Homeಮುಖಪುಟಕಾಲೇಜಿನಲ್ಲಿ ಬುರ್ಖಾ ಧರಿಸಿ ಕ್ಯಾಟ್‌ವಾಕ್‌: ಭುಗಿಲೆದ್ದ ವಿವಾದ

ಕಾಲೇಜಿನಲ್ಲಿ ಬುರ್ಖಾ ಧರಿಸಿ ಕ್ಯಾಟ್‌ವಾಕ್‌: ಭುಗಿಲೆದ್ದ ವಿವಾದ

- Advertisement -
- Advertisement -

ಉತ್ತರಪ್ರದೇಶದ ಕಾಲೇಜೊಂದರ ಫ್ಯಾಷನ್ ಶೋನಲ್ಲಿ ಬುರ್ಖಾ ಧರಿಸಿ ಕ್ಯಾಟ್‌ವಾಕ್‌ ನಡೆಸಿದ್ದು ಜಮಿಯತ್ ಉಲಾಮಾ-ಇ-ಹಿಂದ್ ಈ ಬಗ್ಗೆ ಆಕ್ಷೇಪವನ್ನು ವ್ಯಕ್ತಪಡಿಸಿದೆ.

ಈ ಬಗ್ಗೆ ಮಾತನಾಡಿದ ಮುಜಾಫರ್‌ನಗರದ ಜಮಿಯತ್ ಉಲಮಾ-ಇ-ಹಿಂದ್ ಸಂಚಾಲಕ ಮೌಲಾನಾ ಮುಕರ್ರಂ ಖಾಸ್ಮಿ, ಕಾರ್ಯಕ್ರಮದ ಆಯೋಜಕರು ಧರ್ಮವನ್ನು ಗುರಿಯಾಗಿಸಿಕೊಂಡಿದ್ದಾರೆ ಮತ್ತು ಸಾಂಪ್ರದಾಯಿಕ ಉಡುಪನ್ನು ಅಗೌರವದಿಂದ ಚಿತ್ರಿಸಲಾಗಿದೆ. ಈ ಬಗ್ಗೆ ಕಾರ್ಯಕ್ರಮದ ಆಯೋಜಕರು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಮುಜಾಫರ್‌ನಗರದ ಶ್ರೀ ರಾಮ್ ಕಾಲೇಜಿನಲ್ಲಿ ಭಾನುವಾರ ಆಯೋಜಿಸಿದ್ದ ಫ್ಯಾಷನ್ ಶೋ ವಿಡಿಯೋ ವೈರಲ್‌ ಬಳಿಕ ವಿವಾದ ಭುಗಿಲೆದ್ದಿದೆ. ವಿಡಿಯೋದಲ್ಲಿ  ಬುರ್ಖಾ ಧರಿಸಿ ಕ್ಯಾಟ್‌ವಾಕ್‌ ಮಾಡುವುದು ಸೆರೆಯಾಗಿತ್ತು.

ಬುರ್ಖಾ ಸಾಂಸ್ಕೃತಿಕ ಮತ್ತು ಧಾರ್ಮಿಕ ಮಹತ್ವವನ್ನು ಹೊಂದಿದೆ. ಇದು ಪರ್ದಾ ಸಂಪ್ರದಾಯವನ್ನು ಪ್ರತಿನಿಧಿಸುತ್ತದೆ. ಫ್ಯಾಶನ್ ಶೋನಲ್ಲಿ ಬುರ್ಖಾವನ್ನು ಪ್ರದರ್ಶನದ ವಸ್ತುವಾಗಿ ಪರಿಗಣಿಸಬಾರದು. ಈ ಘಟನೆಯು ವಸ್ತ್ರಕ್ಕೆ ಸಂಬಂಧಿಸಿದ ಸಾಂಸ್ಕೃತಿಕ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಖಾಸ್ಮಿ ಹೇಳಿದ್ದು, ಬುರ್ಖಾವನ್ನು ಈ ರೀತಿಯಾಗಿ ಬಳಸಿರುವುದು ಖಂಡನೀಯ ಮತ್ತು ಕಾಲೇಜು ಆಡಳಿತಾಧಿಕಾರಿಗಳು ತಕ್ಷಣ ಕ್ಷಮೆಯಾಚಿಸಬೇಕು ಎಂದು ಹೇಳಿದ್ದಾರೆ.

ಅವರು ಕ್ಷಮೆಯಾಚಿಸಲು ವಿಫಲವಾದರೆ, ನಮ್ಮ ಸಂಘಟನೆಯು ಕಾಲೇಜು ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತದೆ. ಇಂತಹ ಘಟನೆ ಧಾರ್ಮಿಕ ಭಾವನೆಗಳನ್ನು ಅಗೌರವಿಸುವುದು ಮಾತ್ರವಲ್ಲದೆ ಸಾಂಸ್ಕೃತಿಕ ಆಚರಣೆಗಳ ತಪ್ಪು ವ್ಯಾಖ್ಯಾನಕ್ಕೆ ಕಾರಣವಾಗುತ್ತವೆ ಎಂದು ಜಮಿಯತ್ ಉಲಮಾ-ಇ-ಹಿಂದ್ ಸಂಚಾಲಕ ಮೌಲಾನಾ ಮುಕರ್ರಂ ಖಾಸ್ಮಿ ಹೇಳಿದ್ದಾರೆ.

ಬುರ್ಖಾ ಅಥವಾ ಫರ್ದಾ ಎನ್ನುವುದು ಮುಸ್ಲಿಂ ಮಹಿಳೆಯರು ಬಳಸುವ ವಸ್ತ್ರವಾಗಿದೆ. ಬುರ್ಖಾ ಇತರ ವಸ್ತ್ರಗಳಂತೆ ಕೇವಲ ವಸ್ತ್ರವಲ್ಲ ಅದು ಇಸ್ಲಾಂ ಧರ್ಮದ ಧಾರ್ಮಿಕ ನಂಬಿಕೆಯ ಒಂದು ಭಾಗ. ಮುಸ್ಲಿಂ ಮಹಿಳೆಯರು ಮನೆಯಿಂದ ಹೊರಗೆ ಹೋಗುವ ಸಂದರ್ಭಗಳಲ್ಲಿ ಬುರ್ಖಾವನ್ನು ಧರಿಸುತ್ತಾರೆ. ಬುರ್ಖಾ ಎಲ್ಲಾ ಕೆಟ್ಟ ದೃಷ್ಠಿಯಿಂದ ಮಹಿಳೆಯರನ್ನು ರಕ್ಷಿಸುತ್ತದೆ ಎಂಬ ನಂಬಿಕೆ ಇಸ್ಲಾಂ ಧರ್ಮದಲ್ಲಿದೆ.

ಮುಸ್ಲಿಂ ಮಹಿಳೆಯರು ಬುರ್ಖಾ ಧರಿಸುವುದು ಇಸ್ಲಾಮಿನ ಕಡ್ಡಾಯ ನಿಯಮಗಳಲ್ಲಿ ಒಂದಾಗಿದೆ. ಮಹಿಳೆಯರು ತಮ್ಮ ಎರಡು ಕಣ್ಣುಗಳು ಮತ್ತು ಮುಂಗೈಗಳನ್ನು ಹೊರತು ಇತರ ಯಾವುದೇ ಅಂಗಾಗಳನ್ನು ತನ್ನ ಪತಿ, ಪೋಷಕರು ಮತ್ತು ಸಹೋದರರನ್ನು ಹೊರತು ಪಡಿಸಿ ಇತರ ಯಾವುದೇ ಅನ್ಯ ಪುರುಷನಿಗೆ ಪ್ರದರ್ಶಿಸಬಾರದೆಂಬ ನಿಯಮ ಇಸ್ಲಾಮಿನಲ್ಲಿದೆ. ಅದಕ್ಕಾಗಿ ಸಂಪೂರ್ಣ ಮೈಮುಚ್ಚಲು ಬುರ್ಖಾವನ್ನು ಧರಿಸಲಾಗುತ್ತದೆ. ಆದರೆ ಇದೇ ಸಾಂಪ್ರದಾಯಿಕ ವಸ್ತ್ರವನ್ನು ಫ್ಯಾಷನ್‌ ಶೋನಲ್ಲಿ ಬಳಸಿರುವುದು ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ.

ಇದನ್ನು ಓದಿ: ಎಲ್ಗರ್ ಪರಿಷತ್ ಪ್ರಕರಣ: ವರವರ ರಾವ್ ಹೈದರಾಬಾದ್‌ ಪ್ರಯಾಣಕ್ಕೆ ಕೋರ್ಟ್ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...