Homeಮುಖಪುಟಪ್ರಾದೇಶಿಕ ಪಕ್ಷಗಳ ಆಸ್ತಿಗಳಲ್ಲಿ ಗಣನೀಯ ಹೆಚ್ಚಳ: ಮೊದಲ ಸ್ಥಾನದಲ್ಲಿರುವ ಸಮಾಜವಾದಿ ಪಕ್ಷ

ಪ್ರಾದೇಶಿಕ ಪಕ್ಷಗಳ ಆಸ್ತಿಗಳಲ್ಲಿ ಗಣನೀಯ ಹೆಚ್ಚಳ: ಮೊದಲ ಸ್ಥಾನದಲ್ಲಿರುವ ಸಮಾಜವಾದಿ ಪಕ್ಷ

- Advertisement -
- Advertisement -

ಪ್ರಾದೇಶಿಕ ಪಕ್ಷಗಳ ಪೈಕಿ ಸಮಾಜವಾದಿ ಪಕ್ಷವು ಭಾರತದ ಅತ್ಯಂತ ಶ್ರೀಮಂತ ಪಕ್ಷವಾಗಿದೆ. 2021-22ರಲ್ಲಿ ಅಖಿಲೇಶ್‌ ಯಾದವ್‌ ನಾಯಕತ್ವದ ಉತ್ತರಪ್ರದೇಶದ ಸಮಾಜವಾದಿ ಪಕ್ಷವು ಅತಿ ಹೆಚ್ಚು ಆಸ್ತಿಯನ್ನು ಹೊಂದಿದ್ದು, ಭಾರತದ ಶ್ರೀಮಂತ ಪ್ರಾದೇಶಿಕ ಪಕ್ಷವಾಗಿದೆ ಎಂದು ಪ್ರಜಾಸತ್ತಾತ್ಮಕ ಸುಧಾರಣಾ ಚಿಂತಕರ ಚಾವಡಿ ವರದಿ ತಿಳಿಸಿದೆ.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಪ್ರಕಾರ, 2020-21ರ ಹಣಕಾಸು ವರ್ಷದಲ್ಲಿ  ಸಮಾಜವಾದಿ ಪಕ್ಷವು ಒಟ್ಟು 561.46 ಕೋಟಿ ರೂ. ಆಸ್ತಿಯನ್ನು ಘೋಷಿಸಿದೆ. ಇದು 2021-22ರಲ್ಲಿ 568.369 ಕೋಟಿಗೆ ಹೆಚ್ಚಳವಾಗಿದೆ ಅಂದರೆ ಸಮಾಜವಾದಿ ಪಕ್ಷದ ಆಸ್ತಿಯಲ್ಲಿ 1.23 ಶೇಕಡಾ ಹೆಚ್ಚಳವಾಗಿದೆ.

ತೆಲಂಗಾಣದ ಚಂದ್ರಶೇಖರ್‌ ರಾವ್‌ ಅವರ ಭಾರತ್ ರಾಷ್ಟ್ರ ಸಮಿತಿ ಪಕ್ಷವು ದೇಶದ ಎರಡನೇ ಶ್ರೀಮಂತ  ಪ್ರಾದೇಶಿಕ ಪಕ್ಷವಾಗಿದ್ದು, 2020-21ರ ಆರ್ಥಿಕ ವರ್ಷದಲ್ಲಿ 319.55 ಕೋಟಿ ರೂ. ಆಸ್ತಿಯನ್ನು ಪಕ್ಷವು ಹೊಂದಿತ್ತು. ಆ ಬಳಿಕ 2021-22ರ ಆರ್ಥಿಕ ವರ್ಷದಲ್ಲಿ 512.24 ಕೋಟಿ ರೂ.ಗಳ ಒಟ್ಟು ಆಸ್ತಿಯನ್ನು ಬಿಆರ್‌ಎಸ್ ಘೋಷಿಸಿದೆ.

ಕಳೆದ ಎರಡು ವರ್ಷಗಳಲ್ಲಿ ಡಿಎಂಕೆ, ಬಿಜೆಡಿ ಮತ್ತು ಜೆಡಿ(ಯು) ಪಕ್ಷಗಳ ಒಟ್ಟು ಆಸ್ತಿ ಶೇ.95ರಷ್ಟು ಹೆಚ್ಚಿದೆ. ದ್ರಾವಿಡ ಮುನ್ನೇತ್ರ ಕಳಗಂ 2020-21ರಲ್ಲಿ 115.708 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಘೋಷಿಸಿತ್ತು. ಇದು 2021-22ರಲ್ಲಿ  399 ಕೋಟಿ ರೂ.ಗೆ ಹೆಚ್ಚಳವಾಗಿದೆ ಅಂದರೆ ದ್ರಾವಿಡ ಮುನ್ನೇತ್ರ ಕಳಗಂ ಪಕ್ಷದ ಆಸ್ತಿಯಲ್ಲಿ  244.88ರಷ್ಟು ಹೆಚ್ಚಳವಾಗಿದೆ.

ಬಿಜು ಜನತಾ ದಳವು 2020-21ರಲ್ಲಿ 194 ಕೋಟಿ ರೂ. ಆಸ್ತಿಯನ್ನು ಘೋಷಿಸಿತ್ತು. ಇದು 2021-22ರಲ್ಲಿ ಶೇ.143 ರಷ್ಟು ಏರಿಕೆಯಾಗಿ 474 ಕೋಟಿ ರೂ.ಗೆ ತಲುಪಿದೆ. ಜೆಡಿ(ಯುಎಸ್) 2020-21ರಲ್ಲಿ 86 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಘೋಷಿಸಿತ್ತು. 2022ರಲ್ಲಿ ಶೇಕಡ 95ಕ್ಕಿಂತ ಹೆಚ್ಚು ಅಂದರೆ 168 ಕೋಟಿ ರೂ. ಆಸ್ತಿಯನ್ನು ಘೋಷಿಸಿದೆ.

ಆಮ್ ಆದ್ಮಿ ಪಕ್ಷದ ಒಟ್ಟು ಆಸ್ತಿಯು 2020-21 ಮತ್ತು 2021-22ರ ನಡುವೆ 21.82 ಕೋಟಿಯಿಂದ 37.477 ಕೋಟಿಗೆ ಅಂದರೆ 71.76 ಶೇಕಡಾ ಹೆಚ್ಚಾಗಿದೆ. ಎಐಎಡಿಎಂಕೆ ಮತ್ತು ಟಿಡಿಪಿ ಪಕ್ಷಗಳು ಮಾತ್ರ ಟಾಪ್ 10 ಪ್ರಾದೇಶಿಕ ಪಕ್ಷಗಳ ಪೈಕಿ ತಮ್ಮ ಘೋಷಿತ ಆಸ್ತಿಯಲ್ಲಿ ಈ ಬಾರಿ ಇಳಿಕೆ ತೋರಿಸಿವೆ.

2020-21 ಮತ್ತು 2021-22ರ ನಡುವೆ ಎಐಎಡಿಎಂಕೆ ಆಸ್ತಿ 260.166 ಕೋಟಿ ರೂ.ನಿಂದ 256.13 ಕೋಟಿ ರೂ.ಗೆ ಮತ್ತು ಟಿಡಿಪಿಯ ಆಸ್ತಿ 133.423 ಕೋಟಿಯಿಂದ 129.372 ಕೋಟಿಗೆ ಇಳಿಕೆಯಾಗಿದೆ.

ಇದನ್ನು ಓದಿ: 8 ಭಾರತೀಯರಿಗೆ ಮರಣದಂಡನೆ: ಕತಾರ್ ದೊರೆ ಜೊತೆ ಮೋದಿ ವಿಷಯ ಪ್ರಸ್ತಾಪಿಸಿಲ್ಲ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...