Homeಕರ್ನಾಟಕಹೆಣ್ಣು ಭ್ರೂಣ ಹತ್ಯೆ ಜಾಲ ಬೇಧಿಸಿದ ಪೊಲೀಸರು: 9 ಆರೋಪಿಗಳ ಬಂಧನ

ಹೆಣ್ಣು ಭ್ರೂಣ ಹತ್ಯೆ ಜಾಲ ಬೇಧಿಸಿದ ಪೊಲೀಸರು: 9 ಆರೋಪಿಗಳ ಬಂಧನ

- Advertisement -
- Advertisement -

ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ನಿಷೇಧವಿದ್ದರೂ ಮೈಸೂರು, ಮಂಡ್ಯ ಭಾಗದಲ್ಲಿ ಹೆಣ್ಣು ಭ್ರೂಣಗಳನ್ನು ಪತ್ತೆಹಚ್ಚಿ ಹತ್ಯೆ ಮಾಡುತ್ತಿದ್ದ ಭಾರೀ ಜಾಲವನ್ನು ಬೇಧಿಸಿರುವ ಬೆಂಗಳೂರು ಪೊಲೀಸರು ಇದುವರೆಗೆ ಒಂಬತ್ತು ಆರೋಪಿಗಳನ್ನು ಬಂಧಿಸಿದ್ದಾರೆ.

ಮೈಸೂರಿನ ಉದಯಗಿರಿಯ ಮಾತಾ ಆಸ್ಪತ್ರೆಯ ಮುಖ್ಯಸ್ಥ ಡಾ.ಚಂದನ್‌ ಬಲ್ಲಾಳ್‌ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ. ಇವರು ಭ್ರೂಣಗಳ ಹತ್ಯೆಯಲ್ಲಿ ಮುಖ್ಯ ಪಾತ್ರ ವಹಿಸಿದ್ದರು ಎಂದು ಆರೋಪಿಸಲಾಗಿದೆ. ತಮಿಳುನಾಡು ಮೂಲದ ವೈದ್ಯ ಡಾ.ತುಳಸಿರಾಮ್‌, ಮಹಿಳೆಯರನ್ನು ಗುರುತಿಸಿ ಕರೆ ತರುತ್ತಿದ್ದ ವಿರೇಶ್‌, ನವೀನ್‌ಕುಮಾರ್‌, ನಯನ್‌ ಕುಮಾರ್‌ ಹಾಗೂ ಶಿವನಂಜೇಗೌಡ, ಮಾತಾ ಆಸ್ಪತ್ರೆಯ ವ್ಯವಸ್ಥಾಪಕಿ ಮೀನಾ, ಲ್ಯಾಬ್ ಟೆಕ್ನೀಷಿಯನ್ ನಿಸಾರ್ ಹಾಗೂ ಸ್ವಾಗತಕಾರ್ತಿ ರಿಜ್ಮಾ ಖಾನಂ ಬಂಧಿತ ಇತರ ಆರೋಪಿಗಳು.

ಮೂರು ವರ್ಷಗಳಲ್ಲಿ 900 ಭ್ರೂಣಗಳ ಹತ್ಯೆ!

ಮಂಗಳವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ, ಪ್ರಕರಣದ ತನಿಖೆ ಚುರುಕುಗೊಳಿಸಲಾಗಿದೆ. ಇದುವರೆಗೆ 9 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರು ಕಳೆದ ಮೂರು ವರ್ಷಗಳಲ್ಲಿ 900ಕ್ಕೂ ಹೆಚ್ಚು ಗರ್ಭಪಾತ ಮಾಡಿದ್ದಾರೆ. ಈ ಹಿಂದೆ ಪ್ರತಿ ತಿಂಗಳು 25ರಿಂದ 27 ಗರ್ಭಪಾತ ಮಾಡಿದ್ದರೆ, 2023 ಜುಲೈ 21ರಿಂದ ಆಗಸ್ಟ್‌ 16ರವರೆಗೆ ಬರೋಬ್ಬರಿ 242 ಗರ್ಭಪಾತ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಕರಣದಲ್ಲಿ ಆರೋಗ್ಯ ಇಲಾಖೆಯ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಪ್ರಮುಖ ಆರೋಪಿ ಡಾ.ಚಂದನ್ ಬಳ್ಳಾಲ್, ತನ್ನ ಮಾತಾ ಆಸ್ಪತ್ರೆಯನ್ನು ನೋಂದಣಿ ಮಾಡಿಸಿಕೊಂಡಿರಲಿಲ್ಲ. ಮೈಸೂರಿನ ಆರೋಗ್ಯ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಪರಿಶೀಲಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ.

ಬೆಂಗಳೂರು ಮಾತ್ರವಲ್ಲದೆ ಉತ್ತರ ಕರ್ನಾಟಕ ಭಾಗದಿಂದಲೂ ಮಹಿಳೆಯರುನ್ನು ಗುರುತಿಸಿ ಆರೋಪಿ ವೀರೇಶ್ ಮತ್ತು ತಂಡ ಕರೆ ತರುತ್ತಿತ್ತು. ಕೆಲವರು ಭ್ರೂಣ ಪತ್ತೆಗೆ ಬರುತ್ತಿದ್ದರು ಬಳಿಕ ಹೆಣ್ಣು ಭ್ರೂಣವನ್ನು ಹತ್ಯೆ ಮಾಡಿಸುತ್ತಿದ್ದರು. ಇದಕ್ಕಾಗಿ ಆರೋಪಿಗಳು 25 ರಿಂದ 30 ಸಾವಿರ ರೂಪಾಯಿ ಹಣ ಪಡೆಯುತ್ತಿದ್ದರು.

ಮೈಸೂರಿನ ಮಾತಾ ಆಸ್ಪತ್ರೆಯಲ್ಲದೇ ಮಂಡ್ಯದ ಕೆಲವು ಕಡೆಯೂ ಭ್ರೂಣ ಪತ್ತೆ ಮತ್ತು ಹತ್ಯೆ ನಡೆಯುತ್ತಿತ್ತು. ಮಂಡ್ಯದ ಆಲೆಮನೆಯೊಂದರಲ್ಲಿ ಸ್ಕ್ಯಾನಿಂಗ್‌ ಯಂತ್ರ ಇರಿಸಿದ್ದರು. ಹಲವು ವರ್ಷಗಳಿಂದ ಇದು ನಡೆದಿತ್ತು. ಬೈಯಪ್ಪನಹಳ್ಳಿ ಪೊಲೀಸರು ವೀರೇಶ್‌ನನ್ನು ಬಂಧಿಸಿದಾಗ ಈ ಎಲ್ಲಾ ವಿಚಾರ ಬಯಲಾಗಿದೆ ಎಂದು ಬೆಂಗಳೂರು ಪೂರ್ವ ಡಿಸಿಪಿ ದೇವರಾಜ್‌ ತಿಳಿಸಿದ್ದಾರೆ.

ತನ್ನ ಆಸ್ಪತ್ರೆಯ ಸಿಬ್ಬಂದಿಯ ಬಂಧನದ ವಿಚಾರ ತಿಳಿದು ಡಾ.ಚಂದನ್‌ ಬಲ್ಲಾಳ್‌ ತಲೆ ಮರೆಸಿಕೊಂಡಿದ್ದರು. ಅವರ ಬಂಧನಕ್ಕೆ ಬಲೆ ಬೀಸಿದ ಪೊಲೀಸರು ಕಳೆದ ಶನಿವಾರ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಚಂದನ್‌ರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಅವರಿಂದ ಹೆಚ್ಚಿನ ಮಾಹಿತಿ ಲಭ್ಯವಾಗುವ ಸಾಧ್ಯತೆಯಿದೆ.

ಈಗಾಗಲೇ ಮೈಸೂರಿನ ಉದಯಗಿರಿಯಲ್ಲಿರುವ ಮಾತಾ ಆಸ್ಪತ್ರೆ, ಡಾ.ರಾಜಕುಮಾರ್‌ ಆಸ್ಪತ್ರೆಯಲ್ಲಿರುವ ಆಯುರ್ವೇದಿಕ್‌ ಪೈಲ್ಸ್‌ ಡೇ ಕೇರ್‌ ಗಳನ್ನು ಜಪ್ತಿ ಮಾಡಲಾಗಿದೆ. ಬೆಂಗಳೂರು, ಮಂಡ್ಯ, ರಾಮನಗರ ಮಾತ್ರವಲ್ಲದೇ ಇತರೆಡೆಗೂ ಭ್ರೂಣ ಹತ್ಯೆ ಜಾಲ ಹಬ್ಬಿರುವ ಶಂಕೆಯಿದೆ. ಪೊಲೀಸರು ಈ ನಿಟ್ಟಿನಲ್ಲಿ ತನಿಖೆ ಮುಂದುವರೆಸಿದ್ದಾರೆ.

ಭ್ರೂಣ ಹತ್ಯೆ ಜಾಲ ಪತ್ತೆಯಾಗಿದ್ದು ಹೇಗೆ?

ಅ.15ರಂದು ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆ ಆರೋಪಿಗಳು ಕಾರು ನಿಲ್ಲಿಸದೆ ಹೋಗಿದ್ದರು. ಅವರನ್ನು ಹಿಂಬಾಲಿಸಿ ವಿಚಾರಣೆ ನಡೆಸಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.

ಮೂವರಿಗೆ ಜಾಮೀನು :

ಬಂಧಿತ ಆರೋಪಿಗಳ ಪೈಕಿ ತಮಿಳುನಾಡು ಮೂಲದ ಮಕ್ಕಳ ತಜ್ಞ ಡಾ. ತುಳಸಿರಾಮ್, ಪ್ರಕರಣದ ಪ್ರಮುಖ ಆರೋಪಿ ಡಾ. ಚಂದನ್ ಬಲ್ಲಾಳ್ ಅವರ ಪತ್ನಿ ಮೀನಾ ಹಾಗೂ ಮಾತಾ ಆಸ್ಪತ್ರೆಯ ಸ್ವಾಗತಗಾರ್ತಿ ನಜ್ಮಾ ಖಾನಂ ಅವರಿಗೆ ನ್ಯಾಯಾಲಯದಿಂದ ಜಾಮೀನು ದೊರೆತಿದ ಎಂದು ತಿಳಿದು ಬಂದಿದೆ.

ಪ್ರಸವ ಪೂರ್ವ ಭ್ರೂಣ ಪತ್ತೆ ಮತ್ತು ಹತ್ಯೆ ಅಪರಾಧ :

ಪ್ರಸವ ಪೂರ್ವ ಲಿಂಗ ಆಯ್ಕೆ ನಿಷೇಧ ಅಧಿನಿಯಮ 1994ರ ಪ್ರಕಾರ ಭಾರತದಲ್ಲಿ ಭ್ರೂಣ ಪತ್ತೆ ಮತ್ತು ಹತ್ಯೆ ನಿಷೇಧವಿದೆ. ಯಾವುದೇ ವ್ಯಕ್ತಿ ವೈಜ್ಞಾನಿಕ ತಂತ್ರಜ್ಞಾನಗಳನ್ನು ಭ್ರೂಣದ ಲಿಂಗ ಪತ್ತೆಗಾಗಿ ಬಳಸಿದರೆ, ಬಳಸಲು ಕಾರಣನಾದರೆ, ಸಹಾಯ ಮಾಡಿದರೆ, ಲಿಂಗಪತ್ತೆ ಪರೀಕ್ಷೆ ಮಾಡಿಸಿಕೊಳ್ಳುವಂತೆ ಗರ್ಭಿಣಿ ಮಹಿಳೆಯ ಮೇಲೆ ಒತ್ತಡ ಹೇರಿದರೆ ಅದು ಅಪರಾಧವಾಗುತ್ತದೆ. ಸ್ಕ್ಯಾನಿಂಗ್ ಸೌಲಭ್ಯ ಹೊಂದಿರುವ ಪ್ರತಿಯೊಂದು ಕೇಂದ್ರದ ನೋಂದಣಿ ಈ ಅಧಿನಿಯಮದ ಅಡಿ ಕಡ್ಡಾಯವಾಗಿದೆ.

ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಮಾಡಿದ ವ್ಯಕ್ತಿ ಶಿಕ್ಷಾರ್ಹ. ಮೊದಲ ಅಪರಾಧಕ್ಕೆ 3 ವರ್ಷಗಳ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ, ನಂತರದ ಅಪರಾಧಕ್ಕೆ 5 ವರ್ಷಗಳ ಜೈಲು ಶಿಕ್ಷೆ ಮತ್ತು 50 ಸಾವಿರ ರೂ ದಂಡ ವಿಧಿಸಲಾಗತ್ತದೆ. ಇಂತಹ ಕೃತ್ಯಕ್ಕೆ ಸಹಾಯ ಮಾಡುವ ವ್ಯಕ್ತಿಯೂ ಶಿಕ್ಷಾರ್ಹ. ಸಹಾಯ ಮಾಡುವವರಿಗೆ ಮೊದಲ ಅಪರಾಧಕ್ಕೆ 3 ವರ್ಷಗಳ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ, ನಂತರದ ಅಪರಾಧಕ್ಕೆ 5 ವರ್ಷಗಳ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

ಇದನ್ನೂ ಓದಿ : ಉತ್ತರಕಾಶಿ: 17 ದಿನಗಳ ಬಳಿಕ ಸುರಂಗದಿಂದ ಹೊರಬಂದ 41 ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...