Homeಅಂಕಣಗಳುವಿಕ್ರಮ ಉಡುಪಿ ಕಡೆಗೆ ಜಾರಿದನಂತಲ್ಲಾ

ವಿಕ್ರಮ ಉಡುಪಿ ಕಡೆಗೆ ಜಾರಿದನಂತಲ್ಲಾ

- Advertisement -
- Advertisement -

| ಥೂತ್ತೇರಿ ಯಾಹೂ |

“ವಿಕ್ರಮ ಚಂದ್ರನ ಮೇಲೆ ಕಾಲೂರಿದ ಆ ಕ್ಷಣಕ್ಕೆ ಜಗತ್ತು ಸಾಕ್ಷಿಯಾಯ್ತು” ಪ್ರಜಾವಾಣಿಯಲ್ಲಿ ಈ ತಲೆಬರಹ ಓದಿದ ಜನಕ್ಕೆ ದಿಗ್ಭ್ರಮೆಯಾಯ್ತಂತಲ್ಲಾ. ರಾತ್ರಿಯೆಲ್ಲಾ ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಚಂದ್ರನ ಮೇಲೆ ವಿಕ್ರಮ ಇಳಿಯುವ ದೃಶ್ಯಕ್ಕಾಗಿ ಕಾದಿದ್ದ ಜನರು, ಅದು ಉಡುಪಿ ಕಡೆ ವಾಲುತ್ತ ಕಣ್ಮರೆಯಾದ ದೃಶ್ಯದಿಂದ ದುಗುಡಗೊಂಡ ಜನ ನಿರಾಶೆಯಿಂದ ನಿದ್ರೆಗೆ ಜಾರಿದರೆ, ಈ ಪ್ರಜಾವಾಣಿಯವರಿಗೆ ಏನಾಯ್ತು ಎಂದು ಪ್ರಜೆಗಳು ಶಾನೆ ಶಾಕ್‍ಗೆ ಒಳಗಾದರಂತಲ್ಲಾ. ಬಹುಶಃ ಹೀಗಾಗಿರಬೇಕು, ಇಸ್ರೋ ಅಧ್ಯಕ್ಷ ಕೆ. ಶಿವನ್ ಅಸಾಮಾನ್ಯ ವಿಜ್ಞಾನಿಗಳನ್ನು ಒಟ್ಟುಗೂಡಿಸಿ ಬಹುನಿಷ್ಠೆಯಿಂದ ವಿಕ್ರಮನನ್ನು ತಯಾರಿಸಿದ್ದಾರೆ. ಆದರೂ ಒಂದು ಸಣ್ಣ ಅಳುಕಿಗೆ ತುತ್ತಾಗಿ ಉಡುಪಿ ಮಠದ ಮಾಧ್ವ ಜಗತ್ತಿನ ಗುರುವರ್ಯರ ಆಶೀರ್ವಾದ ಪಡೆದರೆ ಹೇಗೆ ಅನ್ನಿಸಿದೆ. ಇದಕ್ಕೆ ಅವರ ಟೀಮು ಶಿರಸಾವಹಿಸಿ ಒಪ್ಪಿದೆ. ಅದರಂತೆ ಉಡುಪಿ ದಾರಿ ಹಿಡಿದ ವಿಜ್ಞಾನಿಗಳು ಅಷ್ಟಮಠದ ಅಧಿಪತಿಯ ಆಶೀರ್ವಾದ ಪಡೆದು ಕೈ ಸಡಿಲಬಿಟ್ಟು ಭೋಜನ ಭಾರಿಸಿ ವಾಪಸಾದದು, ಮುಂದೆ ಪ್ರಧಾನಿ ಬರಲು ಒಪ್ಪಿದ್ದು, ಇದೆಲ್ಲಾ ಆದ ಮೇಲೆ ವಿಕ್ರಮ ಚಂದ್ರನ ಮೇಲಿಳಿಯದೆ ಇನ್ನೆಲ್ಲಿ ಇಳಿಯಲು ಸಾಧ್ಯ ಎಂದು ಪ್ರಜಾವಾಣಿ ಶಿಖಾಮಣಿಗಳು ಭಾವಿಸಿದ್ದೇ ಅನಾಹುತಕ್ಕೆ ಕಾರಣವಂತಲ್ಲಾ ಥೂತ್ತೇರಿ.

ವಿಕ್ರಮ ಸೌರವ್ಯೂಹ ಭೇದಿಸಿ ಚಂದ್ರನ ಸುತ್ತ ಗಿರಕಿ ಹೊಡೆದಿರಬೇಕು. ಆದ್ದರಿಂದ ಮುಂದಿನ ಕೆಲವೇ ಕ್ಷಣಗಳಲ್ಲಿ ಚಂದ್ರನ ಮೇಲೆ ವಿಕ್ರಮ ಕಾಲೂರಿ ನಿಲ್ಲುವುದು ಮೋದಿ ಮಹಾತ್ಮನಾಣೆ ನಿಜ ಎಂದುಕೊಂಡ ಸಿಬ್ಬಂದಿ ಆ ಕ್ಷಣಕ್ಕೆ ಜಗತ್ತು ಸಾಕ್ಷಿಯಾಯ್ತು ಎಂದು ತಲೆಬರಹಗಳನ್ನು ಕೊಟ್ಟು ಅವನ್ನ ಮಾತ್ರ ಪುನಃ ಪುನಃ ಓದಿಕೊಂಡು ಹೊರಟವಂತಲ್ಲಾ. ಆದರೇನು ವಿಕ್ರಮ ಚಂದ್ರನ ಮೇಲೆ ಕಾಲೂರುವುದು ಬಿಟ್ಟು ಅಷ್ಟಮಠಗಳ ದಿಕ್ಕಿಗೆ ಜಾರಿ ಕಣ್ಮರೆಯಾದಾಗ ವಿಕ್ರಮನ ವಿಜ್ಞಾನಿಗಳ ಕಣ್ಣಂಚಿನಲ್ಲಿ ನೀರಾಡಿತು. ಆಗ ಮಾರಣಹೋಮ ದುರಂತವನ್ನೂ ನಾಯಿಮರಿ ಸಾವಿನಂತೆ ಭಾವಿಸುವ ಮೋದಿಯವರು ಕ್ಯಾಮೆರಾಗಳ ಮುಂದೆ ಶಿವನ್ ಭುಜ ಸವರಿ ಸವರಿ ಕಾವೇರುವಂತೆ ಮಾಡಿ ಸಾಂತ್ವಾನಗೊಳಿಸಿದರಂತಲ್ಲಾ, ಥೂತ್ತೇರಿ.

ವಿಕ್ರಮ ಆ ಕ್ಷಣಕ್ಕೆ ಯಶಸ್ವಿಯಾಗಿ ಚಂದ್ರನ ಮೇಲಿಳಿದಿದ್ದರೆ ಏನಾಗುತ್ತಿತ್ತು ಎಂದರೆ, ಮಾತಿನ ಮಲ್ಲನ ವರಸೆ ಬದಲಾಗುತ್ತಿತ್ತು. ಆರ್ಥಿಕವಾಗಿ ದಿವಾಳಿ ಏಳುತ್ತಿರುವ ಭಾರತವನ್ನು ವಿಕ್ರಮನ ಸಾಧನೆಯಿಂದ ತುಂಬಿಕೊಳ್ಳುತ್ತಿದ್ದರು. ಅತ್ತ ವಿಜ್ಞಾನಿಗಳ ದಂಡು ಉಡುಪಿ ಕಡೆಗೆ ಬಂದು ಒಂದು ಪುಟಾಣಿ ಚಿನ್ನದ ವಿಕ್ರಮನನ್ನು ಪೇಜಾವರನ ಪದತಳದಲ್ಲಿಟ್ಟು ಎಲ್ಲ ತಮ್ಮ ಕೃಪೆ ಎನ್ನುತ್ತಿದ್ದರು. ಆಗ ಪೇಜಾವರನ ದಿಕ್ಕಿನಿಂದ ರೇಡಿಯೋ ಶಬ್ದದ ದನಿಯೊಂದು ಹೊರಬಿದ್ದು “ಎಲ್ಲ ಕೃಷ್ಣನ ಮಹಿಮೆ, ಗೋವರ್ಧನ ಗಿರಿಎತ್ತಿ ನಿಲ್ಲಿಸಿದ ಆತನ ಸಂಕಲ್ಪ ಶಕ್ತಿಯೇ ವಿಕ್ರಮನಲ್ಲಿ ಸೇರಿಕೊಂಡು ಚಂದ್ರನ ಮೇಲೆ ನೆಲೆಗೊಳ್ಳುವಂತೆ ಮಾಡಿತು. ವಿಜ್ಞಾನ ಮತ್ತು ಆಧ್ಯಾತ್ಮ ಜೊತೆಜೊತೆಯಾಗೇ ಹೋಗಬೇಕು. ಯಾವತ್ತೂ ಅವು ಒಂದನ್ನೊಂದು ಅಗಲುವಂತೆ ಮಾಡಬಾರದು” ಎಂದು ಬುದ್ದಿಜೀವಿಗಳ ಬಗ್ಗೆ ಕಟಕಿಯಾಡುತ್ತಿದ್ದರು. ಅದೆಲ್ಲಾ ಇರಲಿ ಕರ್ನಾಟಕದ ಸಂತ್ರಸ್ತರ ವಿಷಯದಲ್ಲಿ ಮೋದಿ ಬರುತ್ತಾರೆಂದು ತಮಟೆಯ ಜೊತೆಗೇ ಕೂಗಾಡಿದ್ದ ಬಿಜೆಪಿಗಳು ಮೋದಿ ಮಾಡಿದ ಕೆಲಸದಿಂದ ತಲೆ ತಗ್ಗಿಸಿಕೊಂಡು ಓಡಾಡುತ್ತಿವೆಯಂತಲ್ಲಾ, ಥೂತ್ತೇರಿ.

ಚಂದ್ರನ ಮೇಲೆ ಮುಖ ಮುಂದಾಗಿಯೇ ಬಿದ್ದು, ಓರೆಯಾಗಿ ನಿಂತಿರುವ ವಿಕ್ರಮ ಗೊರಗೊರ ಸದ್ದಿನೊಂದಿಗೆ ತಾನಿಲ್ಲಿರುವುದಾಗಿ ಕಳಿಸಿದವರಿಗೆ ಮಾಹಿತಿಕೊಟ್ಟ ಕೂಡಲೇ ಅದರ ಯೋಗಕ್ಷೇಮದ ವಿಚಾರಣೆಗೆ ಪರಿಶೀಲನಾ ಸಮಿತಿಯೊಂದು ನಿರ್ಮಾಣವಾಗುತ್ತಿರುವಾಗಲೇ, ಇತ್ತ ಕರ್ನಾಟಕದ ಪ್ರವಾಹ ಪೀಡಿತ ಸಂತ್ರಸ್ತರ ಶೆಡ್ಡುಗಳಲ್ಲಿನ ಜನರ ಕಣ್ಣುಗಳು ಮರಣದ ದಿಕ್ಕನ್ನ ದಿಟ್ಟಿಸುತ್ತಿವೆಯಂತಲ್ಲಾ. ಇವರ ಗೋಳು ಕೇಳಲು ನೋಡಲು ಇಷ್ಟಪಡದ ಬಿಜೆಪಿಗಳು ಅತ್ತ ತಲೆ ಹಾಕುವುದನ್ನೇ ಮರೆತು ಹೊಸದಾಗಿ ರಚನೆಗೊಂಡ ಸಂಘಟಿತ ಮಂತ್ರಿಗಳು ತಮಗೆ ಸೂಕ್ತವಾದ ಹೊಸ ಬಂಗಲೆಯೇ ಬೇಕು ಎಂದು ಹಟದಲ್ಲಿ ಹುಡುಕುತ್ತಿವೆಯಂತಲ್ಲಾ. ಜೊತೆಗೆ ಉಸ್ತುವಾರಿಗೆ ಸಿಗುವ ಜಿಲ್ಲೆಗಳ ಬಗ್ಗೆಯೂ ತಲೆಕೆಡಿಸಿಕೊಂಡಿವೆಯಂತಲ್ಲಾ. ಇಂತಹ ಸಮಯದಲ್ಲಿ ಅತ್ತ ಮೋದಿ ಮಹಾತ್ಮನೂ ಸಂತ್ರಸ್ತರ ವಿಷಯದಲ್ಲಿ ಮಾತನಾಡಲಿಲ್ಲ. ಕೇಂದ್ರದಿಂದ ಕಾಸೂ ಬರಲಿಲ್ಲ. ಸಂತ್ರಸ್ತರ ಶೆಡ್ಡಿನಿಂದ ಸಾವು ನೋವಿನ ಆಕ್ರಂದನ ಕೇಳುತ್ತಿದೆ. ಜೊತೆಗೆ ಸರಕಾರ ರಚನೆಯಾಗುವಂತೆ ಮಾಡಿದ ಹದಿನೇಳು ಜನ ಶಾಸಕರ ಗೋಳು ನೋಡಲಾಗುತ್ತಿಲ್ಲ. ಇಂತಹ ದುಃಖ ತುಂಬಿಕೊಂಡ ಎಡೂರಪ್ಪನನ್ನ ನೋಡಿದರೆ ಸದಾ ಆಸ್ಪತ್ರೆಕಡೆಗೆ ನಡೆಯುತ್ತಿರುವ ಶ್ರೀಮಂತ ರೋಗಿಯಂತೆ ಕಾಣುತ್ತಾರಂತಲ್ಲಾ ಥೂತ್ತೇರಿ.

ಕಬೀರ್ ಎಂಬ ಪಂಜುರ್ಲಿಯನ್ನ ಕರ್ನಾಟಕದ ಭಾರತೀಯ ಜನತಾಪಾರ್ಟಿ ಅಧ್ಯಕ್ಷನನ್ನಾಗಿ ಮಾಡಿದಾಗಲೇ ಇದರಿಂದ ಆಗುವ ಅನಾಹುತವನ್ನ ಜನ ಊಹಿಸಿದ್ದರು. ಅದರಂತೆ ಇದರ ಬಾಯಲ್ಲಿ ಬರುತ್ತಿರುವ ಮಾತುಗಳು ಬಿಜೆಪಿ ಎಂಬ ಪಾರ್ಟಿಯ ಅಧ್ಯಕ್ಷನ ಬಾಯಿಂದ ಹೊರಡುವ ತಕ್ಕ ಮಾತುಗಳಂತಿವೆಯಂತಲ್ಲಾ. ತಮ್ಮ ಸ್ಥಾನಕ್ಕೆ ರಾಜಿನಾಮೆಯಿತ್ತ ಸೆಂಥಿಲ್ ಎಂಬ ದಕ್ಷ ಅಧಿಕಾರಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ” ಎಂದು ರಾಜೀನಾಮೆ ಕೊಟ್ಟರೆ, ಹಾಗಾದರೆ ನೀನು ಪಾಕಿಸ್ತಾನಕ್ಕೆ ಹೋಗು ಎನ್ನುವ ಬಿಜೆಪಿಗಳ ತಲೆಯಲ್ಲಿ ಏನಿದೆ ಎಂಬುದು ಎಲ್ಲರಿಗೂ ಮನವರಿಕೆಯಾಗುತ್ತಿದೆಯಲ್ಲಾ. ಅದೇನದರಾಗಲಿ ಸುಸಂಸ್ಕøತರ ನಾಡಾದ ಕರ್ನಾಟಕದಲ್ಲಿ ದಕ್ಷ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸದಂತಾಗಿದೆ. ಈ ಹಿಂದೆ ಮುದುಕರ ಶೆಟ್ಟರು ನೋವು ನುಂಗಿಕೊಂಡೇ ನಿಧನರಾದರು. ಅಣ್ಣಾಮಲೈ ಯಾರನ್ನ ದೂರದೆ ಹೊರಟುಹೋದರು. ಈಗ ಸಂಧಿಲ್ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂಬ ಕಾರಣ ನೀಡಿ ಹೊರಟು ಹೋಗುತ್ತಿದ್ದಾರೆ. ಇದು ದಕ್ಷಿಣ ಕನ್ನಡ ಏನಾಗಿರಬಹುದು ಎಂಬ ಸೂಚನೆಯಂತಿದೆ. ಕರ್ನಾಟಕದ ಜನ ಈ ನಾಡು ದ.ಕ ಆಗದಂತೆ ನೋಡಿಕೊಳ್ಳುವ ತುರ್ತು ಈಗ ಬಂದಿದೆಯಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...