Homeಮುಖಪುಟಗಾಝಾ ಕರಾವಳಿ ಪಟ್ಟಿಗೆ ನೆತನ್ಯಾಹು ಭೇಟಿ: ಇಸ್ರೇಲ್‌ ನಿಯಂತ್ರಣದಲ್ಲಿ ಹಮಾಸ್‌ ಆಳ್ವಿಕೆಯ ಭೂ ಪ್ರದೇಶ

ಗಾಝಾ ಕರಾವಳಿ ಪಟ್ಟಿಗೆ ನೆತನ್ಯಾಹು ಭೇಟಿ: ಇಸ್ರೇಲ್‌ ನಿಯಂತ್ರಣದಲ್ಲಿ ಹಮಾಸ್‌ ಆಳ್ವಿಕೆಯ ಭೂ ಪ್ರದೇಶ

- Advertisement -
- Advertisement -

ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಮ್ಮ ಹಿರಿಯ ಸಹೋದ್ಯೋಗಿಗಳೊಂದಿಗೆ ಹಮಾಸ್ ಆಳ್ವಿಕೆಯಲ್ಲಿರುವ ಗಾಝಾದ ಕರಾವಳಿ ಪಟ್ಟಿಗೆ ತೆರಳಿ ಇಸ್ರೇಲ್‌ ಸೈನಿಕರನ್ನು ಭೇಟಿ ಮಾಡಿದ್ದಾರೆ. ಹಮಾಸ್‌ ಆಳ್ವಿಕೆಯ ಭೂ ಪ್ರದೇಶಕ್ಕೆ ನೆತನ್ಯಾಹು ಭೇಟಿ ಇಸ್ರೇಲ್‌ ಆ ಭೂಪ್ರದೇಶದ ಮೇಲೆ ಹಿಡಿತವನ್ನು ಸಾಧಿಸಿದೆ ಎನ್ನವುದನ್ನು ಸೂಚಿಸುತ್ತದೆ.

ನೆತನ್ಯಾಹು ಅವರು ಕಮಾಂಡರ್‌ಗಳು ಮತ್ತು ಸೈನಿಕರಿಂದ ಭದ್ರತೆಯ ಕುರಿತು ಮಾಹಿತಿಯನ್ನು ಪಡೆದಿದ್ದಾರೆ. ಯುದ್ಧದ ಗುರಿ ತಲುಪುವವರೆಗೂ ಸೈನಿಕರಿಗೆ ಮುಂದುವರಿಯಲು ಸೂಚಿಸಿದ್ದಾರೆ.

ನಾವು ನಮ್ಮ ವೀರ ಸೈನಿಕರೊಂದಿಗೆ ಗಾಝಾ ಪಟ್ಟಿಯಲ್ಲಿದ್ದೇವೆ. ನಮ್ಮ ಒತ್ತೆಯಾಳುಗಳನ್ನು ಹಿಂದಿರುಗಿಸಲು ನಾವು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಮತ್ತು ನಾವು ಅವರೆಲ್ಲರನ್ನೂ ಕರೆತಂದೇ ತೀರುತ್ತೇವೆ. ಈ ಯುದ್ಧದಲ್ಲಿ ನಮಗೆ 3 ಗುರಿಗಳಿವೆ. ಒಂದು ಹಮಾಸ್‌ನ್ನು ನಿರ್ನಾಮ ಮಾಡುವುದು. ನಮ್ಮ ಎಲ್ಲಾ ಒತ್ತೆಯಾಳುಗಳನ್ನು ಕರೆತರುವುದು ಮತ್ತು ಮುಂದೆಂದೂ ಗಾಝಾ ಇಸ್ರೇಲ್ ರಾಜ್ಯಕ್ಕೆ ಬೆದರಿಕೆಯಾಗುವುದಿಲ್ಲ  ಎಂದು ಖಚಿತಪಡಿಸಿಕೊಳ್ಳುವುದಾಗಿದೆ ಎಂದು ನೆತನ್ಯಾಹು ಹೇಳಿದ್ದಾರೆ.

ನಾನು ಈ ವಿಚಾರವನ್ನು ಸೈನಿಕರಿಗೆ ಹೇಳಲು ಇಲ್ಲಿ ಬಂದಿದ್ದೇನೆ. ಎಲ್ಲರೂ ನನಗೆ ಈ ವಿಷಯವನ್ನೇ ಹೇಳುತ್ತಾರೆ. ನಾನು ನಿಮಗೆ ಇದನ್ನು ಮತ್ತೆ ಪುನರಾವರ್ತಿಸುತ್ತೇನೆ. ಇಸ್ರೇಲ್ ನಾಗರಿಕರೆ ನಾವು ಕೊನೆಯವರೆಗೂ ಮುಂದುವರಿಯುತ್ತೇವೆ. ವಿಜಯದವರೆಗೆ ಮುಂದುವರಿಯುತ್ತೇವೆ. ಯಾರೂ ನಮ್ಮನ್ನು ತಡೆಯುವುದಿಲ್ಲ. ಯುದ್ಧಕ್ಕಾಗಿ ನಮ್ಮ ಎಲ್ಲಾ ಗುರಿಗಳನ್ನು ಸಾಧಿಸುವ ಶಕ್ತಿ, ಇಚ್ಛೆ ಮತ್ತು ಸಂಕಲ್ಪ ನಮ್ಮಲ್ಲಿದೆ ಮತ್ತು ಇದನ್ನು ನಾವು ಮಾಡುತ್ತೇವೆ ಎಂದು ಹೇಳಿದ್ದಾರೆ.

ಇಸ್ರೇಲ್‌ ಪ್ರಧಾನ ಮಂತ್ರಿಯ ಜೊತೆ ಅವರ ಚೀಫ್ ಆಫ್ ಸ್ಟಾಫ್ ಟ್ಜಾಚಿ ಬ್ರೇವರ್‌ಮನ್, ರಾಷ್ಟ್ರೀಯ ಭದ್ರತಾ ಮಂಡಳಿಯ ನಿರ್ದೇಶಕ ತ್ಜಾಚಿ ಹನೆಗ್ಬಿ, ಮಿಲಿಟರಿ ಕಾರ್ಯದರ್ಶಿ ಮೇಜರ್-ಜನರಲ್ ಅವಿ ಗಿಲ್ ಮತ್ತು ಇಸ್ರೇಲ್ ರಕ್ಷಣಾ ಪಡೆಗಳ ಉಪ ಮುಖ್ಯಸ್ಥ ಮೇಜರ್ ಜನರಲ್ ಅಮೀರ್ ಬರಮ್ ಇದ್ದರು.

ಇಸ್ರೇಲ್‌ನ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಮತ್ತು ಚೀಫ್ ಆಫ್ ಸ್ಟಾಫ್ ಹರ್ಜಿ ಹಲೇವಿ ಮತ್ತು ಇತರ ಹಿರಿಯ ಇಸ್ರೇಲ್‌ ಅಧಿಕಾರಿಗಳು ಯುದ್ಧದ ಸಮಯದಲ್ಲಿ  ಗಾಝಾ ಸ್ಟ್ರಿಪ್‌ನ ಉತ್ತರ ಭಾಗಕ್ಕೆ ಭೇಟಿ ನೀಡಿದ್ದಾರೆ. ಇದು ಈ ಭೂಪ್ರದೇಶದ ಮೇಲೆ ಇಸ್ರೇಲ್‌ ದೊಡ್ಡ ಮಟ್ಟದಲ್ಲಿ ನಿಯಂತ್ರಣ ಸಾಧಿಸಿದೆ ಎನ್ನುವುದನ್ನು ಸೂಚಿಸುತ್ತದೆ.

ಕತಾರ್, ಈಜಿಪ್ಟ್ ಮತ್ತು ಯುನೈಟೆಡ್ ಸ್ಟೇಟ್ಸ್ ಮಧ್ಯಸ್ಥಿಕೆಯಲ್ಲಿ ತಾತ್ಕಾಲಿಕ ನಾಲ್ಕು ದಿನಗಳ ಕದನ ವಿರಾಮದಲ್ಲಿ ಇಸ್ರೇಲ್ ಮತ್ತು ಹಮಾಸ್ ಒತ್ತೆಯಾಳುಗಳನ್ನು ವಿನಿಮಯ ಮಾಡಿಕೊಂಡಿವೆ. ಇಂಧನ ಸೇರಿದಂತೆ ಮಾನವೀಯ ಸಹಾಯವನ್ನು ಗಾಝಾ ಪಟ್ಟಿಗೆ ಪ್ರವೇಶಿಸಲು ಅನುವು ಮಾಡಿ ಕೊಟ್ಟಿದೆ.

ನಾಲ್ಕು ದಿನಗಳ ಕದನ ವಿರಾಮದ ವೇಳೆ 150 ಪ್ಯಾಲೇಸ್ತೀನ್‌ ಕೈದಿಗಳಿಗೆ ಬದಲಾಗಿ 50 ಇಸ್ರೇಲ್‌ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಒಪ್ಪಂದ ಮಾಡಿಕೊಳ್ಳಲಾಗಿದೆ. ಆದರೆ ಕದನ ವಿರಾಮದ ವೇಳೆ ಹಲವು ಬಾರಿ ಒಪ್ಪಂದದ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಇಸ್ರೇಲ್‌ ಮತ್ತು ಹಮಾಸ್‌ ಆರೋಪಿಸಿತ್ತು. ಪಶ್ಚಿಮದಂಡೆಯಲ್ಲಿ ಇಸ್ರೇಲ್ ಕದನ ವಿರಾಮದ ವೇಳೆ ನಡೆಸಿದ ಗುಂಡಿನ ದಾಳಿಯಲ್ಲಿ ಬಾಲಕ ಸಹಿತ 6 ಮಂದಿ ಮೃತಪಟ್ಟಿದ್ದಾರೆ ಮತ್ತು ಇತರ 6 ಮಂದಿ ಗಾಯಗೊಂಡಿದ್ದಾರೆ ಎಂದು ಫೆಲೆಸ್ತೀನಿಯನ್ ಆರೋಗ್ಯ ಇಲಾಖೆ ಹೇಳಿದೆ.

ಇದನ್ನು ಓದಿ: ಮೀರತ್‌: ಶಾಲಾ ಬಾಲಕನನ್ನು ಥಳಿಸಿ ಮುಖದ ಮೇಲೆ ಮೂತ್ರ ವಿಸರ್ಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...