Homeಮುಖಪುಟಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮುಂದುವರಿಕೆ

ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮುಂದುವರಿಕೆ

- Advertisement -
- Advertisement -

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಬುಧವಾರ ಟೀಂ ಇಂಡಿಯಾದ ಕೋಚಿಂಗ್ ಸಿಬ್ಬಂದಿಗಳ ಅವಧಿಯನ್ನು ವಿಸ್ತರಿಸುವುದಾಗಿ ಘೋಷಿಸಿದ್ದು, ರಾಹುಲ್ ದ್ರಾವಿಡ್ ಭಾರತದ ಮುಖ್ಯ ಕೋಚ್ ಆಗಿ ಮುಂದುವರಿಯಲಿದ್ದಾರೆ.

ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್, ಬೌಲಿಂಗ್ ಕೋಚ್ ಪಾರಸ್ ಮಾಂಬ್ರೆ ಮತ್ತು ಫೀಲ್ಡಿಂಗ್ ಕೋಚ್ ಟಿ ದಿಲೀಪ್ ಸೇರಿದಂತೆ ಸಹಾಯಕ ಕೋಚ್‌ಗಳು ಮತ್ತು ಇತರ ಸದಸ್ಯರ ಒಪ್ಪಂದದ ಅವಧಿಯನ್ನು ಬಿಸಿಸಿಐ ವಿಸ್ತರಿಸಿದೆ. BCCI ಕೋಚ್‌ಗಳ ಮುಂದುವರಿಕೆ ಅವಧಿಯ ಕುರಿತು ತಿಳಿಸಿಲ್ಲ. ಆದರೂ ದ್ರಾವಿಡ್  T20 ವಿಶ್ವಕಪ್ 2024ರವರೆಗೆ ಮುಂದುವರಿಯುವ ನಿರೀಕ್ಷೆಯಿದೆ.

ನ.2021ರಲ್ಲಿ 2 ವರ್ಷಗಳ ಒಪ್ಪಂದದಂತೆ ದ್ರಾವಿಡ್ ಅವರನ್ನು ಮುಖ್ಯ ಕೋಚ್ ಆಗಿ ನೇಮಿಸಲಾಗಿತ್ತು. 2023ರ ODI ವಿಶ್ವಕಪ್ ಮುಕ್ತಾಯದೊಂದಿಗೆ ಈ ಅವಧಿ ಕೊನೆಗೊಂಡಿತ್ತು. ದ್ರಾವಿಡ್ ಅವರ ಕೋಚಿಂಗ್ ವೇಳೆ ಭಾರತವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಮತ್ತು ODI ವಿಶ್ವಕಪ್ ಎರಡರಲ್ಲೂ ರನ್ನರ್ ಅಪ್ ಸ್ಥಾನವನ್ನು ಗಳಿಸಿದೆ. ಇದಲ್ಲದೆ ಕಳೆದ 2 ವರ್ಷಗಳಲ್ಲಿ ಉತ್ತಮ ದಾಖಲೆಯನ್ನು ಹೊಂದಿದೆ.

ಇತ್ತೀಚೆಗೆ ಮುಕ್ತಾಯಗೊಂಡ ವಿಶ್ವಕಪ್ 2023ರ ನಂತರ ಅವರ ಒಪ್ಪಂದದ ಅವಧಿ ಮುಗಿದರೂ BCCI ರಾಹುಲ್ ದ್ರಾವಿಡ್ ಅವರನ್ನು ಮರು ನೇಮಕಕ್ಕೆ ಅಥವಾ ಅವಧಿಯನ್ನು ವಿಸ್ತರಿಸಲು ಸರ್ವಾನುಮತದಿಂದ ಒಪ್ಪಿಕೊಂಡಿದೆ.

ಭಾರತದ ಮುಖ್ಯ ತರಬೇತುದಾರರಾಗಿ ಮುಂದವರಿಕೆ ಬಳಿಕ ದ್ರಾವಿಡ್ ಅವರ ಮೊದಲ ನಿಯೋಜನೆಯು ದಕ್ಷಿಣ ಆಫ್ರಿಕಾದ ಪ್ರವಾಸವಾಗಿದೆ. ಇದಾದ ಬಳಿಕ ಜೂನ್‌ನಲ್ಲಿ ನಡೆಯಲಿರುವ ಟಿ 20 ವಿಶ್ವಕಪ್‌ಗೆ ಮೊದಲು ಭಾರತವು ಇಂಗ್ಲೆಂಡ್ ವಿರುದ್ಧ 5 ಟೆಸ್ಟ್‌ಗಳ ಸರಣಿಯನ್ನು ಆಯೋಜಿಸಲಿದೆ.

ಈ ಕುರಿತು ಮಾತನಾಡಿದ BCCI ಅಧ್ಯಕ್ಷ ರೋಜರ್ ಬಿನ್ನಿ, ರಾಹುಲ್ ದ್ರಾವಿಡ್ ಅವರ ದೂರದೃಷ್ಟಿ, ವೃತ್ತಿಪರತೆ ಮತ್ತು ಪ್ರಯತ್ನಗಳು ಟೀಮ್ ಇಂಡಿಯಾದ ಯಶಸ್ಸಿನಲ್ಲಿ ಪ್ರಮುಖ ಆಧಾರಸ್ತಂಭಗಳಾಗಿವೆ. ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಸವಾಲುಗಳನ್ನು ಸ್ವೀಕರಿಸಿದ್ದಕ್ಕಾಗಿ ನಾನು ಅವರಿಗೆ ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತೇನೆ. ದ್ರಾವಿಡ್‌ ಅವಧಿಯಲ್ಲಿ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡಿದೆ. ಅವರು ಮುಖ್ಯ ಕೋಚ್ ಆಗಿ ಉಳಿಯುವ ಪ್ರಸ್ತಾಪವನ್ನು ಸ್ವೀಕರಿಸಿದ್ದಕ್ಕಾಗಿ ನನಗೆ ಸಂತೋಷವಾಗಿದೆ ಮತ್ತು ಇದು ದ್ರಾವಿಡ್‌ ಮತ್ತು ಬಿಸಿಸಿಐ ನಡುವಿನ ಸಂಬಂಧವನ್ನು ವೃದ್ಧಿಗೊಳಿಸುತ್ತದೆ ಎಂದು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ರಾಹುಲ್ ದ್ರಾವಿಡ್, ಟೀಮ್ ಇಂಡಿಯಾದೊಂದಿಗಿನ ಕಳೆದ ಎರಡು ವರ್ಷಗಳು ಸ್ಮರಣೀಯವಾಗಿವೆ. ಒಟ್ಟಾಗಿ ನಾವು ಏರಿಳಿತಗಳನ್ನು ಕಂಡಿದ್ದೇವೆ. ನಾವು ಡ್ರೆಸ್ಸಿಂಗ್ ರೂಮ್‌ನಲ್ಲಿ ಅಳವಡಿಸಿಕೊಂಡ ಸಂಸ್ಕೃತಿಯ ಬಗ್ಗೆ ನಮಗೆ ನಿಜವಾಗಿಯೂ ಹೆಮ್ಮೆ ಇದೆ. ನಮ್ಮ ತಂಡ ಹೊಂದಿರುವ ಕೌಶಲ್ಯ ಮತ್ತು ಪ್ರತಿಭೆ ಅಸಾಧಾರಣವಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಅಝಾನ್‌ಗೆ ಧ್ವನಿವರ್ಧಕ ಬಳಸಿದರೆ ಶಬ್ಧಮಾಲಿನ್ಯವಾಗುತ್ತದೆ ಎನ್ನುವುದು ತಪ್ಪು ಕಲ್ಪನೆ: ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...