Homeಮುಖಪುಟಕದನ ವಿರಾಮ: ಒತ್ತೆಯಾಳುಗಳ ಕುಟುಂಬಸ್ಥರಿಗೆ ನಿರಾಶೆ ಉಂಟು ಮಾಡಿದ ಇಸ್ರೇಲ್‌ ಹೇಳಿಕೆ

ಕದನ ವಿರಾಮ: ಒತ್ತೆಯಾಳುಗಳ ಕುಟುಂಬಸ್ಥರಿಗೆ ನಿರಾಶೆ ಉಂಟು ಮಾಡಿದ ಇಸ್ರೇಲ್‌ ಹೇಳಿಕೆ

- Advertisement -
- Advertisement -

ಇಸ್ರೇಲ್ ಮತ್ತು ಹಮಾಸ್ ನಡುವೆ ತಾತ್ಕಾಲಿಕ ಕದನ ವಿರಾಮ ಒಪ್ಪಂದ ನಡೆದಿದ್ದರೂ ಶುಕ್ರವಾರದ ಮೊದಲು ಪ್ಯಾಲೆಸ್ತೀನ್‌ನ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವುದಿಲ್ಲ ಎಂದು ಇಸ್ರೇಲ್‌ನ ರಾಷ್ಟ್ರೀಯ ಭದ್ರತಾ ಸಲಹೆಗಾರರು ಹೇಳಿದ್ದಾರೆ. ಈ ಹೇಳಿಕೆಯಿಂದ ಗುರುವಾರ ಒತ್ತೆಯಾಳುಗಳು ಬಿಡುಗಡೆಯಾಗಲಿದ್ದಾರೆ ಎಂಬ ನಿರೀಕ್ಷಯಿಂದಿದ್ದ ಸಂಬಂಧಿಕರಲ್ಲಿ ನಿರಾಶೆ ಉಂಟು ಮಾಡಿದೆ.

ಇಸ್ರೇಲ್ ಮತ್ತು ಹಮಾಸ್ ನಡುವೆ ಕನಿಷ್ಠ 4 ದಿನಗಳ ಕಾಲ ಕದನ ವಿರಾಮಕ್ಕೆ ಒಪ್ಪಿಗೆಯಾಗಿವೆ. ಮಾನವೀಯ ನೆರವು ಮತ್ತು ಇಸ್ರೇಲ್‌ನಲ್ಲಿ ಜೈಲಿನಲ್ಲಿರುವ ಕನಿಷ್ಠ 150 ಪ್ಯಾಲೆಸ್ತೀನಿಯಾದವರಿಗೆ ಬದಲಾಗಿ ಹಮಾಸ್‌ ಹಿಡಿದಿರುವ ಕನಿಷ್ಠ 50 ಒತ್ತೆಯಾಳುಗಳನ್ನು ಬಂಧನ ಮುಕ್ತಗೊಳಿಸುವುದಾಗಿ ಒಪ್ಪಂದವಾಗಿತ್ತು.

ಅ.7ರಂದು ಸೆರೆಯಾಗಿರಿಸಿದ ಒತ್ತೆಯಾಳುಗಳನ್ನು ಹಮಾಸ್‌ ಬಿಡುಗಡೆ ಮಾಡುವ ಸಮಯದ ಬಗ್ಗೆ ಇನ್ನೂ ಅಧಿಕೃತವಾಗಿ ಘೋಷಿಸಲ್ಪಟ್ಟಿಲ್ಲ. ಗುರುವಾರ ಮಧ್ಯವರ್ತಿಗಳು ಬಿಡುಗಡೆಗೆ ಸಮಯವನ್ನು ಕೋರಿದ್ದಾರೆ ಎಂದು ಈಜಿಪ್ಟ್ ಭದ್ರತಾ ಮೂಲ ತಿಳಿಸಿದೆ.

ನಮ್ಮ ಒತ್ತೆಯಾಳುಗಳ ಬಿಡುಗಡೆಯ ಕುರಿತಾದ ಮಾತುಕತೆಗಳು ಮುಂದುವರಿಯುತ್ತಿವೆ ಎಂದು ಇಸ್ರೇಲ್‌ನ ರಾಷ್ಟ್ರೀಯ ಭದ್ರತಾ ಸಲಹೆಗಾರ ತ್ಜಾಚಿ ಹನೆಗ್ಬಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಬಿಡುಗಡೆಯು ದ್ವಿಪಕ್ಷಗಳ ನಡುವಿನ ಮೂಲ ಒಪ್ಪಂದದ ಮೂಲಕ ನಡೆಯುತ್ತದೆ ಮತ್ತು ಶುಕ್ರವಾರದ ಮೊದಲು ಇದು ನಡೆಯುವುದಿಲ್ಲ ಎಂದು ಹೇಳಿದ್ದಾರೆ.

ಹಮಾಸ್ ಮತ್ತು ಮಧ್ಯವರ್ತಿ ಕತಾರ್ ಒಪ್ಪಂದಕ್ಕೆ ಸಹಿ ಹಾಕದ ಕಾರಣ 24 ಗಂಟೆಗಳ ವಿಳಂಬವಾಗಿದೆ ಎಂದು ಇಸ್ರೇಲ್‌ ಅಧಿಕಾರಿಯೋರ್ವರು ಹೇಳಿರುವ ಬಗ್ಗೆ ಇಸ್ರೇಲ್‌ನ ಮಾದ್ಯಮವೊಂದು ವರದಿ ಮಾಡಿದೆ.

ಮಾದ್ಯಮವನ್ನು ಹೊರತುಪಡಿಸಿ ನಾಳೆ ಒತ್ತೆಯಾಳುಗಳ ಬಿಡುಗಡೆ ನಡೆಯುತ್ತದೆ ಎಂದು ಯಾರೂ ಹೇಳಿಲ್ಲ.  ಶುಕ್ರವಾರದ ಮೊದಲು ಯಾವುದೇ ಬಿಡುಗಡೆಗೆ ತೀರ್ಮಾನಿಸಲಾಗಿಲ್ಲ ಎಂದು ಇಸ್ರೇಲ್‌ ಪ್ರಧಾನ ಮಂತ್ರಿಯ ಕಚೇರಿಯ ಮಾಹಿತಿ ಉಲ್ಲೇಖಿಸಿ ಇಸ್ರೇಲ್‌ ಮಾದ್ಯಮಗಳು ವರದಿ ಮಾಡಿದೆ.

ಅ.7ರಂದು ಇಸ್ರೇಲ್‌ ಮೇಲೆ ಹಮಾಸ್‌ ರಾಕೆಟ್‌ ದಾಳಿ ನಡೆಸಿದ ಬಳಿಕ 1,200 ಮಂದಿ ಇಸ್ರೇಲ್‌ ಪ್ರಜೆಗಳು ಮೃತಪಟ್ಟಿದ್ದರು. 240 ಮಂದಿ ಒತ್ತೆಯಾಳುಗಳು ಇನ್ನೂ ಹಮಾಸ್‌ ಸೆರೆಯಲಿದ್ದಾರೆ. ಈ ಮೊದಲು ಹಮಾಸ್‌  ಐವರು ಒತ್ತೆಯಾಳುಗಳನ್ನು ಬಿಡುಗಡೆ ಮಾಡಿತ್ತು.

ಇಸ್ರೇಲ್‌ ಪ್ಯಾಲೆಸ್ತೀನ್‌ ಮೇಲೆ ದಾಳಿ ಆರಂಭಿಸಿದ ಬಳಿಕ ಪ್ಯಾಲೆಸ್ತೀನ್‌ನಲ್ಲಿ ಸುಮಾರು 14,000ಕ್ಕೂ ಅಧಿಕ  ನಾಗರಿಕರ ಹತ್ಯೆಯಾಗಿದ್ದು, ಅದರಲ್ಲಿ 40% ಮಕ್ಕಳು ಸೇರಿದ್ದಾರೆ ಎಂದು ಹಮಾಸ್‌ ವಕ್ತಾರರು ಮಾಹಿತಿ ನೀಡಿದ್ದಾರೆ.

ಬುಧವಾರ ತಡರಾತ್ರಿ ಪತ್ರಿಕಾಗೋಷ್ಠಿಯಲ್ಲಿ ಒಪ್ಪಂದದ ಅನುಷ್ಠಾನದಲ್ಲಿ ಸಂಭಾವ್ಯ ವಿಳಂಬದ ಬಗ್ಗೆ ನೆತನ್ಯಾಹು ಯಾವುದೇ ಪ್ರಸ್ತಾಪವನ್ನು ಮಾಡಲಿಲ್ಲ. ರೆಡ್ ಕ್ರಾಸ್‌ ಗಾಝಾದಲ್ಲಿ ಉಳಿದಿರುವ  ಒತ್ತೆಯಾಳುಗಳನ್ನು ಭೇಟಿ ಮಾಡಲಿದೆ. ಒತ್ತೆಯಾಳುಗಳು ಜೀವಂತವಾಗಿದ್ದಾರೆಯೇ ಎಂದು ನಾವು ತಿಳಿದುಕೊಳ್ಳಬೇಕು ಎಂದು ಗಿಲಾಡ್ ಕೊರ್ನ್ಗೋಲ್ಡ್ ಹೇಳಿದ್ದಾರೆ. ಅವರ 3 ವರ್ಷದ ಮೊಮ್ಮಗಳು ಸೇರಿದಂತೆ ಅವರ ಕುಟುಂಬದ 7 ಸದಸ್ಯರನ್ನು ಹಮಾಸ್‌ ಒತ್ತೆಯಾಳಾಗಿಟ್ಟುಕೊಂಡಿದೆ.

ಯುದ್ಧ ಒಪ್ಪಂದದ ಬಗ್ಗೆ ಪ್ರತಿಕ್ರಿಯಿಸಿದ ಅಮೆರಿಕ, ಎಲ್ಲರೂ ವಾಪಾಸ್ಸು ಬರಬೇಕೆಂದು ನಾವು ಆಶಿಸುತ್ತೇವೆ. ತುಂಬಾ ಕಠಿಣ ನಿರ್ಧಾರ. ಆದರೆ ಮಕ್ಕಳು ಮತ್ತು ಮಹಿಳೆಯರ ಬಿಡುಗಡೆಯಾಗಬೇಕು. ಅವರು ಅತ್ಯಂತ ದುರ್ಬಲರಾಗಿದ್ದಾರೆ. ಇದಾದರೆ ಹೆಚ್ಚಿನ ಸಂಖ್ಯೆಯಲ್ಲಿ ಮಾನವೀಯ ನೆರವನ್ನು ಗಾಝಾಗೆ ತಲುಪಿಸಲಾಗುವುದು ಎಂದು ಅಮೆರಿಕ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...