Homeಮುಖಪುಟಮಿಜೋರಾಂನಲ್ಲಿ ಮತ ಎಣಿಕೆ ಮುಂದೂಡಿಕೆಗೆ ಕ್ರಿಶ್ಚಿಯನ್‌ ಸಮುದಾಯ ಆಗ್ರಹ

ಮಿಜೋರಾಂನಲ್ಲಿ ಮತ ಎಣಿಕೆ ಮುಂದೂಡಿಕೆಗೆ ಕ್ರಿಶ್ಚಿಯನ್‌ ಸಮುದಾಯ ಆಗ್ರಹ

- Advertisement -
- Advertisement -

ಕ್ರೈಸ್ತರು ಬಹುಸಂಖ್ಯಾತರಾಗಿರುವ ಮಿಜೋರಾಂನಲ್ಲಿ ಮತ ಎಣಿಕೆಯನ್ನು ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ಕ್ರಿಶ್ಚಿಯನ್‌ ಸಮುದಾಯದ ಜನರು ಬೇಡಿಕೆಯನ್ನು ಮುಂದಿಟ್ಟಿದ್ದಾರೆ.

ಡಿಸೆಂಬರ್ 3ರ ಭಾನುವಾರ ಕ್ರಿಶ್ಚಿಯನ್ನರ ಆರಾಧನೆಯ ದಿನ. ಚುನಾವಣಾ ದಿನಾಂಕಗಳನ್ನು ಆಯ್ಕೆಮಾಡುವಾಗ ಭಾರತೀಯ ಚುನಾವಣಾ ಆಯೋಗವು (ಇಸಿಐ) ಸಾಮಾನ್ಯವಾಗಿ ವಿಶೇಷ ದಿನಗಳನ್ನು ಪರಿಗಣನೆಗೆ ತೆಗೆದುಕೊಳ್ಳುತ್ತದೆಯಾದರೂ ಚುನಾವಣಾ ಆಯೋಗ ಮಿಜೋರಾಂ ವಿಚಾರದಲ್ಲಿ ಎಡವಿದೆ ಎಂದು ಕ್ರಿಶ್ಚಿಯನ್ ಸಮುದಾಯ ಹೇಳಿಕೊಂಡಿದೆ.

ಮಿಜೋರಾಂನಲ್ಲಿ ಮತ ಎಣಿಕೆ ದಿನವನ್ನು ಒಂದು ಅಥವಾ ಎರಡು ದಿನ ಮುಂದೂಡುವಂತೆ ಹಲವಾರು ನಾಗರಿಕ ಸಮಾಜ ಗುಂಪುಗಳು, ರಾಜಕೀಯ ಪಕ್ಷಗಳು ಮತ್ತು ಚರ್ಚ್‌ಗಳ ಮನವಿಯನ್ನು ಸ್ವೀಕರಿಸಲಾಗಿಲ್ಲ. ರಾಜಸ್ಥಾನದಲ್ಲಿ ನ.23ರಂದು ವಿಧಾನಸಭೆ ಚುನಾವಣೆಗೆ ದಿನ ನಿಗದಿ ಮಾಡಲಾಗಿತ್ತು. ಆದರೆ ಹೆಚ್ಚಿನ ಪ್ರಮಾಣದಲ್ಲಿ ವಿವಾಹ ಕಾರ್ಯಕ್ರಮಗಳು ನಿಗದಿಯಾಗಿದ್ದ ಕಾರಣ ಚುನಾವಣೆಯನ್ನು ಈ ಮೊದಲು ನ.25ಕ್ಕೆ ಮುಂದೂಡಿತ್ತು.

ರಾಜ್ಯದ 15 ಪ್ರಮುಖ ಚರ್ಚ್‌ಗಳ ಒಕ್ಕೂಟವಾದ ಮಿಜೋರಾಂ ಕೊಹ್ರಾನ್ ಹ್ರೂಯಿಟ್ಯೂಟ್ ಕಮಿಟಿ (MKHC), ಈ ಹಿಂದಿನ ಶನಿವಾರ ಎಲ್ಲಾ ಚರ್ಚ್‌ಗಳಲ್ಲಿ ಮತ ಎಣಿಕೆ ದಿನಾಂಕದ ಬದಲಾವಣೆಗೆ ದೇವರಲ್ಲಿ ಪ್ರಾರ್ಥನೆ ನಡೆಸಿದ್ದಾರೆ. ರಾಜ್ಯದ ಅತಿದೊಡ್ಡ ಪಂಗಡವಾದ ಮಿಜೋರಾಂ ಪ್ರೆಸ್ಬಿಟೇರಿಯನ್ ಚರ್ಚ್ ಕೂಡ ಪ್ರತ್ಯೇಕವಾಗಿ ಚುನಾವಣಾ ಆಯೋಗ ಮತ ಎಣಿಕೆಯ ದಿನಾಂಕವನ್ನು ಬದಲಿಸಲಿ ಎಂದು ದೇವರ ಮೊರೆ ಹೋಗಿದ್ದಾರೆ.

ಎನ್‌ಜಿಒ ಸಮನ್ವಯ ಸಮಿತಿಯ (ಎನ್‌ಜಿಒಸಿಸಿ) ಐದು ಸದಸ್ಯರ ನಿಯೋಗವು ಮುಖ್ಯ ಚುನಾವಣಾ ಆಯುಕ್ತರೊಂದಿಗೆ (ಸಿಇಸಿ) ಅಪಾಯಿಂಟ್‌ಮೆಂಟ್ ಪಡೆಯಲು ಕಳೆದ ವಾರದಿಂದ ನವದೆಹಲಿಯಲ್ಲಿ ತಂಗಿದ್ದಾರೆ. ಸಿಇಸಿ ಕಚೇರಿಯು ನ.28 ರಂದು ನಿಯೋಗಕ್ಕೆ ಸಮಯ ನೀಡಿದೆ ಎಂದು ಸುದ್ದಿ ವರದಿಗಳು ತಿಳಿಸಿವೆ.

ನಿಗದಿಯಂತೆ ಡಿ.3ರಂದು ಮತ ಎಣಿಕೆ ನಡೆಸಲು ರಾಜ್ಯ ಚುನಾವಣಾ ಆಯೋಗ ಎಲ್ಲಾ ವ್ಯವಸ್ಥೆಗಳನ್ನು ಮಾಡಿದೆ. ಬೆಳಗ್ಗೆ 8 ಗಂಟೆಗೆ ಆರಂಭವಾಗಲಿರುವ ಮತ ಎಣಿಕೆ ಕಾರ್ಯದಲ್ಲಿ 4,000ಕ್ಕೂ ಹೆಚ್ಚು ಎಣಿಕೆ ಸಿಬ್ಬಂದಿ ಭಾಗಿಯಾಗಲಿದ್ದಾರೆ ಎಂದು ಹೆಚ್ಚುವರಿ ಮುಖ್ಯ ಚುನಾವಣಾ ಅಧಿಕಾರಿ ಎಚ್. ಲಿಯಾಂಜೆಲಾ ಅವರನ್ನು ಉಲ್ಲೇಖಿಸಿ ಮಿಜೋರಾಂ ಪೋಸ್ಟ್ ವರದಿ ತಿಳಿಸಿದೆ. ಮತ ಎಣಿಕೆಗೆ ಒಟ್ಟು 13 ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ನ.29ರಂದು ಮತ ಎಣಿಕೆಗೆ ಮಾಡಿಕೊಂಡ ಸಿದ್ದತೆ ಕುರಿತು ಪರಿಶೀಲನೆ ಕೈಗೊಳ್ಳಲಾಗುವುದು ಎಂದು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ ಮಧುಪ್ ವ್ಯಾಸ್ ಹೇಳಿದ್ದಾರೆ.

ಇದನ್ನು ಓದಿ: ಕೊಚ್ಚಿ; ವಿವಿ ಕ್ಯಾಂಪಸ್‌ನಲ್ಲಿ ಕಾಲ್ತುಳಿತ ಸಂಭವಿಸಿದ್ದೇಗೆ? ಪ್ರತ್ಯಕ್ಷದರ್ಶಿಗಳಿಂದ ದುರಂತದ ವಿವರಣೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...