Homeಮುಖಪುಟಪಂಚರಾಜ್ಯಗಳ ಚುನಾವಣೆಯ ಮತದಾನೋತ್ತರ ಸಮೀಕ್ಷೆ ಇಲ್ಲಿದೆ...

ಪಂಚರಾಜ್ಯಗಳ ಚುನಾವಣೆಯ ಮತದಾನೋತ್ತರ ಸಮೀಕ್ಷೆ ಇಲ್ಲಿದೆ…

- Advertisement -
- Advertisement -

ತೆಲಂಗಾಣ ಸೇರಿದಂತೆ ದೇಶದ 5 ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗೆ ಮತದಾನ ಕೊನೆಗೊಂಡ ಬೆನ್ನಲ್ಲೇ ಎಕ್ಸಿಟ್ ಪೋಲ್‌ಗಳ (ಮತಗಟ್ಟೆ ಸಮೀಕ್ಷೆ) ಫಲಿತಾಂಶ ಹೊರಬಿದ್ದಿದೆ.

ಯಾವ ಪಕ್ಷಕ್ಕೆ ಯಾವ ರಾಜ್ಯದಲ್ಲಿ ಎಷ್ಟು ಸ್ಥಾನಗಳು ಸಿಗಲಿವೆ? ಅಲ್ಲಿ ಯಾರ ಸರ್ಕಾರ ರಚನೆಯಾಗಲಿದೆ ಎಂಬುದು ಎಕ್ಸಿಟ್ ಪೋಲ್ ಅಂದಾಜಿಸಿದೆ. ಆದರೆ, ಡಿಸೆಂಬರ್ 3 ರಂದು ಮತ ಎಣಿಕೆ ನಂತರ ಅಂತಿಮ ಫಲಿತಾಂಶ ಗೊತ್ತಾಗಲಿದೆ.

ತೆಲಂಗಾಣದಲ್ಲಿ 119 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 60ಸ್ಥಾನ ಪಡೆದ ಪಕ್ಷ ಬಹುಮತ ಸಾಧಿಸಲಿದೆ.

ಸಿಎನ್‌ನ್‌ ಸಮೀಕ್ಷೆ ಪ್ರಕಾರ ತೆಲಂಗಾಣದಲ್ಲಿ ಕಾಂಗ್ರೆಸ್‌ 56 ಸ್ಥಾನಗಳನ್ನು ಪಡೆಯಲಿದೆ. ಬಿಆರ್‌ಎಸ್‌ 58 ಸ್ಥಾನಗಳನ್ನು ಮತ್ತು ಬಿಜೆಪಿ 10ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳುತ್ತದೆ.

ಜನ್‌ ಕಿ ಬಾತ್‌ ಸಮೀಕ್ಷೆ ಪ್ರಕಾರ, ಬಿಆರ್‌ಎಸ್‌ 40-55 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 48-64, ಬಿಜೆಪಿ 7-13 ಎಐಎಂಐಎಂ 4-7ಕ್ಷೇತ್ರಗಳಲ್ಲಿ ಗೆಲುವಿನ ಸಾಧ್ಯತೆ ಇದೆ.

ಮ್ಯಾಟ್ರಿಜ್ ಎಕ್ಸಿಟ್ ಪೋಲ್ ಪ್ರಕಾರ ಕಾಂಗ್ರೆಸ್‌ಗೆ 58-71 ಸ್ಥಾನಗಳಲ್ಲಿ ಗೆಲುವಿನ ಮೂಲಕ ಕಾಂಗ್ರೆಸ್‌ ಸ್ಪಷ್ಟ ಬಹುಮತ ಪಡೆಯುವ ಸಾಧ್ಯತೆ ಇದೆ. ಬಿಆರ್‌ ಎಸ್‌ 37-51, ಬಿಜೆಪಿಗೆ 5 ಸ್ಥಾನಗಳು ಕೂಡ ಸಿಗುವ ಸಾಧ್ಯತೆ ಇದೆ.

ಛತ್ತಿಸ್‌ಗಢದಲ್ಲಿ 90 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 46 ಸ್ಥಾನ ಪಡೆದ ಪಕ್ಷ ಬಹುಮತ ಸಾಧಿಸಲಿದೆ. ಕಾಂಗ್ರೆಸ್‌ ಛತ್ತಿಸ್‌ಗಢದಲ್ಲಿ 40-50 ಸ್ಥಾನಗಳನ್ನು ಮತ್ತು 36-46 ಸ್ಥಾನಗಳಲ್ಲಿ ಬಿಜೆಪಿ ಗೆಲುವಿನ ಸಾಧ್ಯತೆ ಇದೆ ಎಂದು  ಇಂಡಿಯಾ ಟುಡೇ ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್‌ ಪೋಲ್‌ ಹೇಳಿದೆ.

ಟಿವಿ5 ನ್ಯೂಸ್ ಎಕ್ಸಿಟ್ ಪೋಲ್ ಬಿಜೆಪಿಗೆ 29-39 ಸ್ಥಾನಗಳು ಮತ್ತು ಕಾಂಗ್ರೆಸ್‌ಗೆ 54-64 ಸ್ಥಾನಗಳ ಗೆಲುವಿನ ಭವಿಷ್ಯ ನುಡಿದಿದೆ.

ಜನ್ ಕಿ ಬಾತ್ ಎಕ್ಸಿಟ್ ಪೋಲ್ ಪ್ರಕಾರ, ಕಾಂಗ್ರೆಸ್ 42-53 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಮತ್ತು ಬಿಜೆಪಿ 34-45 ಸ್ಥಾನಗಳನ್ನು ಗಳಿಸಲಿದೆ ಎಂದು ಹೇಳಿದೆ.

ಎಬಿಪಿ ಸಿ ವೋಟರ್‌ ಸಮೀಕ್ಷೆ ಪ್ರಕಾರ, ಬಿಜೆಪಿ 36-48, ಕಾಂಗ್ರೆಸ್‌ 41-53 ಸ್ಥಾನ ಪಡೆಯುವ ಮೂಲಕ ಬಹುಮತ ಪಡೆಯುವ ಸಾಧ್ಯತೆ ಇದೆ ಎಂದು ಹೇಳುತ್ತದೆ. ಇತರರು 4 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಇದೆ ಎಂದು ಹೇಳುತ್ತಿದೆ.

ಮಧ್ಯಪ್ರದೇಶದಲ್ಲಿ 230 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 116 ಸ್ಥಾನ ಪಡೆದ ಪಕ್ಷ ಬಹುಮತ ಸಾಧಿಸಲಿದೆ. ಮಧ್ಯಪ್ರದೇಶದ ರಿಪಬ್ಲಿಕ್ ಟಿವಿ-ಮ್ಯಾಟ್ರಿಜ್ ಎಕ್ಸಿಟ್ ಪೋಲ್ ಪ್ರಕಾರ, ಬಿಜೆಪಿ 118-130 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಮುನ್ನಡೆ ಸಾಧಿಸಿದೆ. ಆದರೆ ಕಾಂಗ್ರೆಸ್ 97-107 ಸ್ಥಾನಗಳನ್ನು ಗೆಲ್ಲಬಹುದು, ಇತರ ಪಕ್ಷಗಳು 2 ಸ್ಥಾನಗಳನ್ನು ಗೆಲ್ಲಬಹುದಾಗಿದೆ.

ಟಿವಿ9 ಭಾರತ್ ವರ್ಷ್ ಸಮೀಕ್ಷಾ ವರದಿಯ ಪ್ರಕಾರ ಕಾಂಗ್ರೆಸ್ 111-121 ಸ್ಥಾನಗಳಲ್ಲಿ ಗೆಲುವು ಸಾಧಿಸಬಹುದು, ಬಿಜೆಪಿ 106-116 ಸ್ಥಾನಗಳಲ್ಲಿ ನಿರೀಕ್ಷಿತ ಗೆಲುವಿನ ಸಾಧ್ಯತೆ ಇದೆ ಎಂದು ತಿಳಿಸಿದೆ.

ಜನ್‌ ಕಿ ಬಾತ್‌ ಸಮೀಕ್ಷೆ ಪ್ರಕಾರ, ಬಿಜೆಪಿ 100-123, ಕಾಂಗ್ರೆಸ್‌ 100-125, ಇತರರು 5ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಇದೆ.

ರಾಜಸ್ಥಾನದಲ್ಲಿ 200 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 101 ಸ್ಥಾನ ಪಡೆದ ಪಕ್ಷ ಬಹುಮತ ಸಾಧಿಸಲಿದೆ.

ಟಿವಿ9 ಭಾರತ್ ವರ್ಷ್ ಸಮೀಕ್ಷೆ ಪ್ರಕಾರ, ಬಿಜೆಪಿ 100-110ಕ್ಷೇತ್ರಗಳಲ್ಲಿ, ಕಾಂಗ್ರೆಸ್‌ 90-100, ಬಿಎಸ್ಪಿ-0 ಹಾಗೂ ಇತರರು 5-15ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಇದೆ.
ಜನ್‌ ಕಿ ಬಾತ್‌ ಸಮೀಕ್ಷೆ ಪ್ರಕಾರ, ಬಿಜೆಪಿ 100-112, ಕಾಂಗ್ರೆಸ್‌ 62-85, ಇತರರು 14-15ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆ ಹೇಳಿದೆ.

ಮಿಜೋರಾಂನಲ್ಲಿ 40 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 21 ಸ್ಥಾನ ಪಡೆದ ಪಕ್ಷ ಬಹುಮತ ಸಾಧಿಸಲಿದೆ. ಜನ್‌ ಕಿ ಬಾತ್‌ ಸಮೀಕ್ಷೆ ಪ್ರಕಾರ ಮಿಜೋರಾಂನಲ್ಲಿ ಎಮ್‌ ಎನ್‌ಎಫ್‌ಗೆ 10-14ಕ್ಷೇತ್ರಗಳು, ZPM 15-25ಕ್ಷೇತ್ರಗಳು, ಕಾಂಗ್ರೆಸ್ 5-9ಕ್ಷೆತ್ರಗಳಲ್ಲಿ, ಬಿಜೆಪಿ 0-2ಕ್ಷೇತ್ರಗಳಲ್ಲಿ ಗೆಲುವಿನ ಸಾಧ್ಯತೆ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...