Homeಕರ್ನಾಟಕವಿರೋಧ ಪಕ್ಷಗಳ ಜತೆಗಿನ ಹೊಂದಾಣಿಕೆಯಿಂದ ವಿಜಯೇಂದ್ರ, ಅಶೋಕ್ ನೇಮಕ: ಲಿಂಬಾವಳಿ ಆರೋಪ

ವಿರೋಧ ಪಕ್ಷಗಳ ಜತೆಗಿನ ಹೊಂದಾಣಿಕೆಯಿಂದ ವಿಜಯೇಂದ್ರ, ಅಶೋಕ್ ನೇಮಕ: ಲಿಂಬಾವಳಿ ಆರೋಪ

- Advertisement -
- Advertisement -

”ವಿರೋಧ ಪಕ್ಷಗಳ ಜತೆಗೆ ಹೊಂದಾಣಿಕೆ ಮಾಡಿಕೊಂಡಿರುವುದರಿಂದ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಮತ್ತು ಪ್ರತಿಪಕ್ಷದ ನಾಯಕರಾಗಿ ಆರ್. ಅಶೋಕ್ ನೇಮಕಗೊಂಡಿದ್ದಾರೆ” ಎಂದು ಬಿಜೆಪಿ ಹಿರಿಯ ಮುಖಂಡ, ಮಾಜಿ ಸಚಿವ ಅರವಿಂದ ಲಿಂಬಾವಳಿ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ”ಆರ್.ಅಶೋಕ ಮತ್ತು ಬಿ.ವೈ.ವಿಜಯೇಂದ್ರ ವಿರೋಧ ಪಕ್ಷಗಳ ಜತೆಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಹೊಂದಾಣಿಕೆಯಿಂದಲೇ ಅವರು ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನವನ್ನೂ ಗೆಲ್ಲಿಸಬಹುದು. ಹಾಗಾಗಿ ಅವರನ್ನು ನೇಮಕ ಮಾಡಲಾಗಿದೆ” ಎಂದು ಹೇಳಿದ್ದಾರೆ.

”ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಆಯ್ಕೆಯಾಗಿರುವ 66 ಶಾಸಕರಲ್ಲಿ ಕೆಲವರು ಸ್ವಂತ ಶಕ್ತಿ ಮೇಲೆಯೇ ಗೆದ್ದಿದ್ದಾರೆ. ಇನ್ನೂ ಕೆಲವರು ಹೊಂದಾಣಿಕೆ ಮೇಲೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇದು ಹೊಂದಾಣಿಕೆ ಮಾಡಿಕೊಳ್ಳುವವರ ಕಾಲ” ಎಂದು ಲೇವಡಿ ಮಾಡಿದರು.

”ಬಿ.ವೈ.ವಿಜಯೇಂದ್ರರನ್ನು ಅಳೆದು, ತೂಗಿ ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿಲ್ಲ” ಎಂದು ಅರವಿಂದ ಲಿಂಬಾವಳಿ ತಮ್ಮ ಅಸಮಾಧಾನ ಹೊರಹಾಕಿದರು.

ರಾಜಕಾರಣ ಯಾವುದೇ ಮನೆತನಕ್ಕೆ ಸೀಮಿತವಲ್ಲ, ನಾಟಕ ಕಂಪನಿ ಅಲ್ಲ: ವಿ.ಸೋಮಣ್ಣ

ಅರವಿಂದ್ ಲಿಂಬಾವಳಿ ಅವರು ಅಸಮಾಧಾನ ಹೊರಹಾಕಿದ ಬಳಿಕ ಬಿಜೆಪಿ ಮುಖಂಡ ವಿ.ಸೋಮಣ್ಣ ಕೂಡ ಅವರ ಆರೋಪಗಳಿಗೆರ ಧ್ವನಿಗೂಡಿಸಿದ್ದಾರೆ.

”ಪಕ್ಷದ ಹೈಕಮಾಂಡ್ ಸೂಚನೆಯಂತೆ ತಲೆ ಮೇಲೆ ಹೊತ್ತು ದುಡಿಮೆ ಮಾಡಿದ ಮೇಲೆ ನನಗೆ ಯಾವ ರೀತಿಯ ಹೊಡೆತ ಬಿದ್ದಿತು ಎಂಬುದನ್ನು ಡಿ.6ರ ನಂತರ ಬಿಡಿ, ಬಿಡಿಯಾಗಿ ವಿವರಿಸುತ್ತೇನೆ” ಎಂದು ವಿ.ಸೋಮಣ್ಣ ಹೇಳಿದ್ದಾರೆ.

ಮೈಸೂರಿನಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ”ನಮ್ಮ ಪಕ್ಷದಲ್ಲಿನ ಬೆಳವಣಿಗೆಗಳು ಒಂದು ರೀತಿ ಸೋಮನಹಳ್ಳಿ ಮುದುಕಿ ಕಥೆಯಂತಾಗಿದೆ” ಎಂದು ವಿಶ್ಲೇಷಿಸಿದರು.

ವಿವಿಧ ಪಕ್ಷಗಳೊಂದಿಗೆ ವಿಜಯೇಂದ್ರ ಹಾಗೂ ಅಶೋಕ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂಬ ಅರವಿಂದ ಲಿಂಬಾವಳಿ ಹೇಳಿಕೆಗೆ ಪ್ರತಿಕ್ರಿಯಿಸಿ, ”ಅವರ ಮಾತಿಗೆ ನನ್ನ ಸಮ್ಮತಿ ಇದೆ. ಮುಂದೆ ಮನಸ್ಸಿನ ಭಾವನೆಗಳನ್ನೆಲ್ಲಾ ಹೇಳಿಕೊಳ್ಳುತ್ತೇನೆ” ಎಂದಿದ್ದಾರೆ.

”ರಾಜಕಾರಣ ದೊಂಬರಾಟ ಅಲ್ಲ. ಯಾವುದೇ ಮನೆತನಕ್ಕೆ ಸೀಮಿತವಲ್ಲ. ನಾಟಕ ಕಂಪನಿ ಅಲ್ಲ. ಒಳ ಒಪ್ಪಂದಕ್ಕೆ ಸೀಮಿತವಲ್ಲ” ಎಂದು ಮಾರ್ಮಿಕವಾಗಿ ಹೇಳಿದರು.

ಬಿ.ಎಸ್. ಯಡಿಯೂರಪ್ಪ ನಿಮ್ಮನ್ನು ಸಂಪರ್ಕಿಸಿದ್ದಾರೆಯೇ ಎಂಬ ಪ್ರಶ್ನೆಗೆ, ”ನನ್ನನ್ನು ಯಾರೂ ಸಂಪರ್ಕಿಸಿಲ್ಲ. ನಾನೂ ಸಂಪರ್ಕಿಸಿಲ್ಲ. ಆ ರೀತಿಯ ಪ್ರಯತ್ನವಾಗಿಲ್ಲ” ಎಂದು ಉತ್ತರಿಸಿದರು.

ಇದನ್ನೂ ಓದಿ: ಜಾತಿ ಗಣತಿ ವರದಿಯ ಮೂಲ ಪ್ರತಿ ನಾಪತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...