Homeಮುಖಪುಟನ್ಯಾಯಾಲಯದಲ್ಲಿ ಅಂಬೇಡ್ಕರ್‌ಗೂ ಮೊದಲು ಮನು ಪ್ರತಿಮೆ ಏಕೆ ಸ್ಥಾಪಿಸಲಾಯಿತು?

ನ್ಯಾಯಾಲಯದಲ್ಲಿ ಅಂಬೇಡ್ಕರ್‌ಗೂ ಮೊದಲು ಮನು ಪ್ರತಿಮೆ ಏಕೆ ಸ್ಥಾಪಿಸಲಾಯಿತು?

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ. ಬಿಆರ್‌ ಅಂಬೇಡ್ಕರ್‌ ಅವರ 9 ಅಡಿ ಎತ್ತರದ ಪ್ರತಿಮೆಯನ್ನು ನ.26, 2023ರಂದು ಸಂವಿಧಾನ ದಿನಾಚರಣೆಯಂದು ಭಾರತದ ಸರ್ವೋಚ್ಚ ನ್ಯಾಯಾಲಯದ ಆವರಣದಲ್ಲಿ ಪ್ರತಿಷ್ಠಾಪಿಸಲಾಯಿತು.ಭಾರತದ ಸಂವಿಧಾನದ ಶಿಲ್ಪಿಗೆ ಗೌರವಾರ್ಥವಾಗಿ ಪ್ರತಿಮೆಯನ್ನು ಸುಪ್ರೀಂಕೋರ್ಟ್‌ ಆವರಣದಲ್ಲಿ ಸ್ಥಾಪಿಸಲು 75 ವರ್ಷಗಳ ಕಾಯಬೇಕಾಗಿ ಬಂದಿರುವುದು ನಿಜಕ್ಕೂ ವಿಪರ್ಯಾಸವಾಗಿದೆ.

ಮನುವಿನ ಸಿದ್ದಾಂತಗಳು, ಬೋಧನೆಗಳು ಸಂವಿಧಾನದ ಮೂಲ ರಚನೆ ಮತ್ತು ಮೌಲ್ಯಗಳಿಗೆ ವಿರುದ್ಧವಾಗಿವೆ. ಆದರೆ ಮನುವಿನ 11ಅಡಿ ಎತ್ತರದ ಪ್ರತಿಮೆಯನ್ನು 1989ರಲ್ಲೇ ರಾಜಸ್ಥಾನ ಹೈಕೋರ್ಟ್‌ನ ಜೈಪುರ ಪೀಠದ ಆವರಣದಲ್ಲಿ ಅನಾವರಣಗೊಳಿಸಲಾಗಿತ್ತು.

1970ರ ದಶಕದಲ್ಲಿ ಹಿರಿಯ ಅಂಬೇಡ್ಕರ್‌ವಾದಿ ನಾಯಕ ದಾದಾಸಾಹೇಬ್ ಗಾಯಕ್ವಾಡ್ ಅವರು ಸಂಸತ್ತಿನ ಸಂಕೀರ್ಣದಲ್ಲಿ ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪಿಸಲು ಪ್ರಯತ್ನಗಳನ್ನು ಪ್ರಾರಂಭಿಸಿದ್ದರು. 56 ವರ್ಷಗಳ ನಂತರ ಈ ಬಗ್ಗೆ ಗಮನಹರಿಸಲಾಗಿದೆ. ಆದರೆ ಮೇಲ್ಜಾತಿಗಳಲ್ಲಿನ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಯಾವುದೇ ಬೀದಿ ಹೋರಾಟಗಳಿಲ್ಲದೆ ಮೀಸಲಾತಿಯ ಅನುಷ್ಠಾನ ಕೊಟ್ಟಂತೆಯೇ ರಾಜಸ್ಥಾನದ ಉಚ್ಚ ನ್ಯಾಯಾಲಯದಲ್ಲಿ ಮನುವಿನ ಪ್ರತಿಮೆಯನ್ನು 23 ದಿನಗಳಲ್ಲಿ ನಿರ್ಮಾಣ ಮಾಡಲಾಗಿದೆ.

ಮನುವಿನ ಪ್ರತಿಮೆಯ ತ್ವರಿತ ಪ್ರತಿಷ್ಠಾಪನೆ ಮತ್ತು ಅಂಬೇಡ್ಕರ್ ಪ್ರತಿಮೆ ಅನಾವರಣಕ್ಕೆ ತೆಗೆದುಕೊಂಡ ಸಮಯ ಸ್ವತಂತ್ರೋತ್ತರ ಭಾರತದಲ್ಲಿ ವಿಪರ್ಯಾಸವಾಗಿ ಕಾಣಬಹುದು. ಮನುವಿನ ಸಿದ್ದಾಂತವು ಪ್ರಜಾಪ್ರಭುತ್ವ ವಿರೋಧಿಯಾಗಿದ್ದು ಅದರಲ್ಲಿ ಬ್ರಾಹ್ಮಣ ಮೌಲ್ಯಗಳ ವೈಭವೀಕರಣವನ್ನು ಕಾಣಬಹುದಾಗಿದೆ.

1989ರ ಫೆ.10ರಂದು ರಾಜಸ್ಥಾನ ಹೈಕೋರ್ಟ್ ಅಧಿಕಾರಿಗಳ ಸಂಘದ ಅಧ್ಯಕ್ಷ ಪದಮ್ ಕುಮಾರ್ ಜೈನ್ ಅವರು ನ್ಯಾಯಾಲಯದ ಆವರಣದಲ್ಲಿ ಮನುವಿನ ಪ್ರತಿಮೆಯನ್ನು ಸ್ಥಾಪಿಸಲು ಪ್ರಸ್ತಾಪಿಸಿದರು. ಈ ಪ್ರಸ್ತಾಪದ ಕೇವಲ 23 ದಿನಗಳ ನಂತರ ಮಾ.3 1989 ರಂದು ಪ್ರಸ್ತಾವನೆಯನ್ನು ಅಂಗೀಕರಿಸಲಾಗಿದೆ. ಆ ಸಮಯದಲ್ಲಿ ಕಾಂಗ್ರೆಸ್ಸಿನ ಶಿವಚರಣ್ ಮಾಥುರ್ ರಾಜಸ್ಥಾನದ ಮುಖ್ಯಮಂತ್ರಿಯಾಗಿದ್ದರು. ರಾಜೀವ್ ಗಾಂಧಿ ಪ್ರಧಾನಿಯಾಗಿದ್ದರು ಮತ್ತು ನ್ಯಾಯಮೂರ್ತಿ ಇ.ಎಸ್. ವೆಂಕಟರಾಮಯ್ಯ ಅವರು ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದರು.

ಮನುವಿನ ಪ್ರತಿಮೆಯ ಸ್ಥಾಪನೆಯನ್ನು ವಿರೋಧಿಸಿ ಎಚ್ಚರಗೊಂಡ ದಲಿತ ಸಮುದಾಯವು ಪ್ರತಿಭಟಿಸಲು ಪ್ರಾರಂಭಿಸಿತ್ತು. ಆದ್ದರಿಂದ ಜು.28 1989ರಂದು ರಾಜಸ್ಥಾನ ಹೈಕೋರ್ಟ್‌ನ ಪೂರ್ಣ ನ್ಯಾಯಾಲಯದ ಅಧಿವೇಶನವು ಪ್ರತಿಮೆಯನ್ನು ತೆಗೆದುಹಾಕಲು ಸರ್ವಾನುಮತದಿಂದ ನಿರ್ಧರಿಸಿತು.

ತಕ್ಷಣ ವಿಶ್ವ ಹಿಂದೂ ಪರಿಷತ್ ನಾಯಕ ಆಚಾರ್ಯ ಧರ್ಮೇಂದ್ರ ಇದರ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಸಲ್ಲಿಸಿದರು. ಉಚ್ಚ ನ್ಯಾಯಾಲಯವು ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತ್ವರಿತವಾಗಿ ವಿಚಾರಣೆಗೆ ಆ.1989 ರಲ್ಲಿ ಸಮ್ಮತಿಸಿತು. ಈ ಪ್ರಕರಣದ ಯಾವುದೇ ಮುಂದಿನ ವಿಚಾರಣೆಯನ್ನು ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹಾಜರಾತಿಯಲ್ಲಿ ವಿಭಾಗೀಯ ಪೀಠ ಮಾತ್ರ ನಡೆಸಬೇಕು ಎಂದು ಸೂಚನೆ ನೀಡಿತ್ತು.

ಅಂದಿನಿಂದ ತಡೆಯಾಜ್ಞೆ ಮತ್ತು ಮನುವಿನ ಪ್ರತಿಮೆ ಹೈಕೋರ್ಟ್ ಆವರಣದಲ್ಲಿಯೇ ಉಳಿದಿದೆ. ಮತ್ತು ಈ ಪ್ರಕರಣವು ರಾಜಸ್ಥಾನ ಹೈಕೋರ್ಟ್‌ನ ಇತಿಹಾಸದಲ್ಲಿ ಸುದೀರ್ಘ ಬಾಕಿ ಉಳಿದಿರುವ PIL ಎಂಬ ಕುಖ್ಯಾತಿಯನ್ನು ಪಡೆದುಕೊಂಡಿದೆ.

ಈ ಪ್ರಕರಣದ ತೀರಾ ಇತ್ತೀಚಿನ ವಿಚಾರಣೆಯು 2015ರಲ್ಲಿ ನಡೆಯಿತು. 300ಕ್ಕೂ ಹೆಚ್ಚು ಬ್ರಾಹ್ಮಣ ಮತ್ತು ಸವರ್ಣಿಯ ವಕೀಲರು ವಿಚಾರಣೆಗೆ ಹಾಜರಾಗಲು ವಿವಿಧ ನ್ಯಾಯಾಲಯಗಳಿಂದ ಧಾವಿಸಿದ್ದರು.  ದಲಿತ ಸಂಘಟನೆಗಳ ಪರ ವಕೀಲ ಜೈನ್ ಅವರು ಕೋರ್ಟ್‌ಗೆ ಹಾಜರಾಗಿದ್ದು, ಮನುಸ್ಮೃತಿಯಲ್ಲಿನ ದಲಿತ, ಶೂದ್ರ ಮತ್ತು ಮಹಿಳೆಯರ ಬಗೆಗಿನ ಶ್ಲೋಕಗಳ ಬಗ್ಗೆ ನ್ಯಾಯಾಧೀಶರ ಗಮನ ಸೆಳೆಯಲು ಪ್ರಯತ್ನಿಸಿದ್ದರು. ಈ ವೇಳೆ ಮೇಲ್ಜಾತಿ ವಕೀಲರು ನ್ಯಾಯಾಲಯದ ಆವರಣದಲ್ಲಿ ಗದ್ದಲವನ್ನು ಪ್ರಾರಂಭಿಸಿದರು, ಇದು ವಿಚಾರಣೆಯನ್ನು ಮುಂದೂಡಲು ಕಾರಣವಾಯಿತು.

ಈ ನಡುವೆ ಹಲವು ದಲಿತ ಸಂಘಟನೆಗಳು ಮತ್ತು ಬಹುಜನ ಸಮಾಜ ಪಕ್ಷದ ಮುಖಂಡರು ಮನುವಿನ ಪ್ರತಿಮೆಯನ್ನು ತೆರವಿಗೆ ಒತ್ತಾಯಿಸುತ್ತಿದ್ದಾರೆ. ಅ.8, 2018ರಂದು ಮಹಾರಾಷ್ಟ್ರದ ಔರಂಗಾಬಾದ್‌ನ ಇಬ್ಬರು ಅಂಬೇಡ್ಕರ್ ವಾದಿ ಮಹಿಳಾ ಕಾರ್ಯಕರ್ತರು  ಶೀಲಾಬಾಯಿ ಪವಾರ್ ಮತ್ತು ಕಾಂತಾ ರಮೇಶ್ ಅಹಿರೆ – ಮನುವಿನ ಪ್ರತಿಮೆಗೆ ಕಪ್ಪು ಬಣ್ಣವನ್ನು ಎಸೆದಿದ್ದಕ್ಕಾಗಿ ಬಂಧನಕ್ಕೆ ಒಳಗಾಗಿದ್ದರು. ಆದರೆ ಮನುವಿನ ಪ್ರತಿಮೆಯನ್ನು ತೆಗೆಯಲು ಸಾಧ್ಯವಾಗಲಿಲ್ಲ.

ರಾಜಸ್ಥಾನದಲ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪರ್ಯಾವಾಗಿ ಸರಕಾರ ನಡೆಸುತ್ತಾ ಬಂದಿದೆ.  ಬಿಜೆಪಿ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ನಿಲುವು ಹೆಚ್ಚಾಗಿ ಜಾತಿ ವ್ಯವಸ್ಥೆಯನ್ನು ಸಮರ್ಥಿಸುತ್ತದೆ. ಆದರೆ ಸಂವಿಧಾನದ ಪರ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ಮನುವಿನ ಪ್ರತಿಮೆಯನ್ನು ತೆಗೆಯಲು ಹೂಡಿರುವ ವ್ಯಾಜ್ಯದ ಹಿಂದೆ ತನ್ನ ನಿಗಾವನ್ನು ವಹಿಸಲಿಲ್ಲ ಏಕೆ ಎನ್ನುವುದು ಪ್ರಶ್ನಾರ್ಹವಾಗಿದೆ. ವಿಪರ್ಯಾಸವೆಂದರೆ ಕಾಂಗ್ರೆಸ್ ನಾಯಕನೋರ್ವನ ಹೇಳಿಕೆಯು ಮನುವಿನ ಪ್ರತಿಮೆ ತೆರವಿನ ವಿರುದ್ಧ ಅರ್ಜಿ ಸಲ್ಲಿಸಿದ್ದ ವಿಎಚ್‌ಪಿಯ ಆಚಾರ್ಯ ಧರ್ಮೇಂದ್ರ ಅವರ ಹೇಳಿಕೆಯೊಂದಿಗೆ ಹೋಲುತ್ತದೆ.  ಹೈಕೋರ್ಟ್‌ನಲ್ಲಿ ಮನು ಪ್ರತಿಮೆಯನ್ನು ಹೊಂದುವುದು ಉತ್ತಮ ಆಲೋಚನೆಯಾಗಿದೆ ಏಕೆಂದರೆ ಅವರು ಕಾನೂನು ರಚಿಸಿದ ವಿಶ್ವದ ಮೊದಲ ವ್ಯಕ್ತಿಯಾಗಿದ್ದಾರೆ. ಅವನನ್ನು ವಿರೋಧಿಸುವವರು ಮನುವಿನ ತತ್ವದ ಅರಿವಿಲ್ಲದವರು ಎಂದು ಹೇಳಿದ್ದರು.

ರಾಜಸ್ಥಾನ ಹೈಕೋರ್ಟ್ ಆವರಣದಲ್ಲಿರುವ ಮನುವಿನ ಪ್ರತಿಮೆಯನ್ನು ತೆರವು ಮಾಡುವಂತೆ ಒತ್ತಾಯಿಸಿ ಪ್ರಕರಣವನ್ನು ಉದ್ದೇಶಪೂರ್ವಕವಾಗಿ 25 ವರ್ಷಗಳಿಗೂ ಹೆಚ್ಚು ಕಾಲ ವಿಳಂಬಗೊಳಿಸಿದಾಗ, ಹಲವಾರು ದಲಿತ ಕಾರ್ಯಕರ್ತರು ಮತ್ತು ಸಂಘಟನೆಗಳು ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದರು.

ಆದರೆ ಫೆ.24, 2023ರಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸುಂದರೇಶ್ ಅವರನ್ನೊಳಗೊಂಡ ಸುಪ್ರೀಂಕೋರ್ಟ್‌ ವಿಭಾಗೀಯ ಪೀಠವು ಅರ್ಜಿಯನ್ನು ವಜಾಗೊಳಿಸಿದೆ. ಈ ನಿರ್ಧಾರವು ಮನುವಿನ ಪ್ರತಿಮೆ ಉಳಿಯಲು ಅವಕಾಶ ಮಾಡಿಕೊಟ್ಟಿದೆ. ಮನು ಮತ್ತು ಮನುಸ್ಮೃತಿಯು ಸಾಮಾಜಿಕ ಅಸಮಾನತೆ, ಜಾತಿ ಶ್ರೇಣಿ ಮತ್ತು ಪಿತೃಪ್ರಭುತ್ವವನ್ನು ಪ್ರತಿನಿಧಿಸುತ್ತದೆ. ಅಂಬೇಡ್ಕರ್ ಮತ್ತು ಸಂವಿಧಾನವು ಸಮಾನತೆ, ಸಹಾನುಭೂತಿ, ಸಾಮಾಜಿಕ-ಆರ್ಥಿಕ ನ್ಯಾಯ ಮತ್ತು ಭ್ರಾತೃತ್ವಕ್ಕಾಗಿ ನಿಂತಿದೆ ಎನ್ನುವುದು ಸ್ಪಷ್ಟವಾಗಿದೆ.

ಇದನ್ನು ಓದಿ: ದುಂಡಾ ಜಾತಿ ಹಿಂಸಾಚಾರ: ದಲಿತರಿಗೆ ನ್ಯಾಯ ಒದಗಿಸಲು ವಿಫಲವಾಗಿದ್ದ ಬಿಜೆಪಿ ಸರಕಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...