Homeಮುಖಪುಟ41 ಕಾರ್ಮಿಕರ ರಕ್ಷಣೆ: ಸಿಎಂ ಬಹುಮಾನ ಹಣ ತಿರಸ್ಕರಿಸಿದ ರ‍್ಯಾಟ್ ಹೋಲ್ ಮೈನರ್ಸ್‌ ಮುಖ್ಯಸ್ಥ

41 ಕಾರ್ಮಿಕರ ರಕ್ಷಣೆ: ಸಿಎಂ ಬಹುಮಾನ ಹಣ ತಿರಸ್ಕರಿಸಿದ ರ‍್ಯಾಟ್ ಹೋಲ್ ಮೈನರ್ಸ್‌ ಮುಖ್ಯಸ್ಥ

- Advertisement -
- Advertisement -

ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರ ಜೀವಗಳನ್ನು ರಕ್ಷಿಸಿದ ಬಳಿಕ ದೊಡ್ಡ ಮಟ್ಟದಲ್ಲಿ ಸುದ್ದಿಯಲ್ಲಿರುವ ಇಲಿ ಬಿಲ ಗಣಿಗಾರಿಕೆ ತಂಡವು ಮತ್ತೊಂದು ವಿಚಾರಕ್ಕೆ ಗಮನ ಸೆಳೆದಿದೆ.

ಇಲಿ ಬಿಲ ತಂಡದ ಮುಖ್ಯಸ್ಥ ವಕೀಲ್ ಹಸನ್ ಅವರು ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಘೋಷಿಸಿದ್ದ ಬಹುಮಾನದ ಹಣವನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ಕಾರ್ಮಿಕರ ರಕ್ಷಣೆಯಲ್ಲಿ ನಮ್ಮ ತಂಡದ ಎಲ್ಲರ ಒಗ್ಗಟ್ಟಿನ ಶ್ರಮವಿದೆ. ನನ್ನನ್ನು ಒಬ್ಬನನ್ನೇ ಹೀರೋ ಮಾಡುವುದು ಬೇಡ ಎಂದು ಅವರು ಹೇಳಿದ್ದಾರೆ.

ಇಲಿ ಬಿಲ ತಂಡದ ಮುಖ್ಯಸ್ಥ ವಕೀಲ್ ಹಸನ್‌ ಸೇರಿ 12 ಕಾರ್ಮಿಕರಿಗೆ ತಲಾ 50 ಸಾವಿರ ರೂಪಾಯಿ ನಗದು ಬಹುಮಾನವನ್ನು ಉತ್ತರಾಖಂಡ ಸಿಎಂ ಘೋಷಿಸಿದ್ದರು.

ಹಣಕ್ಕಿಂತ ವೃತ್ತಿಗೆ, ಮಾನವೀಯತೆಗೆ ಆದ್ಯತೆ ಕೊಟ್ಟಿರುವ ವಕೀಲ್ ಹಸನ್, ನಮ್ಮ ತಂಡದಲ್ಲಿ ಯಾರೋ ಒಬ್ಬರಿಂದ ಕಾರ್ಮಿಕರ ರಕ್ಷಣೆ ಆಗಿಲ್ಲ. ಹಿಂದೂ-ಮುಸ್ಲಿಂ ಧರ್ಮಗಳ ಕಾರ್ಮಿಕರು ಜಾತಿ, ಮತ, ಪಂಥವನ್ನು ಬದಿಗಿಟ್ಟು ಕೆಲಸ ಮಾಡಿದ್ದಾರೆ. ನಾವೆಲ್ಲರೂ ದ್ವೇಷದ ವಿಷ ಬಿಟ್ಟು ಸೌಹಾರ್ದತೆಯಿಂದ ಬಾಳೋಣ. ಇದೇ ನನ್ನ ಸಂದೇಶ ಎಂದು ಹೇಳಿದ್ದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ನಮ್ಮ ತಂಡದಲ್ಲಿ ಹಿಂದೂಗಳು ಮತ್ತು ಮುಸ್ಲಿಮರು ಇಬ್ಬರೂ ಇದ್ದಾರೆ. ಎರಡೂ ಧರ್ಮಗಳ ಜನರು 41 ಜೀವಗಳನ್ನು ಉಳಿಸಲು ಶ್ರಮಿಸಿದ್ದಾರೆ. ಅವರಲ್ಲಿ ಯಾರೂ ಇದನ್ನು ಒಬ್ಬರೇ ಮಾಡಲು ಸಾಧ್ಯವಿಲ್ಲ. ನಾವೆಲ್ಲರೂ ಸಾಮರಸ್ಯದಿಂದ ಬದುಕಬೇಕು. ದ್ವೇಷದ ವಿಷ ಹರಡಬಾರದು. ದೇಶಕ್ಕಾಗಿ ನಮ್ಮ 100 ಶೇಖಡ ಶ್ರಮ ಹಾಕಬೇಕು. ಇದು ನನ್ನ ಸಂದೇಶ, ದಯವಿಟ್ಟು ಇದನ್ನು ಎಲ್ಲರಿಗೂ ತಲುಪಿಸಿ” ಎಂದು ದೆಹಲಿ ಮೂಲದ ರಾಕ್‌ವೆಲ್ ಎಂಟರ್‌ಪ್ರೈಸಸ್ ಮಾಲೀಕರಾದ ವಕೀಲ್ ಹಸನ್ ಈ ಹಿಂದೆ ಹೇಳಿದ್ದರು.

ಕೊನೆಯ ಹಂತದ ಸುರಂಗ ಕೊರೆದ ಇಲಿ ಬಿಲ ತಂಡದಲ್ಲಿ ಹಸನ್, ಮುನ್ನಾ ಖುರೇಷಿ, ನಸೀಮ್ ಮಲಿಕ್, ಮೋನು ಕುಮಾರ್, ಸೌರಭ್, ಜತಿನ್ ಕುಮಾರ್, ಅಂಕುರ್, ನಾಸಿರ್ ಖಾನ್, ದೇವೇಂದ್ರ, ಫಿರೋಜ್ ಖುರೇಷಿ, ರಶೀದ್ ಅನ್ಸಾರಿ ಮತ್ತು ಇರ್ಷಾದ್ ಅನ್ಸಾರಿ ಎಂಬ 20 ರಿಂದ 45 ವರ್ಷ ವಯಸ್ಸಿನವರು ಇದ್ದರು.

ದೆಹಲಿ ಜಲ ಮಂಡಳಿಯಲ್ಲಿ ಪೈಪ್ ಅಳವಡಿಕೆ ಕೆಲಸ ಮಾಡುವ ವಕೀಲ್ ಹಸನ್ ಅವರ ತಂಡ ಇಲಿ ಬಿಲ ಸುರಂಗ ಕೊರೆಯುವುದರಲ್ಲಿ ಸಾಕಷ್ಟು ಅನುಭವ ಹೊಂದಿದೆ. ಆದರೆ, ಅವರು ಸಿಲ್ಕ್ಯಾರದಷ್ಟು ದೊಡ್ಡ ರಕ್ಷಣಾ ಕಾರ್ಯ ಮಾಡಿಲ್ಲ ಎನ್ನಲಾಗಿದೆ.

ಇಲಿ ಬಿಲ ಗಣಿಗಾರಿಕೆ ಎಂಬುವುದು ಈಶಾನ್ಯ ರಾಜ್ಯವಾದ ಮೇಘಾಲಯದಲ್ಲಿ ಕಲ್ಲಿದ್ದಲಿನ ತೆಳುವಾದ ಪದರಗಳನ್ನು ಹೊರತೆಗೆಯಲು ವ್ಯಾಪಕವಾಗಿ ಬಳಸಲಾಗುತ್ತಿದ್ದ ಅಪಾಯಕಾರಿ ಗಣಿಗಾರಿಕೆ ವಿಧಾನವಾಗಿದೆ. ಕಾರ್ಮಿಕರ ಸಾವು, ಪರಿಸರ ಹಾನಿಯ ಕಾರಣ ನೀಡಿ, ಹಸಿರು ನ್ಯಾಯಾಧೀಕರಣ 2014 ರಲ್ಲಿ ಇದನ್ನು ನಿಷೇಧ ಮಾಡಿದೆ.

ಇದನ್ನೂ ಓದಿ : ಜೀವ ರಕ್ಷಣೆಯ ಬಳಿಕ ಅತಂತ್ರ ಸ್ಥಿತಿಯಲ್ಲಿ ಸಿಲ್ಕ್ಯಾರ ಸುರಂಗ ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...