HomeಮುಖಪುಟELECTION UPDATE: 3 ರಾಜ್ಯಗಳಲ್ಲಿ ಬಿಜೆಪಿಗೆ ಮುನ್ನಡೆ, ತೆಲಂಗಾಣದಲ್ಲಿ ಕಾಂಗ್ರೆಸ್‌ ಕಮಾಲ್

ELECTION UPDATE: 3 ರಾಜ್ಯಗಳಲ್ಲಿ ಬಿಜೆಪಿಗೆ ಮುನ್ನಡೆ, ತೆಲಂಗಾಣದಲ್ಲಿ ಕಾಂಗ್ರೆಸ್‌ ಕಮಾಲ್

- Advertisement -
- Advertisement -

ನಾಲ್ಕು ರಾಜ್ಯಗಳ ಚುನಾವಣೆಗೆ ಮತ ಎಣಿಕೆ ಬಿರುಸಿನಿಂದ ನಡೆಯುತ್ತಿದ್ದು, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢದಲ್ಲಿ ಬಿಜೆಪಿ ಮುನ್ನಡೆಯನ್ನು ಸಾಧಿಸಿದರೆ, ಕಾಂಗ್ರೆಸ್ ತೆಲಂಗಾಣ ರಾಜ್ಯದಲ್ಲಿ ಮಾತ್ರ ಮುನ್ನಡೆಯನ್ನು ಸಾಧಿಸಿಕೊಂಡು ತೃಪ್ತಿ ಪಟ್ಟುಕೊಂಡಿದೆ. ತೆಲಂಗಾಣದ ಜೊತೆಗೆ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ಗೆ ಬಹುಮತ ಸಿಗುತ್ತದೆ ಎಂದು ಕಾಂಗ್ರೆಸ್‌ ನಾಯಕರು ಭಾರೀ ನಿರೀಕ್ಷೆಯನ್ನು ಇಟ್ಟುಕೊಂಡಿದ್ದರು. ಆದರೆ ಇದೀಗ ಫಲಿತಾಂಶ ಕಾಂಗ್ರೆಸ್‌ಗೆ ಮತ್ತೆ ಅವಲೋಕನ ಮಾಡುವಂತೆ ಮಾಡಿದೆ.

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಿ, ಬಿಜೆಪಿಯ ಜೊತೆ ಹೋದ ಜ್ಯೋತಿರಾಧಿತ್ಯ ಸಿಂಧಿಯಾ ಬಣದ ಮೇಲೆ ಬಿಜೆಪಿಯೊಳಗೆ ವಿರೋಧವಿತ್ತು. ಇದಲ್ಲದೆ ಸಿಂಧಿಯಾ ಬಣಕ್ಕೆ ಸೂಕ್ತ ಪ್ರಾತಿನಿಧ್ಯ ನೀಡದ ಕಾರಣ ಬಿಜೆಪಿಯ ಜೊತೆ ಅಸಮಾಧಾನವಿತ್ತು. ಕಾಂಗ್ರೆಸ್‌ನಲ್ಲಿ ಆರಂಭದಲ್ಲಿ ಹೆಚ್ಚಿದ ಉತ್ಸಾಹವು ಬಿಜೆಪಿಗೆ ಹೊಸ ಸವಾಲನ್ನು ತಂದೊಡ್ಡಿತ್ತು. ನಿರಂತರ ಆಡಳಿತದ ವಿರೋಧಿ ಅಲೆಯೂ ಬಿಜೆಪಿಯ ಎದುರಿಗಿತ್ತು. ಅಲ್ಲದೆ ಪರಿಶಿಷ್ಟ ಪಂಗಡಗಳ ಮತಗಳು ಕೈತಪ್ಪುವ ಭಯವನ್ನು ಶಿವರಾಜ್ ಸಿಂಗ್‌ ಚೌವ್ಹಾಣ್ ಅವರಿಗಿತ್ತು. ಆದರೆ ಕೊನೇ ಕ್ಷಣದಲ್ಲಿ ಇವೆಲ್ಲವನ್ನೂ ಮೆಟ್ಟಿ ನಿಂತು ಬಿಜೆಪಿ ಗೆಲುವನ್ನು ಸಾಧಿಸಿದೆ.

ಮಧ್ಯಪ್ರದೇಶದ 230 ಕ್ಷೇತ್ರಗಳಲ್ಲಿ ಸರಕಾರ ರಚನೆಗೆ 116 ಸ್ಥಾನಗಳ ಅಗತ್ಯತೆ ಇದ್ದು, ಬಿಜೆಪಿ 162 ಸ್ಥಾನಗಳಲ್ಲಿ ಮುನ್ನಡೆಯನ್ನು ಸಾಧಿಸುವ ಮೂಲಕ ಬಹುಮತಕ್ಕಿಂತಲೂ ಹೆಚ್ಚಿನ ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ. ಕಾಂಗ್ರೆಸ್‌ 65 ಕ್ಷೇತ್ರಗಳಲ್ಲಿ ಮತ್ತು ಬಿಎಸ್ಪಿ 2 ಕ್ಷೇತ್ರಗಳಲ್ಲಿ ಮಧ್ಯಪ್ರದೇಶದಲ್ಲಿ ಮುನ್ನಡೆ ಸಾಧಿಸಿದ್ದು, ಮಧ್ಯಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರದ ಚುಕ್ಕಣಿ ಹಿಡಿಯುವುದು ಸ್ಪಷ್ಟವಾಗಿ ಕಂಡುಬರುತ್ತಿದೆ.

ರಾಜಸ್ಥಾನದ 199 ವಿಧಾನಸಭಾ ಕ್ಷೇತ್ರಗಳಲ್ಲಿ ಸರಕಾರ ರಚನೆಗೆ 101 ಕ್ಷೇತ್ರಗಳ ಅವಶ್ಯಕತೆ ಇದ್ದು, ರಾಜಸ್ಥಾನದಲ್ಲಿ ಬಿಜೆಪಿ 111ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದು ಮ್ಯಾಜಿಕ್‌ ನಂಬರನ್ನು ದಾಟಿದೆ. ಕಾಂಗ್ರೆಸ್ 72ಕ್ಷೇತ್ರಗಳಲ್ಲಿ, ಬಿಎಸ್ಪಿ 3 ಕ್ಷೇತ್ರಗಳಲ್ಲಿ ಮತ್ತು ಇತರರು 13ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದು, ರಾಜಸ್ಥಾನದಲ್ಲಿ ಕೂಡ ಬಿಜೆಪಿ ಸರಕಾರ ರಚನೆಯ ಎಲ್ಲಾ ಬೆಳವಣಿಗೆಗಳು ಎದ್ದು ಕಾಣುತ್ತಿದೆ. ರಾಜಸ್ಥಾನದಲ್ಲಿ ಕಳೆದ 25 ವರ್ಷಗಳಿಂದ ಐದು ವರ್ಷಕ್ಕೊಮ್ಮೆ ಸರಕಾರಗಳು ಬದಲಾಗುತ್ತದೆ. ಈ ಮೂಲಕ ಈ ಇತಿಹಾಸ ಮುರಿದು ಬೀಳುತ್ತಾ ಎನ್ನುವ ಸಂಶಯವನ್ನು ರಾಜಸ್ಥಾನದ ಜನತೆ ಸುಳ್ಳಾಗಿಸುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದೆ.

ತೆಲಂಗಾಣದಲ್ಲಿ 119 ವಿಧಾನಸಭಾ ಕ್ಷೇತ್ರಗಳಿದ್ದು, ಸರಕಾರ ರಚನೆಗೆ 60 ಸ್ಥಾನಗಳ ಅವಶ್ಯಕತೆ ಇದೆ. ತೆಲಂಗಾಣದಲ್ಲಿ ಕಾಂಗ್ರೆಸ್ 65 ಸ್ಥಾನಗಳಲ್ಲಿ ಬಿಆರ್‌ಎಸ್‌ 38 ಕ್ಷೇತ್ರಗಳಲ್ಲಿ ಬಿಜೆಪಿ 10 ಕ್ಷೇತ್ರಗಳಲ್ಲಿ ಮತ್ತು ಇತರರು 5 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದು, ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಸರಕಾರ ರಚಿಸುವ ಎಲ್ಲಾ ಅವಕಾಶಗಳು ಕಂಡು ಬರುತ್ತಿದೆ. ತೆಲಂಗಾಣದಲ್ಲಿ ರೇವಂತ್‌ ರೆಡ್ಡಿ 30,000ಕ್ಕೂ ಅಧಿಕ ಮತಗಳಿಂದ ಗೆಲುವನ್ನು ಸಾಧಿಸಿದ್ದಾರೆ. ತೆಲಂಗಾಣ ಕಾಂಗ್ರೆಸ್‌ ಅಧ್ಯಕ್ಷರಾಗಿರುವ ರೇವಂತ್‌ ರೆಡ್ಡಿ ಸಿಎಂ ರೇಸ್‌ನಲ್ಲಿದ್ದಾರೆ. ಬಿಆರ್‌ಎಸ್‌ ವಿರುದ್ಧದ ಆಡಳಿತ ವಿರೋಧಿ ಅಲೆ ಈ ಬಾರಿ ತೆಲಂಗಾಣದಲ್ಲಿ ಕಾಂಗ್ರೆಸ್ ಸರಕಾರ ರಚನೆಗೆ ಹಾದಿಯನ್ನು ಸುಗಮಗೊಳಿಸಿದೆ.

ಛತ್ತೀಸ್‌ಗಢದಲ್ಲಿ 90 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಸರಕಾರ ರಚನೆಗೆ 46 ಸ್ಥಾನಗಳನ್ನು ಪಡೆಯಬೇಕಿದೆ. ಬಿಜೆಪಿ 54 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದು, 35 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆಯನ್ನು ಸಾಧಿಸಿದೆ. ಇತರರು 1 ಕ್ಷೇತ್ರದಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ. ಮತ ಎಣಿಕೆಯ ಆರಂಭದಿಂದಲೂ ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಮಧ್ಯೆ ಭಾರೀ ಜಿದ್ದಾ ಜಿದ್ದಿನ ಫೈಟ್‌ ನಡೆಯುತ್ತಿತ್ತು. ಆ ಬಳಿಕದ ಬೆಳವಣಿಗೆಯಲ್ಲಿ ಬಿಜೆಪಿ ಮ್ಯಾಜಿಕ್‌ ನಂಬರ್‌ ದಾಟಿ ಭಾರೀ ಮುನ್ನಡೆಯನ್ನು ಸಾಧಿಸಿದೆ.

 ಇದನ್ನು ಓದಿ: 8 ಭಾರತೀಯರಿಗೆ ಮರಣದಂಡನೆ: ಕತಾರ್ ದೊರೆ ಜೊತೆ ಮೋದಿ ವಿಷಯ ಪ್ರಸ್ತಾಪಿಸಿಲ್ಲ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...