Homeಮುಖಪುಟಎಲ್ಗರ್ ಪರಿಷತ್ ಪ್ರಕರಣ: ವರವರ ರಾವ್ ಹೈದರಾಬಾದ್‌ ಪ್ರಯಾಣಕ್ಕೆ ಕೋರ್ಟ್ ಅನುಮತಿ

ಎಲ್ಗರ್ ಪರಿಷತ್ ಪ್ರಕರಣ: ವರವರ ರಾವ್ ಹೈದರಾಬಾದ್‌ ಪ್ರಯಾಣಕ್ಕೆ ಕೋರ್ಟ್ ಅನುಮತಿ

- Advertisement -
- Advertisement -

2018ರ ಎಲ್ಗರ್ ಪರಿಷತ್- ಮಾವೋವಾದಿ ನಂಟು ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ತೆಲುಗು ಕವಿ ವರವರ ರಾವ್ ಅವರಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಲು ಹೈದರಾಬಾದ್‌ಗೆ ತೆರಳಲು ಮುಂಬೈನ ಎನ್‌ಐಎ ವಿಶೇಷ ನ್ಯಾಯಾಲಯವು ಅನುಮತಿ ನೀಡಿದೆ.

ನ್ಯಾಯಾಧೀಶ ರಾಜೇಶ್ ಕಟಾರಿಯಾ ಅವರ ಪೀಠವು ಎಡಗಣ್ಣಿನ ಶಸ್ತ್ರಚಿಕಿತ್ಸೆಗಾಗಿ ಡಿ.5 ರಿಂದ 11ರ ನಡುವೆ ತೆಲಂಗಾಣ ರಾಜಧಾನಿಗೆ ಪ್ರಯಾಣಿಸಲು ವರವರ ರಾವ್ ಅವರಿಗೆ ಅನುಮತಿ ನೀಡಿದೆ.

ವರವರ ರಾವ್ ಡಿಸೆಂಬರ್ 4ರಂದು ರಾಷ್ಟ್ರೀಯ ತನಿಖಾ ಸಂಸ್ಥೆಗೆ ಅವರ ಪ್ರಯಾಣದ ವಿವರಗಳನ್ನು ಮತ್ತು ಅವರು ಹೈದರಾಬಾದ್‌ನಲ್ಲಿ ನಿಲ್ಲುವ ಸ್ಥಳದ ವಿಳಾಸ ಮತ್ತು ಮೊಬೈಲ್‌ ಸಂಖ್ಯೆಯನ್ನು ಒದಗಿಸಬೇಕು. ನ್ಯಾಯಾಲಯವು ನೀಡಿರುವ ಈ ಸ್ವಾತಂತ್ರ್ಯವನ್ನು ದುರ್ಬಳಕೆ ಮಾಡಬಾರದು ಎಂದು ನ್ಯಾಯಾಲಯ ಹೇಳಿದೆ.

ವರವರ ರಾವ್ ಅವರನ್ನು 2018ರಲ್ಲಿ ಎಲ್ಗರ್ ಪರಿಷತ್-ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ಬಂಧಿಸಲಾಯಿತು ಮತ್ತು ಬಾಂಬೆ ಹೈಕೋರ್ಟ್ ವರವರ ರಾವ್ ಅವರಿಗೆ ಮಾ.2021ರಲ್ಲಿ ವೈದ್ಯಕೀಯ ಕಾರಣಗಳಿಗಾಗಿ ತಾತ್ಕಾಲಿಕ ಜಾಮೀನು ನೀಡಿತ್ತು.

ವರವರ ರಾವ್ ಅವರಿಗೆ ಆ.2022ರಲ್ಲಿ ವೈದ್ಯಕೀಯ ಕಾರಣಗಳಿಗಾಗಿ ಸುಪ್ರೀಂಕೋರ್ಟ್ ಜಾಮೀನು ನೀಡಿತ್ತು. ಜಾಮೀನು ಆದೇಶದಲ್ಲಿ ರಾವ್ ಅವರು ನ್ಯಾಯಾಲಯದ ಅನುಮತಿಯಿಲ್ಲದೆ ಮುಂಬೈನ ವಿಶೇಷ ಎನ್‌ಐಎ ನ್ಯಾಯಾಲಯದ ವ್ಯಾಪ್ತಿಗಿಂತ ಹೊರ ಹೋಗಬಾರದು ಎಂದು ಆದೇಶಿಸಿತ್ತು.

ಕಳೆದ ತಿಂಗಳು ಬಲಗಣ್ಣಿನ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಲು ರಾವ್ ಅವರಿಗೆ ಹೈದರಾಬಾದ್‌ಗೆ ಒಂದು ವಾರ ಪ್ರಯಾಣಿಸಲು ಹೈಕೋರ್ಟ್ ಅನುಮತಿ ನೀಡಿತ್ತು.

ನ್ಯಾಯಮೂರ್ತಿ ಎ ಎಸ್ ಗಡ್ಕರಿ ನೇತೃತ್ವದ ವಿಭಾಗೀಯ ಪೀಠವು ಅವರು ಹಿಂದಿರುಗಿದ ನಂತರ ಮತ್ತೊಂದು ಕಣ್ಣಿನ ಶಸ್ತ್ರಚಿಕಿತ್ಸೆಗಾಗಿ ಮತ್ತೊಮ್ಮೆ ಪ್ರಯಾಣಿಸಲು ಅನುಮತಿ ಕೋರಿ ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸಬಹುದು ಎಂದು ಹೇಳಿತ್ತು.

ಡಿ.31, 2017ರಂದು ಪುಣೆಯಲ್ಲಿ ನಡೆದ ಎಲ್ಗಾರ್ ಪರಿಷತ್ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣಗಳನ್ನು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾವ್ ಮತ್ತು ಇತರ ಹಲವು ಎಡ-ಒಲವಿನ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಪುಣೆ ಪೊಲೀಸರು ಸಮಾವೇಶಕ್ಕೆ ಮಾವೋವಾದಿಗಳ ಬೆಂಬಲವಿತ್ತು ಎಂದು ಆರೋಪಿಸಿದ್ದರು ಮತ್ತು ಎಲ್ಗಾರ್ ಪರಿಷತ್ ಸಮಾವೇಶದಲ್ಲಿ ಮಾಡಿದ ಭಾಷಣಗಳು ಮರುದಿನ ಪುಣೆ ಜಿಲ್ಲೆಯ ಕೋರೆಗಾಂವ್-ಭೀಮಾ ಯುದ್ಧ ಸ್ಮಾರಕದ ಬಳಿ ಹಿಂಸಾಚಾರವನ್ನು ಪ್ರಚೋದಿಸಿದೆ ಎಂದು ಆರೋಪಿಸಲಾಗಿತ್ತು. ನಂತರ ಈ ಪ್ರಕರಣದ ತನಿಖೆಯನ್ನು ಎನ್‌ಐಎ ವಹಿಸಿಕೊಂಡಿತ್ತು.

ಪುಣೆ ಪೊಲೀಸರಿಂದ ಎನ್‌ಐಎಗೆ ವರ್ಗಾಯಿಸಲಾದ ಎಲ್ಗರ್ ಪರಿಷತ್ ಮತ್ತು ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ರಾವ್ ವಿರುದ್ಧ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎಯಡಿ ಪ್ರಕರಣ ದಾಖಲಿಸಲಾಗಿತ್ತು.

ಇದನ್ನು ಓದಿ: ವಿವಾದಾತ್ಮಕ ಪೋಸ್ಟ್‌: ರಾಜೀವ್ ಚಂದ್ರಶೇಖರ್ ವಿರುದ್ಧ ಬಲವಂತದ ಕ್ರಮ ಬೇಡ; ಹೈಕೋರ್ಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...