Homeಅಂತರಾಷ್ಟ್ರೀಯಪಾಲ್ ಲಿಂಚ್ ಅವರ ಕಾದಂಬರಿ 'ಪ್ರೊಫೆಟ್ ಸಾಂಗ್‌'ಗೆ 2023ರ ಬೂಕರ್ ಪ್ರಶಸ್ತಿ

ಪಾಲ್ ಲಿಂಚ್ ಅವರ ಕಾದಂಬರಿ ‘ಪ್ರೊಫೆಟ್ ಸಾಂಗ್‌’ಗೆ 2023ರ ಬೂಕರ್ ಪ್ರಶಸ್ತಿ

- Advertisement -
- Advertisement -

ಐರಿಶ್ ಲೇಖಕ ಪಾಲ್ ಲಿಂಚ್ ಅವರ 5ನೇ ಕಾದಂಬರಿ ಪ್ರೊಫೆಟ್ ಸಾಂಗ್‌ 2023ರ ಬೂಕರ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.

ಈ ಕಾದಂಬರಿಯನ್ನು ಮನಮುಟ್ಟುವಂತಿದೆ ಮತ್ತು ಆತ್ಮಾವಲೋಕನಕ್ಕೆ ಪೂರಕ ಅಂಶಗಳನ್ನು ಒಳಗೊಂಡಿದೆ.  ಅದು ನಮ್ಮ ಪ್ರಸ್ತುತ ಕ್ಷಣದ ಸಾಮಾಜಿಕ ಮತ್ತು ರಾಜಕೀಯ ಆತಂಕಗಳ ಕುರಿತು ಬೆಳಕು ಚೆಲ್ಲುತ್ತದೆ ಎಂದು ತೀರ್ಪುಗಾರ ಇಸಿ ಎಡುಗ್ಯಾನ್ ಅವರು ಹೇಳಿದ್ದಾರೆ.

ಬೂಕರ್ ಪ್ರಶಸ್ತಿಗೆ ಸ್ವತಃ 2 ಬಾರಿ ಶಾರ್ಟ್‌ಲಿಸ್ಟ್ ಆಗಿರುವ ಕೆನಡಾದ ಕಾದಂಬರಿಕಾರ ಎಡುಗ್ಯಾನ್, ಲಿಂಚ್‌ಗೆ  ಬಹುಮಾನವನ್ನು ನೀಡುವ ನಿರ್ಧಾರವು ಸರ್ವಸಮ್ಮತವಾಗಿರಲಿಲ್ಲ ಮತ್ತು ಸುಮಾರು 6 ಗಂಟೆಗಳ ಕಾಲ ನಡೆದ ಚರ್ಚೆ ಮತ್ತು ಬಹು ಸುತ್ತಿನ ಮತದಾನದ ಮೂಲಕ ಇತ್ಯರ್ಥವಾಯಿತು ಎಂದು ಹೇಳಿದ್ದರು. ಅವರಿಗೆ ಬಹುಮಾನ 50,000 ಪೌಂಡ್ ಸಿಗಲಿದೆ.

ಐರ್ಲ್ಯಾಂಡ್‌ನಲ್ಲಿ ಮಹಿಳೆಯೊಬ್ಬರು ತನ್ನ ಕುಟುಂಬವನ್ನು ರಕ್ಷಿಸಲು ಪ್ರಯತ್ನಿಸುವ ಭಯಾನಕ ಸಂಗತಿಗಳನ್ನು ಅವು ಒಳಗೊಂಡಿದೆ. ದೇಶದಲ್ಲಿನ ದಬ್ಬಾಳಿಕೆಯ ಘಟನೆಯನ್ನು ಎಳೆಎಳೆಯಾಗಿ ಮುಂದಿಡುವ ಪ್ರಯತ್ನವನ್ನು ಕಾದಂಬರಿಕಾರರು ಪ್ರಯತ್ನಿಸಿದ್ದಾರೆ. ಈ ಕಾದಂಬರಿ ಭಾವನಾತ್ಮಕ ಕಥೆಯನ್ನು ಒಳಗೊಂಡಿದ್ದು, ಧೈರ್ಯ ಮತ್ತು ಶೌರ್ಯದ ಬಗ್ಗೆ ವಿವರಿಸುತ್ತದೆ.

ನಾನು ಬೂಕರ್‌ ಪ್ರಶಸ್ತಿಯನ್ನು ಐರ್ಲೆಂಡ್‌ಗೆ ತಂದಿದ್ದೇನೆ. ಇದರಿಂದ ಅಪಾರ ಸಂತೋಷವಾಗಿದೆ ಎಂದು ಮಾಜಿ ಚಲನಚಿತ್ರ ವಿಮರ್ಶಕ ಲಿಂಚ್ ಬಹುಮಾನವನ್ನು ಸ್ವೀಕರಿಸಿದ ನಂತರ ಹೇಳಿದ್ದಾರೆ. ನಾನು ಅನೇಕ ವರ್ಷಗಳ ಹಿಂದೆ ಸಿಸಿಲಿಯಲ್ಲಿ ರಜಾದಿನಗಳಲ್ಲಿ ಒಂದು ಕ್ಷಣ ನಾನು ಬರೆಯಬೇಕು ಎಂದು ನಿರ್ಧರಿಸಿದೆ.  ನಾನು ಮಾಡಿದ ಕೆಲಸದಿಂದ ನನಗೆ ತುಂಬಾ ಸಂತೋಷವಾಗಿದೆ ಎಂದು ಹೇಳಿದ್ದಾರೆ.

ಡಬ್ಲಿನ್‌ನಲ್ಲಿ ಮಹಿಳೆ ಮತ್ತು ಮೂವರು ಮಕ್ಕಳಿಗೆ ಇರಿತದ ಬಳಿಕ ಹಿಂಸಾಚಾರ ಭುಗಿಲೆದ್ದಿತ್ತು, ಇದಾದ ಕೆಲವೇ ದಿನಗಳಲ್ಲಿ ಈ ಪ್ರಶ್ತಸ್ತಿ  ಹೊರಬಿದ್ದಿದೆ. ಡಬ್ಲಿನ್‌ನಲ್ಲಿ ಎಚ್ಚರಿಕೆ ಇದೆ ಎಂದು ನಿರ್ದಿಷ್ಟವಾಗಿ ಹೇಳಲು ನಾನು ಈ ಪುಸ್ತಕವನ್ನು ಬರೆದಿಲ್ಲ, ಈ ಪುಸ್ತಕದಲ್ಲಿ ನಡೆಯುತ್ತಿರುವ ಸಂಗತಿಗಳು ಯುಗಯುಗಾಂತರಗಳಲ್ಲಿ ಕಾಲಾತೀತವಾಗಿ ಸಂಭವಿಸುತ್ತಿವೆ ಮತ್ತು ಬಹುಶಃ ನಾವು ನಮ್ಮದೇ ಆದ ಪ್ರತಿಕ್ರಿಯೆಗಳನ್ನು ಗಾಢವಾಗಿಸಬೇಕಾಗಬಹುದು ಎಂಬ ಸಂದೇಶವನ್ನು ವ್ಯಕ್ತಪಡಿಸಲು ನಾನು ಪುಸ್ತಕವನ್ನು ಬರೆದಿದ್ದೇನೆ. ಸ್ಪಷ್ಟವಾಗಿ ರಾಜಕೀಯ ಕಾದಂಬರಿಯಲ್ಲ ಎಂದು ಪಾಲ್ ಲಿಂಚ್ ಹೇಳಿದರು.

ಬೂಕರ್‌ ಪ್ರಶಸ್ತಿಗೆ 163 ಕಾದಂಬರಿಗಳು ಸ್ಪರ್ಧೆಯಲ್ಲಿದ್ದವು. ಇದರಲ್ಲಿ ಯುಕೆ, ಯುಎಸ್, ಐರ್ಲ್ಯಾಂಡ್‌, ಕೆನಡಾದ ಐವರ ಕಾದಂಬರಿಗಳು ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದವು. ಚೆಟ್ನಾ ಮಾರೂ ಅವರ ವೆಸ್ಟರ್ನ್ ಲೇನ್, ಪಾಲ್ ಲಿಂಚ್ ಅವರ ಪ್ರೊಫೆಸ್ಟ್ ಸಾಂಗ್, ಪಾಲ್ ಮುರ್ರೆ ಅವರ ದಿ ಬೀ ಸ್ಟಿಂಗ್, ಜೋನಾಥನ್ ಎಸ್ಕೋಫರಿ ಅವರ ಈಫ್ ಐ ಸರ್ವೈವ್ ಯು ಮತ್ತು ಪಾಲ್ ಹಾರ್ಡಿಂಗ್ ಅವರ ಈ ಅದರ್ ಈಡನ್ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದವು.

ಇದನ್ನು ಓದಿ: ಗೋವಾ: ಚಲನಚಿತ್ರೋತ್ಸವದಲ್ಲಿ ಕೈಬಿಟ್ಟ ಜಾತಿ ತಾರತಮ್ಯದ ಕುರಿತ ಕವಿತೆ; ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...