Homeಸಾಹಿತ್ಯ-ಸಂಸ್ಕೃತಿಕಥೆಬಿ.ಎಲ್.ವೇಣು ಅವರ ದುವಾ ಕಥೆ

ಬಿ.ಎಲ್.ವೇಣು ಅವರ ದುವಾ ಕಥೆ

- Advertisement -
- Advertisement -

| ಬಿ.ಎಲ್.ವೇಣು |

ಮೂಲತಃ ಚಿತ್ರದುರ್ಗದವರಾದ ಬಿ.ಎಲ್.ವೇಣುರವರು ಕಾದಂಬರಿಕಾರರಾಗಿ, ಕಥೆಗಾರರಾಗಿ, ಚಿತ್ರಸಾಹಿತಿಯಾಗಿ ಅಪಾರ ಮನ್ನಣೆ ಗಳಿಸಿದವರು. ತಂದೆ-ತಾಯಿ ಇಬ್ಬರೂ ರಂಗಕಲೆ ಹಿನ್ನೆಲೆಯವರಾಗಿದ್ದರಿಂದ ಸಾಹಿತ್ಯಾಸಕ್ತಿ ಅವರಲ್ಲಿ ಸಹಜವಾಗಿಯೇ ಬೆಳೆದುಬಂದಿದೆ. ಚಾರಿತ್ರಿಕ ಹಿನ್ನೆಲೆಯ ನೆಲದಿಂದ ಬಂದ ಅವರು ಗಂಡುಗಲಿ ಮದಕರಿನಾಯಕ, ರಾಜಾಬಿಚ್ಚುಕತ್ತಿ ಭರಮಣ್ಣನಾಯಕ, ಕಲ್ಲರಳಿ ಹೂವಾಗಿ, ಕ್ರಾಂತಿಯೋಗಿ ಮರುಳಸಿದ್ಧ, ಹೆಬ್ಬುಲಿ ಹಿರೇಮದಕರಿನಾಯಕ ಮುಂತಾದ 5 ಐತಿಹಾಸಿಕ ಕಾದಂಬರಿಗಳು ಸೇರಿದಂತೆ 26 ಕಾದಂಬರಿಗಳನ್ನು ಹಲವಾರು ನಾಟಕಗಳನ್ನು ರಚಿಸಿದ್ದಾರೆ. ಅವರ `ಪ್ರೇಮಪರ್ವ’ ಕಾದಂಬರಿಯು ಚಲನಚಿತ್ರವಾಗಿ ಲವ್‍ಸ್ಟೋರಿಗಳ ಟ್ರೆಂಡ್‍ಗೆ ನಾಂದಿ ಹಾಡಿತಲ್ಲದೆ, ನಾಲ್ಕು ಭಾಷೆಗಳಲ್ಲಿ ತೆರೆಕಂಡಿತು. ಪುಟ್ಟಣ್ಣ ಕಣಗಾಲರ `ಅಮೃತಘಳಿಗೆ’ ಸಿನಿಮಾ ಮೂಲಕ ಸಂಭಾಷಣೆ ಬರೆಯಲು ಶುರು ಮಾಡಿದ ಅವರು 60ಕ್ಕೂ ಹೆಚ್ಚು ಸಿನಿಮಾಗಳಿಗೆ ಚಿತ್ರಸಾಹಿತಿಯಾಗಿ ದುಡಿದಿದ್ದಾರೆ. ನಿರ್ದೇಶಕ ಭಾರ್ಗವ, ನಟ ವಿಷ್ಣುವರ್ಧನ್ ಮತ್ತು ಬಿ.ಎಲ್.ವೇಣುರವರ ಜೋಡಿ ಎಂಬತ್ತರ ದಶಕದಲ್ಲಿ ಯಶಸ್ವಿ ಸಿನಿ ಜೋಡಿಯಾಗಿ ಗುರುತಿಸಿಕೊಂಡಿತ್ತು. ಸಾಹಿತ್ಯ, ಸಿನಿಮಾ ಎರಡೂ ಕ್ಷೇತ್ರಗಳಲ್ಲಿ ಹೆಸರು ಮಾಡಿರುವ ಅವರು ಈಗಲೂ ಕೃತಿಗಳ ರಚನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಹೊರಗಡೆ ತಲೆ ಎತ್ತಿ ತಿರುಗಾಡಲೂ ಶರಮ್ ಆಗ್ತದೆ. ಮಾನಸಿಕ ಹಿಂಸೆಯಿಂದಾಗಿ ಬದುಕೇ ಬೇಡವೆನ್ನಿಸಿದೆ. ನನ್ನನ್ನೇ ಉಗ್ರನಂತೆ ನೋಡುತ್ತಿದ್ದಾರೇನೋ ಎಂಬ ಅಳಕು. ಯಾರೋ ಮಾಡುವ ಗಲತ್ತಿಗೆ ನಾನೇಕೆ ಶರಮ್ ಆಗಬೇಕು? ಇತಿಹಾಸದಲ್ಲಿ ಸಂಭವಿಸಿದ್ದಕ್ಕೆಲ್ಲಾ ಹೊಣೆಗಾರನಾಗಬೇಕೇಕೆ? ನನ್ನ ಯಾವ ಪ್ರಶ್ನೆಗಳಿಗೂ ಉತ್ತರ ಸಿಗುತ್ತಿಲ್ಲವೆಂಬ ಸಂಕಟ. ಪ್ರೇಯರ್ ಮಾಡಲು ಬಂದ ಇಸ್ಮಾಯಿಲ್ ತಂಪು ಆವರಿಸಿದ ಮಸೀದಿಯಲ್ಲೂ ಬೆವರೊಡೆದ. ಮನಸ್ಸು ಬಲೆಯಲ್ಲಿ ಸಿಕ್ಕ ಜೇಡ. ಮಸೀದಿ ಕೆಡವಿದರು. ಕೆಡವಿದವರೇ ಗದ್ದಲವೆಬ್ಬಿಸಿ ಅನೇಕರನ್ನು ಸಾಯಬಡಿದರು. ಪ್ರಾಣ್ ಬಚಾವ್ ಮಾಡಿಕೊಳ್ಳಲು ಹೊಡೆದಾಡಿದ್ದೆವು. ತಲವಾರ್ ಹಿಡಿದುಬಂದವರು ಇವರ ಮನೇಲಿ ವೆಪನ್ಸ್ ಅದಾವೆ ಅಂದರು. ಮಸೀದಿನಾಗೂ ಇಟ್ಕಂಡವರೆ ಅಂದರು. ಮಸೀದಿಗೂ ನುಗ್ಗಿದರು. ಇದೆಲ್ಲಾ ಪುರಾನಿ ಕಹಾನಿಯಾದರೂ ನಾವಿಲ್ಲೇ ಬದುಕಿದ್ದೇವೆ. ನಮ್ಮ ದೇಶದಲ್ಲೇ ಪರಕೀಯರಂತೆ! ಚರಿತ್ರೆ ಪುಟಗಳಲ್ಲೆಂದೋ ನಮ್ಮವರು ದರ್ಬಾರ್ ಮಾಡಿದ ನೆಲದಲ್ಲಿಂದು ಗುಲಾಮರಂತೆ ಬದುಕುವುದೂ ಕಷ್ಟವಾಗಿದೆ. ನೀವೆಲ್ಲಾ ಕನ್ವರ್ಟೆಡ್ ಮುಸ್ಲಿಮರು ಅಂತಾರೆ. ಹಿಂದೆ ನಮ್ಮವರೇ ಆಗಿದ್ದೀರಿ ಅಂತ ಜೋಕ್ಸ್ ಹೊಡಿತಾರೇ ವಿನಹ ತಮ್ಮವರಂತೆ ಕಂಡಿದ್ದಿಲ್ಲ. ನವಾಬರು ಆರನೂರು ವರ್ಷ ಆಳಿದರೂ ದೇಶವನ್ನು ದೋಚಲಿಲ್ಲ. ಇಲ್ಲಿಯೇ ಮೀನಾರು ಮಸೀದಿ ಮಹಲುಗಳನ್ನು ಕಟ್ಕೊಂಡು ಬೇಪಾರ್ ಮಾಡ್ಕೊಂಡು ಬದುಕಿದರು. ಬ್ರಿಟಿಷರಂಗೆ ದೇಶವನ್ನೇ ಲೂಟ್ ಮಾಡಿ ಹೊತ್ತೊಯ್ಯಲಿಲ್ಲ. ಬ್ರಿಟಿಷರನ್ನು ಓಡಿಸೋಕೆ ನಾವೂ ನಮ್ಮದೇ ವತನ್ ಅನ್ನೋ ಭಾವನೆಯಿಂದ್ಲೇ ಹೋರಾಡಿದೆವು. ಅವರು ಹೋಗಬೇಕಾದರೆ ದೇಶನಾ ಎರಡು ಭಾಗ ಮಾಡಿ ಮನಸ್ಸುಗಳನ್ನೂ ಒಡೆದರು. ದೇಶದ ಮೇಲೆ ಮೊಹಬತ್ ಇಲ್ಲದಿದ್ದರೆ ನಾವೇಕೆ ಇಲ್ಲಿ ಉಳೀತಿದ್ದೆವು? ನಮ್ಮ ಪಾಡಿಗೆ ನಾವು ಬೆವರು ಬಸಿದು ದುಡ್ಕೊಂಡು ಬದುಕ್ತಿದ್ದೀವಿ. ಯಾವನೋ ಸಾಬರವನು ಶತ್ರು ದೇಶದ ಜೊತೆ ದೋಸ್ತಿ ಮಾಡ್ಕೊಂಡು ಬಾಂಬ್ ಉಡಾಯಿಸಿ ಸೈನಿಕರ ಜೀವ ತೆಗೆದರೆ ಸಾರಾಸಗಟಾಗಿ ಅನುಮಾನಿಸೋದು ಹೀಯಾಳಿಸೋದು ಸರೀನಾ? ಹಿಂದು ಕ್ರೈಸ್ತ ಮುಸಲ್ಮಾನ ಪಾರಸಿಕ ಜೈನರುದ್ಯಾನ ಎಲ್ಲಿದೆ? ಮಾಧ್ಯಮಗಳಲ್ಲಿ ಬೇರೆ ಟೀಕೆ, ತೀರ್ಪು! ಗಡ್ಡಬಿಟ್ಟೋರೆಲ್ಲಾ ಘಾತಕರೆಂಬ ಇರಿಯುವ ನೋಟ. ದೇಶವನ್ನೇ ಬಿಟ್ಟು ತೊಲಗಿ ಎಂಬಷ್ಟು ದ್ವೇಷ. ಬುದ್ಧ ಬಸವ ಗಾಂಧಿ ಹುಟ್ಟಿದ ದೇಶದಲ್ಲೇ ನಿಮ್ಮ ಹಾಗೆ ಹುಟ್ಟಿದ್ದೇವಲ್ಲ. ಗಾಂಧಿಯನ್ನು ಕೊಂದಿದ್ದು ಯಾರು? ಮುಸಲ್ಮಾನರಾ? ಬ್ರಿಟಿಷರಾ? ಹೇಳಿ? ಪಾಕಿಸ್ತಾನಕ್ಕೇ ನುಗ್ಗಿ ಬಗ್ಗುಬಡಿದು, ವಾಜಪೇಯಿರಂತಹ ಸಜ್ಜನನಿಂದ ‘ದುರ್ಗಿ’ ಅಂತ ತಾರೀಫ್ ಮಾಡಿಸಿಕೊಂಡ ಇಂದಿರಾಗಾಂಧಿನಾ, ಜಂಟ್ಲಮೆನ್ ರಾಜೀವಗಾಂಧಿನಾ ಕೊಂದಿದ್ದು ನಾವಾ? ಹಿಂದುಗಳಲ್ಲೂ ಭಯೋತ್ಪಾದಕರಿಲ್ಲವೆ ಅಂತ ಕೇಳಿದ್ರೆ ಉರ್ಕೊಂಡು ಬೀಳ್ತಿರಲ್ವೆ. ಭಯೋತ್ಪಾದಕರಿಗೆ ಯಾವ ಜಾತಿ? ಯಾವ ಧರ್ಮ? ಅವರಿಗೆ ಬೇಕಿರೋದು ಗೆಲವೂ ಅಲ್ಲ. ಎದುರಿಗೆ ನಿಂತು ಹೋರಾಡೋರಿಗೆ ಸೋಲು ಗೆಲವು ಮುಖ್ಯ. ಮೋಸಗಾರರಿಗೆ ಬೇಕಿರೋದು ನೆತ್ತರು. ಮೊನ್ನೆ ಅಸುನೀಗಿದ ನಲವತ್ತು ನಾಲ್ಕಕ್ಕೂ ಹೆಚ್ಚು ಸೈನಿಕರಲ್ಲಿ ನಸೀರ್ ಅಹ್ಮದ್ ಕೂಡ ಇದ್ದನಲ್ಲ. ಅವನದ್ದು ದೇಶನಿಷ್ಠೆಯಲ್ಲವೆ? ಜೀವ ಅಲ್ಲವೆ? ಕುಟುಂಬಸ್ಥನಲ್ಲವೆ? ನೆನಪಿಸಿಕೊಳ್ಳೋರೇ ಇಲ್ಲ! ಹಡಬೆ ಚಾನಲ್‍ನವರೂ ತುಟಿಬಿಚ್ಚಲಿಲ್ಲ! ಯಾರಿಗೂ ನಾವು ನೀವೆಲ್ಲಾ ಒಟ್ಟಿಗೆ ಬಾಳೋದು ಬೇಕಿಲ್ಲ. ದೇಶದ ಶಕ್ತಿ ಹೆಚ್ಚೋದೂ ಬೇಕಿಲ್ಲ.

ರಾಜಕಾರಣಿಗಳ ಪಾಲಿಗೆ ನಾವು ಕೇವಲ ಮತಬ್ಯಾಂಕ್. ನಾವೇನು ಅರ್ಜಿ ಹಾಕ್ಕೊಂಡು ಹುಟ್ಟಿದ್ದೆವಾ? ಕನ್ನಡ ಮಾತನಾಡೋರೆಲ್ಲಾ ಕನ್ನಡಿಗರು ಅನ್ನೋದಾದ್ರೆ ನಾವೂ ಕನ್ನಡಿಗರು. ಹಿಂದಿ ಒಂದಿಷ್ಟು ಗೊತ್ತು. ಉರ್ದು ಗೊತ್ತೇ ಇಲ್ಲ. ನಮ್ಮ ಮಕ್ಕಳೂ ಕಾನ್ವೆಂಟಿಗೇ ಹೋಗೋದು. ಹೀಗೆಲ್ಲಾ ಪ್ರಮಾಣೀಕರಿಸಬೇಕಾದ್ದೂ ಎಂತಹ ಪರಿಶಾನಿ ನೋಡಿ. ದಾಡಿ ಬಿಟ್ಟರೂ ತಪ್ಪು ಬುರ್ಕಾ ತೊಟ್ಟರೂ ತಪ್ಪು. ಒಂದು ಹಿಡಿಯಷ್ಟು ಪ್ರೀತಿ ತೋರಿಸಿದರೂ ಸಾಗರದಷ್ಟು ಪ್ರೀತಿ ಕೊಡೋರು ಕಣ್ರಿ ನಾವು. ಸಲೀಮ್ ಅನಾರ್ಕಲಿ, ಲೈಲಾ ಮಜ್ನು, ಶಿರಿನ್ ಪರಿಹಾದ್ ರಕ್ತವೇ ನಮ್ಮಲ್ಲೂ ಹರೀತಿದೆ. ನಮ್ಮಲ್ಲೂ ಸೂಫಿ ಸಂತರು, ಕಲಾಂನಂತಹ ವಿಜ್ಞಾನಿಗಳು ಹುಟ್ಟಿದ್ದಾರೆ. ಬ್ರಿಟಿಷರ ವಿರುದ್ಧ ಲಡಾಯಿಗೈದ ಟಿಪ್ಪುನಂತಹ ಶೂರರೂ ಹುಟ್ಟಿದ್ದಾರೆ. ಟಿಪ್ಪು ಹೋರಾಡಿದ್ದು ತನ್ನ ಪಟ್ಟಪದವಿಗಳಿಗಾಗಿ ಅಂತ ವಾದ ಹೂಡೋದು ಯಾವ ನ್ಯಾಯ? ಹಾಗಾದರೆ ಝಾನ್ಸಿರಾಣಿ, ಕಿತ್ತೂರ ರಾಣಿ, ಅಬ್ಬಕ್ಕ ಹೋರಾಡಿದ್ದೇಕೆ? ಇವರೆಲ್ಲಾ ಬ್ರಿಟಿಷರೊಂದಿಗೆ ರಾಜಿಯಾಗಿ ಹಾಯಾಗಿರಬಹುದಿತ್ತಲ್ಲ. ಹಾಗಾಗಿದ್ದಿದ್ದರೆ ಭಾರತ ದೇಶ ಎಂದಿಗೂ ನಮ್ಮದಾಗುತ್ತಿರಲಿಲ್ಲ. ಗಾಂಧೀಜಿ ಬರುವವರೆಗೂ ಹೋರಾಟದ ಕಾವನ್ನು ಕಾಪಾಡಿಕೊಂಡು ಬಂದ ದೇಶಪ್ರೇಮಿಗಳಲ್ಲವೆ ಇವರು? ಈಗೀಗ ಊಟ ಸೇರ್ತಾ ಇಲ್ಲ. ನಿದ್ರೆ ಬರ್ತಾ ಇಲ್ಲ. ಹೊರಗೆ ಹೆಜ್ಜೆ ಇಡಲೂ, ಕಚೇರಿಯಲ್ಲಿ ದುಡಿಯಲೂ ಮುಜುಗರ. ಯಾರೇನಂದರೂ ಸಹನೆಗೆಡುವಂತಿಲ್ಲ. ಬೈದವರನ್ನ ಬಂಧುಗಳಯ್ಯಾ ಅಂತ ಬಸವಣ್ಣೋರೇ ಅಂದಾಗ ನಮ್ಮಂಥವರ ಪಾಡೇನು. ನಾವೂ ದೇಶವಾಸಿಗಳಲ್ಲವೆ. ಭಾಯಿ ಔರ್ ಬೆಹನ್‍ಗಳಲ್ಲವೆ? ಸೈನಿಕರಲ್ಲಿ ಜಾತಿಮತ ಹುಡುಕೋದು ಸಣ್ಣತನವಲ್ಲವೆ

ನಮ್ಮವರೂ ಸೇನೆಯಲ್ಲಿಲ್ಲವೆ? ಯಾರೂ ಸತ್ತೇ ಇಲ್ಲವೆ!? ಪಾಕಿಸ್ತಾನದ ಮೇಲೆ ಯುದ್ಧ ಮಾಡಿ ವಿಷವೃಕ್ಷವನ್ನ ಒಂದೇ ಸಲ ಕಿತ್ತು ಹಾಕಿ ನೆಮ್ಮದಿಯಾಗಿ ಬಾಳಲಾದರೂ ಅವಕಾಶ ಕೊಡಿ. ಮುಖ್ಯವಾಹಿನಿಗೆ ಬನ್ನಿರೆಂಬ ವಾಹಿನಿಗಳೇ ವಿಷಜಂತುಗಳಂತೆ ನೋಡುವುದು ಸುಳ್ಳೇ? ನಮ್ಮಲ್ಲಿಯೇ ಬಡಾ ಆದ್ಮಿಗಳು ಮಿಲಿಯನಿಯರ್ಸ್ ಹಾಯಾಗಿ ಮಹಲುಗಳಲ್ಲಿದ್ದಾರೆ. ಮಿಡ್ಲ್‍ಕ್ಲಾಸ್‍ಗಳ ಗತಿಯೇನು? ಸೇನೆಗೆ ಸೇರಿ ದೇಶಪ್ರೇಮವನ್ನು ಸಾಬೀತು ಮಾಡುವ ವಯಸ್ಸೂ ನನ್ನದಲ್ಲ. ಪರರನ್ನು ಕೊಂದರೆ ಜನ್ನತ್ ಸಿಗುವುದೆಂದು ನಂಬಿದವನೂ ಅಲ್ಲ. ವಾರ್‍ಗಿಂತ ಪ್ಯಾರ್ ಈವತ್ತು ಮುಖ್ಯ. ಹೊರದೇಶಗಳಿಗಿಂತ ನಾವಿಲ್ಲಿ ಸುಖವಾಗಿಯೂ ಸುರಕ್ಷಿತವಾಗಿಯೂ ಇದ್ದೇವೆ. ಆದರೆ ಬಾಳಲು ಸುಖ ಸುರಕ್ಷತೆಗಿಂತ ನಂಬಿಕೆ ಮುಖ್ಯ ಕಣ್ರಿ. ದೇಶಭಕ್ತರೆಂದು ಪ್ರೂವ್ ಮಾಡಲು ಎಲ್ಲರ ಜೊತೆ ಪಾಕ್ ಧ್ವಜ ಸುಟ್ಟೆವು. ಮಡಿದ ಧೀರರಿಗಾಗಿ ಕ್ಯಾಂಡಲ್ ಹಿಡಿದೆವು. ಕವಿತೆ ಬರೆದು ಹಾಡಿದೆವು. ಭಾರತಮಾತಾಕಿ ಜೈ ಅಂತ ಕೂಗಿದ್ದಾಯಿತು. ರಾಮಮಂದಿರ ಕಟ್ಟೋಣ ಅಂದಿದ್ದಾಯಿತು. ಹೇಗೆ ನಂಬಿಸೋದು ನಿಮ್ಮನ್ನು! ನೀವೇ ಹೇಳಿ ಕೊಡ್ರಪ್ಪಾ? ಬೆಂಕಿ ಮಧ್ಯೆ ಬದುಕೋದು ಹೇಗೆ. ನಮಗೆ ಬದುಕಲಾದರೂ ಯಾವ ದೇಶವಿದೆ? ಈ ದೇಶ ನಮ್ಮದೂ ಅಲ್ಲವೆ? ಕಾಪಾಡೋದು ಜನ್ನತ್. ನೆರೆಗೆ ಹೊರೆಯಾಗದಿದ್ದರದೇ ಜನ್ನತ್. ನೀವು ತಿನ್ನೋದು ಉಡೋದನ್ನೇ ಅಲ್ಲವೆ ನಾವೂ ಉಡೋದು ತಿನ್ನೋದು. ದಲಿತರೂ ನಿಮ್ಮವರೆ. ನೀವು ಅವರನ್ನು ಮುಟ್ಟೋಕೇ ಹಿಂಜರಿತೀರಲ್ಲ. ನಾವೆಂದೂ ಹಾಗೆ ವರ್ತಿಸಿದವರಲ್ಲ. ನಿಮ್ಮ ದೇವಾಲಯಗಳಿಗೆ ನಾವು ಬಂದಂಗೆ ನೀವು ಮಸೀದಿಗಳಿಗೇಕೆ ಬರೋದಿಲ್ಲ! ಮಸೀದಿಗಳಿಗೆಂದೂ ನಾವು ಬೀಗವೇ ಹಾಕಿದವರಲ್ಲ. ದೇವರು ಧರ್ಮದ ಹೆಸರಿನಲ್ಲಿ ದೇಶವನ್ನು ಒಡೆವ ಕೋಮುವಾದಿ ರಾಜಕಾರಣಿಗಳನ್ನು ನಂಬದಿರಿ. ನಿಮ್ಮೊಡನೆ ಒಟ್ಟಾಗೇ ಬಾಳುತ್ತಿರುವ ನಮ್ಮನ್ನು ನಂಬಿ ಪ್ಲೀಸ್. ನಂಬಿದರೆ ನಂಬಿ ಬಿಟ್ಟರೆ ಬಿಡಿ. ನೀವು ಪ್ರೀತಿಸಿ ದ್ವೇಷಿಸಿ, ನಮ್ಮ ಸಾವು ಬದುಕು ಈ ನೆಲದಲ್ಲಿಯೇ. ಅಚ್ಚೆದಿನ್ ಬಾರದಿದ್ದರೆ ಬೇಡ, ಬುರೆದಿನ್ ಬಾರದಿದ್ದರೆ ಬಸ್-ಸಾಕಪ್ಪ. ಖುದಾನಲ್ಲಿ ನನ್ನ ದುವಾ ಇದೆ. ಬೊಗಸೆಯಿಂದ ಮುಖ ವರೆಸಿಕೊಂಡ ಇಸ್ಮಾಯಿಲ್ಗೆ ಕೆನ್ನೆಯ ಮೇಲಿಳಿದ ಕಣ್ಣೀರು ತಾಕಿದವು. ಎರಡೂ ಭುಜಗಳತ್ತ ನೋಡಿದ ಶಾಸ್ತ್ರ ಮಾಡಿ ನಿಟ್ಟುಸಿರಿನೊಂದಿಗೆ ಪ್ರೇಯರ್ ಮುಗಿಸಿ ಮೇಲೆದ್ದ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...