Homeಮುಖಪುಟಇದು ಟ್ರೈಲರ್ ಮಾತ್ರ. ಸಿನಿಮಾ ಇನ್ನು ಬಾಕಿ ಇದೆ: ಗುಡುಗಿದ ಮೋದಿ

ಇದು ಟ್ರೈಲರ್ ಮಾತ್ರ. ಸಿನಿಮಾ ಇನ್ನು ಬಾಕಿ ಇದೆ: ಗುಡುಗಿದ ಮೋದಿ

- Advertisement -
- Advertisement -

ಭ್ರಷ್ಟರನ್ನು ಜೈಲಿಗೆ ತಳ್ಳುವ ನಮ್ಮ ಪ್ರತಿಜ್ಞೆಯ ಕೆಲಸ ಪ್ರಗತಿಯಲ್ಲಿದೆ. ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಸೇರಿದ್ದಂತೆ ಕೆಲವರು ಈಗಾಗಲೇ ಜೈಲಿನಲ್ಲಿದ್ದಾರೆ. ಇನ್ನು ಕೆಲವರು ಶೀಘ್ರದಲ್ಲೇ ಸೇರಲಿದ್ದಾರೆ. ಇದು ಟ್ರೈಲರ್ ಮಾತ್ರ. ಪೂರ್ತಿ ಸಿನಿಮಾ ಇನ್ನು ಬಾಕಿ ಇದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ನೂತನ ಸರ್ಕಾರವು 100 ದಿನ ಪೂರೈಸಿದ ಕಾರ್ಯಕ್ರಮದಲ್ಲಿ ಗುಡುಗಿದ್ದಾರೆ.

“ನಮ್ಮ ಹೋರಾಟವು ಭ್ರಷ್ಟಾಚಾರದ ವಿರುದ್ಧವಾಗಿದೆ ಮತ್ತು ಅಂತಹ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ವ್ಯಕ್ತಿಗಳ ವಿರುದ್ಧ 100 ದಿನಗಳಲ್ಲಿ ನಾವು ಕೆಲ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ. ಅವರಲ್ಲಿ ಕೆಲವರನ್ನು ಜೈಲಿಗೆ ಕಳುಹಿಸಲಾಗಿದೆ. ಭ್ರಷ್ಟಾಚಾರವನ್ನು ಕೊನೆಗೊಳಿಸುವುದೇ ತಮ್ಮ ಸರ್ಕಾರದ ಗುರಿ”ಎಂದು ಪ್ರಧಾನಿ ಮೋದಿಯವರು ಜಾರ್ಖಂಡ್‌ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಹೇಳಿದರು.

ಆಡಳಿತದ ಮೊದಲ 100 ದಿನಗಳಲ್ಲಿ ತಮ್ಮ ಕ್ಯಾಬಿನೆಟ್ ಸಾಧಿಸಿದ ಸಾಧನೆಗಳು ಕೇವಲ “ಟ್ರೈಲರ್”, ಮತ್ತು ಮುಂದಿನ ವರ್ಷಗಳಲ್ಲಿ ಸಂಪೂರ್ಣ ಚಿತ್ರಣ ಹೊರಹೊಮ್ಮಲಿದೆ. “ಚುನಾವಣೆಗೆ ಮುಂಚಿತವಾಗಿ, ನಾನು ಬಲವಾದ ಮತ್ತು ಕೆಲಸ-ಆಧಾರಿತ ಸರ್ಕಾರವನ್ನು ರಚಿಸುವ ಭರವಸೆ ನೀಡಿದ್ದೆ – ಹಿಂದಿನ ಸರ್ಕಾರಕ್ಕಿಂತಲೂ ವೇಗವಾಗಿ ಕೆಲಸ ಮಾಡುವ ಈ ಸರ್ಕಾರ, ನಿಮ್ಮ ಎಲ್ಲ ಆಕಾಂಕ್ಷೆಗಳನ್ನು ನನಸಾಗಿಸಲು ಶ್ರಮಿಸುವ ಸರ್ಕಾರ ಎಂದು ಹೇಳಿದ್ದಾರೆ.

ದೇಶದ ಸರ್ವತೋಮುಖ ಪ್ರಗತಿಯನ್ನು ಖಾತ್ರಿಪಡಿಸಿಕೊಳ್ಳುವುದರ ಜೊತೆಗೆ ಅದನ್ನು ಲೂಟಿ ಮಾಡುವವರಿಗೆ ಶಿಕ್ಷೆ ವಿಧಿಸಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. “ಅಭಿವೃದ್ಧಿಯು ನಮ್ಮ ಭರವಸೆ ಮತ್ತು ಉದ್ದೇಶವಾಗಿದೆ. ದೇಶವು ಈ ರೀತಿಯ ಅಭಿವೃದ್ಧಿಯ ವೇಗವನ್ನು ಈ ಹಿಂದೆ ನೋಡಿಲ್ಲ” ಎಂದು ಅವರು ಹೇಳಿದರು. ಅದೇ ಸಮಯದಲ್ಲಿ, “ನಮ್ಮ ಸರ್ಕಾರ ಬಂದ ನಂತರ ಭ್ರಷ್ಟಾಚಾರದ ಮೇಲೆ ಭಾರಿ ದಬ್ಬಾಳಿಕೆ ಪ್ರಾರಂಭವಾಗಿದೆ. ಸಾರ್ವಜನಿಕರನ್ನು ಲೂಟಿ ಮಾಡಲು ಪ್ರಯತ್ನಿಸುವ ಜನರಿಗೆ ಸರಿಯಾದ ಸ್ಥಳಗಳನ್ನು ತೋರಿಸಲಾಗುತ್ತದೆ, ”ಎಂದು ಅವರು ಹೇಳಿದ್ದಾರೆ.

ಆದಾಗ್ಯೂ, ಪ್ರತಿಪಕ್ಷ ಕಾಂಗ್ರೆಸ್ 100 ದಿನಗಳ ಅವಧಿಯ ಬಿಜೆಪಿಯ ಕ್ರಮವನ್ನು ಟೀಕಿಸಿದೆ. “ಬಿಜೆಪಿ 2.0 ಯ ಮೊದಲ 100 ದಿನಗಳನ್ನು ದಬ್ಬಾಳಿಕೆ, ಅವ್ಯವಸ್ಥೆ ಮತ್ತು ಅರಾಜಕತೆ ಎಂದು ಮೂರು ಪದಗಳಲ್ಲಿ ವಿವರಿಸಬಹುದು” ಎಂದು ಪಕ್ಷವು ಹೇಳಿದೆ, ಕೈಗಾರಿಕಾ ವಲಯದಲ್ಲಿನ ಮಂದಗತಿ ಮತ್ತು ದೇಶದ ಜಿ.ಡಿ.ಪಿ ಬೆಳವಣಿಗೆಯು ಶೇಕಡಾ 5 ಕ್ಕೆ ಇಳಿದಿದೆ. “ಎಂಟು ವಲಯಗಳು ಶೇಕಡಾ 2 ಕ್ಕಿಂತ ಕಡಿಮೆ ಬೆಳವಣಿಗೆಯ ದರವನ್ನು ದಾಖಲಿಸಿವೆ. ನಮ್ಮ ಆರ್ಥಿಕತೆಯು ತೀವ್ರ ಕುಸಿತದಲ್ಲಿದೆ ಎಂದು ಒಪ್ಪಿಕೊಳ್ಳಲು ನಮ್ಮ ಕೇಂದ್ರ ಹಣಕಾಸು ಸಚಿವರು ಇನ್ನೂ ನಿರಾಕರಿಸುತ್ತಿದ್ದಾರೆ. ಬಿಜೆಪಿಯ ಈ ನಿರ್ಲಕ್ಷ್ಯ ಮತ್ತು ವಂಚನೆಯು ಇದೇ ಹಾದಿಯಲ್ಲಿ ಮುಂದುವರಿದರೆ, ನಾವು ಆರ್ಥಿಕ ಹಿಂಜರಿತದತ್ತ ಸಾಗುತ್ತೇವೆ ಎಂದು ಕಾಂಗ್ರೆಸ್ ಟೀಕಿಸಿದೆ.

ಸ್ವತಃ ಖ್ಯಾತ ಅರ್ಥಶಾಸ್ತ್ರಜ್ಞ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೂಡ ಈ ತಿಂಗಳ ಆರಂಭದಲ್ಲಿ ತನ್ನ ಕಾರ್ಯ ವಿಧಾನವನ್ನು ಬದಲಾಯಿಸುವಂತೆ ಕೇಂದ್ರ ಸರ್ಕಾರವನ್ನು ಕೇಳಿದ್ದರು. “ಈ ಹಾದಿಯಲ್ಲಿ ಮುಂದುವರಿಯಲು ಭಾರತಕ್ಕೆ ಸಾಧ್ಯವಿಲ್ಲ. ಆದ್ದರಿಂದ, ನಮ್ಮ ಆರ್ಥಿಕತೆಯನ್ನು ಈ ಬಿಕ್ಕಟ್ಟಿನಿಂದ ದೂರವಿರಿಸಲು ದ್ವೇಷ ರಾಜಕೀಯವನ್ನು ಬದಿಗಿಟ್ಟು, ಮತ್ತು ಎಲ್ಲಾ ವಿವೇಕದ ಧ್ವನಿಗಳು ಮತ್ತು ಆಲೋಚನಾ ಮನಸ್ಸುಗಳನ್ನು ತಲುಪಬೇಕೆಂದು ನಾನು ಸರ್ಕಾರವನ್ನು ಒತ್ತಾಯಿಸುತ್ತೇನೆ” ಎಂದು ಅವರು ಹೇಳಿದ್ದರು.

ಕಳೆದ ಕೆಲವು ವಾರಗಳಿಂದ ಹಣ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯವು ಕಾಂಗ್ರೆಸ್ ನ ಪ್ರಮುಖ ನಾಯಕರಾದ ಪಿ.ಚಿದಂಬರಂ ಮತ್ತು ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿರುವುದು ನರೇಂದ್ರ ಮೋದಿ ಸರ್ಕಾರದ ರಾಜಕೀಯ ಕುತಂತ್ರವಾಗಿದೆ. ಪ್ರತಿಪಕ್ಷದ ನಾಯಕರನ್ನು ಗುರಿಯಾಗಿಸಲು ಜಾರಿ ನಿರ್ದೇಶನಾಲಯ ಮತ್ತು ಸಿಬಿಐನಂತಹ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 21 ರಂದು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ಕಾಂಗ್ರೆಸ್ ನ ಪಿ ಚಿದಂಬರಂ ಅವರನ್ನು ಬಂಧಿಸಲಾಗಿತು. ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಚಿದಂಬರಂ ಹಣಕಾಸು ಸಚಿವರಾಗಿದ್ದಾಗ 2007 ರಲ್ಲಿ ಐಎನ್‌ಎಕ್ಸ್ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನಲ್ಲಿ ವಿದೇಶಿ ಹೂಡಿಕೆಗೆ ಸರ್ಕಾರದ ಅನುಮೋದನೆಯೊಂದಿಗೆ ಭ್ರಷ್ಟಾಚಾರದ ಪ್ರಕರಣ ಸಂಬಂಧ ಹೊಂದಿದೆ. ಕಳೆದ ವಾರ 14 ದಿನಗಳ ನ್ಯಾಯಾಂಗ ಬಂಧನಕ್ಕಾಗಿ ಅವರನ್ನು ತಿಹಾರ್ ಜೈಲಿಗೆ ಕಳುಹಿಸಲಾಗಿತ್ತು.

ಪಿ ಚಿದಂಬರಂ ಮತ್ತು ಅವರ ಮಗ ಕಾರ್ತಿ ಇಬ್ಬರೂ ಎಲ್ಲಾ ಆರೋಪಗಳನ್ನು ಬಲವಾಗಿ ನಿರಾಕರಿಸಿದ್ದಾರೆ ಮತ್ತು ಮೋದಿ ಸರ್ಕಾರವು “ರಾಜಕೀಯ ದುರುದ್ದೇಶದಿಂದ” ಪ್ರೇರೇಪಿಸಲ್ಪಟ್ಟಿದೆ ಎಂದು ಆರೋಪಿಸಿದ್ದಾರೆ.

ಮೋದಿ ಸರ್ಕಾರವು ಎರಡನೇ ಅವಧಿಗೆ ಹೆಚ್ಚಿನ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ನಂತರ ಕಳೆದ ಮೂರು ತಿಂಗಳಲ್ಲಿ ದೇಶದ ಪ್ರಮುಖ ಭ್ರಷ್ಟಾಚಾರ ಮತ್ತು ಹಣ ವರ್ಗಾವಣೆ ವಿರೋಧಿ ಏಜೆನ್ಸಿಗಳಾದ ಕೇಂದ್ರ ತನಿಖಾ ಮತ್ತು ಜಾರಿ ನಿರ್ದೇಶನಾಲಯವನ್ನು ಬಳಸಿಕೊಂಡು ಹಲವಾರು ಉನ್ನತ ರಾಜಕೀಯ ಮುಖಂಡರನ್ನು ಬಂಧಿಸಿದೆ.

ಭಾರತೀಯ ಜನತಾ ಪಕ್ಷ (ಬಿಜೆಪಿ) ತಮ್ಮ ನಾಯಕರನ್ನು ಬೆದರಿಸಲು ಅಥವಾ ನೈಜ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ತನಿಖಾ ಸಂಸ್ಥೆಗಳನ್ನು ಬಳಸುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...