Homeಕರ್ನಾಟಕಮಹಾಧರಣಿ| ದುಡಿವ ಜನರ ಸಮಸ್ಯೆ ಆಲಿಸಲು ಸಿಎಂ ಒಪ್ಪಿದ್ದಾರೆ: ಸಚಿವ ಕೃಷ್ಣ ಬೈರೇಗೌಡ

ಮಹಾಧರಣಿ| ದುಡಿವ ಜನರ ಸಮಸ್ಯೆ ಆಲಿಸಲು ಸಿಎಂ ಒಪ್ಪಿದ್ದಾರೆ: ಸಚಿವ ಕೃಷ್ಣ ಬೈರೇಗೌಡ

- Advertisement -
- Advertisement -

ಧರಣಿ ನಿರತರ ಹಕ್ಕೊತ್ತಾಯಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚಿಸಲು ಒಪ್ಪಿದ್ದಾರೆ. ಶೀಘ್ರದಲ್ಲೇ ಹೋರಾಟಗಾರರೊಂದಿಗೆ ಸಭೆ ನಡೆಸಲು ದಿನಾಂಕ ನಿಗದಿ ಮಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಬೆಂಗಳೂರಿನಲ್ಲಿ ನಡೆಯುತ್ತಿರುವ ದುಡಿಯುವ ಜನರ ಮಹಾಧರಣಿ ಸ್ಥಳಕ್ಕೆ ಬಂದು ಹೋರಾಟಗಾರರ ಹಕ್ಕೊತ್ತಾಯಗಳನ್ನು ಆಲಿಸಿ, ಅವರು ಮಾತನಾಡಿದರು. “ಮುಖ್ಯಮಂತ್ರಿಗಳು ಜನತಾ ದರ್ಶನ ಕಾರ್ಯಕ್ರಮದಲ್ಲಿದ್ದಾರೆ. ಇಲ್ಲಿನ ಹೋರಾಟದ ಬಗ್ಗೆ ಅವರಿಗೆ ಅರಿವಿದೆ. ಅವರ ಪರವಾಗಿ ನನ್ನನ್ನು ಕಳಿಸಿದ್ದಾರೆ. ಹೋರಾಟಗಾರರು ಮುಂದಿಟ್ಟಿರುವ ಎಲ್ಲ ಹಕ್ಕೊತ್ತಾಯಗಳ ಬಗ್ಗೆ ಚರ್ಚಿಸಲು ಸಮಯ ಕೊಡುತ್ತೇನೆಂದು ಹೇಳಿದ್ದಾರೆ” ಎಂದರು.

“ಹೋರಾಟಗಾರರು 18 ಹಕ್ಕೊತ್ತಾಯಗಳನ್ನು ನಮ್ಮ ಮುಂದಿಟ್ಟಿದ್ದಾರೆ. ಇವುಗಳಲ್ಲಿ ಮೂರು ಕಂದಾಯ ಇಲಾಖೆಗೆ ಸಂಬಂಧಿಸಿದ ವಿಚಾರಗಳೂ ಇವೆ. ಮಂಗಳವಾರ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳೊಂದಿಗೆ ಸಭೆ ಇದೆ. ಅಲ್ಲಿ, ಇಲ್ಲಿನ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಮಯ ನಿಗದಿ ಮಾಡಿಸಲು ನಾನು ಒತ್ತು ಕೊಡುತ್ತೇನೆ. ಶೀಘ್ರದಲ್ಲೇ ಹೋರಾಟಗಾರರೊಂದಿಗಿನ ಸಭೆಯನ್ನು ನಿಗದಿ ಮಾಡಿಸುತ್ತೇನೆ” ಎಂದು ಸಚಿವರು ಹೇಳಿದರು.

“ಕಾರ್ಮಿಕರು, ಭೂಮಿ ರಹಿತರು ಸೇರಿದಂತೆ ನಾನಾ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ. ಬರ ಪರಿಹಾರಕ್ಕೆ ಅನುದಾನ ಕೇಂದ್ರದಿಂದ ಬಂದಿಲ್ಲ. ಅದರ ಬಗ್ಗೆ ಚರ್ಚಿಲು ಮುಖ್ಯಮಂತ್ರಿಗಳು ದೆಹಲಿಗೆ ತರಳಲಿದ್ದಾರೆ. ಡಿಸೆಂಬರ್ 4ರಿಂದ ಅಧಿವೇಶನವೂ ಇದೆ. ಈ ಎಲ್ಲದರ ನಡುವೆ ಸಮಯವನ್ನು ನೋಡಿಕೊಂಡು, ಸಭೆ ನಿಗದಿ ಮಾಡಿಸುತ್ತೇನೆ. ಎಲ್ಲರ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತೇವೆ” ಎಂದರು.

“ಹೋರಾಟಗಾರರು ಮುಂದಿಟ್ಟಿರುವ ಎಲ್ಲ ವಿಷಯಗಳು ಶ್ರಮಿಕರು, ಬಡವರ ಪರವಾಗಿವೆ. ಅವುಗಳೆಲ್ಲವನ್ನೂ ನಾವು ಈಡೇರಿಸಲು ಸಾಧ್ಯವಾಗುತ್ತದೆಯೋ, ಇಲ್ಲವೋ ಗೊತ್ತಿಲ್ಲ. ಆದರೆ, ಬಡವರು, ರೈತರು, ಕಾರ್ಮಿಕರ ಪರವಾಗಿ ನಡೆಯುತ್ತಿರುವ ಹೋರಾಟ ಸ್ವಾಗತಾರ್ಹ. ಸಾಮಾನ್ಯ ಜನರ ವಿಷಯಗಳು ಚರ್ಚೆಯಾಗಬೇಕು. ಜೀವನಾಧಾರ ವಿಷಯಗಳ ಬಗ್ಗೆ ಚರ್ಚೆ ನಡೆಯಬೇಕು. ಅದಕ್ಕಾಗಿ, ಎಲ್ಲ ಹಕ್ಕೊತ್ತಾಯಗಳ ಬಗ್ಗೆ ಖಂಡಿತವಾಗಿಯೂ ಚರ್ಚಿಸುತ್ತೇನೆ. ಸಭೆ ಕರೆಯುತ್ತೇವೆ” ಎಂದು ಕೃಷ್ಣ ಬೈರೇಗೌಡ ಭರವಸೆ ನೀಡಿದರು.

ಸರ್ಕಾರದ ಪರವಾಗಿ ಧರಣಿ ಸ್ಥಳಕ್ಕೆ ಆಗಮಿಸಿದ್ದ ಸಚಿವರಿಗೆ ವಿವಿಧ ಸಂಘಟನೆಗಳು ಮುಖಂಡರು ತಮ್ಮ ಬೇಡಿಕೆಗಳ ಕುರಿತ ಆಗ್ರಹ ಪತ್ರವನ್ನು ನೀಡಿದರು.

ಇದನ್ನೂ ಓದಿ : ಮಹಾಧರಣಿ| ಜನದ್ರೋಹಿ ಕೇಂದ್ರ ಸರ್ಕಾರ, ಜಗಮೊಂಡ ರಾಜ್ಯ ಸರ್ಕಾರ: ನೂರ್ ಶ್ರೀಧರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...