Homeಮುಖಪುಟಹಲಾಲ್ ಪ್ರಮಾಣೀಕೃತ ಉತ್ಪನ್ನಗಳ ತೆರವಿಗೆ 15 ದಿನಗಳ ಗಡುವು: ಉ.ಪ್ರದೇಶ ಸರ್ಕಾರ

ಹಲಾಲ್ ಪ್ರಮಾಣೀಕೃತ ಉತ್ಪನ್ನಗಳ ತೆರವಿಗೆ 15 ದಿನಗಳ ಗಡುವು: ಉ.ಪ್ರದೇಶ ಸರ್ಕಾರ

- Advertisement -
- Advertisement -

ಉತ್ತರ ಪ್ರದೇಶದ ಆದಿತ್ಯನಾಥ್ ನೇತೃತ್ವದ ಸರ್ಕಾರವು ರಾಜ್ಯದಲ್ಲಿ ಈಗಾಗಲೇ ದನದ ಮಾಂಸ ಹಾಗೂ ರಫ್ತು ಉದ್ದೇಶದ ಉತ್ಪನ್ನಗಳನ್ನು ಹೊರತುಪಡಿಸಿ ಉಳಿದ ಹಲಾಲ್ ಪ್ರಮಾಣೀಕೃತ ಉತ್ಪನ್ನಗಳ ಮೇಲೆ ನಿಷೇಧ ಹೇರಿದೆ. ಅಂತಹ ಉತ್ಪನ್ನಗಳೇನಾದರೂ ತಮ್ಮ ಬಳಿ ಉಳಿದಿದ್ದರೆ ಅವುಗಳನ್ನು ತೆರವು ಮಾಡಲು ಮಳಿಗೆಗಳು ಹಾಗೂ ಸೂಪರ್ ಸ್ಟೋರ್‌ಗಳಿಗೆ 15 ದಿನಗಳ ಗಡುವನ್ನು ನೀಡಿದೆ.

ಇದರೊಂದಿಗೆ, ಪ್ರಮಾಣೀಕೃತವಲ್ಲದ ಸಂಸ್ಥೆಗಳಿಂದ ಹಲಾಲ್ ಪ್ರಮಾಣ ಪತ್ರ ಪಡೆಯುತ್ತಿರುವ 92 ಉತ್ತರ ಪ್ರದೇಶ ಮೂಲದ ಉತ್ಪಾದಕರಿಗೆ ತಮ್ಮ ಉತ್ಪನ್ನಗಳಿಗೆ ಉತ್ತರ ಪ್ರದೇಶದಲ್ಲೇ ಪ್ರಮಾಣ ಪತ್ರ ಪಡೆಯಬೇಕು ಹಾಗೂ ಆ ಉತ್ಪನ್ನಗಳ ಮರು ಬ್ಯಾಂಡಿಂಗ್ ಅಥವಾ ಮರು ಪ್ಯಾಕೇಜಿಂಗ್ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದೂ ಆದೇಶಿಸಿದೆ.

ಈ ಕುರಿತು TOI ಸುದ್ದಿ ಸಂಸ್ಥೆಗೆ ಪ್ರತಿಕ್ರಿಯಿಸಿರುವ ಆಹಾರ ಸುರಕ್ಷತೆ ಹಾಗೂ ಔಷಧ ಆಡಳಿತ ಇಲಾಖೆಯ ಆಯುಕ್ತ ಅನಿತಾ ಸಿಂಗ್, ನವೆಂಬರ್ 18ರಂದು ಉತ್ತರ ಪ್ರದೇಶದಲ್ಲಿ ಹಲಾಲ್ ಪ್ರಮಾಣೀಕೃತ ಉತ್ಪನ್ನಗಳ ಮೇಲಿನ ನಿಷೇಧ ಜಾರಿಯಾದಾಗಿನಿಂದ, 92 ದಾಳಿಗಳು ಹಾಗೂ ಸುಮಾರು 500 ಪರಿಶೀಲನೆಗಳನ್ನು ನಡೆಸಲಾಗಿದ್ದು, ರೂ. 7-8 ಲಕ್ಷ ಮೌಲ್ಯದ ಸುಮಾರು 3,000 ಕೆಜಿ ಹಲಾಲ್ ಪ್ರಮಾಣೀಕೃತ ಉತ್ಪನ್ನಗಳನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನುಳಿದ 81 ಆಹಾರ ಮಾದರಿಗಳನ್ನು ಪರೀಕ್ಷೆಗಾಗಿ ತೆಗೆದುಕೊಂಡು ಹೋಗಲಾಗಿದೆ ಎಂದು ತಿಳಿಸಿದ್ದಾರೆ.

”I-CAS ಅಡಿಯಲ್ಲಿ ಪ್ರಮಾಣೀಕರಣ ಸಂಸ್ಥೆಗಳಿಗೆ (NABCB) ರಾಷ್ಟ್ರೀಯ ಮಾನ್ಯತೆ ಮಂಡಳಿಯಲ್ಲಿ ನೋಂದಾಯಿಸಲಾಗಿದೆ, ಇವುಗಳು ಮಾಂಸ ಮತ್ತು ಮಾಂಸ ಉತ್ಪನ್ನಗಳಿಗೆ ಹಲಾಲ್ ಪ್ರಮಾಣೀಕರಣವನ್ನು ನೀಡುತ್ತವೆ. ಇದರ ಜೊತೆಗೆ, ಭಾರತದಾದ್ಯಂತ 700-800 ಸಂಸ್ಥೆಗಳು ಹಲಾಲ್ ಪ್ರಮಾಣೀಕರಣವನ್ನು ನೀಡುತ್ತಿವೆ. ಈ ಕಂಪನಿಗಳು NABCB ಯಲ್ಲಿ ನೋಂದಾಯಿಸುವವರೆಗೆ ನಾವು ಅಂತಹ ಎಲ್ಲಾ ಉತ್ಪನ್ನಗಳನ್ನು ನಿಷೇಧಿಸಿದ್ದೇವೆ” ಎಂದು ಸಿಂಗ್ ಹೇಳಿದರು.

ರಿಟೇಲರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಮತ್ತು ಸ್ಪೆನ್ಸರ್‌ನಂತಹ ಸರಪಳಿಗಳು ತಮ್ಮ ಶಾಪ್‌ಗಳಿಂದ ಹಲಾಲ್-ಪ್ರಮಾಣೀಕೃತ ಉತ್ಪನ್ನಗಳನ್ನು ತೆಗೆದುಹಾಕಲು ಒಂದು ತಿಂಗಳ ಸಮಯವನ್ನು ಕೋರಿದವು ಆದರೆ 15 ದಿನಗಳನ್ನು ನೀಡಲಾಗಿದೆ ಎಂದು ಅವರು ಹೇಳಿದರು.

ಆಹಾರ ಸುರಕ್ಷತಾ ಇಲಾಖೆಯು ಇಲ್ಲಿಯವರೆಗೆ ಹಲವಾರು ಹಲಾಲ್ ಪ್ರಮಾಣೀಕೃತ ಆಹಾರ ಪದಾರ್ಥಗಳನ್ನು ವಶಪಡಿಸಿಕೊಂಡಿದೆ, ಇದರಲ್ಲಿ ಸಕ್ಕರೆ, ಎಣ್ಣೆ, ಬೇಕರಿ ವಸ್ತುಗಳು, ಸಾಸ್, ಅಕ್ಕಿ ಇತ್ಯಾದಿ ಉತ್ಪನ್ನಗಳು ಸೇರಿವೆ. ಈ ಉತ್ಪನ್ನಗಳನ್ನು ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದಂತಹ ರಾಜ್ಯಗಳಲ್ಲಿ ಉತ್ಪಾದಿಸಲಾಗಿದೆ. ಮುಂದಿನ ಎರಡು ವಾರಗಳವರೆಗೆ, ಚಿಲ್ಲರೆ ವ್ಯಾಪಾರಿಗಳು ಮತ್ತು ಇತರ ಮಾರಾಟಗಾರರು ಹಲಾಲ್-ಪ್ರಮಾಣೀಕೃತ ಉತ್ಪನ್ನಗಳನ್ನು ಮರುಪಡೆಯುವವರೆಗೆ, ಇಲಾಖೆಯು ಹೊಸ ಆದೇಶವನ್ನು ಅನುಸರಿಸುವುದನ್ನು ಖಚಿತಪಡಿಸಿಕೊಳ್ಳಲು ತಪಾಸಣೆ ನಡೆಸುವುದನ್ನು ಮುಂದುವರಿಸುತ್ತದೆ ಆದರೆ ಯಾವುದೇ ದಂಡ ವಿಧಿಸುವುದಿಲ್ಲ” ಎಂದು ಸಿಂಗ್ ಹೇಳಿದರು.

ಇದನ್ನೂ ಓದಿ: ಗುಜರಾತ್: ಬುಡಕಟ್ಟು ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...