Homeಕರ್ನಾಟಕಗಂಗಾವತಿ: 'ಜೈ ಶ್ರೀರಾಮ್' ಹೇಳುವಂತೆ ಒತ್ತಾಯಿಸಿ ಅಂಧ ಮುಸ್ಲಿಂ ವೃದ್ಧನ ಮೇಲೆ ಹಲ್ಲೆ

ಗಂಗಾವತಿ: ‘ಜೈ ಶ್ರೀರಾಮ್’ ಹೇಳುವಂತೆ ಒತ್ತಾಯಿಸಿ ಅಂಧ ಮುಸ್ಲಿಂ ವೃದ್ಧನ ಮೇಲೆ ಹಲ್ಲೆ

- Advertisement -
- Advertisement -

ಕೊಪ್ಪಳ ಜಿಲ್ಲೆ ಗಂಗಾವತಿ ನಗರದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಒತ್ತಾಯಿಸಿ ಅಂಧ ಮುಸ್ಲಿಂ ವೃದ್ಧರೊಬ್ಬರ ಮೇಲೆ ಹಲ್ಲೆ ನಡೆಸಲಾಗಿದೆ. ನವೆಂಬರ್ 25ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ ಎಂದು ಪ್ರಜಾವಾಣಿ, ಈದಿನ.ಕಾಮ್ ಸೇರಿದಂತೆ ಪ್ರಮುಖ ಮಾಧ್ಯಮಗಳು ವರದಿ ಮಾಡಿವೆ.

ಆರೋಪಿಗಳು ಸಿದ್ದಿಕೇರಿಗೆ ಹೋಗುವ ಮಾರ್ಗದ ರೈಲ್ವೆ ಸೇತುವೆಯ ಕೆಳಗಡೆ ಕರೆದುಕೊಂಡು ಹೋಗಿ ಜೈ ಶ್ರೀರಾಮ್ ಹೇಳುವಂತೆ ಒತ್ತಾಯಿಸಿ ವೃದ್ದನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಹಲ್ಲೆಗೊಳಗಾದ ಮೆಹಬೂಬ್‌ ನಗರ ಮೂಲದ ಅಂಧ ವೃದ್ಧ ಹುಸೇನ್ ಸಾಬ್ (65) ಪೊಲೀಸರಿಗೆ ದೂರು ನೀಡಿದ್ದಾರೆ.

“ಕೆಲಸದ ನಿಮಿತ್ತ ಹೊಸಪೇಟೆಗೆ ಹೋಗಿ ನ. 25ರಂದು ಮಧ್ಯರಾತ್ರಿ ಗಂಗಾವತಿಗೆ ಬಂದು ಮನೆಗೆ ಹೋಗಲು ಆಟೋ ನಿಲ್ದಾಣದ ಬಳಿ ಕಾಯುತ್ತಿದ್ದೆ. ಆಗ ಬೈಕ್‌ನಲ್ಲಿ ಬಂದ ಕೆಲ ಯುವಕರು ಎಲ್ಲಿಗೆ ಹೋಗುತ್ತಿದ್ದಿಯಾ? ಎಂದು ಪ್ರಶ್ನಿಸಿದ್ದಾರೆ. ಬಳಿಕ ಬಲವಂತವಾಗಿ ಬೈಕ್‌ ಮೇಲೆ ಕೂರಿಸಿಕೊಂಡು ಪಂಪಾನಗರ ಬಳಿ ಕರೆದುಕೊಂಡು ಹೋಗಿದ್ದಾರೆ. ಅಲ್ಲಿಂದ ಸಿದ್ದಿಕೇರಿಗೆ ಹೋಗುವ ಮಾರ್ಗದ ರೈಲ್ವೆ ಸೇತುವೆ ಕೆಳಗಡೆ ಕರೆದುಕೊಂಡು ಹೋಗಿ ‘ಜೈ ಶ್ರೀರಾಮ್’ ಹೇಳುವಂತೆ ಒತ್ತಾಯಿಸಿ ಹಲ್ಲೆ ಮಾಡಿದ್ದಾರೆ. ಯುವಕರ ಗುಂಪು, ನನ್ನ ಗಡ್ಡಕ್ಕೆ ಬೆಂಕಿ ಹಚ್ಚಿದ್ದಾರೆ” ಎಂದು ಹುಸೇನ್ ಸಾಬ್ ದೂರಿನಲ್ಲಿ ತಿಳಿಸಿದ್ದಾರೆ

“ಆರೋಪಿಗಳು ನನ್ನ ಬಳಿಯಿದ್ದ ಹಣ ದೋಚಿಕೊಂಡು ಹೋಗಿದ್ದಾರೆ. ಬೆಳಗಿನ ಜಾವ ಕುರಿ ಕಾಯುವ ಹುಡುಗರು ನನ್ನನ್ನು ನೋಡಿ ಮನೆಯ ವಿಳಾಸ ಕೇಳಿ ರಕ್ಷಣೆ ಮಾಡಿ, ಮನೆಗೆ ತಲುಪಿಸಿದ್ದಾರೆ” ಎಂದು ಹೇಳಿದ್ದಾರೆ.

ಘಟನೆಯ ಕುರಿತು ಗುರುವಾರ ರಾತ್ರಿ ಗಂಗಾವತಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹುಸೇನ್ ಸಾಬ್ ಮೇಲೆ ಹಲ್ಲೆ ನಡೆದಿರುವುದಕ್ಕೆ ಸಾಕ್ಷಿಯಾಗಿ ಅವರ ಮೈಲೆ ಗಾಯದ ಗುರುತುಗಳು ಕಂಡು ಬಂದಿವೆ. ಈ ಕುರಿತ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ : ಚಿಕ್ಕಮಗಳೂರು: ಯುವ ವಕೀಲನ ಮೇಲೆ ಹಲ್ಲೆ; ಪಿಎಸ್‌ಐ ಸೇರಿ 6 ಪೊಲೀಸರ ಅಮಾನತು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣಾ ಆಯೋಗ ನವೀಕರಿಸಿದ ಅಂಕಿ ಅಂಶ: 4 ಹಂತಗಳಲ್ಲಿ 1.07 ಕೋಟಿ ಮತಗಳಲ್ಲಿ ವ್ಯತ್ಯಾಸ!

0
2024ರ ಲೋಕಸಭಾ ಚುನಾವಣೆಯ ಮೊದಲ ನಾಲ್ಕು ಹಂತಗಳ ಮತದಾನದ ಪ್ರತಿ ರಾತ್ರಿ ಚುನಾವಣಾ ಆಯೋಗ ನೀಡಿದ ಮತದಾನದ ಅಂಕಿ-ಅಂಶಗಳನ್ನು ವಿಶ್ಲೇಷಣೆ ಮಾಡಿದಾಗ ಮೊದಲ ನಾಲ್ಕು ಹಂತಗಳಲ್ಲಿ ಸುಮಾರು 1.07 ಕೋಟಿ ಮತಗಳ ವ್ಯತ್ಯಾಸವನ್ನು...