Homeಮುಖಪುಟಯುದ್ಧ ಭೀಕರತೆ: ಗಾಝಾದಲ್ಲಿ ಪತ್ರಕರ್ತರ ಹತ್ಯಾಕಾಂಡ

ಯುದ್ಧ ಭೀಕರತೆ: ಗಾಝಾದಲ್ಲಿ ಪತ್ರಕರ್ತರ ಹತ್ಯಾಕಾಂಡ

- Advertisement -
- Advertisement -

ಇಸ್ರೇಲ್‌ ಯುದ್ಧ ಘೋಷಿಸಿ ಗಾಝಾದ ಮೇಲೆ ವೈಮಾನಿಕ ದಾಳಿ ಆರಂಭಿಸಿದ ಬಳಿಕ ಗಾಝಾದಲ್ಲಿ 53 ಪತ್ರಕರ್ತರು ಕೊಲ್ಲಲ್ಪಟ್ಟಿದ್ದು, ಪ್ಯಾಲೆಸ್ತೀನ್‌ನ ಅಮಾಯಕ ನಾಗರಿಕರ ಜೊತೆಗೆ ಪತ್ರಕರ್ತರ ಕೂಡ ಹತ್ಯಾಕಾಂಡ ನಡೆದಿದೆ.

ಅ.7ರ ಹಮಾಸ್ ದಾಳಿಯ ನಂತರ ಇಸ್ರೇಲ್‌ ಸೈನ್ಯವು ಪಟ್ಟುಬಿಡದೆ ಗಾಝಾ ಮೇಲೆ ಆಕ್ರಮಣವನ್ನು ಮುಂದುವರಿಸಿತ್ತು. ವಿದ್ಯುತ್‌, ನೀರಾವರಿ ಸಂಪರ್ಕಗಳನ್ನು ಕಡಿತಗೊಳಿಸಿತ್ತು. ಇಸ್ರೇಲ್‌ ನಡೆಸಿದ ದಾಳಿಗೆ 15,000ಕ್ಕೂ ಅಧಿಕ ಮಂದಿ ನಾಗರಿಕರು ಗಾಝಾದಲ್ಲಿ ಮೃತಪಟ್ಟಿದ್ದರು. 40,000ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಲಕ್ಷಾಂತರ ಗಾಝಾ ನಿವಾಸಿಗಳು ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಮನೆಗಳು, ವಾಣಿಜ್ಯ ಕಟ್ಟಡಗಳು, ಆಸ್ಪತ್ರೆಗಳು ಇಸ್ರೇಲ್ ಬಾಂಬ್‌ ದಾಳಿಗೆ ಧ್ವಂಸಗೊಂಡಿದೆ.

ಇಸ್ರೇಲ್‌ ಗಾಝಾ ಮೇಲಿನ ದಾಳಿಯನ್ನು ಸಮರ್ಥಿಸಿಕೊಳ್ಳುತ್ತಿದ್ದು, ಹಮಾಸ್‌ ದಾಳಿಯಿಂದ ತನ್ನನ್ನು ತಾನು ರಕ್ಷಿಸಿಕೊಳ್ಳುವ ಪ್ರಯತ್ನ ಎಂದು ಹೇಳಿಕೊಂಡಿದೆ. ಆದರೆ ಯುದ್ಧದಲ್ಲಿ 40% ಮಕ್ಕಳು, ಮಹಿಳೆಯರು, ಪತ್ರಕರ್ತರ ಜೀವಗಳನ್ನು ಬಲಿತೆಗೆದುಕೊಂಡಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ತನ್ನ ಸಮರ್ಥನೆಯ ಬಗ್ಗೆ ಟೀಕೆಗೆ ಗುರಿಯಾಗಿದೆ.

ಗಾಝಾದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಖಾತರಿಪಡಿಸಲು ಸಾಧ್ಯವಿಲ್ಲ ಎಂದು ಈ ಮೊದಲು ಇಸ್ರೇಲ್ ರಾಯಿಟರ್ಸ್ ಮತ್ತು ಎಎಫ್‌ಪಿಗೆ ಸ್ಪಷ್ಟವಾಗಿ ಹೇಳಿತ್ತು. ಇಸ್ರೇಲ್‌ ರಕ್ಷಣಾ ಪಡೆಯ ಕೈಯಲ್ಲಿ 20 ಪತ್ರಕರ್ತರು ಕೊಲ್ಲಲ್ಪಟ್ಟಿದ್ದಾರೆ. ಇವುಗಳಲ್ಲಿ ಹೆಚ್ಚಿನ ಕೊಲೆಗಳು ಗಾಝಾದಲ್ಲಿ ಸಂಭವಿಸಿವೆ.

ಪತ್ರಕರ್ತರನ್ನು ರಕ್ಷಿಸುವ ಸಮಿತಿ (CPJ) ನ.22ಕ್ಕೆ ವರದಿಯನ್ನು ಬಿಡುಗಡೆ ಮಾಡಿದೆ. ವರದಿಯ ಪ್ರಕಾರ ಇಸ್ರೇಲ್‌ ಮಿಲಿಟರಿ ಪಡೆಯ ಕೈಯಲ್ಲಿ 53 ಪತ್ರಕರ್ತರು ಸಾವನ್ನಪ್ಪಿದ್ದಾರೆ. 37 ಪ್ಯಾಲೆಸ್ತೀನ್‌ ಪತ್ರಕರ್ತರು, ನಾಲ್ವರು ಇಸ್ರೇಲ್‌ ಮತ್ತು ಓರ್ವ ಲೆಬನಾನ್‌ನ ಪತ್ರಕರ್ತ ಮೃತಪಟ್ಟಿದ್ದಾರೆ. 11 ಪತ್ರಕರ್ತರು ಗಾಯಗೊಂಡಿದ್ದಾರೆ. ಮೂವರು ಪತ್ರಕರ್ತರು ನಾಪತ್ತೆಯಾಗಿದ್ದಾರೆ. 18 ಪತ್ರಕರ್ತರನ್ನು ಬಂಧಿಸಲಾಗಿದೆ ಎಂದು ಸಿಪಿಜೆ ವರದಿ ತಿಳಿಸಿದೆ.

ಪತ್ರಕರ್ತರ ಕುಟುಂಬದ ಸದಸ್ಯರ ಮೇಲೆ ದಾಳಿಗಳು ನಡೆದಿದೆ. ಬೆದರಿಕೆಗಳು ಹಾಕಲಾಗಿದೆ. ಪತ್ರಕರ್ತರ ಕುಟುಂಬಸ್ಥರನ್ನು ಹತ್ಯೆ ಮಾಡಲಾಗಿದೆ. ದಕ್ಷಿಣ ಗಾಝಾ ನಗರದಲ್ಲಿನ ಖಾನ್ ಯೂನಿಸ್‌ ನಗರದ ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಫೆಲಸ್ತೀನ್‌ ಚಾನಲ್‌ನ ವರದಿಗಾರ ಮೊಹಮ್ಮದ್ ಅಬು ಹತಾಬ್‌ ಮತ್ತು ಅವರ ಕುಟುಂಬದ 11 ಮಂದಿ ಬಲಿಯಾಗಿದ್ದರು.

ಗಾಝಾ ಮೇಲೆ ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಗೆ ಅಲ್ ಜಝೀರಾ ಅರೇಬಿಕ್ ಬ್ಯೂರೋ ಮುಖ್ಯಸ್ಥ ವೇಲ್ ದಹದೌಹ್ ಅವರ ಪತ್ನಿ, ಮಗ, ಮಗಳು ಮತ್ತು ಮೊಮ್ಮಗ ಸಾವನ್ನಪ್ಪಿದ್ದರು.

ಪತ್ರಿಕಾ ಸ್ವಾತಂತ್ರ್ಯದ ವಿಚಾರದಲ್ಲಿ ಇಸ್ರೇಲ್‌ನ ನಡೆಯು ಏಕಪಕ್ಷೀಯವಾಗಿದೆ. ಎಲ್ಲಾ ಪತ್ರಕರ್ತರನ್ನು ರಕ್ಷಿಸುವ ಅಗತ್ಯವನ್ನು ಇಸ್ರೇಲ್‌ ನಿರ್ಲಕ್ಷಿಸಿದೆ. ಇಸ್ರೇಲ್‌ನ ಸಂಪೂರ್ಣ ನಿಷ್ಕ್ರಿಯತೆಯು ಪತ್ರಿಕಾ ಸ್ವಾತಂತ್ರ್ಯವನ್ನು ನಿಸ್ಸಂಶಯವಾಗಿ ದುರ್ಬಲಗೊಳಿಸುತ್ತದೆ. ಇಸ್ರೇಲ್‌ ನಡೆಯು ಕನಿಷ್ಟ ಪಕ್ಷ ಇಸ್ರೇಲ್‌ ಪಡೆಯಿಂದ ಹತ್ಯೆಯಾದ ಪತ್ರಕರ್ತರು ನ್ಯಾಯಕ್ಕೆ ಯೋಗ್ಯವಾಗಿಲ್ಲ ಎಂಬುವುದನ್ನು ಸೂಚಿಸುತ್ತಿದೆ.

ಇದನ್ನು ಓದಿ: ಯುದ್ಧ ಒಪ್ಪಂದದಂತೆ ಒತ್ತೆಯಾಳುಗಳ ಬಿಡುಗಡೆ ಮಾಡಿದ ಹಮಾಸ್, ಇಸ್ರೇಲ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಳ್ಳಾರಿ| ಬಂಡಿಹಟ್ಟಿ-ದಾನಪ್ಪ ಬೀದಿ ಬಡರೈತರ ಮೇಲೆ ದೌರ್ಜನ್ಯ; ಪ್ರತಾಪರೆಡ್ಡಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಬಳ್ಳಾರಿ ಜಿಲ್ಲೆಯ ಬಂಡಿಹಟ್ಟಿ-ದಾನಪ್ಪ ಬೀದಿಯ ಬಡರೈತರ ಮೇಲೆ ದೌರ್ಜನ್ಯ ಎಸಗುತ್ತಿರುವ ಎನ್‌.ಪ್ರತಾಪ ರೆಡ್ಡಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು 'ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ' ಮುಖಂಡರು ಆಗ್ರಹಿಸಿದರು....

ರೋಹಿತ್ ವೇಮುಲಾ 10ನೇ ಶಹಾದತ್ ದಿನ: ಜ.17ರಂದು ಹೈದರಾಬಾದ್ ವಿವಿಯಲ್ಲಿ ರೋಹಿತ್ ಕಾಯ್ದೆಯ ‘ಜನತಾ ಕರಡು’ ಅನಾವರಣ

ಹೈದರಾಬಾದ್ ಕೇಂದ್ರ ವಿಶ್ವವಿದ್ಯಾಲಯದಲ್ಲಿ ದಲಿತ ಸಂಶೋಧನಾ ವಿದ್ವಾಂಸ ಮತ್ತು ಅಂಬೇಡ್ಕರ್ ವಿದ್ಯಾರ್ಥಿ ಸಂಘದ (ASA) ನಾಯಕ ರೋಹಿತ್ ವೇಮುಲ ಅವರ ಮರಣದ ಹತ್ತು ವರ್ಷಗಳ ನಂತರ, ವಿದ್ಯಾರ್ಥಿ ಗುಂಪುಗಳು ಮತ್ತು ಸಾಮಾಜಿಕ ನ್ಯಾಯ...

ಮಹಾರಾಷ್ಟ್ರವು ಪ್ರಧಾನಿ ಮೋದಿಯನ್ನು ಹೆಚ್ಚು ಅವಲಂಬಿಸಿದೆ: ಸಿಎಂ ಫಡ್ನವೀಸ್

ನಗರ ಪಾಲಿಕೆ ಚುನಾವಣೆಯಲ್ಲಿ ಮಹಾಯುತಿ ಭರ್ಜರಿ ಜಯ ಸಾಧಿಸಿದ ನಂತರ ಮಹಾರಾಷ್ಟ್ರದ ಜನರಿಗೆ ಧನ್ಯವಾದ ಅರ್ಪಿಸಿದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ವಿಜಯವನ್ನು ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತರಿಗೆ ಅರ್ಪಿಸಿದರು. ರಾಜ್ಯವು ಪ್ರಧಾನಿ...

ಮೆಹುಲ್ ಚೋಕ್ಸಿ ಪುತ್ರ ಕೂಡ ಹಣ ವರ್ಗಾವಣೆಯಲ್ಲಿ ಭಾಗಿಯಾಗಿದ್ದಾರೆ: ಜಾರಿ ನಿರ್ದೇಶನಾಲಯ

ಪರಾರಿಯಾಗಿರುವ ಉದ್ಯಮಿ ಮೆಹುಲ್ ಚೋಕ್ಸಿ ವಿರುದ್ಧದ ಹಣ ವರ್ಗಾವಣೆ ಪ್ರಕರಣದಲ್ಲಿ, ಅವರ ಮಗ ರೋಹನ್ ಚೋಕ್ಸಿ ಕೂಡ ಈ ಅಪರಾಧದಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಮೊದಲ ಬಾರಿಗೆ ಹೇಳಿಕೊಂಡಿದೆ....

‘ವೋಟ್ ಚೋರಿ ಒಂದು ರಾಷ್ಟ್ರವಿರೋಧಿ ಕೃತ್ಯ..’; ಬಿಎಂಸಿ ಫಲಿತಾಂಶದ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಹಾರಾಷ್ಟ್ರ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆಯಲ್ಲಿ ಎಣಿಕೆ ವೇಗ ಪಡೆಯುತ್ತಿದ್ದಂತೆ, ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗವನ್ನು ಗುರಿಯಾಗಿಸಿಕೊಂಡು ತಮ್ಮ ಮೊದಲ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ....

ಪುನರಾಭಿವೃದ್ಧಿ ಹೆಸರಿನಲ್ಲಿ ಮಣಿಕರ್ಣಿಕಾ ಘಾಟ್ ಬಳಿ ದೇಗುಲಗಳ ಧ್ವಂಸ: ಮೋದಿ ವಿರುದ್ಧ ಖರ್ಗೆ ಆಕ್ರೋಶ!

ನವದೆಹಲಿ: ವಾರಣಾಸಿಯ ಮಣಿಕರ್ಣಿಕಾ ಘಾಟ್‌ನಲ್ಲಿ ಪುನರಾಭಿವೃದ್ಧಿ ಕಾರ್ಯದ ಭಾಗವಾಗಿ ಬುಲ್ಡೋಜರ್‌ಗಳನ್ನು ಏಕೆ ಓಡಿಸಲಾಗುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಪ್ರಧಾನಿಯವರನ್ನು ಪ್ರಶ್ನಿಸಿದ್ದಾರೆ. ಮತ್ತು ಐತಿಹಾಸಿಕ ಪರಂಪರೆಯ ಅನೇಕ ಸ್ಥಳಗಳನ್ನು ಈ...

ಒಡಿಶಾ| ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ನಕಲಿ ಗೋರಕ್ಷಕರು; ಐವರ ಬಂಧನ

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಬುಧವಾರ (ಜ.14) ನಕಲಿ ಗೋರಕ್ಷಕರು 35 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಜಾನುವಾರುಗಳನ್ನು ಹೊತ್ತ ವ್ಯಾನ್ ನಿಲ್ಲಿಸಿ ಪ್ರಾಣಿಗಳ ಸಾಗಣೆ ಆರೋಪದ ಮೇಲೆ ಹಲ್ಲೆ ನಡೆಸಿ ಕೊಂದಿದ್ದಾರೆ. ಜಿಲ್ಲಾ ಆಸ್ಪತ್ರೆಗೆ...

ರಾಜಸ್ಥಾನ: ಬಿಜೆಪಿ ಅತಿ ಕಡಿಮೆ ಅಂತರದಿಂದ ಗೆದ್ದ ಸ್ಥಾನದಲ್ಲಿ ಮುಸ್ಲಿಂ ಮತಗಳನ್ನು ಅಳಿಸುವಂತೆ ಒತ್ತಡ: ಆತ್ಮಹತ್ಯೆ ಬೆದರಿಕೆ ಹಾಕಿದ ಬಿಎಲ್ಒ

ಜೈಪುರದ ಹವಾ ಮಹಲ್ ವಿಧಾನಸಭಾ ಕ್ಷೇತ್ರದ ಬೂತ್ ಮಟ್ಟದ ಅಧಿಕಾರಿಯೊಬ್ಬರು ( ಬಿಎಲ್‌ಒ ) ನೂರಾರು ಮತದಾರರನ್ನು, ಅವರಲ್ಲಿ ಹೆಚ್ಚಿನವರು ಮುಸ್ಲಿಮರನ್ನು ಮತದಾರರ ಪಟ್ಟಿಯಿಂದ ಅಳಿಸಲು ಒತ್ತಡ ಹೇರಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಈ...

ಇಡಿ ಕಚೇರಿ ಮೇಲೆ ರಾಜ್ಯ ಪೊಲೀಸರಿಂದ ಪೂರ್ವಯೋಜಿತ ದಾಳಿ: ಜಾರ್ಖಂಡ್ ಹೈಕೋರ್ಟ್

ಜನವರಿ 16 ರಂದು ಜಾರಿ ನಿರ್ದೇಶನಾಲಯ (ಇಡಿ) ಕಚೇರಿಯ ಮೇಲೆ ಇತ್ತೀಚೆಗೆ ನಡೆದ ಪೊಲೀಸ್ ದಾಳಿಯು ಪ್ರಾಥಮಿಕವಾಗಿ ಪೂರ್ವಯೋಜಿತ ಎಂದು ಕಾಣುತ್ತಿದೆ ಎಂದು ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ಹೇಳಿದೆ. ಇಡಿ ಸಲ್ಲಿಸಿದ ರಿಟ್ ಅರ್ಜಿಯನ್ನು...

ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕರ್ನಾಟಕದ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಆರೋಪಿ ಗೆಲುವು

ಕರ್ನಾಟಕದ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಪ್ರಮುಖ ಆರೋಪಿ ಶ್ರೀಕಾಂತ್ ಪಂಗಾರ್ಕರ್, ಮಹಾರಾಷ್ಟ್ರದ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದಾರೆ. ಪಂಗಾರ್ಕರ್ ವಾರ್ಡ್ 13 ರಿಂದ ಕಣದಲ್ಲಿದ್ದರು. ಅವರ...