Homeಅಂತರಾಷ್ಟ್ರೀಯಪಾಲ್ ಲಿಂಚ್ ಅವರ ಕಾದಂಬರಿ 'ಪ್ರೊಫೆಟ್ ಸಾಂಗ್‌'ಗೆ 2023ರ ಬೂಕರ್ ಪ್ರಶಸ್ತಿ

ಪಾಲ್ ಲಿಂಚ್ ಅವರ ಕಾದಂಬರಿ ‘ಪ್ರೊಫೆಟ್ ಸಾಂಗ್‌’ಗೆ 2023ರ ಬೂಕರ್ ಪ್ರಶಸ್ತಿ

- Advertisement -
- Advertisement -

ಐರಿಶ್ ಲೇಖಕ ಪಾಲ್ ಲಿಂಚ್ ಅವರ 5ನೇ ಕಾದಂಬರಿ ಪ್ರೊಫೆಟ್ ಸಾಂಗ್‌ 2023ರ ಬೂಕರ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.

ಈ ಕಾದಂಬರಿಯನ್ನು ಮನಮುಟ್ಟುವಂತಿದೆ ಮತ್ತು ಆತ್ಮಾವಲೋಕನಕ್ಕೆ ಪೂರಕ ಅಂಶಗಳನ್ನು ಒಳಗೊಂಡಿದೆ.  ಅದು ನಮ್ಮ ಪ್ರಸ್ತುತ ಕ್ಷಣದ ಸಾಮಾಜಿಕ ಮತ್ತು ರಾಜಕೀಯ ಆತಂಕಗಳ ಕುರಿತು ಬೆಳಕು ಚೆಲ್ಲುತ್ತದೆ ಎಂದು ತೀರ್ಪುಗಾರ ಇಸಿ ಎಡುಗ್ಯಾನ್ ಅವರು ಹೇಳಿದ್ದಾರೆ.

ಬೂಕರ್ ಪ್ರಶಸ್ತಿಗೆ ಸ್ವತಃ 2 ಬಾರಿ ಶಾರ್ಟ್‌ಲಿಸ್ಟ್ ಆಗಿರುವ ಕೆನಡಾದ ಕಾದಂಬರಿಕಾರ ಎಡುಗ್ಯಾನ್, ಲಿಂಚ್‌ಗೆ  ಬಹುಮಾನವನ್ನು ನೀಡುವ ನಿರ್ಧಾರವು ಸರ್ವಸಮ್ಮತವಾಗಿರಲಿಲ್ಲ ಮತ್ತು ಸುಮಾರು 6 ಗಂಟೆಗಳ ಕಾಲ ನಡೆದ ಚರ್ಚೆ ಮತ್ತು ಬಹು ಸುತ್ತಿನ ಮತದಾನದ ಮೂಲಕ ಇತ್ಯರ್ಥವಾಯಿತು ಎಂದು ಹೇಳಿದ್ದರು. ಅವರಿಗೆ ಬಹುಮಾನ 50,000 ಪೌಂಡ್ ಸಿಗಲಿದೆ.

ಐರ್ಲ್ಯಾಂಡ್‌ನಲ್ಲಿ ಮಹಿಳೆಯೊಬ್ಬರು ತನ್ನ ಕುಟುಂಬವನ್ನು ರಕ್ಷಿಸಲು ಪ್ರಯತ್ನಿಸುವ ಭಯಾನಕ ಸಂಗತಿಗಳನ್ನು ಅವು ಒಳಗೊಂಡಿದೆ. ದೇಶದಲ್ಲಿನ ದಬ್ಬಾಳಿಕೆಯ ಘಟನೆಯನ್ನು ಎಳೆಎಳೆಯಾಗಿ ಮುಂದಿಡುವ ಪ್ರಯತ್ನವನ್ನು ಕಾದಂಬರಿಕಾರರು ಪ್ರಯತ್ನಿಸಿದ್ದಾರೆ. ಈ ಕಾದಂಬರಿ ಭಾವನಾತ್ಮಕ ಕಥೆಯನ್ನು ಒಳಗೊಂಡಿದ್ದು, ಧೈರ್ಯ ಮತ್ತು ಶೌರ್ಯದ ಬಗ್ಗೆ ವಿವರಿಸುತ್ತದೆ.

ನಾನು ಬೂಕರ್‌ ಪ್ರಶಸ್ತಿಯನ್ನು ಐರ್ಲೆಂಡ್‌ಗೆ ತಂದಿದ್ದೇನೆ. ಇದರಿಂದ ಅಪಾರ ಸಂತೋಷವಾಗಿದೆ ಎಂದು ಮಾಜಿ ಚಲನಚಿತ್ರ ವಿಮರ್ಶಕ ಲಿಂಚ್ ಬಹುಮಾನವನ್ನು ಸ್ವೀಕರಿಸಿದ ನಂತರ ಹೇಳಿದ್ದಾರೆ. ನಾನು ಅನೇಕ ವರ್ಷಗಳ ಹಿಂದೆ ಸಿಸಿಲಿಯಲ್ಲಿ ರಜಾದಿನಗಳಲ್ಲಿ ಒಂದು ಕ್ಷಣ ನಾನು ಬರೆಯಬೇಕು ಎಂದು ನಿರ್ಧರಿಸಿದೆ.  ನಾನು ಮಾಡಿದ ಕೆಲಸದಿಂದ ನನಗೆ ತುಂಬಾ ಸಂತೋಷವಾಗಿದೆ ಎಂದು ಹೇಳಿದ್ದಾರೆ.

ಡಬ್ಲಿನ್‌ನಲ್ಲಿ ಮಹಿಳೆ ಮತ್ತು ಮೂವರು ಮಕ್ಕಳಿಗೆ ಇರಿತದ ಬಳಿಕ ಹಿಂಸಾಚಾರ ಭುಗಿಲೆದ್ದಿತ್ತು, ಇದಾದ ಕೆಲವೇ ದಿನಗಳಲ್ಲಿ ಈ ಪ್ರಶ್ತಸ್ತಿ  ಹೊರಬಿದ್ದಿದೆ. ಡಬ್ಲಿನ್‌ನಲ್ಲಿ ಎಚ್ಚರಿಕೆ ಇದೆ ಎಂದು ನಿರ್ದಿಷ್ಟವಾಗಿ ಹೇಳಲು ನಾನು ಈ ಪುಸ್ತಕವನ್ನು ಬರೆದಿಲ್ಲ, ಈ ಪುಸ್ತಕದಲ್ಲಿ ನಡೆಯುತ್ತಿರುವ ಸಂಗತಿಗಳು ಯುಗಯುಗಾಂತರಗಳಲ್ಲಿ ಕಾಲಾತೀತವಾಗಿ ಸಂಭವಿಸುತ್ತಿವೆ ಮತ್ತು ಬಹುಶಃ ನಾವು ನಮ್ಮದೇ ಆದ ಪ್ರತಿಕ್ರಿಯೆಗಳನ್ನು ಗಾಢವಾಗಿಸಬೇಕಾಗಬಹುದು ಎಂಬ ಸಂದೇಶವನ್ನು ವ್ಯಕ್ತಪಡಿಸಲು ನಾನು ಪುಸ್ತಕವನ್ನು ಬರೆದಿದ್ದೇನೆ. ಸ್ಪಷ್ಟವಾಗಿ ರಾಜಕೀಯ ಕಾದಂಬರಿಯಲ್ಲ ಎಂದು ಪಾಲ್ ಲಿಂಚ್ ಹೇಳಿದರು.

ಬೂಕರ್‌ ಪ್ರಶಸ್ತಿಗೆ 163 ಕಾದಂಬರಿಗಳು ಸ್ಪರ್ಧೆಯಲ್ಲಿದ್ದವು. ಇದರಲ್ಲಿ ಯುಕೆ, ಯುಎಸ್, ಐರ್ಲ್ಯಾಂಡ್‌, ಕೆನಡಾದ ಐವರ ಕಾದಂಬರಿಗಳು ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದವು. ಚೆಟ್ನಾ ಮಾರೂ ಅವರ ವೆಸ್ಟರ್ನ್ ಲೇನ್, ಪಾಲ್ ಲಿಂಚ್ ಅವರ ಪ್ರೊಫೆಸ್ಟ್ ಸಾಂಗ್, ಪಾಲ್ ಮುರ್ರೆ ಅವರ ದಿ ಬೀ ಸ್ಟಿಂಗ್, ಜೋನಾಥನ್ ಎಸ್ಕೋಫರಿ ಅವರ ಈಫ್ ಐ ಸರ್ವೈವ್ ಯು ಮತ್ತು ಪಾಲ್ ಹಾರ್ಡಿಂಗ್ ಅವರ ಈ ಅದರ್ ಈಡನ್ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದವು.

ಇದನ್ನು ಓದಿ: ಗೋವಾ: ಚಲನಚಿತ್ರೋತ್ಸವದಲ್ಲಿ ಕೈಬಿಟ್ಟ ಜಾತಿ ತಾರತಮ್ಯದ ಕುರಿತ ಕವಿತೆ; ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...