Homeಮುಖಪುಟಯುದ್ಧ ಒಪ್ಪಂದದಂತೆ ಒತ್ತೆಯಾಳುಗಳ ಬಿಡುಗಡೆ ಮಾಡಿದ ಹಮಾಸ್, ಇಸ್ರೇಲ್

ಯುದ್ಧ ಒಪ್ಪಂದದಂತೆ ಒತ್ತೆಯಾಳುಗಳ ಬಿಡುಗಡೆ ಮಾಡಿದ ಹಮಾಸ್, ಇಸ್ರೇಲ್

- Advertisement -
- Advertisement -

ಇಸ್ರೇಲ್‌ ಮತ್ತು ಹಮಾಸ್‌ ನಡುವಿನ 4 ದಿನಗಳ ಕದನ ಒಪ್ಪಂದದ ಭಾಗವಾಗಿ ಶುಕ್ರವಾರ 24 ಒತ್ತೆಯಾಳುಗಳನ್ನು ಹಮಾಸ್‌ ಬಿಡುಗಡೆ ಮಾಡಿದರೆ ಇಸ್ರೇಲ್‌ 39 ಪ್ಯಾಲೆಸ್ತೀನ್‌ ನಾಗರಿಕರನ್ನು ಬಿಡುಗಡೆ ಮಾಡಿದೆ.

ಹಮಾಸ್‌ ಬಿಡುಗಡೆ ಮಾಡಿದ 24 ಒತ್ತೆಯಾಳುಗಳಲ್ಲಿ 13 ಇಸ್ರೇಲಿಗಳು, 10 ಥಾಯ್ಲೆಂಡ್ ಮತ್ತು ಫಿಲಿಪೈನ್ಸ್‌ನ ಓರ್ವರು ಸೇರಿದ್ದಾರೆ ಎಂದು ಕತಾರ್ ತಿಳಿಸಿದೆ.

ಈ ಒಪ್ಪಂದವು ಯುದ್ಧ ಸಂತ್ರಸ್ತ ಗಾಝಾದ ಜನರಿಗೆ ಅಗತ್ಯವಿರುವ ಸಹಾಯದ ನೆರವಿಗೆ ದಾರಿ ಮಾಡಿಕೊಟ್ಟಿದೆ. ಅ.7ರ ಹಮಾಸ್‌ನ ದಾಳಿಯ ಬಳಿಕ ಸೆರೆಯಾಳಾಗಿದ್ದ ಪ್ರೀತಿಪಾತ್ರರ ಬಗ್ಗೆ ಇಸ್ರೇಲ್ ಮತ್ತು ಇತರ ದೇಶದ ಒತ್ತೆಯಾಳುಗಳ ಕುಟುಂಬಗಳಿಗೆ ಇದು ಕೊಂಚ ಸಮಾಧಾನವನ್ನುಂಟುಮಾಡಿದೆ.

ಶುಕ್ರವಾರ ಬೆಳಿಗ್ಗೆ ಕದನ ವಿರಾಮ ಪ್ರಾರಂಭವಾಗಿದೆ. ಗಾಝಾದ 2.3 ಮಿಲಿಯನ್ ಪ್ಯಾಲೆಸ್ತೀನಿಯನ್ನರಿಗೆ ಕೇಳಿಸುತ್ತಿದ್ದ 7 ವಾರಗಳ ನಿರಂತರ ಇಸ್ರೇಲ್‌ ಬಾಂಬ್ ದಾಳಿಯ ಶಬ್ಧಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.  ಇಸ್ರೇಲ್‌ ಬಾಂಬ್‌ ದಾಳಿಗೆ ಗಾಝಾದಲ್ಲಿ 15,000ಕ್ಕೂ ಅಧಿಕ ಮಂದಿ ಪ್ರಾಣವನ್ನು ಕಳೆದುಕೊಂಡಿದ್ದು, 40,000ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಲಕ್ಷಾಂತರ ಮಂದಿ ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ.

ಬಿಡುಗಡೆಯಾದ ಇಸ್ರೇಲ್‌ ಒತ್ತೆಯಾಳುಗಳಲ್ಲಿ 8 ಮಹಿಳೆಯರು ಸೇರಿದ್ದಾರೆ. ಅವರಲ್ಲಿ 6 ಮಂದಿ 70 ಮತ್ತು 80ರ ವಯಸ್ಸಿನವರು. ಮೂವರು ಮಕ್ಕಳು ಸೇರಿದ್ದಾರೆ. ಪ್ಯಾಲೆಸ್ತೀನ್‌ ಕೈದಿಗಳನ್ನು ಇಸ್ರೇಲ್‌ ಬಿಡುಗಡೆ ಮಾಡಿದ್ದು,  ಅವರಲ್ಲಿ 24 ಮಹಿಳೆಯರಿದ್ದಾರೆ. ಇಸ್ರೇಲ್‌ ಪಡೆಗಳ ಮೇಲಿನ ದಾಳಿಗಾಗಿ ಕೊಲೆ ಯತ್ನದ ಅಪರಾಧದಲ್ಲಿ ಸೆರೆಯಾದವರು ಮತ್ತು 15 ಮಂದಿಗೆ ಕಲ್ಲೆಸೆದ ಅಪರಾಧಕ್ಕೆ ಸಂಬಂಧಿಸಿ ಜೈಲು ಪಾಲಾದವಾರಾಗಿದ್ದಾರೆ.

ಹೆಚ್ಚಿನ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದರೆ ಕದನ ವಿರಾಮವನ್ನು ವಿಸ್ತರಿಸಬಹುದು ಎಂದು ಇಸ್ರೇಲ್ ಹೇಳುತ್ತದೆ. ಆದರೆ ಕದನ ವಿರಾಮ ಮುಗಿದ ನಂತರ ತನ್ನ ಆಕ್ರಮಣವನ್ನು ಪುನರಾರಂಭಿಸುವುದಾಗಿ ಇಸ್ರೇಲ್‌ ಪ್ರತಿಜ್ಞೆ ಮಾಡಿದೆ. ಇದು ಸಂಘರ್ಷವನ್ನು ಕೊನೆಗಾಣಿಸಲು ಒಪ್ಪಂದವು ಅಂತಿಮವಾಗಿ ಸಹಾಯ ಮಾಡುತ್ತದೆ ಎಂಬ ಭರವಸೆಯನ್ನು ಮರೆಮಾಡಿದೆ.

ಶುಕ್ರವಾರ ರಾತ್ರಿ ಈಜಿಪ್ಟ್‌ನ ರಾಫಾ ಕ್ರಾಸಿಂಗ್ ಮೂಲಕ ಗಾಝಾದಿಂದ ಆಂಬ್ಯುಲೆನ್ಸ್‌ಗಳು ಸಾಲು ಸಾಲಾಗಿ ಬಂದಿದೆ. ಆಂಬ್ಯುಲೆನ್ಸ್‌ ಬಿಡುಗಡೆಯಾದ ಒತ್ತೆಯಾಳುಗಳನ್ನು ಹೊತ್ತೊಯ್ಯುತ್ತದೆ ಎಂದು ಈಜಿಪ್ಟ್‌ನ ಸರ್ಕಾರಿ ಅಲ್-ಖಹೆರಾ ಟಿವಿ ಲೈವ್ ತಿಳಿಸಿದೆ. ಇಸ್ರೇಲ್‌ನ ಟಿವಿ ವಾಹಿನಿಯೊಂದು ವಯಸ್ಸಾದ ಮಹಿಳೆಯು ಚಿಕ್ಕ ಬಾಲಕಿಯ ಜೊತೆಗೆ ಆಂಬ್ಯುಲೆನ್ಸ್‌ನಿಂದ ನಿರ್ಗಮಿಸುತ್ತಿರುವುದನ್ನು ತೋರಿಸಿದೆ. ಒತ್ತೆಯಾಳುಗಳು ಇಸ್ರೇಲ್‌ಗೆ ಹಿಂತಿರುಗಿದ್ದಾರೆ ಮತ್ತು ಕುಟುಂಬದ ಜೊತೆ ಸೇರುವ ಮೊದಲು ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದಾರೆ ಎಂದು ಇಸ್ರೇಲ್ ಮಿಲಿಟರಿ ದೃಢಪಡಿಸಿದೆ.

ಇದನ್ನು ಓದಿ: ಡಬ್ಲಿನ್ ನಗರದಲ್ಲಿ ಚೂರಿ ಇರಿತದ ಬಳಿಕ ಭುಗಿಲೆದ್ದ ಹಿಂಸಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಸೀದಿ, ದರ್ಗಾಗಳನ್ನು ಗುರಿಯಾಗಿಸಿಕೊಂಡು ಪದೇ ಪದೇ ಪಿಐಎಲ್‌ : ಎನ್‌ಜಿಒಗೆ ಹೈಕೋರ್ಟ್ ತರಾಟೆ

ರಾಷ್ಟ್ರ ರಾಜಧಾನಿಯಲ್ಲಿ ಮಸೀದಿ ಮತ್ತು ದರ್ಗಾಗಳು ಅತಿಕ್ರಮಣ ಮಾಡುತ್ತಿವೆ ಎಂದು ಆರೋಪಿಸಿ ಪದೇ ಪದೇ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದಕ್ಕಾಗಿ ಸೇವ್ ಇಂಡಿಯಾ ಫೌಂಡೇಶನ್ ಎಂಬ ಸಂಸ್ಥೆಯನ್ನು ದೆಹಲಿ ಹೈಕೋರ್ಟ್ ಬುಧವಾರ...

ಕಾಂಗ್ರೆಸ್‌ಗೆ ಮರಳಲು ಮುಂದಾದ ಬಿಜೆಪಿ ನಾಯಕನ ಮನೆ ಮೇಲೆ ಎಸಿಬಿ ದಾಳಿ

ಕಾಂಗ್ರೆಸ್‌ಗೆ ಮರಳುವ ಇಂಗಿತ ವ್ಯಕ್ತಪಡಿಸಿದ ಎರಡು ದಿನಗಳ ಬಳಿಕ ಬಿಜೆಪಿ ನಾಯಕ ಮತ್ತು ಮಾಜಿ ಸಚಿವ ಮಹೇಂದ್ರಜೀತ್ ಸಿಂಗ್ ಮಾಳವೀಯ ಅವರ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ನಡೆಸಿದೆ...

ಬೀದರ್: ಗಾಳಿಪಟದ ದಾರ ಕುತ್ತಿಗೆ ಸೀಳಿ ಸ್ಥಳದಲ್ಲಿ ಪ್ರಾಣ ಬಿಟ್ಟ 48 ವರ್ಷದ ಬೈಕ್ ಸವಾರ

ಬೀದರ್ ಜಿಲ್ಲೆಯ ತಲಮಡಗಿ ಸೇತುವೆ ಬಳಿಯ ರಸ್ತೆಯಲ್ಲಿ ಮಗಳನ್ನು ಕರೆತರಲು ಬೈಕ್ ನಲ್ಲಿ ತೆರಳುತ್ತಿದ್ದ 48 ವರ್ಷದ ವ್ಯಕ್ತಿ ಕೊರಳಿಗೆ ಗಾಳಿ ಪಟದ ದಾರ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ನಡೆದಿದೆ.  ಮೃತ...

ಐ-ಪ್ಯಾಕ್ ಮೇಲಿನ ದಾಳಿ: ಟಿಎಂಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಕಲ್ಕತ್ತಾ ಹೈಕೋರ್ಟ್

ಐ-ಪಿಎಸಿಗೆ ಸಂಬಂಧಿಸಿದ ಇತ್ತೀಚಿನ ದಾಳಿಗಳ ಸಂದರ್ಭದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಪಕ್ಷದ ಫೈಲ್‌ಗಳು ಮತ್ತು ಚುನಾವಣಾ ಸಂಬಂಧಿತ ಡೇಟಾವನ್ನು ವಶಪಡಿಸಿಕೊಂಡಿದೆ ಎಂದು ಆರೋಪಿಸಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಲ್ಲಿಸಿದ್ದ ಅರ್ಜಿಯನ್ನು ಕಲ್ಕತ್ತಾ ಹೈಕೋರ್ಟ್...

ತೆಲಂಗಾಣ| ಪಂಚಾಯತ್ ಚುನಾವಣೆಯ ನಂತರ 500 ಬೀದಿ ನಾಯಿಗಳ ಸಾಮೂಹಿಕ ಕೊಲೆ; ‘ನಾಯಿ ಮುಕ್ತ ಗ್ರಾಮ’ದ ಭರವಸೆ ನೀಡಿದ್ದ ಅಭ್ಯರ್ಥಿಗಳು

ತೆಲಂಗಾಣದ ಹನಮಕೊಂಡ ಮತ್ತು ಕಾಮರೆಡ್ಡಿ ಜಿಲ್ಲೆಗಳಿಂದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಜನವರಿಯ ಮೊದಲ ಎರಡು ವಾರಗಳಲ್ಲಿ ಸುಮಾರು 500 ನಾಯಿಗಳನ್ನು ವಿಷ ಹಾಕಿ ಕೊಂದಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ....

ಕಾನ್ಪುರ ದೇಹತ್‌ನಲ್ಲಿ ನೆರೆಯವರ ಹಲ್ಲೆಯಿಂದ ದಲಿತ ರೈತ ಸಾವು; ಆರು ಮಂದಿ ಬಂಧನ

ಉತ್ತರ ಪ್ರದೇಶದ ಕಾನ್ಪುರ ದೇಹತ್ ಜಿಲ್ಲೆಯಲ್ಲಿ 50 ವರ್ಷದ ದಲಿತ ರೈತನೊಬ್ಬ ತನ್ನ ನೆರೆಹೊರೆಯವರು ಮತ್ತು ಅವರ ಸಂಬಂಧಿಕರಿಂದ ಥಳಿತಕ್ಕೊಳಗಾಗಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮತ್ತು ಆತನ...

ಸರ್ಕಾರದ ಅಧಿಕೃತ ದಾಖಲೆಗಳಲ್ಲಿ ‘ಹರಿಜನ-ಗಿರಿಜನ’ ಪದಗಳನ್ನು ನಿಷೇಧಿಸಿದ ಹರಿಯಾಣ ಸರ್ಕಾರ

ಹರಿಯಾಣ ಸರ್ಕಾರವು ತನ್ನ ಎಲ್ಲಾ ಅಧಿಕೃತ ಸಂವಹನಗಳಲ್ಲಿ 'ಹರಿಜನ' ಮತ್ತು 'ಗಿರಿಜನ' ಪದಗಳ ಬಳಕೆಯನ್ನು ನಿಷೇಧಿಸಿದೆ. ಇಲಾಖೆಗಳು 'ಪರಿಶಿಷ್ಟ ಜಾತಿ (ಎಸ್‌ಸಿ)' ಮತ್ತು 'ಪರಿಶಿಷ್ಟ ಪಂಗಡ (ಎಸ್‌ಟಿ)' ಅಥವಾ ಅವುಗಳ ಸಮಾನ ಪದಗಳನ್ನು...

ಐಎಎಸ್ ಅಧಿಕಾರಿ ಮಾನನಷ್ಟ ಮೊಕದ್ದಮೆ ಪ್ರಕರಣ: ಎನ್‌ಟಿವಿ ಸಂಪಾದಕ, ಇಬ್ಬರು ಪತ್ರಕರ್ತರ ಬಂಧನ

ತೆಲಂಗಾಣ ಸರ್ಕಾರದ ರಸ್ತೆ ಮತ್ತು ಕಟ್ಟಡಗಳ ಸಚಿವ ಕೋಮತಿರೆಡ್ಡಿ ವೆಂಕಟ್ ರೆಡ್ಡಿ ಹಾಗೂ ಮಹಿಳಾ ಐಎಎಸ್ ಅಧಿಕಾರಿ ಅವರ ಕುರಿತು ವಿವಾದಾತ್ಮಕ ಸುದ್ದಿ ವರದಿಗೆ ಸಂಬಂಧಿಸಿದಂತೆ, ಹೈದರಾಬಾದ್ ಕೇಂದ್ರ ಅಪರಾಧ ಠಾಣೆ...

ಇರಾನ್: ಪ್ರತಿಭಟನಾಕಾರರ ಮೇಲೆ ನಡೆದ ದಮನ ಕಾರ್ಯಾಚರಣೆಯಲ್ಲಿ ಸಾವಿನ ಸಂಖ್ಯೆ 2571ಕ್ಕೆ ಏರಿಕೆ 

ಇರಾನ್‌ನಲ್ಲಿ ಪ್ರತಿಭಟನೆಗಳ ಮೇಲೆ ನಡೆದ ದಮನ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಕನಿಷ್ಠ 2,571 ಕ್ಕೆ ಏರಿದೆ ಎಂದು ಮಾನವ ಹಕ್ಕುಗಳ ಕಾರ್ಯಕರ್ತರು ಬುಧವಾರ ತಿಳಿಸಿದ್ದಾರೆ. ಈ ಅಂಕಿ ಅಂಶವು ಅಮೆರಿಕ ಮೂಲದ ಮಾನವ ಹಕ್ಕುಗಳ...

ಕಾಂಗ್ರೆಸ್‌ ಮುಖಂಡನ ಗೂಂಡಾವರ್ತನೆ : ಫ್ಲೆಕ್ಸ್‌ ತೆರವುಗೊಳಿಸಿದ್ದಕ್ಕೆ ಪೌರಾಯುಕ್ತೆಗೆ ಧಮ್ಕಿ, ಅವಾಚ್ಯ ಶಬ್ದಗಳಿಂದ ನಿಂದನೆ

ಸಚಿವ ಝಮೀರ್ ಅಹ್ಮದ್ ಅವರ ಮಗ ಝೈದ್ ಖಾನ್ ನಟನೆಯ 'ಕಲ್ಟ್' ಸಿನಿಮಾದ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ ವಿಚಾರವಾಗಿ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಜಿ. ಅಮೃತಗೌಡ ಅವರೊಂದಿಗೆ ಗೂಂಡಾವರ್ತನೆ...