Homeಅಂಕಣಗಳುನಾಸ್ತಿಕ ಗೋರಾ ಮತ್ತು ಗಾಂಧಿ

ನಾಸ್ತಿಕ ಗೋರಾ ಮತ್ತು ಗಾಂಧಿ

- Advertisement -
- Advertisement -

| ಎಚ್.ಎಸ್ ದೊರೆಸ್ವಾಮಿ |

ಗೋ.ರಾಮಚಂದ್ರರಾಯರು ನಾಸ್ತಿಕರು. ಅವರು ಸಸ್ಯಶಾಸ್ತ್ರ ಎಂಎಸ್ಸಿ ಪದವೀಧರರೂ ಹೌದು. ನಾಲ್ಕಾರು ಕಾಲೇಜುಗಳಲ್ಲಿ ಅಧ್ಯಾಪಕರಾಗಿದ್ದವರು. ಬ್ರಾಹ್ಮಣರಾಗಿದ್ದ ಗೋರಾ, ಸರಸ್ವತಿ ಎಂಬ ಹರಿಜನ ಮಹಿಳೆಯನ್ನು ಮದುವೆಯಾದರು. ವಿಜಯವಾಡ ಹತ್ತಿರದ ಪಟನುಟಾ ಎಂಬ ಹಳ್ಳಿಯಲ್ಲಿ ಆಶ್ರಮವನ್ನು ಕಟ್ಟಿ ಅಲ್ಲಿಯೇ ಸಂಸಾರ ಸಮೇತ ವಾಸವಿದ್ದರು. ಗೋರಾ ಹೆಚ್ಚು ಸಮಯವನ್ನು ನಾಸ್ತಿಕ ಚಳವಳಿ, ಮುಖ್ಯಮಂತ್ರಿಗಳು ಮತ್ತು ಪ್ರಧಾನಿಗಳು ನಡೆಸುವ ವೈಭವೋಪೇತ ಜೀವನವನ್ನು ಕೈಬಿಡುವಂತೆ ಜನಾಭಿಪ್ರಾಯ ಮೂಡಿಸುವ ಚಳವಳಿಗಳು, ಅಸ್ಪೃಶ್ಯತಾ ನಿವಾರಣೆ ಮುಂತಾದವುಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದರು. ಅಸ್ಪೃಶ್ಯರೊಡನೆ ಸಹಭೋಜನ, ಮಾಂಸಾಹಾರ ಸೇವಿಸುವ ಸಮಾರಂಭಗಳಲ್ಲಿ ನಿರತರಾಗಿರುತ್ತಿದ್ದರು.

ಅವರಿಗೆ ಇಬ್ಬರು ಗಂಡು ಮಕ್ಕಳು ಒಬ್ಬ ಮಗಳು. ಗಾಂಧೀಜಿಯವರ ಉಪ್ಪಿನ ಸತ್ಯಾಗ್ರಹದ ನೆನಪಿಗಾಗಿ ಹುಟ್ಟಿದ ಮೊದಲನೇ ಮಗನಿಗೆ ಲವಣಂ ಎಂದು ಹೆಸರಿಟ್ಟರು. ಎರಡನೇ ಮಹಾಯುದ್ಧದ ಸಮಯದಲ್ಲಿ ಹುಟ್ಟಿದ ಎರಡನೆಯ ಮಗನಿಗೆ ‘ಸಮರಂ’ ಎಂದು, ಸಂತ ವಿನೋಬಾರವರ ಭೂದಾನ ಯಜ್ಞ ಚಳವಳಿಯ ಕಾಲಕ್ಕೆ ಹುಟ್ಟಿದ ಮಗಳಿಗೆ ‘ಭೂಕ್ರಾಂತಿ’ ಎಂದು ಹೆಸರನ್ನಿಟ್ಟರು.

ಎನ್.ಸಂಜೀವರೆಡ್ಡಿಯವರು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಆಗಿದ್ದಾಗ ಅವರ ಸರ್ಕಾರಿ ನಿವಾಸದ ಮುಂದೆ ಗೋರಾ ಅವರು ಅನಿರ್ದಿಷ್ಟ ಕಾಲದ ಸತ್ಯಾಗ್ರಹವನ್ನು ಹಮ್ಮಿಕೊಂಡಿದ್ದರು. ಮುಖ್ಯಮಂತ್ರಿಗಳಾದವರು ಸಾಮಾನ್ಯ ಜನರಂತೆ ಸರಳ ಜೀವನ ನಡೆಸಬೇಕು. ಅದು ಬಿಟ್ಟು ಸರ್ಕಾರಿ ಮಹಲಿನಲ್ಲಿದ್ದುಕೊಂಡು, ವೈಭವದ ಜೀವನ ನಡೆಸುವುದು ಅಸಭ್ಯತೆ. ಕೂಡಲೇ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಿ, ನಿಜವಾದ ಜನಪ್ರತಿನಿಧಿಯಂತೆ ನಡೆದುಕೊಳ್ಳಿ ಎಂಬ ಬೇಡಿಕೆ ಇಟ್ಟರು. ಸಂಜೀವ ರೆಡ್ಡಿಯವರು ಗೋರಾರವರ ಬೇಡಿಕೆಯನ್ನು ಈಡೇರಿಸುವುದಾಗಿ ಮಾತು ಕೊಟ್ಟರಾದರೂ, ಕೊಟ್ಟ ಮಾತಿನಂತೆ ನಡೆದುಕೊಳ್ಳಲಿಲ್ಲ.

ನಾಸ್ತಿಕರಾದ ರಾಮಚಂದ್ರರಾಯರು ಮಹಾತ್ಮ ಗಾಂಧಿಯವರನ್ನು ಕಂಡು ಅವರೊಡನೆ ನಾಸ್ತಿಕವಾದದ ಬಗ್ಗೆ ಚರ್ಚಿಸಲು ಅವರ ಆಶ್ರಮಕ್ಕೆ ಹೋದರು. ಗಾಂಧೀಜಿ ಅವರನ್ನು ಆಶ್ರಮದಲ್ಲಿ ಉಳಿಸಿಕೊಂಡು ಆಸ್ತಿಕತೆ- ನಾಸ್ತಿಕತೆಗಳ ಬಗೆಗೆ ಸುದೀರ್ಘ ಚರ್ಚೆ ನಡೆಸಿದರು. ಗಾಂಧೀಜಿ ಕೊನೆಗೆ ಗೋರಾಗೆ ಹೇಳಿದ ಮಾತು ‘ನಾನು ಆಸ್ತಿಕ. ನನಗೆ ದೇವರ ಇರುವಿನ ಬಗೆಗೆ ನಂಬಿಕೆ, ಶ್ರದ್ಧೆ ಎರಡೂ ಇದೆ. ನನ್ನ ಜೀವನದಲ್ಲಿ ಅನೇಕ ಸಾರಿ ಮುಂದಿನ ದಾರಿ ತೋರದ ಸನ್ನಿವೇಶ ಒದಗಿಬಂದಿದೆ. ದಾರಿ ತೋರಲು ಅನನ್ಯ ಭಕ್ತಿಯಿಂದ ಅಂತಹ ಸಂದರ್ಭಗಳಲ್ಲಿ ಭಗವಂತನಲ್ಲಿ ಮೊರೆ ಹೋಗಿ ಶರಣಾಗತನಾಗಿದ್ದೇನೆ. ಅವನು ಅಂತಹ ಸಂಕಟಮಯ ಸಂದರ್ಭದಲ್ಲಿ ನನ್ನ ನೆರವಿಗೆ ಬಂದಿದ್ದಾನೆ. ಅದನ್ನು ನಾನು ‘inner voice’ ಎಂದು ಗುರುತಿಸಿದ್ದೇನೆ. ಈ ‘inner voice’ ಆ ಸಂಕಟಮಯ ಪರಿಸ್ಥಿತಿಯಲ್ಲಿ ಮಾರ್ಗದರ್ಶನ ಮಾಡಿದೆ.’

‘ರಾಮಚಂದ್ರರವರೇ ನೀವು ದೇವರನ್ನು ನಂಬುವವರಲ್ಲ. ಎಲ್ಲಾ ಜವಾಬ್ದಾರಿಯನ್ನೂ ನೀವೇ ವಹಿಸಿಕೊಂಡು ನಿಮ್ಮ ಸಂಕಟಮಯ ಸಂದರ್ಭಗಳನ್ನು ನೀವೇ ನಿರ್ವಹಿಸಿಕೊಳ್ಳುತ್ತೀರಿ. ಈ ದೃಷ್ಟಿಯಿಂದ ನೀವು ನನಗಿಂತ ಒಂದು ಹೆಜ್ಜೆ ಮುಂದೆ ಇರುವವರು. ನಾನು ಅಂತಹ ಸಂಕಟ ಪರಿಸ್ಥಿತಿಯಲ್ಲಿ ಅಸಹಾಯಕನಾಗಿ ಅನ್ಯಥಾ ಶರಣಂ ನಾಸ್ತಿ ಎಂದು ದೇವರಿಗೆ ಮುಗಿಬೀಳುತ್ತೇನೆ. ಅವನು ನನಗೆ ಮಾರ್ಗದರ್ಶನ ಮಾಡುತ್ತಾನೆ.’ ರಾಮಚಂದ್ರರಾಯರು ಗಾಂಧಿಯವರ ಆಶ್ರಮದಲ್ಲಿದ್ದುಕೊಂಡು ‘An atheist with Gandhi’ ಎಂಬ ಕಿರು ಹೊತ್ತಿಗೆ ಬರೆದಿದ್ದಾರೆ. ಅದನ್ನು ಗಾಂಧಿಯವರು ಸ್ಥಾಪಿಸಿದ ‘Navajeevan Publication’ ಹೊರತಂದಿದೆ.

ರಾಮಚಂದ್ರರಾಯರಿಗೆ ರಾಜಕೀಯ ಪಕ್ಷಗಳ ಹಾವಳಿ ತುಂಬ ಬೇಸರ ತಂದಿತು. ಅವರಿಗೆ ನನ್ನಂತಹ ಗಾಂಧಿ ವಾದದವರನ್ನು ಕಟ್ಟಿಕೊಂಡು ದೆಹಲಿಗೆ ಕಾಲ್ನಡಿಗೆಯಲ್ಲಿ ಹೋಗಿ ಪಾರ್ಲಿಮೆಂಟ್ ಭವನದ ಮುಂದೆ ಧರಣಿ ಮಾಡಬೇಕೆಂಬ ಆಸೆ ಇತ್ತು. ಇದಕ್ಕಾಗಿ ಸಕಲ ಸಿದ್ಧತೆಯನ್ನೂ ಅವರು ಮಾಡಿಕೊಂಡಿದ್ದರು. ಎಲ್ಲ ರಾಜಕೀಯ ಪಕ್ಷಗಳ ಬಾವುಟಗಳನ್ನೂ ಒಟ್ಟುಗೂಡಿಸಿ ಅವುಗಳನ್ನು ಒಂದು ದಂಡಕ್ಕೆ ಬಿಗಿದು ಕಟ್ಟಿಕೊಂಡೊಯ್ಯಬೇಕೆಂದು ಯೋಜಿಸಿದ್ದರು. ಪಕ್ಷ ರಾಜಕೀಯ ಒಂದಾಗಲಿ. ನಿಜವಾದ ಪ್ರಜಾರಾಜ್ಯ ಸ್ಥಾಪನೆಯಾಗಲಿ ಎಂಬ ಘೋಷಣೆಯೊಂದಿಗೆ ಪಾದಯಾತ್ರೆ ಆರಂಭಗೊಳಿಸುವುದೆಂದು ತೀರ್ಮಾನ ತೆಗೆದುಕೊಂಡಿದ್ದರು. ಆದರೆ ಆಕಸ್ಮಿಕವಾಗಿ ಅವರಿಗೆ ಹೃದಯಾಘಾತವಾಗಿ ಸಾವನ್ನಪ್ಪಿದರು. ಅವರ ಕನಸು ನನಸಾಗದೆ ಉಳಿಯಿತು.

ಗೋರಾ ಮೊದಲನೆಯ ಅಂತರರಾಷ್ಟ್ರೀಯ ನಾಸ್ತಿಕ ಸಮ್ಮೇಳನವನ್ನು ಬೆಜವಾಡದಲ್ಲಿ ನೆರವೇರಿಸಿದರು. ದೇಶ-ವಿದೇಶಗಳಿಂದ ನಾಸ್ತಿಕ ಪ್ರತಿನಿಧಿಗಳು ಈ ಸಮ್ಮೇಳನಕ್ಕೆ ಬಂದಿದ್ದರು. ಅವರು ಜೀವಂತ ಇದ್ದಾಗಲೇ ಎರಡು ಅಂತರರಾಷ್ಟ್ರೀಯ ನಾಸ್ತಿಕ ಸಮ್ಮೇಳನಗಳು ಯುರೋಪಿಯನ್ ರಾಷ್ಟ್ರಗಳಲ್ಲಿ ನಡೆದವು. ಈಗ ಅವರ ಮಗ ಡಾ.ಲವಣಂ ಈ ಜವಾಬ್ದಾರಿಯನ್ನು ಹೊತ್ತು ಸಮರ್ಥವಾಗಿ ನಿರ್ವಹಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...