Homeಮುಖಪುಟಕಾಲೇಜಿನಲ್ಲಿ ಬುರ್ಖಾ ಧರಿಸಿ ಕ್ಯಾಟ್‌ವಾಕ್‌: ಭುಗಿಲೆದ್ದ ವಿವಾದ

ಕಾಲೇಜಿನಲ್ಲಿ ಬುರ್ಖಾ ಧರಿಸಿ ಕ್ಯಾಟ್‌ವಾಕ್‌: ಭುಗಿಲೆದ್ದ ವಿವಾದ

- Advertisement -
- Advertisement -

ಉತ್ತರಪ್ರದೇಶದ ಕಾಲೇಜೊಂದರ ಫ್ಯಾಷನ್ ಶೋನಲ್ಲಿ ಬುರ್ಖಾ ಧರಿಸಿ ಕ್ಯಾಟ್‌ವಾಕ್‌ ನಡೆಸಿದ್ದು ಜಮಿಯತ್ ಉಲಾಮಾ-ಇ-ಹಿಂದ್ ಈ ಬಗ್ಗೆ ಆಕ್ಷೇಪವನ್ನು ವ್ಯಕ್ತಪಡಿಸಿದೆ.

ಈ ಬಗ್ಗೆ ಮಾತನಾಡಿದ ಮುಜಾಫರ್‌ನಗರದ ಜಮಿಯತ್ ಉಲಮಾ-ಇ-ಹಿಂದ್ ಸಂಚಾಲಕ ಮೌಲಾನಾ ಮುಕರ್ರಂ ಖಾಸ್ಮಿ, ಕಾರ್ಯಕ್ರಮದ ಆಯೋಜಕರು ಧರ್ಮವನ್ನು ಗುರಿಯಾಗಿಸಿಕೊಂಡಿದ್ದಾರೆ ಮತ್ತು ಸಾಂಪ್ರದಾಯಿಕ ಉಡುಪನ್ನು ಅಗೌರವದಿಂದ ಚಿತ್ರಿಸಲಾಗಿದೆ. ಈ ಬಗ್ಗೆ ಕಾರ್ಯಕ್ರಮದ ಆಯೋಜಕರು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಮುಜಾಫರ್‌ನಗರದ ಶ್ರೀ ರಾಮ್ ಕಾಲೇಜಿನಲ್ಲಿ ಭಾನುವಾರ ಆಯೋಜಿಸಿದ್ದ ಫ್ಯಾಷನ್ ಶೋ ವಿಡಿಯೋ ವೈರಲ್‌ ಬಳಿಕ ವಿವಾದ ಭುಗಿಲೆದ್ದಿದೆ. ವಿಡಿಯೋದಲ್ಲಿ  ಬುರ್ಖಾ ಧರಿಸಿ ಕ್ಯಾಟ್‌ವಾಕ್‌ ಮಾಡುವುದು ಸೆರೆಯಾಗಿತ್ತು.

ಬುರ್ಖಾ ಸಾಂಸ್ಕೃತಿಕ ಮತ್ತು ಧಾರ್ಮಿಕ ಮಹತ್ವವನ್ನು ಹೊಂದಿದೆ. ಇದು ಪರ್ದಾ ಸಂಪ್ರದಾಯವನ್ನು ಪ್ರತಿನಿಧಿಸುತ್ತದೆ. ಫ್ಯಾಶನ್ ಶೋನಲ್ಲಿ ಬುರ್ಖಾವನ್ನು ಪ್ರದರ್ಶನದ ವಸ್ತುವಾಗಿ ಪರಿಗಣಿಸಬಾರದು. ಈ ಘಟನೆಯು ವಸ್ತ್ರಕ್ಕೆ ಸಂಬಂಧಿಸಿದ ಸಾಂಸ್ಕೃತಿಕ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಖಾಸ್ಮಿ ಹೇಳಿದ್ದು, ಬುರ್ಖಾವನ್ನು ಈ ರೀತಿಯಾಗಿ ಬಳಸಿರುವುದು ಖಂಡನೀಯ ಮತ್ತು ಕಾಲೇಜು ಆಡಳಿತಾಧಿಕಾರಿಗಳು ತಕ್ಷಣ ಕ್ಷಮೆಯಾಚಿಸಬೇಕು ಎಂದು ಹೇಳಿದ್ದಾರೆ.

ಅವರು ಕ್ಷಮೆಯಾಚಿಸಲು ವಿಫಲವಾದರೆ, ನಮ್ಮ ಸಂಘಟನೆಯು ಕಾಲೇಜು ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತದೆ. ಇಂತಹ ಘಟನೆ ಧಾರ್ಮಿಕ ಭಾವನೆಗಳನ್ನು ಅಗೌರವಿಸುವುದು ಮಾತ್ರವಲ್ಲದೆ ಸಾಂಸ್ಕೃತಿಕ ಆಚರಣೆಗಳ ತಪ್ಪು ವ್ಯಾಖ್ಯಾನಕ್ಕೆ ಕಾರಣವಾಗುತ್ತವೆ ಎಂದು ಜಮಿಯತ್ ಉಲಮಾ-ಇ-ಹಿಂದ್ ಸಂಚಾಲಕ ಮೌಲಾನಾ ಮುಕರ್ರಂ ಖಾಸ್ಮಿ ಹೇಳಿದ್ದಾರೆ.

ಬುರ್ಖಾ ಅಥವಾ ಫರ್ದಾ ಎನ್ನುವುದು ಮುಸ್ಲಿಂ ಮಹಿಳೆಯರು ಬಳಸುವ ವಸ್ತ್ರವಾಗಿದೆ. ಬುರ್ಖಾ ಇತರ ವಸ್ತ್ರಗಳಂತೆ ಕೇವಲ ವಸ್ತ್ರವಲ್ಲ ಅದು ಇಸ್ಲಾಂ ಧರ್ಮದ ಧಾರ್ಮಿಕ ನಂಬಿಕೆಯ ಒಂದು ಭಾಗ. ಮುಸ್ಲಿಂ ಮಹಿಳೆಯರು ಮನೆಯಿಂದ ಹೊರಗೆ ಹೋಗುವ ಸಂದರ್ಭಗಳಲ್ಲಿ ಬುರ್ಖಾವನ್ನು ಧರಿಸುತ್ತಾರೆ. ಬುರ್ಖಾ ಎಲ್ಲಾ ಕೆಟ್ಟ ದೃಷ್ಠಿಯಿಂದ ಮಹಿಳೆಯರನ್ನು ರಕ್ಷಿಸುತ್ತದೆ ಎಂಬ ನಂಬಿಕೆ ಇಸ್ಲಾಂ ಧರ್ಮದಲ್ಲಿದೆ.

ಮುಸ್ಲಿಂ ಮಹಿಳೆಯರು ಬುರ್ಖಾ ಧರಿಸುವುದು ಇಸ್ಲಾಮಿನ ಕಡ್ಡಾಯ ನಿಯಮಗಳಲ್ಲಿ ಒಂದಾಗಿದೆ. ಮಹಿಳೆಯರು ತಮ್ಮ ಎರಡು ಕಣ್ಣುಗಳು ಮತ್ತು ಮುಂಗೈಗಳನ್ನು ಹೊರತು ಇತರ ಯಾವುದೇ ಅಂಗಾಗಳನ್ನು ತನ್ನ ಪತಿ, ಪೋಷಕರು ಮತ್ತು ಸಹೋದರರನ್ನು ಹೊರತು ಪಡಿಸಿ ಇತರ ಯಾವುದೇ ಅನ್ಯ ಪುರುಷನಿಗೆ ಪ್ರದರ್ಶಿಸಬಾರದೆಂಬ ನಿಯಮ ಇಸ್ಲಾಮಿನಲ್ಲಿದೆ. ಅದಕ್ಕಾಗಿ ಸಂಪೂರ್ಣ ಮೈಮುಚ್ಚಲು ಬುರ್ಖಾವನ್ನು ಧರಿಸಲಾಗುತ್ತದೆ. ಆದರೆ ಇದೇ ಸಾಂಪ್ರದಾಯಿಕ ವಸ್ತ್ರವನ್ನು ಫ್ಯಾಷನ್‌ ಶೋನಲ್ಲಿ ಬಳಸಿರುವುದು ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ.

ಇದನ್ನು ಓದಿ: ಎಲ್ಗರ್ ಪರಿಷತ್ ಪ್ರಕರಣ: ವರವರ ರಾವ್ ಹೈದರಾಬಾದ್‌ ಪ್ರಯಾಣಕ್ಕೆ ಕೋರ್ಟ್ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...