Homeಮುಖಪುಟನೋಬೆಲ್ ಪುರಸ್ಕೃತ ಯುಎಸ್ ಮಾಜಿ ವಿದೇಶಾಂಗ ಕಾರ್ಯದರ್ಶಿ ಹೆನ್ರಿ ಕಿಸ್ಸಿಂಜರ್ ನಿಧನ

ನೋಬೆಲ್ ಪುರಸ್ಕೃತ ಯುಎಸ್ ಮಾಜಿ ವಿದೇಶಾಂಗ ಕಾರ್ಯದರ್ಶಿ ಹೆನ್ರಿ ಕಿಸ್ಸಿಂಜರ್ ನಿಧನ

- Advertisement -
- Advertisement -

ಅಮೆರಿಕದ ಮಾಜಿ ವಿದೇಶಾಂಗ ಕಾರ್ಯದರ್ಶಿ, ರಾಜತಾಂತ್ರಿಕ, ನೋಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಹೆನ್ರಿ ಕಿಸ್ಸಿಂಜರ್ ತನ್ನ 100ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.

ಜರ್ಮನ್ ಮೂಲದವರಾದ ಕಿಸ್ಸಿಂಜರ್ ಕನೆಕ್ಟಿಕಟ್‌ನಲ್ಲಿರುವ ಅವರ ಮನೆಯಲ್ಲಿ ಬುಧವಾರ ನಿಧನರಾಗಿದ್ದಾರೆ ಎಂದು ಅವರ ರಾಜಕೀಯ ಸಲಹಾ ಸಂಸ್ಥೆ ಕಿಸ್ಸಿಂಜರ್ ಅಸೋಸಿಯೇಟ್ಸ್ ತಿಳಿಸಿದೆ.

1923ರಲ್ಲಿ ಜರ್ಮನಿಯಲ್ಲಿ ಜನಿಸಿದ ಕಿಸ್ಸಿಂಜರ್, 1938 ರಲ್ಲಿ ಕುಟುಂಬದೊಂದಿಗೆ ಅಮೆರಿಕಕ್ಕೆ ಬಂದು ನೆಲೆಸಿದರು. 1943ರಲ್ಲಿ ಅವರು ಅಮೆರಿಕದ ಪೌರತ್ವ ಪಡೆದ ಕಿಸ್ಸಿಂಜರ್, ಯುಎಸ್ ಸೇನೆಯಲ್ಲಿ ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಬಳಿಕ ಇಂಟಲಿಜೆನ್ಸ್ ಕಾರ್ಪ್‌ನಲ್ಲಿ ಕೆಲಸ ಮಾಡಿದ್ದರು. 1969ರಲ್ಲಿ ಆಗಿನ ಯುಎಸ್ ಅಧ್ಯಕ್ಷ ಡಿಚರ್ಡ್ ನಿಕ್ಸನ್, ಕಿಸ್ಸಿಂಜರ್ ಅವರನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರರನ್ನಾಗಿ ನೇಮಿಸಿದ್ದರು. ತನ್ನ ಅಧಿಕಾರವಧಿಯಲ್ಲಿ ಕಿಸ್ಸಿಂಜರ್ ಯುಎಸ್ ವಿದೇಶಾಂಗ ನೀತಿಗಳ ಮಾರ್ಪಾಡು, ಹೊಸ ಪರಿಚಯ ಮಾಡಿದ್ದರು.

ವಿವಾದಕ್ಕೆ ಕಾರಣವಾಗಿತ್ತು ಕಿಸ್ಸಿಂಜರ್ ನೋಬೆಲ್ ಪುರಸ್ಕಾರ :

ಹೆನ್ರಿ ಕಿಸ್ಸಿಂಜರ್ ಎಂದಾಕ್ಷಣ ಅವರಿಗೆ ದೊರೆತ ನೋಬೆಲ್ ಪುರಸ್ಕಾರದ ವಿಚಾರ ಮುನ್ನಲೆಗೆ ಬರುತ್ತದೆ. 1973ರಲ್ಲಿ ವಿಯೆಟ್ನಾಂನ ಲೇ ಡುಕ್ ಥೋ ಅವರೊಂದಿಗೆ ಕಿಸ್ಸಿಂಜರ್ ಜಂಟಿಯಾಗಿ ನೋಬೆಲ್ ಶಾಂತಿ ಪುರಸ್ಕಾರ ಪಡೆದರು. ಕಿಸ್ಸಿಂಜರ್ ನೋಬೆಲ್ ಪಡೆಯುವುದಕ್ಕೆ ಜಾಗತಿಕ ವಲಯದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು. ಕಾಂಬೋಡಿಯಾದಲ್ಲಿ ಗೌಪ್ಯವಾಗಿ ಬಾಂಬ್ ದಾಳಿ ನಡೆಸಿದ್ದರ ಹಿಂದೆ ಕಿಸ್ಸಿಂಜರ್ ಕೈವಾಡ ಇದೆ ಎಂದು ನೋಬೆಲ್ ಸಮಿತಿಯ ಇಬ್ಬರು ಸದಸ್ಯರು ರಾಜೀನಾಮೆ ಕೂಡ ನೀಡಿದ್ದರು.

100 ನೇ ವರ್ಷಕ್ಕೆ ಕಾಲಿಟ್ಟ ನಂತರವೂ, ಕಿಸ್ಸಿಂಜರ್ ಶ್ವೇತಭವನದಲ್ಲಿ ಸಭೆಗಳಿಗೆ ಹಾಜರಾಗುತ್ತಿದ್ದರು. ನಾಯಕತ್ವದ ಶೈಲಿಗಳ ಬಗ್ಗೆ ಪುಸ್ತಕವನ್ನು ಪ್ರಕಟಿಸಿದ್ದರು. ಉತ್ತರ ಕೊರಿಯಾ ಒಡ್ಡಿದ ಪರಮಾಣು ಬೆದರಿಕೆಯ ಬಗ್ಗೆ ಅವರು ಸೆನೆಟ್ ಸಮಿತಿಯ ಮುಂದೆ ಸಾಕ್ಷ್ಯ ನೀಡಿದ್ದರು. ಈ ವರ್ಷದ ಜುಲೈನಲ್ಲಿ, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಭೇಟಿ ಮಾಡುವ ಮೂಲಕ ಕಿಸ್ಸಿಂಜರ್ ಅಚ್ಚರಿ ಮೂಡಿಸಿದ್ದರು.

ಸೆಪ್ಟೆಂಬರ್ 11, 2001 ರ ಯುಎಸ್ ವಿಶ್ವ ವಾಣಿಜ್ಯ ಕಟ್ಟಡಗಳ ಮೇಲಿನ ಅಲ್‌ ಖೈದಾ ದಾಳಿಯ ನಂತರ, ಆಗಿನ ಅಧ್ಯಕ್ಷ ಜಾರ್ಜ್ ಡಬ್ಲ್ಯೂ ಬುಷ್ ಕಿಸ್ಸಿಂಜರ್ ಅವರನ್ನು ತನಿಖಾ ಸಮಿತಿಯ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಿದ್ದರು. ಆದರೆ, ಡೆಮಾಕ್ರಟಿಕ್ ಪಕ್ಷದ ತೀವ್ರ ವಿರೋಧವು ಕಿಸ್ಸಿಂಜರ್ ಅವರನ್ನು ಆ ಸ್ಥಾನದಿಂದ ರಾಜೀನಾಮೆ ನೀಡುವಂತೆ ಮಾಡಿಸಿತ್ತು.

1964 ರಲ್ಲಿ ತನ್ನ ಮೊದಲ ಪತ್ನಿ ಆನ್ ಫ್ಲೀಶರ್‌ಗೆ ವಿಚ್ಛೇದನ ನೀಡಿದ ನಂತರ, ಕಿಸ್ಸಿಂಜರ್ 1974 ರಲ್ಲಿ ನ್ಯೂಯಾರ್ಕ್ ಗವರ್ನರ್ ನೆಲ್ಸನ್ ರಾಕ್‌ಫೆಲ್ಲರ್ ಅವರ ಸಹಾಯಕಿ ನ್ಯಾನ್ಸಿ ಮ್ಯಾಗಿನ್ನೆಸ್ ಅವರನ್ನು ವಿವಾಹವಾದರು. ತಮ್ಮ ಮೊದಲ ಪತ್ನಿಯಿಂದ ಕಿಸ್ಸಿಂಜರ್ ಇಬ್ಬರು ಮಕ್ಕಳನ್ನು ಪಡೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...