Homeಮುಖಪುಟತೆಲಂಗಾಣ: ಮಾದಿಗ ಮೀಸಲಾತಿ ನೆಪದಲ್ಲಿ ಮೋದಿ ಮತಬೇಟೆ

ತೆಲಂಗಾಣ: ಮಾದಿಗ ಮೀಸಲಾತಿ ನೆಪದಲ್ಲಿ ಮೋದಿ ಮತಬೇಟೆ

- Advertisement -
- Advertisement -

ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ದಲಿತ ಉಪವರ್ಗೀಕರಣದ ಬಹುಕಾಲದ ಬೇಡಿಕೆಯ ಸಮಸ್ಯೆಯನ್ನು ಪರಿಶೀಲಿಸಲು ಸಮಿತಿ ರಚಿಸುವ ಪ್ರಕ್ರಿಯೆಯನ್ನು ಪ್ರಧಾನಿ ನರೇಂದ್ರ ಮೋದಿ ಪ್ರಾರಂಭಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಮತ್ತು ಇತರ ಅಧಿಕಾರಿಗಳೊಂದಿಗೆ ಸಮಿತಿಗೆ ಸಂಬಂಧಿಸಿದ ಸಮಸ್ಯೆ ಮತ್ತು ವಿಧಾನಗಳ ಬಗ್ಗೆ ಮೋದಿ ಚರ್ಚಿಸಿದ್ದಾರೆ ಎಂದು ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ ಪತ್ರಿಕೆ ವರದಿ ಮಾಡಿದೆ.

ನವೆಂಬರ್ 11 ರಂದು ಹೈದರಾಬಾದ್‌ನಲ್ಲಿ ಮಾದಿಗ ಮೀಸಲಾತಿ ಹೋರಾಟ ಸಮಿತಿ (ಎಂಆರ್‌ಪಿಎಸ್) ಆಯೋಜಿಸಿದ್ದ ಸಭೆಯಲ್ಲಿ ದಲಿತ ಉಪವರ್ಗೀಕರಣದ ಸಮಸ್ಯೆಯನ್ನು ಪರಿಶೀಲಿಸುವುದಾಗಿ ಮೋದಿ ಭರವಸೆ ನೀಡಿದ್ದರು.

ಮಾದಿಗರ ದಲಿತ ಉಪ-ಗುಂಪು ತೆಲಂಗಾಣ ರಾಜ್ಯದಲ್ಲಿ ಒಟ್ಟು ದಲಿತ ಜನಸಂಖ್ಯೆಯ ಸುಮಾರು ಶೇ. 50ರಷ್ಟಿದೆ. ನವೆಂಬರ್ 30 ರಂದು ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿ ದಲಿತರು ಶೇ.15ರಷ್ಟಿದ್ದಾರೆ.

1994 ರಿಂದ, ಎಂಆರ್‌ಪಿಎಸ್ ಬ್ಯಾನರ್ ಅಡಿಯಲ್ಲಿ ಮಾದಿಗರು ವಿವಿಧ ದಲಿತ ಉಪ-ಗುಂಪುಗಳು ತಮ್ಮ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪಡೆಯಲು ದಲಿತರಲ್ಲಿ ಉಪ-ವರ್ಗೀಕರಣಕ್ಕೆ ಒತ್ತಾಯಿಸುತ್ತಿದ್ದಾರೆ. ಮಂದ ಕೃಷ್ಣ ಮಾದಿಗ ನೇತೃತ್ವದ ಎಂಆರ್‌ಪಿಎಸ್, ಸುಮಾರು ಶೇ. 80 ಮೀಸಲಾತಿ ಪ್ರಯೋಜನಗಳನ್ನು ಮತ್ತೊಂದು ಪ್ರಬಲ ದಲಿತ ಉಪ-ಗುಂಪಾದ ಮಾಲಾಗಳು ಅನುಭವಿಸುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟಿದೆ.

ನವೆಂಬರ್ 11 ರಂದು ಹೈದರಾಬಾದ್‌ನಲ್ಲಿ ನಡೆದ ಎಂಆರ್‌ಪಿಎಸ್ ಸಭೆಯಲ್ಲಿ ಮೋದಿಯವರ ಉಪಸ್ಥಿತಿಯು ಮಹತ್ವವನ್ನು ಪಡೆದುಕೊಂಡಿದೆ. ‘ಇಂದಿನಿಂದ ಮಾದಿಗ ಮೀಸಲಾತಿ ಹೋರಾಟ ಸಮಿತಿ (ಎಂಆರ್‌ಪಿಎಸ್) ಸಂಸ್ಥಾಪಕ ಮಂದ ಕೃಷ್ಣ ಅವರು ಸಮುದಾಯಕ್ಕೆ ದಶಕಗಳಿಂದ ಆಗುತ್ತಿರುವ ಅನ್ಯಾಯವನ್ನು ಕೊನೆಗಾಣಿಸುವ ಚಳವಳಿಯಲ್ಲಿ ನನ್ನ ನಾಯಕರಾಗಿದ್ದಾರೆ. ನಿಮ್ಮೆಲ್ಲರಿಗೂ ನ್ಯಾಯ ಸಿಗುವವರೆಗೂ ನಾನು ಅವರ ಪರ ಇರುತ್ತೇನೆ’ ಎಂದು ಎಂಆರ್‌ಪಿಎಸ್ ಸಭೆಯನ್ನುದ್ದೇಶಿಸಿ ಮೋದಿ ಹೇಳಿದ್ದರು.

ಮಾದಿಗ ಮೀಸಲಾತಿ ಹೋರಾಟಕ್ಕೆ ಮೋದಿಯವರ ಬೆಂಬಲ ಬಿಜೆಪಿಗೆ ಚುನಾವಣೆಯಲ್ಲಿ ನೆರವಾಗಲಿದೆ. ಪ್ರಸ್ತುತ ಮಾದಿಗ ಸಮುದಾಯದ ಬೆಂಬಲ ಆಡಳಿತಾರೂಢ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮತ್ತು ಕಾಂಗ್ರೆಸ್ ನಡುವೆ ಹಂಚಿಹೋಗಿದೆ. ತೆಲಂಗಾಣದಲ್ಲಿ ಮಾದಿಗರು, ಮುದಿರಾಜು ಮತ್ತು ಮುನ್ನಾರ್ ಕಾಪು ಸಮುದಾಯದ ಮೂವರು ಸ್ವಾಮೀಜಿಗಳು ಒಗ್ಗೂಡಿ ಬಿಜೆಪಿಯನ್ನು ಬೆಂಬಲಿಸಿದರೆ ಚುನಾವಣೆಯಲ್ಲಿ ಪಕ್ಷಕ್ಕೆ ದೊಡ್ಡ ಬಲ ಬರಲಿದೆ. ಮುದಿರಾಜು ಮತ್ತು ಮುನ್ನಾರ್ ಕಾಪು ರಾಜ್ಯದ ಪ್ರಬಲ ಇತರ ಹಿಂದುಳಿದ ವರ್ಗ(OBC)ಗಳಾಗಿವೆ. ಅವುಗಳು ಬಿಜೆಪಿಯನ್ನು ಬೆಂಬಲಿಸಿದರೆ ವಿಧಾನಸಭೆ ಚುನಾವಣೆಯ ಅಲ್ಲದಿದ್ದರೂ, 2024 ರ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಲಾಭವಾಗುವುದು ಖಚಿತ ಎಂಬ ಲೆಕ್ಕಚಾರದಲ್ಲಿ ಬಿಜೆಪಿ ಇದೆ ಎಂದು ಹಿಂದೂ ವರದಿ ಹೇಳಿದೆ.

ತೆಲಂಗಾಣದಲ್ಲಿ ಈ ಬಾರಿ ಪ್ರಮುಖವಾಗಿ ಆಡಳಿತಾರೂಢ ಬಿಆರ್‌ಎಸ್ ಮತ್ತು ಕಾಂಗ್ರೆಸ್ ನಡುವೆ ನೇರ ಹೋರಾಟವಿದೆ. ಈ ನಡುವೆ ಹಿಂದುಳಿದ ವರ್ಗಗಳ ಓಲೈಕೆಗೆ ಮುಂದಾಗಿರುವ ಬಿಜೆಪಿ, ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಒಬಿಸಿ ವರ್ಗದ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡುವುದಾಗಿ ಘೋಷಿಸಿದೆ. ರಾಜ್ಯದ 119 ಕ್ಷೇತ್ರಗಳಿಗೆ ನವೆಂಬರ್ 30 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಡಿಸೆಂಬರ್‌ 3ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ಇದನ್ನೂ ಓದಿ : ಉದಯನಿಧಿ ಸನಾತನ ಧರ್ಮ ಹೇಳಿಕೆ: ತೀರ್ಪು ಕಾಯ್ದಿರಿಸಿದ ಮದ್ರಾಸ್ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...