Homeಮುಖಪುಟಪ.ಬಂಗಾಳ: ರಾಷ್ಟ್ರಗೀತೆಗೆ ಅವಮಾನ; 12 ಬಿಜೆಪಿ ಶಾಸಕರ ವಿರುದ್ಧ ಎಫ್‌ಐಆರ್

ಪ.ಬಂಗಾಳ: ರಾಷ್ಟ್ರಗೀತೆಗೆ ಅವಮಾನ; 12 ಬಿಜೆಪಿ ಶಾಸಕರ ವಿರುದ್ಧ ಎಫ್‌ಐಆರ್

- Advertisement -
- Advertisement -

ಪ.ಬಂಗಾಳ ರಾಜ್ಯ ವಿಧಾನಸಭೆ ಆವರಣದಲ್ಲಿ ರಾಷ್ಟ್ರಗೀತೆಗೆ ಅವಮಾನ ಮಾಡಿದ ಆರೋಪದ ಮೇಲೆ ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿ ಮತ್ತು ಪಕ್ಷದ ಮುಖ್ಯ ಸಚೇತಕ ಮನೋಜ್ ತಿಗ್ಗಾ ಸೇರಿದಂತೆ 12 ಬಿಜೆಪಿ ಶಾಸಕರ ವಿರುದ್ಧ ಕೋಲ್ಕತ್ತಾ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಕೇಂದ್ರ  ಸರಕಾರದ ವಿವಿಧ ಯೋಜನೆಗಳಡಿ ರಾಜ್ಯ ಸರ್ಕಾರಕ್ಕೆ ಬರಬೇಕಿದ್ದ ಬಾಕಿ ಹಣ ಪಾವತಿಯಾಗದಿರುವುದನ್ನು ವಿರೋಧಿಸಿ ಬುಧವಾರ ಮಧ್ಯಾಹ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ತೃಣಮೂಲ ಕಾಂಗ್ರೆಸ್‌ನ ಶಾಸಕರು ಕಪ್ಪು ಬಟ್ಟೆ ಧರಿಸಿ ವಿಧಾನಸಭೆ ಆವರಣದಲ್ಲಿನ ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ ನಡೆಸುತ್ತಿದ್ದರು.

ಪ್ರತಿಭಟನೆ ಮುಕ್ತಾಯದ ವೇಳೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ ಪಕ್ಷದ ಮೆಗಾ ರ್ಯಾಲಿಗೆ ತೆರಳಲು ವಿಪಕ್ಷ ನಾಯಕ ಸುವೆಂದು ಅಧಿಕಾರಿ ನೇತೃತ್ವದ ಬಿಜೆಪಿ ಶಾಸಕರ ಗುಂಪು ವಿಧಾನಸಭೆ ಆವರಣಕ್ಕೆ ಆಗಮಿಸಿದೆ. ಈ ವೇಳೆ ವಿಪಕ್ಷ ನಾಯಕ ಸೇರಿದಂತೆ ಶಾಸಕರು ಪ್ರತಿಭಟನಾನಿರತರಾಗಿದ್ದವರ ನೋಡಿ ‘ಕಳ್ಳರು, ಕಳ್ಳರು’ ಎಂದು ಘೋಷಣೆಗಳನ್ನು ಕೂಗಿದ್ದಾರೆ.

ಆಡಳಿತ ಪಕ್ಷದ ಶಾಸಕರು ರಾಷ್ಟ್ರಗೀತೆ ಹಾಡುತ್ತಿದ್ದಾಗ ಬಿಜೆಪಿ ಶಾಸಕರು ಘೋಷಣೆಗಳನ್ನು ಕೂಗುತ್ತಿದ್ದರು ಮತ್ತು ಅವರು ರಾಷ್ಟ್ರಗೀತೆಗೆ ಅವಮಾನ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪೀಕರ್ ಬಿಮನ್ ಬಂಡೋಪಾಧ್ಯಾಯ ಅವರಿಗೆ ದೂರು ನೀಡಿದ್ದರು. ಈ ವಿಚಾರದಲ್ಲಿ ಅಗತ್ಯ ಕಾನೂನು ಕ್ರಮಗಳನ್ನು ಕೈಗೊಳ್ಳುವಂತೆ ಸ್ಪೀಕರ್‌ಗೆ ಮನವಿ ಮಾಡಲಾಗಿತ್ತು.

ಈ ಕುರಿತು ಕೋಲ್ಕತ್ತಾ ಪೊಲೀಸ್‌ ಉಪ ಆಯುಕ್ತರಿಗೆ ಮೂವರು ತೃಣಮೂಲ ಕಾಂಗ್ರೆಸ್ ಶಾಸಕರು ದೂರು ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ 12 ಬಿಜೆಪಿ ಶಾಸಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಎಫ್‌ಐಆರ್‌ ದಾಖಲಾದ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ ಅಗ್ನಿಮಿತ್ರ ಪೌಲ್, ನಮ್ಮ 12 ಶಾಸಕರ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ತುಂಬಾ ವಿಚಿತ್ರವಾಗಿದೆ. ಏಕೆಂದರೆ ನಾವು ಮಮತಾ ಸರ್ಕಾರದ ದುಷ್ಕೃತ್ಯಗಳಿಂದ ಬಳಲುತ್ತಿರುವ ಬಂಗಾಳದ ಜನರ ಪರವಾಗಿ ಪ್ರತಿಭಟನೆ ನಡೆಸುತ್ತಿದ್ದೇವೆ. ಅಸೆಂಬ್ಲಿ ಒಳಗೆ ನಿರ್ಣಾಯಕ ವಿಷಯಗಳ ಬಗ್ಗೆ ಮಾತನಾಡಲು ಅವರಿಗೆ ಅವಕಾಶ ನೀಡಲಿಲ್ಲ ಎಂದು ಹೇಳಿದ್ದಾರೆ.

ನಾವು ಅವರ ಅನುಮತಿಯನ್ನು ತೆಗೆದುಕೊಳ್ಳಬೇಕೇ? ನಮಗೆ ಒಳಗೆ ಮಾತನಾಡಲು ಅವಕಾಶವಿಲ್ಲ, ನಾವು ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಬಯಸಿದಾಗ, ನೀವು ನಮಗೆ ಮಾತನಾಡಲು ಬಿಡುವುದಿಲ್ಲ, ಹಿಂಸಾಚಾರ, ಭ್ರಷ್ಟಾಚಾರ, ಅತ್ಯಾಚಾರದ ವಿರುದ್ಧ ನೀವು ಮಾತನಾಡುವುದಿಲ್ಲ. ನಾವು ಮಾತನಾಡುವಾಗ ಇದರ ವಿರುದ್ಧ ಘೋಷಣೆ ಕೂಗಿದಾಗ ನೀವು ಪೊಲೀಸರಿಗೆ ಕರೆ ಮಾಡಿ ನಮ್ಮ ಮೇಲೆ ಎಫ್‌ಐಆರ್‌ಗಳನ್ನು ಹಾಕಿಸಿದ್ದೀರಿ ಎಂದು ವಾಗ್ಧಾಳಿ ನಡೆಸಿದ್ದಾರೆ.

ಮಮತಾ ಬ್ಯಾನರ್ಜಿಯನ್ನು ಉದ್ದೇಶಿಸಿ ಮಾತನಾಡಿದ ಪಾಲ್, 2021ರಲ್ಲಿ ರಾಷ್ಟ್ರಗೀತೆ ವೇಳೆ ಕುರ್ಚಿಯ ಮೇಲೆ ಕುಳಿತಿದ್ದ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆಯೇ? ಎಂದು ಮಮತಾ ವಿರುದ್ಧ ಈ ಹಿಂದಿನ ಪ್ರಕರಣವನ್ನು ಉಲ್ಲೇಖಿಸಿ ಪ್ರಶ್ನಿಸಿದ್ದಾರೆ.

ಈ ವರ್ಷದ ಅಕ್ಟೋಬರ್‌ನಲ್ಲಿ ಮುಂಬೈ ಮೆಟ್ರೋಪಾಲಿಟನ್ ನ್ಯಾಯಾಲಯವು ರಾಷ್ಟ್ರಗೀತೆಗೆ ಅಗೌರವ ತೋರಿದ ಬ್ಯಾನರ್ಜಿ ವಿರುದ್ಧದ ದೂರನ್ನು ವಜಾಗೊಳಿಸಿದೆ. ಬಿಜೆಪಿ ಕಾರ್ಯಾಧ್ಯಕ್ಷ ವಿವೇಕಾನಂದ ಗುಪ್ತಾ ಅವರು ಮಮತಾ ಬ್ಯಾನರ್ಜಿ ವಿರುದ್ಧ ದೂರು ಸಲ್ಲಿಸಿದ್ದರು. ಆದರೆ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ವಿರುದ್ಧದ ಅಪರಾಧ ಸಾಬೀತಾಗಿಲ್ಲ ಎಂದು ನ್ಯಾಯಾಲಯವು ಅವರ ಮನವಿಯನ್ನು ವಜಾಗೊಳಿಸಿತ್ತು.

ಇದನ್ನು ಓದಿ: ಕಾಲೇಜಿನಲ್ಲಿ ಬುರ್ಖಾ ಧರಿಸಿ ಕ್ಯಾಟ್‌ವಾಕ್‌: ಭುಗಿಲೆದ್ದ ವಿವಾದ

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...