೊಂಡಿದೆ.

ಯುದ್ಧ ಒಪ್ಪಂದದ ಬಗ್ಗೆ ಪ್ರತಿಕ್ರಿಯಿಸಿದ ಅಮೆರಿಕ, ಎಲ್ಲರೂ ವಾಪಾಸ್ಸು ಬರಬೇಕೆಂದು ನಾವು ಆಶಿಸುತ್ತೇವೆ. ತುಂಬಾ ಕಠಿಣ ನಿರ್ಧಾರ. ಆದರೆ ಮಕ್ಕಳು ಮತ್ತು ಮಹಿಳೆಯರ ಬಿಡುಗಡೆಯಾಗಬೇಕು. ಅವರು ಅತ್ಯಂತ ದುರ್ಬಲರಾಗಿದ್ದಾರೆ. ಇದಾದರೆ ಹೆಚ್ಚಿನ ಸಂಖ್ಯೆಯಲ್ಲಿ ಮಾನವೀಯ ನೆರವನ್ನು ಗಾಝಾಗೆ ತಲುಪಿಸಲಾಗುವುದು ಎಂದು ಅಮೆರಿಕ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...