Homeಅಂತರಾಷ್ಟ್ರೀಯಪನ್ನುನ್ ಹತ್ಯೆ ಸಂಚಿನಲ್ಲಿ ಗುಜರಾತ್‌ನ ವ್ಯಕ್ತಿ: ಅಮೆರಿಕದಲ್ಲಿ ದೋಷಾರೋಪ ಪಟ್ಟಿ ಸಲ್ಲಿಕೆ

ಪನ್ನುನ್ ಹತ್ಯೆ ಸಂಚಿನಲ್ಲಿ ಗುಜರಾತ್‌ನ ವ್ಯಕ್ತಿ: ಅಮೆರಿಕದಲ್ಲಿ ದೋಷಾರೋಪ ಪಟ್ಟಿ ಸಲ್ಲಿಕೆ

- Advertisement -
- Advertisement -

ಅಮೆರಿಕದಲ್ಲಿ ಸಿಖ್ ಪ್ರತ್ಯೇಕತಾವಾದಿ ನಾಯಕ ಗುರುಪತ್ವಂತ್ ಸಿಂಗ್ ಪನ್ನುನ್‌ ಹತ್ಯೆಗೆ ಸಂಬಂಧಿಸಿ ಗುಜರಾತ್‌ನ ನಿಖಿಲ್ ಗುಪ್ತಾ ವಿರುದ್ಧ ಅಮೆರಿಕದ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ. ನಿಖಿಲ್ ಗುಪ್ತಾ ಗುಜರಾತ್‌ನಲ್ಲಿ ತನ್ನ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ವಜಾಗೊಳಿಸುವ ಬಗ್ಗೆ ಭರವಸೆ ನೀಡಿದ ನಂತರ ಸಂಚು ರೂಪಿಸಲು ಒಪ್ಪಿಕೊಂಡಿದ್ದಾನೆ ಎಂದು ಅಮೆರಿಕದ ಫೆಡರಲ್ ಪ್ರಾಸಿಕ್ಯೂಟರ್‌ಗಳು ಆರೋಪಿಸಿದ್ದಾರೆ.

ಅಮೆರಿಕದ ಫೆಡರಲ್ ಪ್ರಾಸಿಕ್ಯೂಟರ್‌ಗಳು ನ್ಯೂಯಾರ್ಕ್‌ ನ್ಯಾಯಾಲಯದಲ್ಲಿ ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ಗುಜರಾತ್‌ನ ನಿಖಿಲ್‌ ಗುಪ್ತಾ ಭಾರತದ ಅಧಿಕಾರಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಲಾಗಿದೆ. ಇದಲ್ಲದೆ ಭಾರತದ ಅಧಿಕಾರಿಯ ಸಹಾಯದಿಂದ ಗುಪ್ತಾ ಹಂತಕನಿಗೆ ಸಿಖ್ ಪ್ರತ್ಯೇಕತಾವಾದಿ ನಾಯಕನನ್ನು ಕೊಲ್ಲಲು 1,00,000 ಅಮೆರಿಕನ್ ಡಾಲರ್ ಪಾವತಿಸಲು ಗುಪ್ತಾ ಒಪ್ಪಿಕೊಂಡಿದ್ದಾನೆ. ಜೂ.9, 2023 ರಂದು ಗುಪ್ತಾ ಕೊಲೆಗೆ ಮುಂಗಡ ಪಾವತಿಯಾಗಿ ನ್ಯೂಯಾರ್ಕ್‌ನ ಮ್ಯಾನ್‌ಹ್ಯಾಟನ್‌ನಲ್ಲಿರುವ ಯುಸಿಯಲ್ಲಿ 15,000 ಅಮೆರಿಕನ್ ಡಾಲರ್ ನ್ನು ಹಂತಕನಿಗೆ ವ್ಯವಸ್ಥೆ ಮಾಡಿದ್ದಾನೆ ಎಂದು ದೋಷಾರೋಪ ಪಟ್ಟಿಯಲ್ಲಿ ಆರೋಪಿಸಲಾಗಿದೆ.

ಯುಎಸ್ ದಕ್ಷಿಣ ಜಿಲ್ಲೆಯ ಡಿಸ್ಟ್ರಿಕ್ಟ್ ಕೋರ್ಟ್‌ನಲ್ಲಿ ಬುಧವಾರ ಮುಚ್ಚಿದ ಲಕೋಟೆಯಲ್ಲಿ ಈ ದೋಷಾರೋಪಣೆ ಪಟ್ಟಿ ಸಲ್ಲಿಕೆ ಮಾಡಲಾಗಿದೆ.

ದಿ ಫೈನಾನ್ಷಿಯಲ್ ಟೈಮ್ಸ್ ವರದಿಯ ಪ್ರಕಾರ, ಅಮೆರಿಕದ ಅಧಿಕಾರಿಗಳು ಗುರುಪತ್ವಂತ್ ಸಿಂಗ್ ಪನ್ನುನ್‌ ಹತ್ಯೆ ಮಾಡುವ ಸಂಚನ್ನು ವಿಫಲಗೊಳಿಸಿದ್ದಾರೆ. ಭಾರತ ಸರ್ಕಾರವು ಈ ಸಂಚಿನಲ್ಲಿ ಭಾಗಿಯಾಗಿರುವ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು.

ಗುಜರಾತ್‌ನಲ್ಲಿ ಅವರ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ವಜಾಗೊಳಿಸಲಾಗುವುದು ಎಂದು ಭರವಸೆ ನೀಡಿದ ನಂತರ ಗುಪ್ತಾ ಈ ಸಂಚಿಗೆ ಹೇಗೆ ಒಪ್ಪಿಕೊಂಡರು ಎಂಬುದನ್ನು ದೋಷಾರೋಪಣೆಯಲ್ಲಿ ಪ್ರಾಸಿಕ್ಯೂಟರ್‌ಗಳು ವಿವರಿಸಿದ್ದಾರೆ.

2023ರ ಮೇ ತಿಂಗಳ ಆರಂಭದಲ್ಲಿ CC-1(ಭಾರತೀಯ ಸರ್ಕಾರಿ ನೌಕರ ಎಂದು ಹೇಳಿಕೊಂಡ ವ್ಯಕ್ತಿ) ಮತ್ತು ಗುಪ್ತಾ ನಡುವಿನ ಎಲೆಕ್ಟ್ರಾನಿಕ್ ಸಂವಹನದಲ್ಲಿ ಪನ್ನುನ್ ಕೊಲೆಗೆ ವ್ಯವಸ್ಥೆ ಮಾಡಲು ಗುಪ್ತಾಗೆ CC-1 ಹೇಳಿದ್ದಾರೆ. ಭಾರತದಲ್ಲಿ ಗುಪ್ತಾ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಇತ್ತು. ಅದನ್ನು ರದ್ದು ಮಾಡಿಸಲು CC-1 ಗುಪ್ತಾ ಜೊತೆ ಒಪ್ಪಂದ ಮಾಡಿದ್ದಾರೆ ಎಂದು ದೋಷಾರೋಪಣೆಯಲ್ಲಿ ಹೇಳಲಾಗಿದೆ.

CC-1 ಒಬ್ಬ ಭಾರತೀಯ ಸರ್ಕಾರಿ ನೌಕರ ಎಂದು ಹೇಳಲಾಗಿದೆ. ಮೇ 6, 2023 CC-1 ಅವರು ಗುಪ್ತಾ ಅವರಿಗೆ ಮೆಸೇಜ್‌ ಮಾಡಿದ್ದಾರೆ. ನನ್ನ ಹೆಸರನ್ನು CC- 1 ಅಲಿಯಾಸ್ ಎಂದು ಮೊಬೈಲ್‌ನಲ್ಲಿ ಸೇವ್ ಮಾಡಿ ಎಂದು ಮೆಸೇಜ್‌ನಲ್ಲಿ ಹೇಳಲಾಗಿತ್ತು. ಇದರಂತೆ CC-1 ಹೆಸರಿನಲ್ಲಿ ಗುಪ್ತಾ ಅವರ ಫೋನ್‌ನಲ್ಲಿ ದೂರವಾಣಿ ಸಂಖ್ಯೆಯನ್ನು ನಮೂದಿಸಲಾಗಿದೆ. ಕೆಲವು ನಿಮಿಷಗಳ ನಂತರ CC-1 ನ್ಯೂಯಾರ್ಕ್‌ನಲ್ಲಿ ಗುರಿ ಮತ್ತು ಕ್ಯಾಲಿಫೋರ್ನಿಯಾದಲ್ಲಿ ಮತ್ತೊಂದು ಗುರಿಯನ್ನು ಹೊಂದಿದೆ ಸಂದೇಶವನ್ನು ಕಳುಹಿಸಿದ್ದಾರೆ ಎಂದು ದೋಷಾರೋಪಣೆಯಲ್ಲಿ ಹೇಳಲಾಗಿದೆ.

ಮೇ 12, 2023ರಂದು ಸಿಸಿ-1 ಗುಪ್ತಾ ಅವರಿಗೆ ಕಳುಹಿಸಿದ ಸಂದೇಶದಲ್ಲಿ ಕ್ರಿಮಿನಲ್ ಪ್ರಕರಣವನ್ನು ಈಗಾಗಲೇ ರದ್ದು ಮಾಡಲಾಗಿದೆ ಮತ್ತು ಗುಜರಾತ್ ಪೊಲೀಸರು ಇನ್ನು ಬೆನ್ನ ಹಿಂದೆ ಬರಲ್ಲ ಎಂದು ಹೇಳಲಾಗಿದೆ. ಮೇ 23, 2023ರಂದು CC-1 ಮತ್ತೊಮ್ಮೆ ಗುಪ್ತಾ ಅವರಿಗೆ ಕಳುಹಿಸಿದ ಸಂದೇಶದಲ್ಲಿ ನಿಮ್ಮ ಗುಜರಾತ್ ಪ್ರಕರಣದ ಕುರಿತು ಬಾಸ್ ಜೊತೆ ಮಾತನಾಡಿದ್ದೇನೆ ಎಂದು ಹೇಳಿದ್ದಾರೆ ಎಂದು ದೋಷಾರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ಗುಪ್ತಾ ವಿರುದ್ಧದ ಕೊಲೆ ಸಂಚು ಆರೋಪವು ಗರಿಷ್ಠ 10 ವರ್ಷಗಳ ಜೈಲು ಶಿಕ್ಷೆಯ ಸಾಧ್ಯತೆಯನ್ನು ಹೊಂದಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...