Homeಮುಖಪುಟಪೊಲೀಸ್ ಅಧಿಕಾರಿಗೆ ಬೆದರಿಕೆ ಹಾಕಿದ ಆರೋಪ: ಓವೈಸಿ ವಿರುದ್ಧ ಪ್ರಕರಣ ದಾಖಲು

ಪೊಲೀಸ್ ಅಧಿಕಾರಿಗೆ ಬೆದರಿಕೆ ಹಾಕಿದ ಆರೋಪ: ಓವೈಸಿ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಚುನಾವಣಾ ರ್ಯಾಲಿಯಲ್ಲಿ ಪೊಲೀಸ್ ಅಧಿಕಾರಿಗೆ ಬೆದರಿಕೆ ಹಾಕಿದ್ದಾರೆ ಎನ್ನುವ ಆರೋಪದ ಮೇಲೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಶಾಸಕ ಅಕ್ಬರುದ್ದೀನ್ ಓವೈಸಿ ವಿರುದ್ಧ ಹೈದರಾಬಾದ್ ಪೊಲೀಸರು ಬುಧವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಎಐಎಂಐಎಂ ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಕಿರಿಯ ಸಹೋದರ ಅಕ್ಬರುದ್ದೀನ್ ಓವೈಸಿ ಅವರು ನವೆಂಬರ್ 30ರಂದು ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಮಂಗಳವಾರ ರಾತ್ರಿ ಚಂದ್ರಾಯನಗುಟ್ಟಾ ಕ್ಷೇತ್ರದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡುತ್ತಿರುವ ವೇಳೆ ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾಗಿದೆ.

ಸಂತೋಷ್ ನಗರ ಪೊಲೀಸ್ ಠಾಣೆಯ ಠಾಣಾಧಿಕಾರಿ ಮತ್ತು ಇತರ ಅಧಿಕಾರಿಗಳು ಕರ್ತವ್ಯ ನಿಮಿತ್ತ ಸ್ಥಳದಲ್ಲಿದ್ದರು. ಈ ವೇಳೆ ಅಧಿಕಾರಿಗಳು ಮಾದರಿ ನೀತಿ ಸಂಹಿತೆ ಅನುಸಾರ ಚುನಾವಣಾ ಪ್ರಚಾರದ ಗಡುವು ರಾತ್ರಿ 10 ಗಂಟೆ ಎಂದು ಅಕ್ಬರುದ್ದೀನ್ ಓವೈಸಿಗೆ ನೆನಪಿಸಿದರು ಎಂದು ವರದಿಯಾಗಿದೆ.

ಈ ವೇಳೆ ಅಕ್ಬರುದ್ದೀನ್ ಓವೈಸಿ ಅವರು, ಇನ್‌ಸ್ಪೆಕ್ಟರ್ ಸಾಹಬ್ [ಸರ್] ನನ್ನ ಬಳಿ ವಾಚ್ ಇದೆ. ನಾನು ನನ್ನ ಗಡಿಯಾರವನ್ನು ನಿಮಗೆ ನೀಡಬೇಕೇ? ನೀನು ಹೊರಡು, ದಯವಿಟ್ಟು ಹೊರಡು.. ಚಾಕುಗಳು ಮತ್ತು ಗುಂಡುಗಳನ್ನು ಎದುರಿಸಲು ನಾವು ದುರ್ಬಲರಾಗಿದ್ದೇವೆ ಎಂದು ಅಧಿಕಾರಿಗಳು ಭಾವಿಸಿದ್ದಾರೆಯೇ?  ಎಂದು ಓವೈಸಿ ಕೇಳಿದರು.

”ನನಗೆ ಇನ್ನೂ ಸಾಕಷ್ಟು ಧೈರ್ಯವಿದೆ. ಇನ್ನೂ ಐದು ನಿಮಿಷ ನಾನು ಮಾತನಾಡುತ್ತೇನೆ. ನನ್ನನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ನಾನು ಸಿಗ್ನಲ್ ಕೊಟ್ಟರೆ ನೀನು ಓಡಿಹೋಗಬೇಕು…ಅವನನ್ನು ಓಡಿಸೋಣವೇ? ಅವರು ನಮ್ಮನ್ನು ದುರ್ಬಲಗೊಳಿಸಲು ಬರುತ್ತಿದ್ದಾರೆ” ಎಂದು ಅಧಿಕಾರಿಗಳಿಗೆ ಓವೈಸಿ ಹೇಳಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಅಕ್ಬರುದ್ದೀನ್ ಓವೈಸಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ (ವಿವಿಧ ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 353 (ಸಾರ್ವಜನಿಕ ಸೇವಕ ತನ್ನ ಕರ್ತವ್ಯವನ್ನು ನಿರ್ವಹಿಸದಂತೆ ತಡೆಯಲು ಆಕ್ರಮಣ ಅಥವಾ ಕ್ರಿಮಿನಲ್ ಶಕ್ತಿ) ಮತ್ತು 506 (ಅಪರಾಧ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಭದ್ರತೆಯ ಭಾಗವಾಗಿ ಠಾಣಾಧಿಕಾರಿ ರ್ಯಾಲಿಯಲ್ಲಿದ್ದರು ಆದರೆ ಓವೈಸಿ ಅವರು ಮಾತನಾಡುವುದನ್ನು ತಡೆಯಲು ಬಂದಿದ್ದಾರೆ ಎಂದು ಭಾವಿಸಿ, ಬೆದರಿಕೆ ಹಾಕಿದ್ದಾರೆ ಎಂದು ಸಂತೋಷ್ ನಗರ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಓವೈಸಿ, ”ಪೊಲೀಸರು ಸುಳ್ಳು ಹೇಳುತ್ತಿದ್ದಾರೆ. ನನ್ನ ಬಳಿ ವಿಡಿಯೋಗಳಿವೆ, ದೃಶ್ಯಾವಳಿಗಳಿವೆ. ಅವರು [ಠಾಣೆಯ ಗೃಹ ಅಧಿಕಾರಿ] ವೇದಿಕೆಯ ಮೆಟ್ಟಿಲುಗಳನ್ನು ಹತ್ತಿ ಬಂದರು” ಎಂದು ಹೇಳಿದ್ದಾರೆ.

”ಅನುಮತಿಗಳನ್ನು ಪಡೆದ ನಂತರವೇ ತಮ್ಮ ರ್ಯಾಲಿಯನ್ನು ಆಯೋಜಿಸಲಾಗಿದೆ ಮತ್ತು ಚುನಾವಣಾ ಆಯೋಗವು ನಿಗದಿಪಡಿಸಿದ ಸಮಯದ ಮಿತಿಯೊಳಗೆ ನಾವು ಕಾರ್ಯಕ್ರಮ ನಡೆಸಿದ್ದೇವೆ” ಎಂದು ಓವೈಸಿ ಹೇಳಿದರು.

”ನಮಗೆ ಎಷ್ಟು ಸಮಯವಿದೆ ಎಂಬ ನಿಯಮಗಳು ಮತ್ತು ನಿಬಂಧನೆಗಳು ನಮಗೆ ತಿಳಿದಿಲ್ಲವೇ?.. ಸಮಯವು ರಾತ್ರಿ 10 ಗಂಟೆಯವರೆಗೆ ಇತ್ತು. ರಾತ್ರಿ 10 ಗಂಟೆಯ ನಂತರ ಭಾಷಣ ಮುಂದುವರಿದರೆ, ಕಾನೂನಿನ ಪ್ರಕಾರ ನನ್ನ ವಿರುದ್ಧ ಕೇಸು ದಾಖಲಿಸಲು ಅವರಿಗೆ ಹಕ್ಕಿದೆ” ಎಂದು ಓವೈಸಿ ಕಿಡಿಕಾರಿದರು.

ರ್ಯಾಲಿಗೆ ಅನುಮತಿ ನೀಡಿದವರು ಚುನಾವಣಾಧಿಕಾರಿ. ಆದರೆ ನೀವು [ಪೊಲೀಸರು] ಗಡುವಿನ ಐದು ನಿಮಿಷಗಳ ಮೊದಲು ಮುಗಿಸಬೇಕೆಂದು ಒತ್ತಾಯಿಸಿದ್ದೀರಿ. ಹಾಗಾದರೆ ನಾವು ಏನು ಮಾಡಬೇಕು? ಒಬ್ಬ ಮನುಷ್ಯ ಭಾಷಣ ಮಾಡುತ್ತಿದ್ದಾಗ, ನೀವು ‘ನಿಲ್ಲಿಸು’, ‘ಸಮಯ ಮುಗಿದಿದೆ’ ಎಂದು ಹೇಳುತ್ತೀರಿ. ಇದು ಏನು? ನೀವು ಅವರ ವಿರುದ್ಧ ಕ್ರಮ ಕೈಗೊಳ್ಳುವುದಿಲ್ಲವೇ?” ಎಂದು ಓವೈಸಿ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಮೋದಿ ‘ಕೆಟ್ಟ ಶಕುನ’ ಎಂದ ರಾಹುಲ್: ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಶ್ಮೀರ: ಭಯೋತ್ಪಾದನಾ ಪ್ರಕರಣದಲ್ಲಿ ಆಸಿಯಾ ಅಂದ್ರಾಬಿ ಮತ್ತು ಅವರ ಇಬ್ಬರು ಸಹಚರರು ದೋಷಿಗಳು ಎಂದು ತೀರ್ಪು ನೀಡಿದ ದೆಹಲಿ ನ್ಯಾಯಾಲಯ 

ದೆಹಲಿಯ ಎನ್ಐಎ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಬುಧವಾರ ನಿಷೇಧಿತ ಕಾಶ್ಮೀರಿ ಸಂಘಟನೆ ದುಖ್ತರನ್-ಎ-ಮಿಲ್ಲತ್ (ಡಿಇಎಂ) ಮುಖ್ಯಸ್ಥೆ ಆಸಿಯಾ ಅಂದ್ರಾಬಿ ಮತ್ತು ಆಕೆಯ ಇಬ್ಬರು ಸಹಚರರಾದ ಸೋಫಿ ಫೆಹ್ಮಿದಾ...

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ: ಉದ್ಧವ್ ಠಾಕ್ರೆ ಆರೋಪ

ಮಹಾರಾಷ್ಟ್ರದ ನಾಗರಿಕ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಗುರುವಾರ ಆರೋಪಿಸಿದ್ದು, ಇದು ಪ್ರಜಾಪ್ರಭುತ್ವವನ್ನು ಕೊಲೆ ಮಾಡುವ ಪ್ರಯತ್ನ ಎಂದು ಹೇಳಿದ್ದಾರೆ. ನಗರಸಭೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂಬ...

2025ರಲ್ಲಿ ಭಾರತದಲ್ಲಿ 1,318 ದ್ವೇಷ ಭಾಷಣ ಪ್ರಕರಣಗಳು ವರದಿಯಾಗಿದ್ದು, ಅವುಗಳಲ್ಲಿ ಶೇ. 98 ಮುಸ್ಲಿಮರನ್ನು ಗುರಿಯಾಗಿಸಿಕೊಂಡಿವೆ; ವರದಿ

2025ರಲ್ಲಿ ಭಾರತವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು, ವಿಶೇಷವಾಗಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡ ಕನಿಷ್ಠ 1,318 ದ್ವೇಷ ಭಾಷಣ ಘಟನೆಗಳಿಗೆ ಸಾಕ್ಷಿಯಾಗಿದೆ. ದಿನಕ್ಕೆ ಸರಾಸರಿ ನಾಲ್ಕು ದ್ವೇಷ ಭಾಷಣ...

ಪಶ್ಚಿಮ ಬಂಗಾಳ ಎಸ್‌ಐಆರ್ ಪ್ರತಿಭಟನೆ; ಉತ್ತರ ದಿನಾಜ್‌ಪುರದ ಸರ್ಕಾರಿ ಕಚೇರಿ ಧ್ವಂಸ

ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯಲ್ಲಿ ಗುರುವಾರ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಸರ್ಕಾರಿ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಜಾನೆಯಿಂದಲೇ, ಚಾಕುಲಿಯಾದಲ್ಲಿನ ಕಹಾಟಾ...

ಕೇರಳದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್‌ನಲ್ಲಿ ಇಬ್ಬರು ಬಾಲಕಿಯರ ಶವಗಳು ಪತ್ತೆ

ಕೇರಳದ ಕೊಲ್ಲಂನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರ (SAI) ಹಾಸ್ಟೆಲ್‌ನಲ್ಲಿ ತಂಗಿದ್ದ ಇಬ್ಬರು ಹುಡುಗಿಯರು ಗುರುವಾರ ಬೆಳಿಗ್ಗೆ ತಮ್ಮ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಕೋಝಿಕ್ಕೋಡ್ ಜಿಲ್ಲೆಯ ಸಾಂಡ್ರಾ (17) ಮತ್ತು...

ಪಿಎಚ್‌ಡಿ ಪ್ರವೇಶ ನಿರಾಕರಿಸಿದ ಜಾಮಿಯಾ ಯೂನಿವರ್ಸಿಟಿ; ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿ

2025–26 ಶೈಕ್ಷಣಿಕ ಅವಧಿಗೆ ಅಧಿಕೃತ ಪ್ರವೇಶ ಪ್ರಕ್ರಿಯೆಯ ಮೂಲಕ ಆಯ್ಕೆಯಾದ ತನ್ನನ್ನು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ವಿನಾಕಾರಣ ಪ್ರವೇಶ ನಿರಾಕರಿಸಿದೆ ಎಂದು ಆರೋಪಿಸಿ ವಿದ್ಯಾರ್ಥಿಯೊಬ್ಬರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಯುಜಿಸಿ-ನೆಟ್ ವಿನಾಯಿತಿ...

ಮದ್ರಸಾ ನಿರ್ಮಾಣದ ವದಂತಿ : ಖಾಸಗಿ ಶಾಲಾ ಕಟ್ಟಡ ಕೆಡವಿದ ಅಧಿಕಾರಿಗಳು

ಅನಧಿಕೃತವಾಗಿ ಮದ್ರಸಾ ನಿರ್ಮಿಸಲಾಗುತ್ತಿದೆ ಎಂಬ ವದಂತಿ ಹರಡಿದ ಹಿನ್ನೆಲೆ ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡವನ್ನು ಅಧಿಕಾರಿಗಳು ಬುಲ್ಡೋಝರ್ ಬಳಸಿ ಕೆಡವಿದ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...

ಭೋಪಾಲ್‌| ಪುರಸಭೆಯ ಕಸಾಯಿಖಾನೆಯಲ್ಲಿ ಗೋಮಾಂಸ ಪತ್ತೆ; ಕಾಂಗ್ರೆಸ್‌-ಬಿಜೆಪಿ ಪ್ರತಿಭಟನೆ

ಪುರಸಭೆಯ ಕಸಾಯಿಖಾನೆಯಲ್ಲಿ ಗೋಹತ್ಯೆ ನಡೆದಿದೆ ಎಂಬುದನ್ನು ಅಧಿಕಾರಿಗಳು ಮತ್ತೆಹಚ್ಚಿದ ನಂತರ ದೊಡ್ಡ ವಿವಾದ ಭುಗಿಲೆದ್ದಿರುವ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದೆ. ಹಿಂದೂ ಬಲಪಂಥೀಯ ಸಂಘಟನೆಗಳು ಮತ್ತು ವಿರೋಧ ಪಕ್ಷದ ಕಾಂಗ್ರೆಸ್ ಕಾರ್ಯಕರ್ತರಿಂದ...

ಇರಾನ್‌ ದಂಗೆ | ಹತ್ಯೆಗಳು ನಿಂತಿವೆ ಎಂದ ಟ್ರಂಪ್ : ಪ್ರತಿಭಟನಾಕಾರರನ್ನು ಗಲ್ಲಿಗೇರಿಸುವ ವರದಿ ತಳ್ಳಿಹಾಕಿದ ವಿದೇಶಾಂಗ ಸಚಿವ

ಇರಾನ್‌ನಲ್ಲಿ ಆಡಳಿತ ವಿರೋಧಿ ಪ್ರತಿಭಟನಾಕಾರರ 'ಹತ್ಯೆಗಳು ನಿಂತಿವೆ' ಎಂದು ಬುಧವಾರ (ಜ.14) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ಎಂಬಂತೆ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಕೂಡ ಪ್ರತಿಭಟನಾಕಾರರನ್ನು...

ಮುಂಬೈ ಬಿಎಂಸಿ ಚುನಾವಣೆ 2026: ಚುನಾವಣಾ ಆಯೋಗದ ವೆಬ್‌ಸೈಟ್ ಸ್ಥಗಿತ! ಮತದಾನ ಮಾಡಲು ಸಾಧ್ಯವಾಗದೆ ಪರದಾಡಿದ ನಾಗರಿಕರು

ಮುಂಬೈ: ಬಹು ಕುತೂಹಲಕಾರಿ ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಗೆ ಜನವರಿ 15, 2026 ರ ಗುರುವಾರ ಬೆಳಿಗ್ಗೆ 7:30 ಕ್ಕೆ ಮತದಾನ ಪ್ರಾರಂಭವಾಯಿತು, ಮುಂಬೈನಲ್ಲಿ ಚುನಾಯಿತ ನಾಗರಿಕ ಸಂಸ್ಥೆ ಇಲ್ಲದೆ ಸುಮಾರು...