Homeಮುಖಪುಟನಾಗಾರ್ಜುನ ಸಾಗರಕ್ಕಾಗಿ ಆಂಧ್ರ, ತೆಲಂಗಾಣ ಕಿತ್ತಾಟ: ಜಲಾಶಯದ ಬಳಿ ಸಿಆರ್‌ಪಿಎಫ್ ನಿಯೋಜನೆ

ನಾಗಾರ್ಜುನ ಸಾಗರಕ್ಕಾಗಿ ಆಂಧ್ರ, ತೆಲಂಗಾಣ ಕಿತ್ತಾಟ: ಜಲಾಶಯದ ಬಳಿ ಸಿಆರ್‌ಪಿಎಫ್ ನಿಯೋಜನೆ

- Advertisement -
- Advertisement -

ದೇಶದ ಪ್ರಮುಖ ಜಲಾಶಯಗಳಲ್ಲಿ ಒಂದಾದ ನಾಗಾರ್ಜುನ ಸಾಗರ ಅಣೆಕಟ್ಟೆಯ ನೀರಿನ ವಿಚಾರವಾಗಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದ ನಡುವೆ ಏರ್ಪಟ್ಟಿರುವ ಕಾಳಗ ತಾರಕಕ್ಕೇರಿದ್ದು, ಜಲಾಶಯದ ಬಳಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ನೇಮಿಸಲಾಗಿದೆ.

ತೆಲಂಗಾಣ ವಿಧಾನಸಭೆಯ ಮತದಾನದ ಹಿಂದಿನ ದಿನ, ಅಂದರೆ ನವೆಂಬರ್‌ 29ರಂದು ರಾತ್ರಿ ನೀರಿನ ವಿಚಾರವಾಗಿ ಎರಡು ತೆಲುಗು ರಾಜ್ಯಗಳ ನಡುವೆ ಕಿತ್ತಾಟ ಶುರುವಾಗಿದೆ. 2014ರಲ್ಲಿ ತೆಲಂಗಾಣ ಪ್ರತ್ಯೇಖ ರಾಜ್ಯ ರಚನೆಯಾದ ಬಳಿಕ ಶುರುವಾದ ವಿವಾದ ಕಾನೂನಾತ್ಮಕ ಹೋರಾಟಗಳಿಗೆ ಮಾತ್ರ ಸೀಮಿತವಾಗಿ ಬೂದಿ ಮುಚ್ಚಿದ ಕೆಂಡದಂತಿತ್ತು. ಆದರೆ, ಈಗ ನೇರಾನೇರಾ ಜಗಳಕ್ಕೆ ಬಂದು ನಿಂತಿದೆ.

‘ನಮ್ಮ ಪಾಲಿನ ನೀರು ಕೊಡಿ’ ಎಂದು ಆಗಾಗ ತೆಲಂಗಾಣ ಸರ್ಕಾರಕ್ಕೆ ಒತ್ತಡ ಹೇರುತ್ತಿದ್ದ ಆಂಧ್ರ ಪ್ರದೇಶ ಸರ್ಕಾರ, ನವೆಂಬರ್‌ 29ರಂದು ಮಧ್ಯರಾತ್ರಿ ನೀರಾವರಿ ನಿಗಮದ ಅಧಿಕಾರಿಗಳು ಮತ್ತು ಸುಮಾರು 400 ಮಂದಿ ಪೊಲೀಸರನ್ನು ಅಣೆಕಟ್ಟೆಗೆ ನುಗ್ಗಿಸಿತ್ತು. ಪೊಲೀಸ್ ಸರ್ಪಗಾವಲಿನಲ್ಲಿ ಅಣೆಕಟ್ಟೆಯನ್ನು ಭಾಗಶಃ ವಶಕ್ಕೆ ಪಡೆದ ಆಂಧ್ರ ಪ್ರದೇಶದ ಅಧಿಕಾರಿಗಳು, ಜಲಾಶಯದ ಬಲ ಕಾಲುವೆಯ ಮೂಲಕ ತಮ್ಮ ರಾಜ್ಯಕ್ಕೆ ನೀರು ಹರಿಸಿಕೊಂಡಿದ್ದಾರೆ. ಈ ವೇಳೆ ತೆಲಂಗಾಣದ ಪೊಲೀಸರು ಚುನಾವಣಾ ಕರ್ತವ್ಯದಲ್ಲಿ ನಿರತರಾಗಿದ್ದರು. ಕೆಲ ಪೊಲೀಸರು ಮತ್ತು ಅಧಿಕಾರಿಗಳು ಅಣೆಕಟ್ಟೆಯ ಬಳಿ ತೆರಳಿದರೂ, ಭಾರೀ ಸಂಖ್ಯೆಯಲ್ಲಿದ್ದ ಆಂಧ್ರದ ಪಡೆಯನ್ನು ಎದುರಿಸಲು ಅವರಿಗೆ ಸಾಧ್ಯವಾಗಲಿಲ್ಲ. ಹಾಗಾಗಿ, ವಾಪಸ್ ಬಂಧಿದ್ದಾರೆ.

ತೆಲಂಗಾಣ ಸರ್ಕಾರ ಮತ್ತು ಅದರ ಅಧಿಕಾರಿಗಳು ಚುನಾಣೆಯಲ್ಲಿ ಮುಳುಗಿರುವಾಗ, ನವೆಂಬರ್ 30 ರಿಂದ ಡಿಸೆಂಬರ್ 1 (ನಿನ್ನೆ) ಮಧ್ಯಾಹ್ನದವರೆಗೆ ಆಂಧ್ರದ ಅಧಿಕಾರಿಗಳು ತಮಗೆ ಬೇಕಾದಷ್ಟು ನೀರನ್ನು ಜಲಾಶಯದಿಂದ ಹರಿಸಿಕೊಂಡಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಕೇಂದ್ರ ಸರ್ಕಾರ ಎರಡೂ ರಾಜ್ಯಗಳ ಜೊತೆ ಶುಕ್ರವಾರ ಸಭೆ ನಡೆಸಿದೆ.

ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳು, ಕೇಂದ್ರ ಜಲಶಕ್ತಿ ಸಚಿವಾಲಯ ಮತ್ತು ಕೃಷ್ಣಾ ನದಿ ನೀರು ನಿರ್ವಹಣಾ ಮಂಡಳಿ (ಕೆಆರ್‌ಎಂಬಿ) ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದು, ಅಣೆಕಟ್ಟೆ ಬಳಿ ನವೆಂಬರ್ 29ಕ್ಕೂ ಮೊದಲು ಇದ್ದ ಸ್ಥಿತಿಯನ್ನು ಪುನಃಸ್ಥಾಪಿಸಲು ಆಂಧ್ರದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವರದಿಗಳ ಪ್ರಕಾರ, ಕೃಷ್ಣಾ ನದಿ ನೀರು ನಿರ್ವಹಣಾ ಮಂಡಳಿಯ ಸದಸ್ಯರಾಗಿರುವ ಎರಡೂ ರಾಜ್ಯಗಳು ತಾತ್ಕಾಲಿಕವಾಗಿ ಅಣೆಕಟ್ಟಿನ ಭದ್ರತೆಗಾಗಿ ಸಿಆರ್‌ಪಿಎಫ್ ಸಿಬ್ಬಂದಿಯನ್ನು ನಿಯೋಜಿಸಲು ಒಪ್ಪಿಕೊಂಡಿವೆ. ತೆಲಂಗಾಣದ ಮುಖ್ಯ ಕಾರ್ಯದರ್ಶಿ ಎ. ಸಂತಿ ಕುಮಾರಿ ಅವರು ನವೆಂಬರ್ 29 ರ ರಾತ್ರಿ ಅಣೆಕಟ್ಟೆಯ ಮೇಲೆ ಸುಮಾರು 500 ಮಂದಿ ಆಂಧ್ರ ಪೊಲೀಸ್ ಸಿಬ್ಬಂದಿ ಗುಂಪು ಗುಂಪಾಗಿ ಬಂದು ಕ್ಲೋಸ್-ಸರ್ಕ್ಯೂಟ್ ಟೆಲಿವಿಷನ್ ಕ್ಯಾಮರಾಗಳನ್ನು ನಾಶಪಡಿಸಿದ್ದಾರೆ ಎಂದು ಸಭೆಯಲ್ಲಿ ಆರೋಪಿಸಿದ್ದಾರೆ.

ಆಂಧ್ರದ ಅಧಿಕಾರಿಗಳು ಏಕಪಕ್ಷೀಯವಾಗಿ ಅಣೆಕಟ್ಟೆಯ ಹೆಡ್ ರೆಗ್ಯುಲೇಟರ್ ಸ್ಲೂಸ್‌ಗಳನ್ನು ತೆರೆದು 5,000 ಕ್ಯೂಸೆಕ್‌ಗೂ ಹೆಚ್ಚು ನೀರು ಅವರ ರಾಜ್ಯಕ್ಕೆ ಹರಿಸುತ್ತಿದ್ದಾರೆ ಎಂದು ಮುಖ್ಯ ಕಾರ್ಯದರ್ಶಿ ಹೇಳಿದ್ದಾರೆ. ತೆಲಂಗಾಣ ವಿಧಾನಸಭೆ ಚುನಾವಣೆಯ ಮತದಾನದ ಕರ್ತವ್ಯದಲ್ಲಿ ಪೊಲೀಸರು ಸೇರಿದಂತೆ ಸಂಪೂರ್ಣ ಆಡಳಿತ ಯಂತ್ರ ತೊಡಗಿದ್ದಾಗ ಆಂಧ್ರ ವರ್ತನೆ ಕಾನೂನು ಸುವ್ಯವಸ್ಥೆಯ ಸಮಸ್ಯೆಯನ್ನು ಸೃಷ್ಟಿಸಿದೆ. ಆಂಧ್ರ ಎರಡನೇ ಬಾರಿಗೆ ಇಂತಹ ಮಿತಿ ಮೀರಿದ ವರ್ತನೆ ಮಾಡುತ್ತಿದೆ ಎಂದು ಸಂತಿ ಕುಮಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಆಂಧ್ರದ ಅಧಿಕಾರಿಗಳು, ಅಣೆಕಟ್ಟೆಯ ಅರ್ಧ ಭಾಗ ನಮಗೆ ಸೇರಿದ್ದು. ಇಲ್ಲಿ ಯಾವಾಗ ಬೇಕಾದರು ಪೊಲೀಸರನ್ನು ನಿಯೋಜಿಸಲು ಮತ್ತು ನೀರು ಹರಿಸಿಕೊಳ್ಳಲು ನಮಗೆ ಹಕ್ಕಿದೆ ಎಂದಿದ್ದಾರೆ. ಶುಕ್ರವಾರ ಆಂಧ್ರ ಸರ್ಕಾರಕ್ಕೆ ನೋಟಿಸ್ ನೀಡಿರುವ ಕೇಂದ್ರ ಜಲಶಕ್ತಿ ಸಚಿವಾಲಯ, ತಕ್ಷಣ ಅಣೆಕಟ್ಟೆಯ ಗೇಟ್ ಬಂದ್ ಮಾಡಿ ನೀರು ಹರಿಸುವುದನ್ನು ನಿಲ್ಲಿಸುವಂತೆ ಸೂಚಿಸಿದೆ.

ನಾಗಾರ್ಜುನ ಸಾಗರದಿಂದ ಆಂಧ್ರಪ್ರದೇಶ ಮತ್ತು ತೆಲಂಗಾಣ ಕ್ರಮವಾಗಿ 512 ಟಿಎಂಸಿ ಮತ್ತು 299 ಟಿಎಂಸಿ ನೀರನ್ನು ತಾತ್ಕಾಲಿಕ ಆಧಾರದ ಮೇಲೆ ಹಂಚಿಕೊಳ್ಳುತ್ತಿವೆ. ತೆಲಂಗಾಣವು 2020-21 ರಿಂದ 50% ನೀರಿನ ಹಂಚಿಕೆಗೆ ಒತ್ತಾಯಿಸುತ್ತಿದೆ. ಅವಿಭಜಿತ ಆಂಧ್ರಪ್ರದೇಶದ ವಿಭಜನೆಯ ದಿನಾಂಕದಿಂದ, ಶ್ರೀಶೈಲಂ ಡ್ಯಾಂ ನಿರ್ವಹಣೆಯನ್ನು ಆಂಧ್ರ ಪ್ರದೇಶ ಮತ್ತು ನಾಗಾರ್ಜುನ ಸಾಗರದ ನಿರ್ವಹಣೆಯನ್ನು ತೆಲಂಗಾಣಕ್ಕೆ ವಹಿಸಲಾಗಿದೆ.

ಇದನ್ನೂ ಓದಿ : 10 ವರ್ಷಗಳಲ್ಲಿ ಶೇ.50 ಮಹಿಳಾ ಮುಖ್ಯಮಂತ್ರಿ ಕಾಂಗ್ರೆಸ್ ಗುರಿ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...