HomeUncategorizedಮಹುವಾ ಪ್ರಕರಣ: ಸ್ಪೀಕರ್‌ಗೆ ಅಧೀರ್ ರಂಜನ್ ಚೌಧರಿ ಪತ್ರ

ಮಹುವಾ ಪ್ರಕರಣ: ಸ್ಪೀಕರ್‌ಗೆ ಅಧೀರ್ ರಂಜನ್ ಚೌಧರಿ ಪತ್ರ

- Advertisement -
- Advertisement -

ಸೋಮವಾರ ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರ ಉಚ್ಚಾಟನೆಗೆ ಶಿಫಾರಸು ಮಾಡುವ ವರದಿಯನ್ನು ಲೋಕಸಭೆಯ ನೈತಿಕ ಸಮಿತಿಯು ಮಂಡಿಸಲು ಸಿದ್ಧವಾಗುತ್ತಿದೆ. ಈ ಮಧ್ಯೆ ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಶನಿವಾರ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ. ಉಚ್ಛಾಟನೆಯು ಅತ್ಯಂತ ಗಂಭೀರ ಶಿಕ್ಷೆ ಎಂದು ಹೇಳಿದ್ದು ಸಮಿತಿಯು ತನಿಖೆಯ ಕಾರ್ಯವಿಧಾನಗಳನ್ನು ಅನುಸರಿಸಿದೆಯೇ ಎಂದು ಪ್ರಶ್ನಿಸಿದ್ದಾರೆ.

ಸ್ಪೀಕರ್‌ಗೆ 4 ಪುಟಗಳ ಪತ್ರವನ್ನು ಬರೆದ ಚೌಧರಿ ಅವರು, ಪ್ರಾಥಮಿಕವಾಗಿ ಲೋಕಸಭೆಯ ಸದಸ್ಯರ ಹಿತಾಸಕ್ತಿ ಮತ್ತು ಹಕ್ಕುಗಳಿಗೆ ಸಂಬಂಧಿಸಿದ ವಿಶೇಷಾಧಿಕಾರಗಳ ಸಮಿತಿ ಮತ್ತು ನೈತಿಕ ಸಮಿತಿಯಂತಹ ಸಂಸದೀಯ ಸಮಿತಿಗಳ ಕಾರ್ಯಚಟುವಟಿಕೆಗೆ ಸಂಬಂಧಿಸಿದ ನಿಯಮಗಳು ಮತ್ತು ಪ್ರಕ್ರಿಯೆಗಳ ಮರುಪರಿಶೀಲನೆಗೆ  ಒತ್ತಾಯಿಸಿದ್ದಾರೆ.

ಶಿಕ್ಷೆ ವಿಧಿಸುವಂತಹ ವಿಚಾರಗಳಲ್ಲಿ ಸವಲತ್ತುಗಳ ಸಮಿತಿ ಮತ್ತು ನೈತಿಕತೆ ಸಮಿತಿಗೆ ಯಾವುದೇ ಸ್ಪಷ್ಟ ನಿಯಮಗಳಿಲ್ಲ. ಅಷ್ಟೇ ಅಲ್ಲದೆ ನೈತಿಕವಲ್ಲದ ವರ್ತನೆ ಮತ್ತು ನೀತಿ ಸಂಹಿತೆ ಕುರಿತು ಸ್ಪಷ್ಟ ವ್ಯಾಖ್ಯಾನವಿಲ್ಲ. ಈ ಪ್ರಕರಣವನ್ನು ಪುನರಾವಲೋಕಿಸಿ ಸಂಸದೀಯ ಸಮಿತಿಗಳ ಕಾರ್ಯಾಚರಣೆಗಳ ನಿಯಮಗಳು ಮತ್ತು ಪ್ರಕ್ರಿಯೆಗಳನ್ನು ಪರಿಶೀಲಿಸಬೇಕೆಂದು ಅವರು ಕೋರಿದ್ದಾರೆ.

ನಗದು-ಪ್ರಶ್ನೆ ಪ್ರಕರಣದಲ್ಲಿ ಮೊಯಿತ್ರಾ ಅವರನ್ನು ಉಚ್ಚಾಟಿಸಲು ಶಿಫಾರಸು ಮಾಡುವ ಲೋಕಸಭೆಯ ನೈತಿಕ ಸಮಿತಿಯ ವರದಿಯನ್ನು ಸೋಮವಾರ ಕೆಳಮನೆಯಲ್ಲಿ ಮಂಡಿಸುವ ಸಾಧ್ಯತೆ ಇದೆ. ಲೋಕಸಭೆ ಸೆಕ್ರೆಟರಿಯೇಟ್ ಹಂಚಿಕೊಂಡ ಮಾಹಿತಿ ಪ್ರಕಾರ ನೀತಿ ಸಮಿತಿಯ ಅಧ್ಯಕ್ಷ ವಿನೋದ್ ಕುಮಾರ್ ಸೋಂಕರ್ ಅವರು ಸಮಿತಿಯ ವರದಿಯನ್ನು ಸದನದ ಮುಂದಿಡಲಿದ್ದಾರೆ.

ನ.9ರಂದು ನಡೆದ ಸಭೆಯಲ್ಲಿ ಸಮಿತಿಯು ಪ್ರಶ್ನೆಗಾಗಿ ನಗದು ಆರೋಪದಲ್ಲಿ ಲೋಕಸಭೆಯಿಂದ ಮೊಯಿತ್ರಾ ಅವರನ್ನು ಉಚ್ಚಾಟಿಸುವಂತೆ ಶಿಫಾರಸು ಮಾಡುವ ತನ್ನ ವರದಿಯನ್ನು ಅಂಗೀಕರಿಸಿದೆ. ಮೊಯಿತ್ರಾ ವಿರುದ್ಧ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಆರೋಪಿಸಿದ ಆರೋಪದ ಬಗ್ಗೆ ವಿಚಾರಣೆ ನಡೆಸಿದ ನೈತಿಕ ಸಮಿತಿಯು ನ.9ರಂದು ತನ್ನ ಕರಡು ವರದಿಯನ್ನು ಅಂಗೀಕರಿಸಿದೆ.

ಮೊಯಿತ್ರಾ ಅವರು ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಲು ಉದ್ಯಮಿ ದರ್ಶನ್ ಹಿರಾನಂದಾನಿ ಅವರಿಂದ ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ಸುಪ್ರೀಂಕೋರ್ಟ್ ವಕೀಲ ಜೈ ಅನಂತ್ ದೇಹದ್ರಾಯ್ ಅವರು ಸಿಬಿಐಗೆ ದೂರು ಸಲ್ಲಿಸಿದ್ದರು. ದೇಹದ್ರಾಯ್ ಅವರು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರಿಗೂ ಈ ಸಂಬಂಧ ಪತ್ರ ಬರೆದಿದ್ದಾರೆ. ದುಬೆ ಮಹುವಾ ಮೊಯಿತ್ರಾ ವಿರುದ್ದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಮತ್ತು ಲೋಕಪಾಲರಿಗೆ ದೂರು ನೀಡಿದ್ದರು. ಈ ಸಂಬಂಧ ಲೋಕಸಭೆಯ ನೈತಿಕ ಸಮಿತಿ ಮಹುವಾ ಮೊಯಿತ್ರಾ ಅವರ ಹೇಳಿಕೆ ದಾಖಲಿಸಿಕೊಂಡಿತ್ತು.

ಇದನ್ನು ಓದಿ: ದುಂಡಾ ಜಾತಿ ಹಿಂಸಾಚಾರ: ದಲಿತರಿಗೆ ನ್ಯಾಯ ಒದಗಿಸಲು ವಿಫಲವಾಗಿದ್ದ ಬಿಜೆಪಿ ಸರಕಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...