Homeಮುಖಪುಟ100 ಕೋಟಿ ರೂ. ವಂಚನೆ ಪ್ರಕರಣ: ನಟ ಪ್ರಕಾಶ್ ರಾಜ್‌ಗೆ ಇಡಿ ಸಮನ್ಸ್

100 ಕೋಟಿ ರೂ. ವಂಚನೆ ಪ್ರಕರಣ: ನಟ ಪ್ರಕಾಶ್ ರಾಜ್‌ಗೆ ಇಡಿ ಸಮನ್ಸ್

- Advertisement -
- Advertisement -

ತಿರುಚಿರಾಪಳ್ಳಿ ಮೂಲದ ಜ್ಯುವೆಲ್ಲರಿ ಗ್ರೂಪ್‌ನ ವಿರುದ್ಧ 100 ಕೋಟಿ ರೂ. ವಂಚನೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟ ಪ್ರಕಾಶ್ ರಾಜ್ ಅವರ ವಿಚಾರಣೆಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ.

ಈ ತನಿಖೆಯು ತಿರುಚಿರಾಪಳ್ಳಿ ಮೂಲದ ಪಾಲುದಾರಿಕೆ ಸಂಸ್ಥೆಯಾದ ಪ್ರಣವ್ ಜ್ಯುವೆಲರ್ಸ್ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದೆ. ಆ ಸಂಸ್ಥೆಯ ಮೇಲೆ ನವೆಂಬರ್ 20 ರಂದು ಇಡಿ ದಾಳಿ ನಡೆಸಿ, ರೂ. 23.70 ಲಕ್ಷ ಹಾಗೂ ಚಿನ್ನಾಭರಣವನ್ನು ವಶ ಪಡಿಸಿಕೊಂಡಿತ್ತು. ಪ್ರಕಾಶ್ ರಾಜ್ ಈ ಕಂಪನಿಯ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ. ಮುಂದಿನ ವಾರ ಚೆನ್ನೈನಲ್ಲಿರುವ ಇಡಿಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಹೂಡಿಕೆದಾರರಿಗೆ 100 ವಂಚಿಸಿರುವ ಪೋಂಜಿ ಹಗರಣಕ್ಕೆ ಸಂಬಂಧಿಸಿದಂತೆ ಚೆನ್ನೈ ಸೇರಿದಂತೆ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಹಲವು ಸ್ಥಳಗಳಲ್ಲಿ ಶಾಖೆಗಳನ್ನು ಹೊಂದಿರುವ ತಿರುಚ್ಚಿ ಮೂಲದ ಆಭರಣ ಸಂಸ್ಥೆಯ ಶಾಖೆಗಳ ಮೇಲೆ ಇಡಿ ದಾಳಿ ನಡೆಸಿತ್ತು.

ಪ್ರಣವ್ ಜ್ಯುವೆಲ್ಲರ್ಸ್ ನಡೆಸುತ್ತಿದ್ದ ಮಳಿಗೆಗಳು ಅಕ್ಟೋಬರ್‌ನಲ್ಲಿ ಮುಚ್ಚಲ್ಪಟ್ಟವು ಮತ್ತು ದೂರುಗಳ ಆಧಾರದ ಮೇಲೆ ತಮಿಳುನಾಡಿನ ತಿರುಚ್ಚಿಯ ಆರ್ಥಿಕ ಅಪರಾಧಗಳ ವಿಭಾಗವು ಮಾಲೀಕ ಮದನ್ ವಿರುದ್ಧ ಪ್ರಕರಣ ದಾಖಲಿಸಿದೆ. ಈ ತಿಂಗಳ ಆರಂಭದಲ್ಲಿ ಮಾಲೀಕರು ಮತ್ತು ಅವರ ಪತ್ನಿ ವಿರುದ್ಧ ಲುಕ್‌ಔಟ್ ನೋಟಿಸ್ ಕೂಡ ಜಾರಿ ಮಾಡಲಾಗಿತ್ತು.

ಚಿನ್ನದ ಹೂಡಿಕೆ ಯೋಜನೆಯ ನೆಪದಲ್ಲಿ ಪ್ರಣವ್ ಜ್ಯುವೆಲ್ಲರ್ಸ್‌ನಿಂದ ₹ 100 ಕೋಟಿ ಸಂಗ್ರಹಿಸಲಾಗಿದೆ ಎಂದು ಇಡಿ ನಿನ್ನೆ ಹೇಳಿಕೆಯಲ್ಲಿ ತಿಳಿಸಿದೆ . ಹೂಡಿಕೆ ಮಾಡಿದ ಮೊತ್ತವನ್ನು ಹೂಡಿಕೆದಾರರಿಗೆ ಹಿಂತಿರುಗಿಸಲಾಗಿಲ್ಲ. ಸಂಸ್ಥೆ (ಪ್ರಣವ್ ಜ್ಯುವೆಲರ್ಸ್) ಮತ್ತು ಇತರ ಸಂಪರ್ಕಿತ ವ್ಯಕ್ತಿಗಳು ಸಾರ್ವಜನಿಕ ಹಣವನ್ನು ಶೆಲ್ ಘಟಕಗಳು/ಪ್ರವೇಶ ಪೂರೈಕೆದಾರರಿಗೆ, ಚಿನ್ನಾಭರಣ/ಚಿನ್ನದ ಆಭರಣಗಳ ಖರೀದಿಯ ನೆಪದಲ್ಲಿ ಸಾರ್ವಜನಿಕರನ್ನು ವಂಚಿಸಿದೆ ಎಂದು ಇಡಿ ಹೇಳಿದೆ.

ಪ್ರಕಾಶ್ ರಾಜ್ ಅವರು ಹಿಂದಿ ಮತ್ತು ದಕ್ಷಿಣ ಭಾರತದ ಚಲನಚಿತ್ರಗಳಲ್ಲಿ ವಿವಿಧ ಪಾತ್ರಗಳ ಮೂಲಕ ಹೆಸರುವಾಸಿಯಾಗಿದ್ದಾರೆ. ಇವರು ಬಿಜೆಪಿಯ ತೀವ್ರ ಟೀಕಾಕಾರಲ್ಲ ಒಬ್ಬರಾಗಿದ್ದಾರೆ. ತಮಿಳುನಾಡು ಪೊಲೀಸ್ ಆರ್ಥಿಕ ಅಪರಾಧ ವಿಭಾಗದ ಎಫ್‌ಐಆರ್‌ನಿಂದ ಇಡಿ ಪ್ರಕರಣ ದಾಖಲಿಸಿದೆ.

ಪ್ರಣವ್ ಜ್ಯುವೆಲರ್ಸ್ ಮತ್ತು ಇತರರು ಚಿನ್ನದ ಹೂಡಿಕೆ ಯೋಜನೆಯ ನೆಪದಲ್ಲಿ ಸಾರ್ವಜನಿಕರಿಂದ 100 ಕೋಟಿ ರೂ. ಗಳನ್ನು ಹೆಚ್ಚಿನ ಆದಾಯದ ಭರವಸೆಯೊಂದಿಗೆ ಸಂಗ್ರಹಿಸಿದ್ದಾರೆ ಎಂದು ಫೆಡರಲ್ ಏಜೆನ್ಸಿ ಬುಧವಾರ ಹೇಳಿಕೆಯಲ್ಲಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...

‘ಒಂದು ಲೀಟರ್ ತೈಲವನ್ನೂ ರಫ್ತು ಮಾಡುವುದಿಲ್ಲ’: ಟ್ರಂಪ್ ‘ಹಾರ್ಮುಜ್ ಜಲಸಂಧಿ ಸ್ವಾಧೀನ’ ಹೇಳಿಕೆಯ ನಂತರ ಕಠಿಣ ಎಚ್ಚರಿಕೆ ನೀಡಿದ ಇರಾನ್

ಟೆಹ್ರಾನ್: ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದ ಮಧ್ಯೆ, ತನ್ನ ವಿರುದ್ಧ ದಾಳಿಗಳು ಮುಂದುವರಿದರೆ, ಈ ಪ್ರದೇಶದಿಂದ ಒಂದು ಲೀಟರ್ ತೈಲವನ್ನು ರಫ್ತು ಮಾಡಲು ಸಹ ಇರಾನ್ ಅನುಮತಿಸುವುದಿಲ್ಲ ಎಂದು ಇರಾನ್...

ನ್ಯಾಯಾಂಗದ ಕುರಿತ ಅಧ್ಯಾಯ ವಿವಾದ: ಬೇಷರತ್ ಕ್ಷಮೆಯಾಚಿಸಿದ ಎನ್‌ಸಿಇಆರ್‌ಟಿ

ಇತ್ತೀಚೆಗೆ ಪ್ರಕಟವಾದ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗ ಭ್ರಷ್ಟಾಚಾರದ ಅಧ್ಯಾಯವನ್ನು ಸೇರಿಸಿದ್ದಕ್ಕಾಗಿ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಮಂಗಳವಾರ (ಮಾ.10) ಬೇಷರತ್ತಾಗಿ ಸಾರ್ವಜನಿಕ ಕ್ಷಮೆಯಾಚಿಸಿದೆ ಮತ್ತು...

ಟ್ರಕ್ ಚಾಲಕನಿಗೆ ಥಳಿಸಿ, ಸೆಗಣಿ ತಿನ್ನಿಸಿದ ಪ್ರಕರಣ : ಇಬ್ಬರು ಸ್ವಘೋಷಿತ ಗೋರಕ್ಷಕರ ಬಂಧನ

ಎಮ್ಮೆಗಳನ್ನು ಸಾಗಿಸುತ್ತಿದ್ದ ಟ್ರಕ್‌ ಚಾಲಕನಿಗೆ ಥಳಿಸಿ, ಸೆಗಣಿ ತಿನ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸ್ವಘೋಷಿತ ಗೋರಕ್ಷಕರನ್ನು ಮಹಾರಾಷ್ಟ್ರದ ಪುಣೆ ನಗರ ಪೊಲೀಸರು ಬಂಧಿಸಿದ್ದಾರೆ. ಬಿಪಾಶಾ ಅಲಿಯಾಸ್ ಆಕಾಶ್ ಮಾಣಿಕಂ ಮತ್ತು ಹೇಮಂತ್ ಗಾಯಕ್ವಾಡ್ ಬಂಧಿತರು....

ದೆಹಲಿ ಗಲಭೆ ಪ್ರಕರಣ : ಶಾರ್ಜೀಲ್ ಇಮಾಮ್‌ಗೆ 10 ದಿನಗಳ ಮಧ್ಯಂತರ ಜಾಮೀನು

ದೆಹಲಿ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಸಂಶೋಧನಾ ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ಅವರಿಗೆ ನ್ಯಾಯಾಲಯ ಸೋಮವಾರ (ಮಾ.9) 10 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ತನ್ನ ಸಹೋದರನ...

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...