Homeಮುಖಪುಟಗೋವಾ ಚಲನಚಿತ್ರೋತ್ಸವದಲ್ಲಿ 'ದಿ ಕೇರಳ ಸ್ಟೋರಿ' ಪ್ರದರ್ಶನ: ಪ್ರತಿಭಟಿಸಿದ ಇಬ್ಬರು ವಶಕ್ಕೆ

ಗೋವಾ ಚಲನಚಿತ್ರೋತ್ಸವದಲ್ಲಿ ‘ದಿ ಕೇರಳ ಸ್ಟೋರಿ’ ಪ್ರದರ್ಶನ: ಪ್ರತಿಭಟಿಸಿದ ಇಬ್ಬರು ವಶಕ್ಕೆ

- Advertisement -
- Advertisement -

ಗೋವಾದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (ಐಎಫ್‌ಎಫ್‌ಐ) ‘ದಿ ಕೇರಳ ಸ್ಟೋರಿ’ ವಿವಾದಿತ ಸಿನಿಮಾ ಪ್ರದರ್ಶನವನ್ನು ಮಾಡಿದ್ದು, ಈ ವೇಳೆ ಪ್ರತಿಭಟಿಸಿದ ಆರೋಪದಲ್ಲಿ ಕೇರಳದ ಇಬ್ಬರನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ.

ಕಳೆದ ಭಾನುವಾರ ಅಂತರಾಷ್ಟ್ರೀಯ ಮಟ್ಟದ ಚಲನಚಿತ್ರೋತ್ಸವದಲ್ಲಿ (ಐಎಫ್‌ಎಫ್‌ಐ) ದಿವಂಗತ ಗೋವಾದ ಲೇಖಕ ಮತ್ತು ಮಾಜಿ ಶಾಸಕ ವಿಷ್ಣು ಸೂರ್ಯ ವಾಘ್ ಅವರ ಜಾತಿ ತಾರತಮ್ಯದ ಕುರಿತ ಸುಧೀರ್ ಸೂಕ್ತ ಕವನ ಸಂಕಲನದ ಕವಿತೆಯನ್ನು ಪ್ರಕಟಿಸಿರಲಿಲ್ಲ. ಸೃಜನಶೀಲ ಕಾರಣಗಳಿಗಾಗಿ ತೆಗೆದುಕೊಂಡ ಸಂಪಾದಕೀಯ ನಿರ್ಧಾರ ಎಂದು IFFI ಹೇಳಿತ್ತು. ಆದರೆ ಇದೀಗ ದಿ ಕೇರಳ ಸ್ಟೋರಿ ಚಲನ ಚಿತ್ರವನ್ನು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ವಿವಾದಕ್ಕೆ ಕಾರಣವಾಗಿದೆ.

ಕೇರಳದ ಶ್ರೀನಾಥ್ ಮತ್ತು ಅರ್ಚನಾ ರವಿ ಎಂಬ ಇಬ್ಬರು ಕಳೆದ ಒಂದು ವಾರದಿಂದ ಚಲನಚಿತ್ರೋತ್ಸವಕ್ಕೆ ಹಾಜರಾಗಿದ್ದರು. ಸೋಮವಾರ ಸಂಜೆ ಪಣಜಿ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಅಧಿಕಾರಿಗಳು ಅವರಲ್ಲಿದ್ದ ಕಾರ್ಯಕ್ರಮದ ಪಾಸ್‌ಗಳನ್ನು ಮುಟ್ಟುಗೋಲು ಹಾಕಿಕೊಂಡು ಉತ್ಸವದಲ್ಲಿ ಭಾಗಿಯಾಗದಂತೆ ನಿರ್ಬಂಧ ವಿಧಿಸಿದ್ದಾರೆ.

ಗೋವಾದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳುತ್ತಿರುವ ಕೇರಳ ಸ್ಟೋರಿ ಸುಳ್ಳು ಪ್ರಚಾರದ ಚಲನಚಿತ್ರವಾಗಿದ್ದು, ಅದರ ವಿರುದ್ಧ ನಮ್ಮ ವಿರೋಧವನ್ನು ವ್ಯಕ್ತಪಡಿಸುತ್ತಿದ್ದೇವೆ. ಅಲ್ಲಿ ನಾವು ಯಾವುದೇ ಘೋಷಣೆಗಳನ್ನು ಕೂಗಲಿಲ್ಲ. ಅದು ಪ್ರತಿಭಟನೆಯೂ ಆಗಿರಲಿಲ್ಲ. ನಾವು ಆ ಚಿತ್ರದ ಕುರಿತು ಎ4 ಅಳತೆಯೆ ಮೀಮ್‌ವೊಂದನ್ನು ಮುದ್ರಿಸಿ, ಅದನ್ನು ನಮ್ಮ ಟಿ-ಶರ್ಟ್‌ಗಳಿಗೆ ಅಂಟಿಸಿಕೊಂಡಿದ್ದೆವು  ಎಂದು ಅರ್ಚನಾ ಅವರು ಹೇಳಿದ್ದಾರೆ.

ಅರ್ಚನಾ ಟಿ-ಶರ್ಟ್‌ ಧರಿಸಿ ಸ್ನೇಹಿತೆಯೊಬ್ಬರ ಜೊತೆ ಪೋಟೋ ಕ್ಲಿಕ್ಕಿಸುವಾಗ ಪೊಲೀಸರು ಅವರನ್ನು ವಶಕ್ಕೆ ಪಡೆದು ಕರೆದುಕೊಂಡು ಹೋಗಿದ್ದಾರೆ. ಇದು ಪ್ರತಿಭಟನೆಯ ಸ್ಥಳವಲ್ಲ ಎಂದು ಪೊಲೀಸರು ಅವರಿಗೆ ಹೇಳಿದ್ದಾರೆ.

ಪಣಜಿ ಪೊಲೀಸ್ ಠಾಣೆಗೆ ನಮ್ಮನ್ನು ಕರೆದೊಯ್ದು ಅಧಿಕಾರಿಗಳು ಫೋನ್‌ಗಳು, ಐಡಿಗಳು ಮತ್ತು  ಉತ್ಸವದ ಪಾಸ್‌ಗಳನ್ನು ತೆಗೆದುಕೊಂಡರು. ಉತ್ಸವಕ್ಕೆ ಪ್ರವೇಶಿಸದಂತೆ ನಿರ್ಬಂಧಿಸಿದ್ದಾರೆ. ಅವರು ನಮ್ಮ ಕರೆ ದಾಖಲೆಗಳನ್ನು ಪರಿಶೀಲಿಸಿದರು ಮತ್ತು ನನ್ನ ಟೀ ಶರ್ಟ್‌ ಕಿತ್ತುಕೊಂಡರು. 45 ನಿಮಿಷಗಳ ನಂತರ ನಮ್ಮನ್ನು ಬಿಡುಗಡೆ ಮಾಡಲಾಯಿತು ಎಂದು ಸಾಕ್ಷ್ಯಚಿತ್ರ ನಿರ್ಮಾಪಕ ಶ್ರೀನಾಥ್ ಹೇಳಿದ್ದಾರೆ.

ಐಎಫ್‌ಎಫ್‌ಐನಂತಹ ಪ್ರತಿಷ್ಠಿತ ಉತ್ಸವದಲ್ಲಿ ಕೇರಳ ಸ್ಟೋರಿಯಂತಹ ವಿವಾದಾತ್ಮಕ ಚಲನಚಿತ್ರವನ್ನು ಪ್ರದರ್ಶಿಸಿರುವುದು ನಿರಾಶಾದಾಯಕವಾಗಿದೆ. ಇದೊಂದು ಪ್ರಚಾರದ ಸಿನಿಮಾವಾಗಿದ್ದು, ಇದು ಜನರನ್ನು ಕೆಣಕುತ್ತದೆ ಮತ್ತು ಅಲ್ಪಸಂಖ್ಯಾತ ಸಮುದಾಯದ ಮೇಲೆ ಪ್ರಭಾವ ಬೀರುತ್ತದೆ ಎಂದು ಶ್ರೀನಾಥ್ ಹೇಳಿದ್ದಾರೆ.

ದಿ ಕೇರಳ ಸ್ಟೋರಿ ನಿರ್ದೇಶಕ ಸುದೀಪ್ತೋ ಸೇನ್ ಕಾರ್ಯಕ್ರಮದ ಸಂದರ್ಭದಲ್ಲಿ ಅರ್ಚನಾ ರವಿಯೊಂದಿಗೆ ಮಾತನಾಡುತ್ತಿರುವುದನ್ನು ತೋರಿಸುವ ವೀಡಿಯೊ ವೈರಲ್‌ ಆಗಿದೆ.  ನೀವು ಚಲನಚಿತ್ರವನ್ನು ನೋಡಿದ್ದೀರಾ? ಸಿನಿಮಾ ನೋಡದ ಹೊರತು ಅದರ ಬಗ್ಗೆ ಮಾತನಾಡುವ ಹಕ್ಕು ನಿಮಗಿಲ್ಲ. ನೀವು ಚಿತ್ರ ನೋಡಿದರೆ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ನಾನು ಉತ್ತರಿಸುತ್ತೇನೆ ಎಂದು ವೀಡಿಯೊದಲ್ಲಿ ಸೇನ್ ಹೇಳುವುದು ಸೆರೆಯಾಗಿದೆ.

ದಿ ಕೇರಳ ಸ್ಟೋರಿ ಚಲನ ಚಿತ್ರವನ್ನು ಸುದೀಪ್ತೋ ಸೇನ್​ ನಿರ್ದೇಶನ ಮಾಡಿದ್ದು, ವಿಪುಲ್​ ಅಮೃತ್​ಲಾಲ್​ ಶಾ ಅವರು ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಹಿಂದಿ ಮಾತ್ರವಲ್ಲದೇ ತೆಲುಗು, ಮಲಯಾಳಂ ಮತ್ತು ತಮಿಳಿನಲ್ಲೂ ಈ ಚಿತ್ರ ತೆರೆಕಂಡಿದೆ. ಅದರಲ್ಲಿ ಕೇರಳದಲ್ಲಿ32 ಸಾವಿರ ಮಹಿಳೆಯರನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರ ಮಾಡಿ ನಂತರ ಈ ಮಹಿಳೆಯರನ್ನು ಭಯೋತ್ಪಾದಕರು ಐಸಿಸ್ ಆಳ್ವಿಕೆಯ ಸಿರಿಯಾಗೆ ಕರೆದುಕೊಂಡು ಹೋಗಿದ್ದಾರೆ ಎಂದು ಕಾಲ್ಪನಿಕವಾಗಿ ಹೇಳಲಾಗಿತ್ತು. ಈ ಚಲನ ಚಿತ್ರ ಬಿಡಗಡೆಗೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿತ್ತು.

ದಿ ಕೇರಳ ಸ್ಟೋರಿ ಸಿನಿಮಾ ವಿವಾದ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಈ ಸಿನಿಮಾದಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ನಿಕೃಷ್ಟವಾಗಿ ತೋರಿಸಲಾಗಿದೆ. ಈ ಚಿತ್ರಕ್ಕೆ ನಿಷೇಧ ಹೇರಬೇಕು ಎನ್ನುವ ಆಗ್ರಹ ಕೇಳಿ ಬಂದಿತ್ತು. ಆದರೆ ದಿ ಕೇರಳ ಸ್ಟೋರಿ ಸಿನಿಮಾಗೆ ಈಗಾಗಲೇ ಸೆನ್ಸಾರ್ ಮಂಡಳಿಯ ಗ್ರೀನ್ ಸಿಗ್ನಲ್ ನೀಡಿತ್ತು. ಚಿತ್ರಕ್ಕೆ ಎ ಸರ್ಟಿಫಿಕೇಟ್ ಕೊಟ್ಟಿರುವ ಕೇಂದ್ರ ಸೆನ್ಸಾರ್ ಮಂಡಳಿ, 10 ದೃಶ್ಯಗಳಿಗೆ ಕತ್ತರಿ ಹಾಕಲು ಹೇಳಿ ಚಿತ್ರ ಪ್ರದರ್ಶನಕ್ಕೆ ಅನುಮತಿಯನ್ನೂ ಕೊಟ್ಟಿದೆ. ಹೀಗಾಗಿ ಈ ವಿಚಾರದಲ್ಲಿ ತಾನು ಮಧ್ಯ ಪ್ರವೇಶ ಮಾಡುವುದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿತ್ತು.

ಇದನ್ನು ಓದಿ: ಗೋವಾ: ಚಲನಚಿತ್ರೋತ್ಸವದಲ್ಲಿ ಕೈಬಿಟ್ಟ ಜಾತಿ ತಾರತಮ್ಯದ ಕುರಿತ ಕವಿತೆ; ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...