Homeಮುಖಪುಟಪ್ರಾದೇಶಿಕ ಪಕ್ಷಗಳ ಆಸ್ತಿಗಳಲ್ಲಿ ಗಣನೀಯ ಹೆಚ್ಚಳ: ಮೊದಲ ಸ್ಥಾನದಲ್ಲಿರುವ ಸಮಾಜವಾದಿ ಪಕ್ಷ

ಪ್ರಾದೇಶಿಕ ಪಕ್ಷಗಳ ಆಸ್ತಿಗಳಲ್ಲಿ ಗಣನೀಯ ಹೆಚ್ಚಳ: ಮೊದಲ ಸ್ಥಾನದಲ್ಲಿರುವ ಸಮಾಜವಾದಿ ಪಕ್ಷ

- Advertisement -
- Advertisement -

ಪ್ರಾದೇಶಿಕ ಪಕ್ಷಗಳ ಪೈಕಿ ಸಮಾಜವಾದಿ ಪಕ್ಷವು ಭಾರತದ ಅತ್ಯಂತ ಶ್ರೀಮಂತ ಪಕ್ಷವಾಗಿದೆ. 2021-22ರಲ್ಲಿ ಅಖಿಲೇಶ್‌ ಯಾದವ್‌ ನಾಯಕತ್ವದ ಉತ್ತರಪ್ರದೇಶದ ಸಮಾಜವಾದಿ ಪಕ್ಷವು ಅತಿ ಹೆಚ್ಚು ಆಸ್ತಿಯನ್ನು ಹೊಂದಿದ್ದು, ಭಾರತದ ಶ್ರೀಮಂತ ಪ್ರಾದೇಶಿಕ ಪಕ್ಷವಾಗಿದೆ ಎಂದು ಪ್ರಜಾಸತ್ತಾತ್ಮಕ ಸುಧಾರಣಾ ಚಿಂತಕರ ಚಾವಡಿ ವರದಿ ತಿಳಿಸಿದೆ.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಪ್ರಕಾರ, 2020-21ರ ಹಣಕಾಸು ವರ್ಷದಲ್ಲಿ  ಸಮಾಜವಾದಿ ಪಕ್ಷವು ಒಟ್ಟು 561.46 ಕೋಟಿ ರೂ. ಆಸ್ತಿಯನ್ನು ಘೋಷಿಸಿದೆ. ಇದು 2021-22ರಲ್ಲಿ 568.369 ಕೋಟಿಗೆ ಹೆಚ್ಚಳವಾಗಿದೆ ಅಂದರೆ ಸಮಾಜವಾದಿ ಪಕ್ಷದ ಆಸ್ತಿಯಲ್ಲಿ 1.23 ಶೇಕಡಾ ಹೆಚ್ಚಳವಾಗಿದೆ.

ತೆಲಂಗಾಣದ ಚಂದ್ರಶೇಖರ್‌ ರಾವ್‌ ಅವರ ಭಾರತ್ ರಾಷ್ಟ್ರ ಸಮಿತಿ ಪಕ್ಷವು ದೇಶದ ಎರಡನೇ ಶ್ರೀಮಂತ  ಪ್ರಾದೇಶಿಕ ಪಕ್ಷವಾಗಿದ್ದು, 2020-21ರ ಆರ್ಥಿಕ ವರ್ಷದಲ್ಲಿ 319.55 ಕೋಟಿ ರೂ. ಆಸ್ತಿಯನ್ನು ಪಕ್ಷವು ಹೊಂದಿತ್ತು. ಆ ಬಳಿಕ 2021-22ರ ಆರ್ಥಿಕ ವರ್ಷದಲ್ಲಿ 512.24 ಕೋಟಿ ರೂ.ಗಳ ಒಟ್ಟು ಆಸ್ತಿಯನ್ನು ಬಿಆರ್‌ಎಸ್ ಘೋಷಿಸಿದೆ.

ಕಳೆದ ಎರಡು ವರ್ಷಗಳಲ್ಲಿ ಡಿಎಂಕೆ, ಬಿಜೆಡಿ ಮತ್ತು ಜೆಡಿ(ಯು) ಪಕ್ಷಗಳ ಒಟ್ಟು ಆಸ್ತಿ ಶೇ.95ರಷ್ಟು ಹೆಚ್ಚಿದೆ. ದ್ರಾವಿಡ ಮುನ್ನೇತ್ರ ಕಳಗಂ 2020-21ರಲ್ಲಿ 115.708 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಘೋಷಿಸಿತ್ತು. ಇದು 2021-22ರಲ್ಲಿ  399 ಕೋಟಿ ರೂ.ಗೆ ಹೆಚ್ಚಳವಾಗಿದೆ ಅಂದರೆ ದ್ರಾವಿಡ ಮುನ್ನೇತ್ರ ಕಳಗಂ ಪಕ್ಷದ ಆಸ್ತಿಯಲ್ಲಿ  244.88ರಷ್ಟು ಹೆಚ್ಚಳವಾಗಿದೆ.

ಬಿಜು ಜನತಾ ದಳವು 2020-21ರಲ್ಲಿ 194 ಕೋಟಿ ರೂ. ಆಸ್ತಿಯನ್ನು ಘೋಷಿಸಿತ್ತು. ಇದು 2021-22ರಲ್ಲಿ ಶೇ.143 ರಷ್ಟು ಏರಿಕೆಯಾಗಿ 474 ಕೋಟಿ ರೂ.ಗೆ ತಲುಪಿದೆ. ಜೆಡಿ(ಯುಎಸ್) 2020-21ರಲ್ಲಿ 86 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಘೋಷಿಸಿತ್ತು. 2022ರಲ್ಲಿ ಶೇಕಡ 95ಕ್ಕಿಂತ ಹೆಚ್ಚು ಅಂದರೆ 168 ಕೋಟಿ ರೂ. ಆಸ್ತಿಯನ್ನು ಘೋಷಿಸಿದೆ.

ಆಮ್ ಆದ್ಮಿ ಪಕ್ಷದ ಒಟ್ಟು ಆಸ್ತಿಯು 2020-21 ಮತ್ತು 2021-22ರ ನಡುವೆ 21.82 ಕೋಟಿಯಿಂದ 37.477 ಕೋಟಿಗೆ ಅಂದರೆ 71.76 ಶೇಕಡಾ ಹೆಚ್ಚಾಗಿದೆ. ಎಐಎಡಿಎಂಕೆ ಮತ್ತು ಟಿಡಿಪಿ ಪಕ್ಷಗಳು ಮಾತ್ರ ಟಾಪ್ 10 ಪ್ರಾದೇಶಿಕ ಪಕ್ಷಗಳ ಪೈಕಿ ತಮ್ಮ ಘೋಷಿತ ಆಸ್ತಿಯಲ್ಲಿ ಈ ಬಾರಿ ಇಳಿಕೆ ತೋರಿಸಿವೆ.

2020-21 ಮತ್ತು 2021-22ರ ನಡುವೆ ಎಐಎಡಿಎಂಕೆ ಆಸ್ತಿ 260.166 ಕೋಟಿ ರೂ.ನಿಂದ 256.13 ಕೋಟಿ ರೂ.ಗೆ ಮತ್ತು ಟಿಡಿಪಿಯ ಆಸ್ತಿ 133.423 ಕೋಟಿಯಿಂದ 129.372 ಕೋಟಿಗೆ ಇಳಿಕೆಯಾಗಿದೆ.

ಇದನ್ನು ಓದಿ: 8 ಭಾರತೀಯರಿಗೆ ಮರಣದಂಡನೆ: ಕತಾರ್ ದೊರೆ ಜೊತೆ ಮೋದಿ ವಿಷಯ ಪ್ರಸ್ತಾಪಿಸಿಲ್ಲ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...