Homeಮುಖಪುಟಕೊಚ್ಚಿ ಕಾಲ್ತುಳಿತ ಪ್ರಕರಣ: ತಜ್ಞರ ಸಮಿತಿಯಿಂದ ತನಿಖೆ

ಕೊಚ್ಚಿ ಕಾಲ್ತುಳಿತ ಪ್ರಕರಣ: ತಜ್ಞರ ಸಮಿತಿಯಿಂದ ತನಿಖೆ

- Advertisement -
- Advertisement -

ಕೊಚ್ಚಿಯ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ (CUSAT )ನಲ್ಲಿ ಶನಿವಾರ ನಡೆದ ಓಪನ್ ಏರ್ ‘ಟೆಕ್‌ ಫೆಸ್ಟ್‌’ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ನಾಲ್ವರು ವಿದ್ಯಾರ್ಥಿಗಳ ಸಾವು ಮತ್ತು 64 ಮಂದಿಗೆ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿ ತನಿಖೆಗೆ ತಜ್ಞರ ಸಮಿತಿ ರಚನೆ ಮಾಡುವುದಾಗಿ ಸಚಿವೆ ಆರ್.ಬಿಂದು ಹೇಳಿದ್ದಾರೆ.

ಕೇರಳದ ಉನ್ನತ ಶಿಕ್ಷಣ ಸಚಿವರಾದ ಆರ್.ಬಿಂದು ಈ ಕುರಿತು ಮಾತನಾಡಿದ್ದು, ಕೇರಳ ಸರ್ಕಾರವು ಘಟನೆಯ ತನಿಖೆಗಾಗಿ ಸಮಿತಿಯನ್ನು ರಚಿಸಲು ತೀರ್ಮಾನಿಸಿದೆ. ಮೂವರು ಸದಸ್ಯರ ಸಮಿತಿಯಲ್ಲಿ ತಾಂತ್ರಿಕ ತಜ್ಞರನ್ನು ಸೇರಿಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಶನಿವಾರ ಸಂಜೆ ಕಾಲ್ತುಳಿತದಲ್ಲಿ ಗಾಯಗೊಂಡ ಇಬ್ಬರು ವಿದ್ಯಾರ್ಥಿಗಳ ಸ್ಥಿತಿ ಇನ್ನು ಕೂಡ ಚಿಂತಾಜನಕವಾಗಿದೆ. ಸುಮಾರು 40 ವಿದ್ಯಾರ್ಥಿಗಳು ಈಗ ಚಿಕಿತ್ಸೆ ಪಡೆಯುತ್ತಿದ್ದಾರೆ. ಅನೇಕ ವಿದ್ಯಾರ್ಥಿಗಳು ಪ್ರಥಮ ಚಿಕಿತ್ಸೆಯ ನಂತರ ಮನೆಗಳಿಗೆ ವಾಪಾಸ್ಸಾಗಿದ್ದಾರೆ. CUSAT ವಿವಿಯ ಮೂವರು ವಿದ್ಯಾರ್ಥಿಗಳ ಮೃತದೇಹಗಳನ್ನು ಕಾಲೇಜಿನಲ್ಲಿ ಶ್ರದ್ಧಾಂಜಲಿ ಸಲ್ಲಿಸಿ ಬಳಿಕ ಮೃತದೇಹಗಳನ್ನು ಊರಿಗೆ ರವಾನಿಸಲಾಗಿದೆ.

ಮೃತರನ್ನು ಅತುಲ್ ತಂಬಿ, ಆನ್ ರುಫ್ತಾ, ಸಾರಾ ಥಾಮಸ್ ಮತ್ತು ಅಲ್ವಿನ್ ಜೋಸೆಫ್ ಎಂದು ಗುರುತಿಸಲಾಗಿದೆ. ಅಲ್ವಿನ್ ಹೊರತುಪಡಿಸಿ ಉಳಿದ ಮೂವರು CUSAT ನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಗಳಾಗಿದ್ದರು.

ಕಾರ್ಯಕ್ರಮದ ಆಯೋಜಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲಿದ್ದಾರೆ. ಸಂಗೀತ ಕಾರ್ಯಕ್ರಮದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿಲ್ಲ ಎಂದು ಕೊಚ್ಚಿ ನಗರ ಪೊಲೀಸ್ ಆಯುಕ್ತ ಎ ಅಕ್ಬರ್ ಹೇಳಿದ್ದಾರೆ.

ಕಾರ್ಯಕ್ರಮವನ್ನು ಸರಿಯಾಗಿ ನಿರ್ವಹಣೆ ಮಾಡದ ಕಾರಣ ಘಟನೆ ನಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಮಳೆಯಿಂದಾಗಿ ವಿದ್ಯಾರ್ಥಿಗಳು ಓಡಿ ಬಂದಾಗ ಒಂದು ಗೇಟ್ ಮೂಲಕ ಮಾತ್ರ ಪ್ರವೇಶಕ್ಕೆ ಅನುಮತಿಸಿರುವುದು ನೂಕು ನುಗ್ಗಲಿಗೆ ಕಾರಣವಾಗಿದೆ ಮತ್ತು ಸಮಸ್ಯೆಯನ್ನು ಉಲ್ಬಣಗೊಳಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

CUSAT ವಿವಿ ಆಯೋಜಿಸಿದ ವಾರ್ಷಿಕ ಟೆಕ್ ಉತ್ಸವದ ಎರಡನೇ ದಿನವಾದ ನಿನ್ನೆ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಭಾಂಗಣ ಭಾಗಶಃ ತುಂಬಿತ್ತು. ಈ ವೇಳೆ ಹಠಾತ್ತನೆ ಮಳೆ ಸುರಿದಿದ್ದರಿಂದ ನೆರೆದಿದ್ದ ವಿದ್ಯಾರ್ಥಿಗಳು ಆಶ್ರಯ ಪಡೆಯಲು ಸಭಾಂಗಣದತ್ತ ಓಡಲಾರಂಭಿಸಿದರು. ಈ ವೇಳೆ ನೂಕು ನುಗ್ಗಲು ಸಂಭವಿಸಿ ದುರಂತ ಉಂಟಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ತುರ್ತು ಸಂಪುಟ ಸಭೆ ಕರೆದು ದುರಂತದ ಬಗ್ಗೆ ಮಾಹಿತಿ ಪಡೆದಿದ್ದರು.

ಇದನ್ನು ಓದಿ: ಕೊಚ್ಚಿ: ‘ಟೆಕ್‌ ಫೆಸ್ಟ್‌’ನಲ್ಲಿ ಕಾಲ್ತುಳಿತ; ನಾಲ್ವರು ವಿದ್ಯಾರ್ಥಿಗಳು ಸಾವು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...