Homeಮುಖಪುಟತೆಲಂಗಾಣ ವಿಧಾನಸಭಾ ಚುನಾವಣೆ: ಇಂದು ಮತದಾನ

ತೆಲಂಗಾಣ ವಿಧಾನಸಭಾ ಚುನಾವಣೆ: ಇಂದು ಮತದಾನ

- Advertisement -
- Advertisement -

ತೆಲಂಗಾಣ ವಿಧಾನಸಭೆಯ 119 ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ. ಬೆಳಿಗ್ಗೆ 8 ಗಂಟೆಯಿಂದ ಮತದಾನ ಆರಂಭಗೊಂಡಿದ್ದು, ಸಂಜೆ 6ರವರೆಗೆ ಮುಂದುವರಿಯಲಿದೆ.

ತೆಲುಗು ರಾಜ್ಯದ 3.17 ಕೋಟಿ ಮತದಾರರು ರಾಷ್ಟ್ರೀಯ, ಪ್ರಾದೇಶಿಕ ಸೇರಿ 109 ಪಕ್ಷಗಳ 2,290 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಬರೆಯಲಿದ್ದಾರೆ. ಈ ಚುನಾವಣೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಮತ್ತು ಆಡಳಿತಾರೂಢ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಯ ಕೆ ಚಂದ್ರಶೇಖರ ರಾವ್ ಅವರಂತಹ ಪ್ರಮುಖ ನಾಯಕರಿಗೆ ಪ್ರತಿಷ್ಠೆಯ ವಿಷಯವಾಗಿದೆ.

ಅಭ್ಯರ್ಥಿಗಳ ಪೈಕಿ 221 ಮಹಿಳೆಯರು, ಒಬ್ಬರು ತೃತೀಯ ಲಿಂಗಿ ಒಳಗೊಂಡಿದ್ದಾರೆ. 103 ಮಂದಿ ಶಾಸಕರು ಮತ್ತೊಮ್ಮೆ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

ರಾಜ್ಯದ್ಯಾಂತ 35, 665 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಪೈಕಿ 12 ಸಾವಿರ ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. 2.8 ಲಕ್ಷ ಸಿಬ್ಬಂದಿ ಚುನಾವಣಾ ಕರ್ತವ್ಯ ನಿರ್ವಹಿಸಲಿದ್ದಾರೆ. ಪೊಲೀಸರು ಬಿಗಿ ಬಂದೋ ಬಸ್ತ್ ಕೈಗೊಂಡಿದ್ದಾರೆ.

ತೆಲಂಗಾಣದಲ್ಲಿ ಪ್ರಪ್ರಥಮ ಬಾರಿಗೆ 80 ವರ್ಷ ಮೇಲ್ಪಟ್ಟ ನಾಗರಿಕರು ಮತ್ತು ವಿಶೇಷ ಚೇತನರಿಗೆ ಮನೆಯಿಂದಲೇ ಹಕ್ಕು ಚಲಾಯಿಸುವ ಅವಕಾಶ ಕಲ್ಪಿಸಲಾಗಿದೆ. 27, 600 ಜನರು ಇದಕ್ಕಾಗಿ ನೋಂದಣಿ ಮಾಡಿಕೊಂಡಿದ್ದಾರೆ.

ನಕ್ಸಲ್ ಪೀಡಿತ ಪ್ರದೇಶಗಳ ಮತಗಟ್ಟೆಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ಸಂಜೆ 4 ರವರೆಗೆ ಮತದಾನ ನಡೆಯಲಿದೆ ಎಂದು ಮುಖ್ಯ ಚುನಾವಣಾಧಿಕಾರಿ ವಿಕಾಸ್ ರಾಜ್ ತಿಳಿಸಿದ್ದಾರೆ.

ಡಿಸೆಂಬರ್ 3ರಂದು ದೇಶದ ಇತರ ನಾಲ್ಕು ರಾಜ್ಯಗಳಾದ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ಮಿಜೋರಾಂ ಜೊತೆ ತೆಲಂಗಾಣದ ಮತ ಎಣಿಕೆಯೂ ನಡೆಯಲಿದೆ.

ಪಂಚರಾಜ್ಯ ಚುನಾವಣೆಯ ಕೊನೆಯ ಮತದಾನ :

ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ಮಿಜೋರಾಂ ಮತ್ತು ತೆಲಂಗಾಣ ಸೇರಿ ಐದು ರಾಜ್ಯಗಳ ವಿಧಾನಸಭೆಗೆ ಚುನಾವಣೆ ನಡೆಯುತ್ತಿದೆ. ತೆಲಂಗಾಣ ಹೊರತು ಇತರ ನಾಲ್ಕು ರಾಜ್ಯಗಳಲ್ಲಿ ನವೆಂಬರ್ 7 ಮತ್ತು 26ರಂದು ಎರಡು ಹಂತಗಳಲ್ಲಿ ಈಗಾಗಲೇ ಮತದಾನ ನಡೆದಿದೆ. ಇಂದು ಕೊನೆಯದಾಗಿ ತೆಲಂಗಾಣದ ಮತದಾನ ನಡೆಯುತ್ತಿದೆ.

ಆಡಳಿತಾರೂಢ ಬಿಆರ್‌ಎಸ್ ಪಕ್ಷ ಎಲ್ಲಾ 119 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ನಟ ಪವನ್ ಕಲ್ಯಾಣ್ ನೇತೃತ್ವದ ಜನಸೇನೆ ಕ್ರಮವಾಗಿ 111 ಮತ್ತು 8 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿವೆ. ಕಾಂಗ್ರೆಸ್ ತನ್ನ ಮಿತ್ರ ಪಕ್ಷವಾದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಗೆ ಒಂದು ಸ್ಥಾನವನ್ನು ಬಿಟ್ಟು ಕೊಟ್ಟಿದೆ. ಉಳಿದ 118 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಗ್ಯಾರಂಟಿ ಕೊಟ್ಟ ಕಾಂಗ್ರೆಸ್‌ :

ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್‌ ಘೋಷಿಸಿದ್ದ ಅನ್ನಭಾಗ್ಯ, ಗೃಹಲಕ್ಷಿ, ಗೃಹಜ್ಯೋತಿ, ಯುವನಿಧಿ, ಶಕ್ತಿ ಈ ಐದು ಗ್ಯಾರಂಟಿಗಳು ಪಕ್ಷಕ್ಕೆ ಅಭೂತಪೂರ್ವ ಗೆಲುವನ್ನು ತಂದು ಕೊಟ್ಟಿತ್ತು. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ರಚನೆಗೆ ಕಾರಣವಾಗಿತ್ತು.

ಇದೇ ಗ್ಯಾರಂಟಿ ದಾಳವನ್ನು ತೆಲುಗು ರಾಜ್ಯದಲ್ಲೂ ಕಾಂಗ್ರೆಸ್ ಉರುಳಿಸಿದೆ. ತೆಲಂಗಾಣದಲ್ಲೂ, ಪ್ರತಿ ತಿಂಗಳು ಅತ್ತೆಗೆ 4,000 ರೂ., ಸೊಸೆಗೆ 2,500 ರೂ. ಪ್ರತಿ ಹೆಣ್ಣುಮಗುವಿನ ಖಾತೆಗೆ ಪ್ರತಿ ತಿಂಗಳು 2,500 ರೂ. (ಮಹಾಲಕ್ಷ್ಮಿ ಯೋಜನೆ), ಪಿಂಚಣಿ ಮೊತ್ತ 2,000 ರೂ.ನಿಂದ 4,000 ರೂ.ಗೆ ಹೆಚ್ಚಳ, 500 ರೂಪಾಯಿಗೆ ಒಂದು ಗ್ಯಾಸ್ ಸಿಲಿಂಡರ್, ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ನೆರವು ಬಡವರಿಗೆ 200 ಯೂನಿಟ್‍ವರೆಗೂ ಉಚಿತ ವಿದ್ಯುತ್, ಹೀಗೆ 6 ಗ್ಯಾರಂಟಿಗಳನ್ನು ಘೋಷಿಸಿದೆ.

ಬಿಆರ್‌ಎಸ್‌ ಭರವಸೆ ಏನು?

ಸಾಮಾಜಿಕ ಭದ್ರತಾ ಪಿಂಚಣಿ ಮೊತ್ತ ಏರಿಕೆ, ರೈತರಿಗೆ ‘ರೈತಬಂಧು’ ಹೂಡಿಕೆ ಯೋಜನೆಯಡಿ ಆರ್ಥಿಕ ನೆರವು, 400 ರೂ.ಗೆ ಎಲ್‌ಪಿಜಿ ಸಿಲಿಂಡರ್ ಪೂರೈಕೆ, ಬಿಪಿಎಲ್‌ ವರ್ಗದ 93 ಲಕ್ಷ ಕುಟುಂಬಗಳಿಗೆ 5 ಲಕ್ಷ ರೂ.ಗಳ ಜೀವವಿಮೆ. ವಿಕಲಾಂಗರಿಗೆ ನೀಡುತ್ತಿರುವ ಪಿಂಚಣಿ ಮೊತ್ತ 4,016 ರೂ. ನಿಂದ ಮುಂದಿನ ಐದು ವರ್ಷಗಳಲ್ಲಿ 6,016 ರೂ.ಗೆ ಏರಿಕೆ. ಹೀಗೆ ಹಲವು ಭರವಸೆಗಳನ್ನು ಆಢಳಿತರೂಡ ಬಿಆರ್‌ಎಸ್‌ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ನೀಡಿದೆ.

ಬಿಜೆಪಿ ವಾಗ್ದಾನ ಏನು?

ಬಿಜೆಪಿ ಪಕ್ಷ ಸಮಾನ ನಾಗರಿಕ ಸಂಹಿತೆ ಜಾರಿ, ಉಜ್ವಲ ಯೋಜನೆಯಡಿ ಉಚಿತ ಎಲ್‌ಪಿಜಿ ಸಿಲಿಂಡರ್ ವಿತರಣೆ, ಕೃಷ್ಣ ನದಿ ನೀರು ಹಂಚಿಕೆಯಲ್ಲಿ ರಾಜ್ಯಕ್ಕೆ ಬರಬೇಕಿರುವ ನ್ಯಾಯಯುತ ಪಾಲು ದೊರಕಿಸುವುದು, ಧರ್ಮಾಧಾರಿತ ಮೀಸಲು ರದ್ದು, ತೈಲದ ಮೇಲಿನ ವ್ಯಾಟ್‌ ತೆರಿಗೆ ಕಡಿತ ಹೀಗೆ ಹಲವು ಭರವಸೆಗಳನ್ನು ಕೊಟ್ಟಿದೆ.

ಚುನಾವಣಾ ಪೂರ್ವ ಸಮೀಕ್ಷೆಗಳು ಹೇಳಿದ್ದೇನು?

ಲೋಕ್‌ಪೋಲ್‌ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಲಿದೆ ಎಂದು ತಿಳಿಸಿದೆ. ಕಾಂಗ್ರೆಸ್‌ 69-72 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ. ಆಢಳಿತರೂಡ ಬಿಆರ್‌ಎಸ್‌ 36-39, ಎಐಎಂಐಎಂ 5-6, ಬಿಜೆಪಿ 2-3, ಇತರರು 0-1 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಬಹುದು ಎಂದಿದೆ.

ಸೌತ್ ಫಸ್ಟ್ ಮಾಡಿರುವ ಸಮೀಕ್ಷೆಯು ಕೂಡ ಕಾಂಗ್ರೆಸ್‌ ಗೆಲುವು ದಾಖಲಿಸಲಿದೆ ಎಂದಿದೆ. ಕಾಂಗ್ರೆಸ್‌ 57-62, ಬಿಆರ್‌ಎಸ್‌ 41-46, ಎಐಎಂಐಎಂ 6-7, ಬಿಜೆಪಿ, 3-6 ಮತ್ತು ಇತರರು 1-2 ಸ್ಥಾನಗಳಲ್ಲಿ ಗೆಲ್ಲುವ ಸಾಧ್ಯತೆ ಇದೆ ಎಂದು ಹೇಳಿದೆ.

ಇದನ್ನೂ ಓದಿ : ಸಿಎಎ ಜಾರಿಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ: ಅಮಿತ್‌ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...