Homeಅಂತರಾಷ್ಟ್ರೀಯಪಾಲ್ ಲಿಂಚ್ ಅವರ ಕಾದಂಬರಿ 'ಪ್ರೊಫೆಟ್ ಸಾಂಗ್‌'ಗೆ 2023ರ ಬೂಕರ್ ಪ್ರಶಸ್ತಿ

ಪಾಲ್ ಲಿಂಚ್ ಅವರ ಕಾದಂಬರಿ ‘ಪ್ರೊಫೆಟ್ ಸಾಂಗ್‌’ಗೆ 2023ರ ಬೂಕರ್ ಪ್ರಶಸ್ತಿ

- Advertisement -
- Advertisement -

ಐರಿಶ್ ಲೇಖಕ ಪಾಲ್ ಲಿಂಚ್ ಅವರ 5ನೇ ಕಾದಂಬರಿ ಪ್ರೊಫೆಟ್ ಸಾಂಗ್‌ 2023ರ ಬೂಕರ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.

ಈ ಕಾದಂಬರಿಯನ್ನು ಮನಮುಟ್ಟುವಂತಿದೆ ಮತ್ತು ಆತ್ಮಾವಲೋಕನಕ್ಕೆ ಪೂರಕ ಅಂಶಗಳನ್ನು ಒಳಗೊಂಡಿದೆ.  ಅದು ನಮ್ಮ ಪ್ರಸ್ತುತ ಕ್ಷಣದ ಸಾಮಾಜಿಕ ಮತ್ತು ರಾಜಕೀಯ ಆತಂಕಗಳ ಕುರಿತು ಬೆಳಕು ಚೆಲ್ಲುತ್ತದೆ ಎಂದು ತೀರ್ಪುಗಾರ ಇಸಿ ಎಡುಗ್ಯಾನ್ ಅವರು ಹೇಳಿದ್ದಾರೆ.

ಬೂಕರ್ ಪ್ರಶಸ್ತಿಗೆ ಸ್ವತಃ 2 ಬಾರಿ ಶಾರ್ಟ್‌ಲಿಸ್ಟ್ ಆಗಿರುವ ಕೆನಡಾದ ಕಾದಂಬರಿಕಾರ ಎಡುಗ್ಯಾನ್, ಲಿಂಚ್‌ಗೆ  ಬಹುಮಾನವನ್ನು ನೀಡುವ ನಿರ್ಧಾರವು ಸರ್ವಸಮ್ಮತವಾಗಿರಲಿಲ್ಲ ಮತ್ತು ಸುಮಾರು 6 ಗಂಟೆಗಳ ಕಾಲ ನಡೆದ ಚರ್ಚೆ ಮತ್ತು ಬಹು ಸುತ್ತಿನ ಮತದಾನದ ಮೂಲಕ ಇತ್ಯರ್ಥವಾಯಿತು ಎಂದು ಹೇಳಿದ್ದರು. ಅವರಿಗೆ ಬಹುಮಾನ 50,000 ಪೌಂಡ್ ಸಿಗಲಿದೆ.

ಐರ್ಲ್ಯಾಂಡ್‌ನಲ್ಲಿ ಮಹಿಳೆಯೊಬ್ಬರು ತನ್ನ ಕುಟುಂಬವನ್ನು ರಕ್ಷಿಸಲು ಪ್ರಯತ್ನಿಸುವ ಭಯಾನಕ ಸಂಗತಿಗಳನ್ನು ಅವು ಒಳಗೊಂಡಿದೆ. ದೇಶದಲ್ಲಿನ ದಬ್ಬಾಳಿಕೆಯ ಘಟನೆಯನ್ನು ಎಳೆಎಳೆಯಾಗಿ ಮುಂದಿಡುವ ಪ್ರಯತ್ನವನ್ನು ಕಾದಂಬರಿಕಾರರು ಪ್ರಯತ್ನಿಸಿದ್ದಾರೆ. ಈ ಕಾದಂಬರಿ ಭಾವನಾತ್ಮಕ ಕಥೆಯನ್ನು ಒಳಗೊಂಡಿದ್ದು, ಧೈರ್ಯ ಮತ್ತು ಶೌರ್ಯದ ಬಗ್ಗೆ ವಿವರಿಸುತ್ತದೆ.

ನಾನು ಬೂಕರ್‌ ಪ್ರಶಸ್ತಿಯನ್ನು ಐರ್ಲೆಂಡ್‌ಗೆ ತಂದಿದ್ದೇನೆ. ಇದರಿಂದ ಅಪಾರ ಸಂತೋಷವಾಗಿದೆ ಎಂದು ಮಾಜಿ ಚಲನಚಿತ್ರ ವಿಮರ್ಶಕ ಲಿಂಚ್ ಬಹುಮಾನವನ್ನು ಸ್ವೀಕರಿಸಿದ ನಂತರ ಹೇಳಿದ್ದಾರೆ. ನಾನು ಅನೇಕ ವರ್ಷಗಳ ಹಿಂದೆ ಸಿಸಿಲಿಯಲ್ಲಿ ರಜಾದಿನಗಳಲ್ಲಿ ಒಂದು ಕ್ಷಣ ನಾನು ಬರೆಯಬೇಕು ಎಂದು ನಿರ್ಧರಿಸಿದೆ.  ನಾನು ಮಾಡಿದ ಕೆಲಸದಿಂದ ನನಗೆ ತುಂಬಾ ಸಂತೋಷವಾಗಿದೆ ಎಂದು ಹೇಳಿದ್ದಾರೆ.

ಡಬ್ಲಿನ್‌ನಲ್ಲಿ ಮಹಿಳೆ ಮತ್ತು ಮೂವರು ಮಕ್ಕಳಿಗೆ ಇರಿತದ ಬಳಿಕ ಹಿಂಸಾಚಾರ ಭುಗಿಲೆದ್ದಿತ್ತು, ಇದಾದ ಕೆಲವೇ ದಿನಗಳಲ್ಲಿ ಈ ಪ್ರಶ್ತಸ್ತಿ  ಹೊರಬಿದ್ದಿದೆ. ಡಬ್ಲಿನ್‌ನಲ್ಲಿ ಎಚ್ಚರಿಕೆ ಇದೆ ಎಂದು ನಿರ್ದಿಷ್ಟವಾಗಿ ಹೇಳಲು ನಾನು ಈ ಪುಸ್ತಕವನ್ನು ಬರೆದಿಲ್ಲ, ಈ ಪುಸ್ತಕದಲ್ಲಿ ನಡೆಯುತ್ತಿರುವ ಸಂಗತಿಗಳು ಯುಗಯುಗಾಂತರಗಳಲ್ಲಿ ಕಾಲಾತೀತವಾಗಿ ಸಂಭವಿಸುತ್ತಿವೆ ಮತ್ತು ಬಹುಶಃ ನಾವು ನಮ್ಮದೇ ಆದ ಪ್ರತಿಕ್ರಿಯೆಗಳನ್ನು ಗಾಢವಾಗಿಸಬೇಕಾಗಬಹುದು ಎಂಬ ಸಂದೇಶವನ್ನು ವ್ಯಕ್ತಪಡಿಸಲು ನಾನು ಪುಸ್ತಕವನ್ನು ಬರೆದಿದ್ದೇನೆ. ಸ್ಪಷ್ಟವಾಗಿ ರಾಜಕೀಯ ಕಾದಂಬರಿಯಲ್ಲ ಎಂದು ಪಾಲ್ ಲಿಂಚ್ ಹೇಳಿದರು.

ಬೂಕರ್‌ ಪ್ರಶಸ್ತಿಗೆ 163 ಕಾದಂಬರಿಗಳು ಸ್ಪರ್ಧೆಯಲ್ಲಿದ್ದವು. ಇದರಲ್ಲಿ ಯುಕೆ, ಯುಎಸ್, ಐರ್ಲ್ಯಾಂಡ್‌, ಕೆನಡಾದ ಐವರ ಕಾದಂಬರಿಗಳು ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದವು. ಚೆಟ್ನಾ ಮಾರೂ ಅವರ ವೆಸ್ಟರ್ನ್ ಲೇನ್, ಪಾಲ್ ಲಿಂಚ್ ಅವರ ಪ್ರೊಫೆಸ್ಟ್ ಸಾಂಗ್, ಪಾಲ್ ಮುರ್ರೆ ಅವರ ದಿ ಬೀ ಸ್ಟಿಂಗ್, ಜೋನಾಥನ್ ಎಸ್ಕೋಫರಿ ಅವರ ಈಫ್ ಐ ಸರ್ವೈವ್ ಯು ಮತ್ತು ಪಾಲ್ ಹಾರ್ಡಿಂಗ್ ಅವರ ಈ ಅದರ್ ಈಡನ್ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದವು.

ಇದನ್ನು ಓದಿ: ಗೋವಾ: ಚಲನಚಿತ್ರೋತ್ಸವದಲ್ಲಿ ಕೈಬಿಟ್ಟ ಜಾತಿ ತಾರತಮ್ಯದ ಕುರಿತ ಕವಿತೆ; ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...