Homeಮುಖಪುಟಪೊಲೀಸ್ ಅಧಿಕಾರಿಗೆ ಬೆದರಿಕೆ ಹಾಕಿದ ಆರೋಪ: ಓವೈಸಿ ವಿರುದ್ಧ ಪ್ರಕರಣ ದಾಖಲು

ಪೊಲೀಸ್ ಅಧಿಕಾರಿಗೆ ಬೆದರಿಕೆ ಹಾಕಿದ ಆರೋಪ: ಓವೈಸಿ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಚುನಾವಣಾ ರ್ಯಾಲಿಯಲ್ಲಿ ಪೊಲೀಸ್ ಅಧಿಕಾರಿಗೆ ಬೆದರಿಕೆ ಹಾಕಿದ್ದಾರೆ ಎನ್ನುವ ಆರೋಪದ ಮೇಲೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಶಾಸಕ ಅಕ್ಬರುದ್ದೀನ್ ಓವೈಸಿ ವಿರುದ್ಧ ಹೈದರಾಬಾದ್ ಪೊಲೀಸರು ಬುಧವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಎಐಎಂಐಎಂ ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಕಿರಿಯ ಸಹೋದರ ಅಕ್ಬರುದ್ದೀನ್ ಓವೈಸಿ ಅವರು ನವೆಂಬರ್ 30ರಂದು ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಮಂಗಳವಾರ ರಾತ್ರಿ ಚಂದ್ರಾಯನಗುಟ್ಟಾ ಕ್ಷೇತ್ರದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡುತ್ತಿರುವ ವೇಳೆ ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾಗಿದೆ.

ಸಂತೋಷ್ ನಗರ ಪೊಲೀಸ್ ಠಾಣೆಯ ಠಾಣಾಧಿಕಾರಿ ಮತ್ತು ಇತರ ಅಧಿಕಾರಿಗಳು ಕರ್ತವ್ಯ ನಿಮಿತ್ತ ಸ್ಥಳದಲ್ಲಿದ್ದರು. ಈ ವೇಳೆ ಅಧಿಕಾರಿಗಳು ಮಾದರಿ ನೀತಿ ಸಂಹಿತೆ ಅನುಸಾರ ಚುನಾವಣಾ ಪ್ರಚಾರದ ಗಡುವು ರಾತ್ರಿ 10 ಗಂಟೆ ಎಂದು ಅಕ್ಬರುದ್ದೀನ್ ಓವೈಸಿಗೆ ನೆನಪಿಸಿದರು ಎಂದು ವರದಿಯಾಗಿದೆ.

ಈ ವೇಳೆ ಅಕ್ಬರುದ್ದೀನ್ ಓವೈಸಿ ಅವರು, ಇನ್‌ಸ್ಪೆಕ್ಟರ್ ಸಾಹಬ್ [ಸರ್] ನನ್ನ ಬಳಿ ವಾಚ್ ಇದೆ. ನಾನು ನನ್ನ ಗಡಿಯಾರವನ್ನು ನಿಮಗೆ ನೀಡಬೇಕೇ? ನೀನು ಹೊರಡು, ದಯವಿಟ್ಟು ಹೊರಡು.. ಚಾಕುಗಳು ಮತ್ತು ಗುಂಡುಗಳನ್ನು ಎದುರಿಸಲು ನಾವು ದುರ್ಬಲರಾಗಿದ್ದೇವೆ ಎಂದು ಅಧಿಕಾರಿಗಳು ಭಾವಿಸಿದ್ದಾರೆಯೇ?  ಎಂದು ಓವೈಸಿ ಕೇಳಿದರು.

”ನನಗೆ ಇನ್ನೂ ಸಾಕಷ್ಟು ಧೈರ್ಯವಿದೆ. ಇನ್ನೂ ಐದು ನಿಮಿಷ ನಾನು ಮಾತನಾಡುತ್ತೇನೆ. ನನ್ನನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ನಾನು ಸಿಗ್ನಲ್ ಕೊಟ್ಟರೆ ನೀನು ಓಡಿಹೋಗಬೇಕು…ಅವನನ್ನು ಓಡಿಸೋಣವೇ? ಅವರು ನಮ್ಮನ್ನು ದುರ್ಬಲಗೊಳಿಸಲು ಬರುತ್ತಿದ್ದಾರೆ” ಎಂದು ಅಧಿಕಾರಿಗಳಿಗೆ ಓವೈಸಿ ಹೇಳಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಅಕ್ಬರುದ್ದೀನ್ ಓವೈಸಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ (ವಿವಿಧ ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 353 (ಸಾರ್ವಜನಿಕ ಸೇವಕ ತನ್ನ ಕರ್ತವ್ಯವನ್ನು ನಿರ್ವಹಿಸದಂತೆ ತಡೆಯಲು ಆಕ್ರಮಣ ಅಥವಾ ಕ್ರಿಮಿನಲ್ ಶಕ್ತಿ) ಮತ್ತು 506 (ಅಪರಾಧ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಭದ್ರತೆಯ ಭಾಗವಾಗಿ ಠಾಣಾಧಿಕಾರಿ ರ್ಯಾಲಿಯಲ್ಲಿದ್ದರು ಆದರೆ ಓವೈಸಿ ಅವರು ಮಾತನಾಡುವುದನ್ನು ತಡೆಯಲು ಬಂದಿದ್ದಾರೆ ಎಂದು ಭಾವಿಸಿ, ಬೆದರಿಕೆ ಹಾಕಿದ್ದಾರೆ ಎಂದು ಸಂತೋಷ್ ನಗರ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಓವೈಸಿ, ”ಪೊಲೀಸರು ಸುಳ್ಳು ಹೇಳುತ್ತಿದ್ದಾರೆ. ನನ್ನ ಬಳಿ ವಿಡಿಯೋಗಳಿವೆ, ದೃಶ್ಯಾವಳಿಗಳಿವೆ. ಅವರು [ಠಾಣೆಯ ಗೃಹ ಅಧಿಕಾರಿ] ವೇದಿಕೆಯ ಮೆಟ್ಟಿಲುಗಳನ್ನು ಹತ್ತಿ ಬಂದರು” ಎಂದು ಹೇಳಿದ್ದಾರೆ.

”ಅನುಮತಿಗಳನ್ನು ಪಡೆದ ನಂತರವೇ ತಮ್ಮ ರ್ಯಾಲಿಯನ್ನು ಆಯೋಜಿಸಲಾಗಿದೆ ಮತ್ತು ಚುನಾವಣಾ ಆಯೋಗವು ನಿಗದಿಪಡಿಸಿದ ಸಮಯದ ಮಿತಿಯೊಳಗೆ ನಾವು ಕಾರ್ಯಕ್ರಮ ನಡೆಸಿದ್ದೇವೆ” ಎಂದು ಓವೈಸಿ ಹೇಳಿದರು.

”ನಮಗೆ ಎಷ್ಟು ಸಮಯವಿದೆ ಎಂಬ ನಿಯಮಗಳು ಮತ್ತು ನಿಬಂಧನೆಗಳು ನಮಗೆ ತಿಳಿದಿಲ್ಲವೇ?.. ಸಮಯವು ರಾತ್ರಿ 10 ಗಂಟೆಯವರೆಗೆ ಇತ್ತು. ರಾತ್ರಿ 10 ಗಂಟೆಯ ನಂತರ ಭಾಷಣ ಮುಂದುವರಿದರೆ, ಕಾನೂನಿನ ಪ್ರಕಾರ ನನ್ನ ವಿರುದ್ಧ ಕೇಸು ದಾಖಲಿಸಲು ಅವರಿಗೆ ಹಕ್ಕಿದೆ” ಎಂದು ಓವೈಸಿ ಕಿಡಿಕಾರಿದರು.

ರ್ಯಾಲಿಗೆ ಅನುಮತಿ ನೀಡಿದವರು ಚುನಾವಣಾಧಿಕಾರಿ. ಆದರೆ ನೀವು [ಪೊಲೀಸರು] ಗಡುವಿನ ಐದು ನಿಮಿಷಗಳ ಮೊದಲು ಮುಗಿಸಬೇಕೆಂದು ಒತ್ತಾಯಿಸಿದ್ದೀರಿ. ಹಾಗಾದರೆ ನಾವು ಏನು ಮಾಡಬೇಕು? ಒಬ್ಬ ಮನುಷ್ಯ ಭಾಷಣ ಮಾಡುತ್ತಿದ್ದಾಗ, ನೀವು ‘ನಿಲ್ಲಿಸು’, ‘ಸಮಯ ಮುಗಿದಿದೆ’ ಎಂದು ಹೇಳುತ್ತೀರಿ. ಇದು ಏನು? ನೀವು ಅವರ ವಿರುದ್ಧ ಕ್ರಮ ಕೈಗೊಳ್ಳುವುದಿಲ್ಲವೇ?” ಎಂದು ಓವೈಸಿ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಮೋದಿ ‘ಕೆಟ್ಟ ಶಕುನ’ ಎಂದ ರಾಹುಲ್: ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...