Homeಮುಖಪುಟಯುದ್ಧ ಭೀಕರತೆ: ಗಾಝಾದಲ್ಲಿ ಪತ್ರಕರ್ತರ ಹತ್ಯಾಕಾಂಡ

ಯುದ್ಧ ಭೀಕರತೆ: ಗಾಝಾದಲ್ಲಿ ಪತ್ರಕರ್ತರ ಹತ್ಯಾಕಾಂಡ

- Advertisement -
- Advertisement -

ಇಸ್ರೇಲ್‌ ಯುದ್ಧ ಘೋಷಿಸಿ ಗಾಝಾದ ಮೇಲೆ ವೈಮಾನಿಕ ದಾಳಿ ಆರಂಭಿಸಿದ ಬಳಿಕ ಗಾಝಾದಲ್ಲಿ 53 ಪತ್ರಕರ್ತರು ಕೊಲ್ಲಲ್ಪಟ್ಟಿದ್ದು, ಪ್ಯಾಲೆಸ್ತೀನ್‌ನ ಅಮಾಯಕ ನಾಗರಿಕರ ಜೊತೆಗೆ ಪತ್ರಕರ್ತರ ಕೂಡ ಹತ್ಯಾಕಾಂಡ ನಡೆದಿದೆ.

ಅ.7ರ ಹಮಾಸ್ ದಾಳಿಯ ನಂತರ ಇಸ್ರೇಲ್‌ ಸೈನ್ಯವು ಪಟ್ಟುಬಿಡದೆ ಗಾಝಾ ಮೇಲೆ ಆಕ್ರಮಣವನ್ನು ಮುಂದುವರಿಸಿತ್ತು. ವಿದ್ಯುತ್‌, ನೀರಾವರಿ ಸಂಪರ್ಕಗಳನ್ನು ಕಡಿತಗೊಳಿಸಿತ್ತು. ಇಸ್ರೇಲ್‌ ನಡೆಸಿದ ದಾಳಿಗೆ 15,000ಕ್ಕೂ ಅಧಿಕ ಮಂದಿ ನಾಗರಿಕರು ಗಾಝಾದಲ್ಲಿ ಮೃತಪಟ್ಟಿದ್ದರು. 40,000ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಲಕ್ಷಾಂತರ ಗಾಝಾ ನಿವಾಸಿಗಳು ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಮನೆಗಳು, ವಾಣಿಜ್ಯ ಕಟ್ಟಡಗಳು, ಆಸ್ಪತ್ರೆಗಳು ಇಸ್ರೇಲ್ ಬಾಂಬ್‌ ದಾಳಿಗೆ ಧ್ವಂಸಗೊಂಡಿದೆ.

ಇಸ್ರೇಲ್‌ ಗಾಝಾ ಮೇಲಿನ ದಾಳಿಯನ್ನು ಸಮರ್ಥಿಸಿಕೊಳ್ಳುತ್ತಿದ್ದು, ಹಮಾಸ್‌ ದಾಳಿಯಿಂದ ತನ್ನನ್ನು ತಾನು ರಕ್ಷಿಸಿಕೊಳ್ಳುವ ಪ್ರಯತ್ನ ಎಂದು ಹೇಳಿಕೊಂಡಿದೆ. ಆದರೆ ಯುದ್ಧದಲ್ಲಿ 40% ಮಕ್ಕಳು, ಮಹಿಳೆಯರು, ಪತ್ರಕರ್ತರ ಜೀವಗಳನ್ನು ಬಲಿತೆಗೆದುಕೊಂಡಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ತನ್ನ ಸಮರ್ಥನೆಯ ಬಗ್ಗೆ ಟೀಕೆಗೆ ಗುರಿಯಾಗಿದೆ.

ಗಾಝಾದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಖಾತರಿಪಡಿಸಲು ಸಾಧ್ಯವಿಲ್ಲ ಎಂದು ಈ ಮೊದಲು ಇಸ್ರೇಲ್ ರಾಯಿಟರ್ಸ್ ಮತ್ತು ಎಎಫ್‌ಪಿಗೆ ಸ್ಪಷ್ಟವಾಗಿ ಹೇಳಿತ್ತು. ಇಸ್ರೇಲ್‌ ರಕ್ಷಣಾ ಪಡೆಯ ಕೈಯಲ್ಲಿ 20 ಪತ್ರಕರ್ತರು ಕೊಲ್ಲಲ್ಪಟ್ಟಿದ್ದಾರೆ. ಇವುಗಳಲ್ಲಿ ಹೆಚ್ಚಿನ ಕೊಲೆಗಳು ಗಾಝಾದಲ್ಲಿ ಸಂಭವಿಸಿವೆ.

ಪತ್ರಕರ್ತರನ್ನು ರಕ್ಷಿಸುವ ಸಮಿತಿ (CPJ) ನ.22ಕ್ಕೆ ವರದಿಯನ್ನು ಬಿಡುಗಡೆ ಮಾಡಿದೆ. ವರದಿಯ ಪ್ರಕಾರ ಇಸ್ರೇಲ್‌ ಮಿಲಿಟರಿ ಪಡೆಯ ಕೈಯಲ್ಲಿ 53 ಪತ್ರಕರ್ತರು ಸಾವನ್ನಪ್ಪಿದ್ದಾರೆ. 37 ಪ್ಯಾಲೆಸ್ತೀನ್‌ ಪತ್ರಕರ್ತರು, ನಾಲ್ವರು ಇಸ್ರೇಲ್‌ ಮತ್ತು ಓರ್ವ ಲೆಬನಾನ್‌ನ ಪತ್ರಕರ್ತ ಮೃತಪಟ್ಟಿದ್ದಾರೆ. 11 ಪತ್ರಕರ್ತರು ಗಾಯಗೊಂಡಿದ್ದಾರೆ. ಮೂವರು ಪತ್ರಕರ್ತರು ನಾಪತ್ತೆಯಾಗಿದ್ದಾರೆ. 18 ಪತ್ರಕರ್ತರನ್ನು ಬಂಧಿಸಲಾಗಿದೆ ಎಂದು ಸಿಪಿಜೆ ವರದಿ ತಿಳಿಸಿದೆ.

ಪತ್ರಕರ್ತರ ಕುಟುಂಬದ ಸದಸ್ಯರ ಮೇಲೆ ದಾಳಿಗಳು ನಡೆದಿದೆ. ಬೆದರಿಕೆಗಳು ಹಾಕಲಾಗಿದೆ. ಪತ್ರಕರ್ತರ ಕುಟುಂಬಸ್ಥರನ್ನು ಹತ್ಯೆ ಮಾಡಲಾಗಿದೆ. ದಕ್ಷಿಣ ಗಾಝಾ ನಗರದಲ್ಲಿನ ಖಾನ್ ಯೂನಿಸ್‌ ನಗರದ ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಫೆಲಸ್ತೀನ್‌ ಚಾನಲ್‌ನ ವರದಿಗಾರ ಮೊಹಮ್ಮದ್ ಅಬು ಹತಾಬ್‌ ಮತ್ತು ಅವರ ಕುಟುಂಬದ 11 ಮಂದಿ ಬಲಿಯಾಗಿದ್ದರು.

ಗಾಝಾ ಮೇಲೆ ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಗೆ ಅಲ್ ಜಝೀರಾ ಅರೇಬಿಕ್ ಬ್ಯೂರೋ ಮುಖ್ಯಸ್ಥ ವೇಲ್ ದಹದೌಹ್ ಅವರ ಪತ್ನಿ, ಮಗ, ಮಗಳು ಮತ್ತು ಮೊಮ್ಮಗ ಸಾವನ್ನಪ್ಪಿದ್ದರು.

ಪತ್ರಿಕಾ ಸ್ವಾತಂತ್ರ್ಯದ ವಿಚಾರದಲ್ಲಿ ಇಸ್ರೇಲ್‌ನ ನಡೆಯು ಏಕಪಕ್ಷೀಯವಾಗಿದೆ. ಎಲ್ಲಾ ಪತ್ರಕರ್ತರನ್ನು ರಕ್ಷಿಸುವ ಅಗತ್ಯವನ್ನು ಇಸ್ರೇಲ್‌ ನಿರ್ಲಕ್ಷಿಸಿದೆ. ಇಸ್ರೇಲ್‌ನ ಸಂಪೂರ್ಣ ನಿಷ್ಕ್ರಿಯತೆಯು ಪತ್ರಿಕಾ ಸ್ವಾತಂತ್ರ್ಯವನ್ನು ನಿಸ್ಸಂಶಯವಾಗಿ ದುರ್ಬಲಗೊಳಿಸುತ್ತದೆ. ಇಸ್ರೇಲ್‌ ನಡೆಯು ಕನಿಷ್ಟ ಪಕ್ಷ ಇಸ್ರೇಲ್‌ ಪಡೆಯಿಂದ ಹತ್ಯೆಯಾದ ಪತ್ರಕರ್ತರು ನ್ಯಾಯಕ್ಕೆ ಯೋಗ್ಯವಾಗಿಲ್ಲ ಎಂಬುವುದನ್ನು ಸೂಚಿಸುತ್ತಿದೆ.

ಇದನ್ನು ಓದಿ: ಯುದ್ಧ ಒಪ್ಪಂದದಂತೆ ಒತ್ತೆಯಾಳುಗಳ ಬಿಡುಗಡೆ ಮಾಡಿದ ಹಮಾಸ್, ಇಸ್ರೇಲ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...