Homeಕರ್ನಾಟಕಮಹಾಧರಣಿ: ಜನದ್ರೋಹಿ ಕೇಂದ್ರ ಸರ್ಕಾರ, ಜಗಮೊಂಡ ರಾಜ್ಯ ಸರ್ಕಾರ: ನೂರ್ ಶ್ರೀಧರ್

ಮಹಾಧರಣಿ: ಜನದ್ರೋಹಿ ಕೇಂದ್ರ ಸರ್ಕಾರ, ಜಗಮೊಂಡ ರಾಜ್ಯ ಸರ್ಕಾರ: ನೂರ್ ಶ್ರೀಧರ್

- Advertisement -
- Advertisement -

ಜನದ್ರೋಹಿ ಕೇಂದ್ರ ಸರ್ಕಾರ, ಜಗಮೊಂಡ ರಾಜ್ಯ ಸರ್ಕಾರಗಳಿವೆ. ಕೇಂದ್ರ ಸರ್ಕಾರ ಜನ ವಿರೋಧಿ ನೀತಿಗಳ ಮೂಲಕ ಜನರನ್ನು ಶೋಷಿಸುತ್ತಿದೆ. ಬಿಜೆಪಿಯನ್ನು ಮಣಿಸಿ ಜನರು ಅಧಿಕಾರಕ್ಕೆ ತಂದ ರಾಜ್ಯ ಸರ್ಕಾರ ಜನರ ಮಾತಿಗೆ ಕಿವಿಗೊಡದೆ ಮೊಂಡುತನ ಮೆರೆಯುತ್ತಿದೆ ಎಂದು ಕರ್ನಾಟಕ ಜನಶಕ್ತಿಯ ರಾಜ್ಯಾಧ್ಯಕ್ಷ ನೂರ್ ಶ್ರೀಧರ್ ಹೇಳಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ‘ದುಡಿಯುವ ಜನರ ಮಹಾಧರಣಿ’ಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಭ್ರಷ್ಟಾಚಾರ ಮಾಡುತ್ತಿದೆ ಎಂದು ಮೋದಿಗೆ ಅಧಿಕಾರ ಕೊಟ್ಟೆವು. ಮೋದಿ ಸರ್ಕಾರ ಅಧಿಕಾರಕ್ಕೆ ಬಂದರೆ ಯುವಜನರಿಗೆ ಉದ್ಯೋಗ ಸಿಗುತ್ತದೆ, ಕೃಷಿಗೆ ಬೆಂಬಲ ಬೆಲೆ ಸಿಗುತ್ತದೆ ಎಂದು ಜನರಿಗೆ ಉತ್ತಮ ಜೀನನ ಸಿಗುತ್ತದೆ ಎಂದು ನಾವು ಅವರಿಗೆ ಮತ ಹಾಕಿದೆವು. ಅದರೆ, ಆಗಿದ್ದೇನು? ಜನರು ಮತ್ತಷ್ಟು ಬಡವರಾದರು. ಅಂಬಾನಿ-ಅದಾನಿಗಳು ಮತ್ತಷ್ಟು ಶ್ರೀಮಂತರಾದರು. ಕೊರೊನಾ ಸಂದರ್ಭದಲ್ಲೂ ಜನರನ್ನು ಶೋಷಿಸಲಾಯಿತು” ಎಂದು ತಿಳಿಸಿದರು.

ಕೊರೊನಾ ಸಂದರ್ಭದಲ್ಲೂ ಜಗ್ಗದೆ ಹೋರಾಟ ಮಾಡಿದವರು ರೈತರು. ಅವರ ಹೋರಾಟಕ್ಕೆ ಮೋದಿ ಸರ್ಕಾರ ಮಣಿಯಿತು. ರೈತ ವಿರೋಧಿ ಕೃಷಿ ನೀತಿಗಳನ್ನು ಹಿಂಪಡೆಯಿತು. ಆದರೆ, ಕಾರ್ಮಿಕರು ಅಂತದ್ದೊಂದು ಹೋರಾಟ ಮಾಡಲು ಸಾಧ್ಯವಿಲ್ಲ. ಅದರೂ, ಸರ್ಕಾರಕ್ಕೆ ತಕ್ಕ ಪಾಠ ಕಲಿಸಬಹುದು. ಹಾಗಾಗಿ, ರಾಜ್ಯದಲ್ಲಿ ಬಿಜೆಪಿಯನ್ನು ಸೋಲಿಸಿದೆವು. ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದಿತು. ಆದರೆ, ಈ ಸರ್ಕಾರ ಏನು ಮಾಡುತ್ತಿದೆ? ರೈತರು, ಕಾರ್ಮಿಕರು, ದಲಿತರ ಜೊತೆ ಒಂದೇ ಒಂದು ಸಭೆಯನ್ನೂ ಮಾಡಲಿಲ್ಲ. ಯಾರ ಸಮಸ್ಯೆಗಳನ್ನೂ ಕೇಳಲಿಲ್ಲ. ಈ ಆಳುವವರಿಗೆ ಸರಿಯಾದ ಪಾಠ ಕಲಿಸಬೇಕಿದೆ. ನಾವು ಕೇಂದ್ರ ಸರ್ಕಾರದ ವಿರುದ್ಧ ಏನು ಮಾಡಬೇಕು. ರಾಜ್ಯ ಸರ್ಕಾರಕ್ಕೆ ಪಾಠ ಕಲಿಸಲು ಏನು ಮಾಡಬೇಕು ಎಂಬ ಬಗ್ಗೆ ನಿರ್ಧಾರ ಮಾಡಬೇಕಿದೆ” ಎಂದು ಹೇಳಿದರು.

ನಾವು ಯಾಕೆ ಇಲ್ಲಿ ಹೋರಾಟ ಮಾಡ್ತಿದ್ದೀವಿ? ರಾಜ್ಯದ ಮೂಲೆ ಮೂಲೆಯಿಂದ ಕೆಲಸ, ಕಾರ್ಯ ಬಿಟ್ಟು ಬೆಂಗಳೂರಿಗೆ ಬಂದು ಯಾಕೆ ಕೂತಿದ್ದೀವಿ? ಬಗರ್‌ಹುಕುಂ ಭೂಮಿಗಾಗಿ, ನಿವೇಶನಕ್ಕಾಗಿ, ವಸತಿಗಾಗಿ, ವೇತನ ಹೆಚ್ಚಳಕ್ಕಾಗಿ, ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆಯಾಗಿ, ಮಹಿಳೆಯರ ರಕ್ಷಣೆಗಾಗಿ ಸೇರಿದಂತೆ ನಾನಾ ರೀತಿಯ ಸಮಸ್ಯೆಗಳನ್ನ ಹೊತ್ತು ಇಲ್ಲಿಗೆ ಬಂದಿದ್ದೇವೆ. ಈ ಸಮಸ್ಯೆಗಳು ಹೇಗೆ ಬಗೆಹರಿಯುತ್ತವೆ ಎಂದು ಪ್ರಶ್ನಿಸಿದರು.

ಸಂಘಟನೆಗಳು ಕರೆದಿವೆ, ಬಂದಿದ್ದೇವೆ, ಮುಗಿಸಿಕೊಂಡು ಹೋಗುತ್ತೇವೆ ಎಂದು ಹೋರಾಟಕ್ಕೆ ಬಂದಿದ್ದೇವೆ ಎನ್ನಬಾರದು. ನಮ್ಮ ಹಕ್ಕುಗಳನ್ನು ಪಡೆದೇ ಹೋಗಬೇಕು. ನಮ್ಮೆಲ್ಲೆ ಸಮಸ್ಯೆಗಳಿಗೂ ಮೂಲ ಕಾರಣ ನಮ್ಮನ್ನಾಳುತ್ತಿರುವ ಸರ್ಕಾರಗಳು. ಬಲಾಢ್ಯರು ಜನರನ್ನು ದೋಚುತ್ತಿದ್ದಾರೆ. ಅವರಿಗೆ ಸರ್ಕಾರಗಳು ದಳ್ಳಾಳಿಗಳಂತೆ ಕೆಲಸ ಮಾಡುತ್ತಿವೆ. ಸರ್ಕಾರಗಳು ಬಲಾಢ್ಯರನ್ನು ನಿಯಂತ್ರಿಸಿ ಜನರನ್ನು ರಕ್ಷಿಸಬೇಕು. ಆದರೆ, ಆ ಕೆಲಸವನ್ನು ಯಾವ ಸರ್ಕಾರಗಳೂ ಮಾಡುತ್ತಿಲ್ಲ. ಬದಲಾಗಿ, ಬಲಾಢ್ಯರಿಂದ ಹಣ ಪಡೆದು, ಜನರನ್ನು ಶೋಷಿಸುತ್ತಿವೆ” ಎಂದರು.

ಇದನ್ನೂ ಓದಿ : ಮಹಾಧರಣಿ | ಮೋದಿ ಸರ್ಕಾರದಲ್ಲಿ ಮಹಿಳೆಯರು ಹೆಚ್ಚು ಸಂಕಷ್ಟಕ್ಕೆ ಸಿಲುಕಿದ್ದಾರೆ: ಮೀನಾಕ್ಷಿ ಬಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...